ಕೋಡಿಮಠ ಸ್ವಾಮಿಜಿಗಳ ಭವಿಷ್ಯಕ್ಕೆ ತುಂಬಾ ಮಹತ್ವವಿದೆ. ಅವರ ಎಲ್ಲಾ ಭವಿಷ್ಯಗಳು ನಿಜವಾಗಿವೆ. ರಾಜಕೀಯವಾಗಿ, ಜಾಗತಿಕವಾಗಿ, ರಾಷ್ಟ್ರದ ವಿಚಾರವಾಗಿ ಹಾಗೂ ಮಳೆ, ಬೆಳೆ, ಪ್ರವಾಹಗಳ ಕುರಿತಾಗಿಯೂ ಅವರು ಭವಿಷ್ಯ ನುಡಿದಿದ್ದು ಅವೆಲ್ಲವೂ ಸಂಭವಿಸಿವೆ. ಅಂತೆಯೇ ಇದೀಗ ಶ್ರೀಗಳು ಮಳೆ, ಬೆಳೆ ಕುರಿತು ಹೊಸ ಭವಿಷ್ಯ ನುಡಿದಿದ್ದು, ನಾಡಿನ ಜನತೆಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟಿದ್ದಾರೆ.
ಹೌದು, ಕಳೆದ ಕೆಲವು ತಿಂಗಳುಗಳಿಂದ ಈ ವರ್ಷದ ಮಳೆ ಬಗ್ಗೆ ಭವಿಷ್ಯ ನುಡಿಯುತ್ತಿರುವ ಕೋಡಿ ಮಠದ ಡಾ. ಶಿವಾನಂದ ಶಿವಯೋಗಿ ಸ್ವಾಮೀಜಿಯವರು ಈ ವರ್ಷ ಉತ್ತಮ ಮಳೆ, ಬೆಳೆ ಆಗುತ್ತದೆ ಎಂದು ಭವಿಷ್ಯ ನುಡಿದಿದ್ದರು. ಅಂತೆಯೇ ಇದೀಗ ಈ ಭವಿಷ್ಯವನ್ನು ಪುನರುಚ್ಚರಿಸಿರುವ ಶ್ರೀಗಳು ಯುಗಾದಿ ಕಳೆದ ನಂತರ ರಾಜ್ಯದಲ್ಲಿ ಒಳ್ಳೆ ಬೆಳೆ ಮತ್ತು ಮಳೆಯಾಗುವ ಲಕ್ಷಣಗಳಿವೆ ಎಂದು ಭವಿಷ್ಯ ನುಡಿದಿದ್ದಾರೆ.
ಕೋಲಾರದ ಮಾಲೂರಿನಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದಂತ ಕೋಡಿಮಠದ ಸ್ವಾಮೀಜಿಯವರು, ರಾಜ್ಯದಲ್ಲಿ ಯುಗಾದಿ ಕಳೆದ ನಂತ್ರ, ಒಳ್ಳೆ ಬೆಳೆ, ಮಳೆಯಾಗುವ ಲಕ್ಷಣಗಳಿವೆ. ಬೆಂಕಿ ಹಾವಳಿ, ನೀರಿನ ಹಾವಳಿ ಹೆಚ್ಚಾಗುತ್ತೆ, ಯುದ್ದ ಆಗುತ್ತೆ. ಅನೇಕ ಸಾವು ನೋವುಗಳು ಆಗುತ್ತೆ ಎಂದರು. ಜಾಗತಿಕ ಮಟ್ಟದಲ್ಲಿ ಮತಾಂದತೆ ಹೆಚ್ಚಾಗುತ್ತದೆ ಎಂದೂ ಭವಿಷ್ಯ ನುಡಿದಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296