ಕೊರಟಗೆರೆ: ಹೆಜ್ಜೇನು ದಾಳಿಯಿಂದ ಓರ್ವ ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಜಿಲ್ಲೆಯ ಕೊರಟಗೆರೆ ತಾಲೂಕಿನ ಇರಕಸಂದ್ರ ಕಾಲೋನಿಯ ಎಸ್ಸಾರ್ ಪೆಟ್ರೋಲ್ ಬಂಕ್ ಬಳಿ ನಡೆದಿದೆ.
ಹುಲವಂಗಲ ಗ್ರಾಮದ ಗ್ರಾಪಂ ನಿವೃತ್ತ ಕಾರ್ಯದರ್ಶಿ ಕೃಷ್ಣಮೂರ್ತಿ(65) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಪುಟ್ಟಸಂದ್ರದ ರೈ ಸೋಮಣ್ಣ ಎಂಬವರಿಗೆ ಗಂಭೀರವಾಗಿ ಗಾಯವಾಗಿದ್ದು, ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನೂ ಘಟನೆಯಲ್ಲಿ ಸಂಕೇನಹಳ್ಳಿ ಗ್ರಾಮದ ಜಯಪ್ರಕಾಶ್ ಮತ್ತು ಶರತ್ ಎಂಬವರಿಗೆ ಗಾಯಗಳಾಗಿದ್ದು, ಅವರಿಗೆ ಕೊರಟಗೆರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ ಎಂದು ತಿಳಿದು ಬಂದಿದೆ.
ಎಸ್ಸಾರ್ ಪೆಟ್ರೋಲ್ ಬಂಕ್ ಸಮೀಪದಲ್ಲಿರುವ ಆಲದ ಮರದಲ್ಲಿ ನಾಲ್ಕು ಹೆಜ್ಜೇನು ಗೂಡುಗಳಿದ್ದು, ಈಗಾಗಲೇ ಸಾಕಷ್ಟು ಜನರ ಮೇಲೆ ಹೆಜ್ಜೇನು ದಾಳಿ ನಡೆಸಿದೆ ಎನ್ನಲಾಗುತ್ತಿದೆ. ಘಟನೆಗೆ ಸಂಬಂಧಿಸಿದಂತೆ ಕೊರಟಗೆರೆ ತಹಶೀಲ್ದಾರ್ ನಹೀದಾ, ಕೋಳಾಲ ಪಿಎಸೈ ಮಹಾಲಕ್ಷ್ಮಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5