ತುಮಕೂರು: ಪೂರ್ವ–ಮುಂಗಾರು ಹಂಗಾಮಿನಲ್ಲಿ ಪ್ರಸ್ತುತ ನಿರಂತರ ಮೋಡ ಕವಿದ ವಾತಾವರಣ ಮತ್ತು ಭಾರೀ ಗಾಳಿ, ಗುಡುಗು, ಸಿಡಿಲು ಸಹಿತ ಮಳೆಯಾಗುತ್ತಿದ್ದು, ಭಾರಿ ಮಳೆಯಿಂದ ಉಂಟಾಗಬಹುದಾದ ತುರ್ತು ಪರಿಸ್ಥಿತಿಯಲ್ಲಿ ಸಾರ್ವಜನಿಕರ ರಕ್ಷಣೆಗಾಗಿ ಜಿಲ್ಲಾ ಮಟ್ಟದಲ್ಲಿ ಸಹಾಯವಾಣಿ ತೆರೆಯಲಾಗಿದೆ. ಸಹಾಯವಾಣಿ ಸಂಖ್ಯೆಯು ದಿನದ 24 ಗಂಟೆಯೂ ಕಾರ್ಯನಿರ್ವಹಿಸಲಿದೆ.
ಜಿಲ್ಲೆಯ ಸಾರ್ವಜನಿಕರು ಮಳೆಯಿಂದ ಉಂಟಾಗುವ ಯಾವುದೇ ತುರ್ತು ಪರಿಸ್ಥಿತಿ ಕುರಿತು ಸಹಾಯವಾಣಿ ಸಂಖ್ಯೆ: 0816–2213400, 0816–155304, 7304975519(ವಾಟ್ಸಪ್)ಕ್ಕೆ ಕರೆ ಮಾಡಿ ಮಾಹಿತಿ ನೀಡಬಹುದಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ಶುಭ ಕಲ್ಯಾಣ್ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW