ಡೆಹ್ರಾಡೂನ್: ಉತ್ತರಾಖಂಡದ ಗಂಗೋತ್ರಿ ದೇಗುಲಕ್ಕೆ ತೆರಳುತ್ತಿದ್ದ ಖಾಸಗಿ ಹೆಲಿಕಾಪ್ಟರ್ ಪತನಗೊಂಡು ಆರು ಪ್ರವಾಸಿಗರು ಮೃತಪಟ್ಟು, ಪೈಲಟ್ ಗಂಭೀರವಾಗಿ ಗಾಯಗೊಂಡಿದ್ದಾರೆ.
ಉತ್ತರಕಾಶಿ ಜಿಲ್ಲೆಯ ಗಂಗಾನಿ ಬಳಿ ಖಾಸಗಿ ಹೆಲಿಕಾಪ್ಟರ್ ಪತನಗೊಂಡಿದೆ. ಏರೋಟ್ರಾನ್ಸ್ ಸರ್ವೀಸಸ್ ಪ್ರೈವೇಟ್ ಲಿಮಿಟೆಡ್ (ವಿಟಿ-ಒಎಕ್ಸ್ಎಫ್) ನಿರ್ವಹಿಸುವ, ಕ್ಯಾಪ್ಟನ್ ರಾಬಿನ್ ಸಿಂಗ್ ಪೈಲಟ್ ಮಾಡಿದ ಹೆಲಿಕಾಪ್ಟರ್ ಇದಾಗಿದ್ದು, ಡೆಹ್ರಾಡೂನ್ನ ಸಹಸ್ತ್ರಧಾರ ಹೆಲಿಪ್ಯಾಡ್ ನಿಂದ ಆರು ಪ್ರಯಾಣಿಕರೊಂದಿಗೆ ಟೇಕ್ ಆಫ್ ಆಗಿತ್ತು.
ಗಂಗೋತ್ರಿ ಧಾಮದಿಂದ ಸುಮಾರು ಆರು ಕಿಲೋಮೀಟರ್ ದೂರದಲ್ಲಿರುವ ಖರ್ಸಾಲಿ ಹೆಲಿಪ್ಯಾಡ್ನಲ್ಲಿ ಹೆಲಿಕಾಪ್ಟರ್ ಇಳಿಯಬೇಕಿತ್ತು, ರಿಷಿಕೇಶ–ಗಂಗೋತ್ರಿ ರಾಷ್ಟ್ರೀಯ ಹೆದ್ದಾರಿಯ ಬಳಿ ಅನಿರೀಕ್ಷಿತವಾಗಿ ಅಪಘಾತ ಸಂಭವಿಸಿದೆ.
ಮೃತರನ್ನು ಮುಂಬೈನ ಕಲಾ ಸೋನಿ (61), ವಿಜಯ ರೆಡ್ಡಿ (57) ಮತ್ತು ರುಚಿ ಅಗರ್ವಾಲ್ (56), ಉತ್ತರ ಪ್ರದೇಶದ ರಾಧಾ ಅಗರ್ವಾಲ್(79) ಆಂಧ್ರಪ್ರದೇಶದ ವೇದಾವತಿ ಕುಮಾರಿ (48) ಮತ್ತು ಪೈಲಟ್ ಗುಜರಾತ್ನವರು. ಗಾಯಗೊಂಡ ವ್ಯಕ್ತಿಯನ್ನು ಆಂಧ್ರಪ್ರದೇಶದ ಭಾಸ್ಕರ್ ಎಂದು ಗುರುತಿಸಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
————————————