nammatumakuru

    Subscribe to Updates

    Get the latest creative news from FooBar about art, design and business.

    What's Hot

    “ತಂಬಾಕು ಸೇವನೆಯಿಂದ ಯುವ ಜನತೆ ದೂರವಿರಿ”: ತಂಬಾಕು ಮುಕ್ತ ಯುವ ಅಭಿಯಾನ

    November 24, 2025

    ಸಂವಿಧಾನ ದಿನಾಚರಣೆ, ಅಂಬೇಡ್ಕರ್ ಅವರ ಪರಿನಿರ್ವಾಣ ದಿನ: ಪೂರ್ವಭಾವಿ ಸಭೆ | ಅಧಿಕಾರಿಗಳ ವಿರುದ್ಧ ಪ್ರತಿಭಟನೆ

    November 24, 2025

    ತುಮಕೂರು | ರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾವಳಿ

    November 24, 2025
    Facebook Twitter Instagram
    ಟ್ರೆಂಡಿಂಗ್
    • “ತಂಬಾಕು ಸೇವನೆಯಿಂದ ಯುವ ಜನತೆ ದೂರವಿರಿ”: ತಂಬಾಕು ಮುಕ್ತ ಯುವ ಅಭಿಯಾನ
    • ಸಂವಿಧಾನ ದಿನಾಚರಣೆ, ಅಂಬೇಡ್ಕರ್ ಅವರ ಪರಿನಿರ್ವಾಣ ದಿನ: ಪೂರ್ವಭಾವಿ ಸಭೆ | ಅಧಿಕಾರಿಗಳ ವಿರುದ್ಧ ಪ್ರತಿಭಟನೆ
    • ತುಮಕೂರು | ರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾವಳಿ
    • ತುಮಕೂರು | ಲಿಂಗೈಕ್ಯ ಶಿವಕುಮಾರ ಸ್ವಾಮೀಜಿ ಪುತ್ಥಳಿ ಪ್ರತಿಷ್ಠಾಪನೆಗೆ ಭೂಮಿ ಪೂಜೆ
    • ರೈತರಿಗೆ ಹಳ್ಳಿಗಳಲ್ಲೇ ಕೆಲಸ ನಿರ್ವಹಿಸುವ ವಾತಾವರಣ ಕಲ್ಪಿಸಬೇಕು: ಶಾಸಕ ಜಿ.ಬಿ.ಜ್ಯೋತಿಗಣೇಶ್
    • ತಿಪಟೂರು | ಅದ್ದೂರಿಯಾಗಿ ನಡೆದ ಸತ್ಯಗಣಪತಿ ವಿಸರ್ಜನಾ ಮಹೋತ್ಸವ
    • ಕೊರಟಗೆರೆ | ಶುದ್ಧ ಕುಡಿಯುವ ನೀರಿನ ಘಟಕಗಳ ದುರಸ್ತಿಗೆ ಸರ್ಕಾರ ಸೂಚನೆ
    • ಡಾ.ಇಂಪನಾ ಬಿ. ವರ್ಧನ್ ಅವರಿಗೆ ಅತ್ಯುತ್ತಮ ವಿದ್ಯಾರ್ಥಿನಿ ಪ್ರಶಸ್ತಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಲಿಕೆಗೆ ಪೂರ್ವಕವಾಗಿ ಸಹಾಯ ಮಾಡಿ: ಕೆ.ಎನ್.ಹನುಮಂತರಾಯಪ್ಪ
    ಮಧುಗಿರಿ July 28, 2023

    ಕಲಿಕೆಗೆ ಪೂರ್ವಕವಾಗಿ ಸಹಾಯ ಮಾಡಿ: ಕೆ.ಎನ್.ಹನುಮಂತರಾಯಪ್ಪ

    By adminJuly 28, 2023No Comments2 Mins Read
    madhugiri

    ಮಧುಗಿರಿ: ಕಸಬಾ ಬಸವನಹಳ್ಳಿ ಸರಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಕೆ.ಎನ್.ಹನುಮಂತರಾಯಪ್ಪ ಶಾಲಾ ವಿದ್ಯಾರ್ಥಿಗಳಿಗೆ  ತಟ್ಟೆ ಲೋಟ ವಿತರಿಸಿದರು.

    ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಳ್ಳವರು ಎಲ್ಲರೂ ಸಹ ದಾನ ಮಾಡುವುದಿಲ್ಲ, ಹೃದಯ ಇರುವಂತಹವರು ಅಥವಾ ಮಕ್ಕಳ ಕಲಿಕೆಗೆ ಪೂರ್ವಕವಾಗಿ ಸಹಾಯ ಮಾಡಬೇಕೆಂಬ ಮನೋಭಾವನೆ ಇರುವವರು ಅಥವಾ  ಶಿಕ್ಷಣಕ್ಕೆ ಹೆಚ್ಚು ಒತ್ತು ಕೊಡಬೇಕೆಂಬ ಮನಸ್ಸುಳ್ಳವರು ದಾನ ಧರ್ಮ ಮಾಡುತ್ತಾರೆ, ಆ ನಿಟ್ಟಿನಲ್ಲಿ ಮಧುಗಿರಿಯ ಶ್ರೀವಾರು ಹೋಟೆಲ್ ಮಾಲೀಕರಾದ ರಘು ಹಾಗೂ ಶ್ರೀನಿವಾಸ್ ಶೆಟ್ಟಿ ಬಹಳ ದೊಡ್ಡ ಮನಸ್ಸು ಮಾಡಿದ್ದು ಜೊತೆಗೆ  ಶಿಕ್ಷಕಿ ಶೋಭಾ ರವರ ಕಾಳಜಿಯಿಂದ  ನಾಲ್ಕು ಶಾಲೆ ಮಕ್ಕಳಿಗೆ ಉಚಿತವಾಗಿ ಊಟ ಮಾಡಲಿಕ್ಕೆ  ಅನುಗುಣವಾಗಿ ತಟ್ಟೆ ಹಾಗು ಹಾಲು ಕುಡಿಯಲು ಲೋಟದ ವ್ಯವಸ್ಥೆ ಮಾಡಿಕೊಟ್ಟಿದ್ದು ಇದು ತುಂಬಾನೇ ಒಳ್ಳೆಯ  ಸಮಾಜಮುಖಿ ಕಾರ್ಯ ಇಂತಹ ಕಾರ್ಯಗಳು ನಿರಂತರವಾಗಿ ಸಾಗಲಿ ಎಂದು ಆಶಿಸಿದರು.


    Provided by
    Provided by

    ಮಧುಗಿರಿ ರೋಟರಿ ಕ್ಲಬ್ ಅಧ್ಯಕ್ಷರಾದ ಶಿವಲಿಂಗಪ್ಪ ಮಾತನಾಡಿ, ಸರಕಾರಿ ಶಾಲಾ ಶಿಕ್ಷಕರ ಮುತವರ್ಜಿಯಿಂದ ಗ್ರಾಮೀಣ ಭಾಗದ ಮಕ್ಕಳು ಇಂದು ನಗರ, ಪಟ್ಟಣ ಪ್ರದೇಶದ ಕಾನ್ವೆಂಟ್ ಶಾಲೆಗೆ ಸರಿಸಮಾನವಾಗಿ ಶೈಕ್ಷಣಿಕ ಸಾಧನೆ ಮಾಡುವಂತಹ ಸಾಮರ್ಥ್ಯ ತೋರುತ್ತಿರುವುದು ಆಶಾದಾಯಕ ಬೆಳವಣಿಗೆಯಾಗಿದೆ, ಇನ್ನು ಮುಂದಾದರೂ ಜನಪ್ರತಿನಿಧಿಗಳು, ಉಳ್ಳವರು ಗ್ರಾಮೀಣ ಭಾಗದ ಮಕ್ಕಳಿಗೆ ನೆರವಾಗುವ ಉದ್ದೇಶದಿಂದ ಸಹಾಯ ಹಸ್ತ ಚಾಚಿ ಶಕ್ತಿ ತುಂಬುವ ಕೆಲಸ ಮಾಡಬೇಕು ಎಂದರು.

    ಶಿಕ್ಷಕಿ ಶೋಭಾ ಅವರು ಮಾತನಾಡಿ, ದಾನಿಗಳ ಸಹಯೋಗದಿಂದ ಈ ದಿನ ಕಿರಿಯ ಪ್ರಾಥಮಿಕ ಪಾಠಶಾಲೆ ಬಸವನಹಳ್ಳಿ, ಮಂಡರಗುಟ್ಟೆ, ಡಿ.ಎಮ್ ಬಡಾವಣೆ ಹಾಗೂ ಗುರು ಒಡೆಯರಹಳ್ಳಿ  ಈ ನಾಲ್ಕು ಶಾಲೆಯ ಮಕ್ಕಳಿಗೆ ಉಚಿತ ತಟ್ಟೆ ಲೋಟ ವಿತರಿಸಲಾಗಿದೆ, ಸರಕಾರಿ ಶಾಲೆಯ ಮಕ್ಕಳ ಕುಂದು  ಕೊರತೆಗಳನ್ನು ನಿವಾರಿಸಲು ಇಂತಹ ಸಮಾಜಮುಖಿ ಕೆಲಸ ಕಾರ್ಯಗಳ ಅವಶ್ಯಕತೆ ತುಂಬಾನೇ ಇದೆ, ಆದ್ದರಿಂದ ದಾನಿಗಳು ಸ್ವಯಂ ಪ್ರೇರಿತವಾಗಿ ಬಡ ವಿದ್ಯಾರ್ಥಿಗಳಿಗೆ ಸಹಾಯ ಮಾಡಲು ಮುಂದಾಗಿ ಮತ್ತು ಇಂತಹ ಸಮಾಜಮುಖಿ ಕೆಲಸ ಕಾರ್ಯಗಳಿಗೆ ಹೆಚ್ಚಿನದಾಗಿ ಕೈಜೋಡಿಸಿ ಈ ಮೂಲಕ ಸರಕಾರಿ ಶಾಲಾ ಮಕ್ಕಳ ಬೆನ್ನೆಲುಬಾಗಿ ನಿಲ್ಲಿ ಎಂದು  ಮನವಿ ಮಾಡಿದರು.

    ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕರ ಅಧ್ಯಕ್ಷರು ಲಕ್ಷ್ಮಿ ರಂಗಯ್ಯ, ಸಿ ಆರ್ ಸಿ ತಿಮ್ಮರಾಜು, ರವೀಶ್, ಎನ್‌ಪಿಎಸ್ ಸಂಘದ ಅಧ್ಯಕ್ಷ ರಂಗನಾಥ್, ಎಸ್ ಡಿ ಎಮ್ ಸಿ ಅಧ್ಯಕ್ಷ ಕಾಂತರಾಜ್, ಹಾಗೂ ಶಾಲಾ ಶಿಕ್ಷಕರು ವಿದ್ಯಾರ್ಥಿಗಳು ಇದ್ದರು.

    ವರದಿ: ಅಬಿದ್, ಮಧುಗಿರಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಮಧುಗಿರಿ | ನ.29ರಂದು ಒಳಮೀಸಲಾತಿ ಜಾಗೃತಿ ಶಿಬಿರ

    November 23, 2025

    ಮಧುಗಿರಿ ಪಟ್ಟಣದ ಅವ್ಯವಸ್ಥೆ ಕಂಡು ಉಪ ಲೋಕಾಯುಕ್ತ ಬಿ.ವೀರಪ್ಪ ಕಿಡಿ

    November 22, 2025

    ಮಧುಗಿರಿ:  ಸೊಳ್ಳೆಗಳ ವಿಪರೀತ ಕಾಟಕ್ಕೆ ಬಳಲಿ ಬೆಂಡಾದ ಜನ

    November 17, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    “ತಂಬಾಕು ಸೇವನೆಯಿಂದ ಯುವ ಜನತೆ ದೂರವಿರಿ”: ತಂಬಾಕು ಮುಕ್ತ ಯುವ ಅಭಿಯಾನ

    November 24, 2025

    ತುಮಕೂರು: ತಂಬಾಕು ಸೇವನೆಯ ದುಷ್ಪರಿಣಾಮಗಳನ್ನು ಅರಿತು ಯುವಜನರು ಅವುಗಳ ಸೇವನೆಯಿಂದ ದೂರವಿರುವಂತೆ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ತುಮಕೂರು ಇದರ…

    ಸಂವಿಧಾನ ದಿನಾಚರಣೆ, ಅಂಬೇಡ್ಕರ್ ಅವರ ಪರಿನಿರ್ವಾಣ ದಿನ: ಪೂರ್ವಭಾವಿ ಸಭೆ | ಅಧಿಕಾರಿಗಳ ವಿರುದ್ಧ ಪ್ರತಿಭಟನೆ

    November 24, 2025

    ತುಮಕೂರು | ರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾವಳಿ

    November 24, 2025

    ತುಮಕೂರು | ಲಿಂಗೈಕ್ಯ ಶಿವಕುಮಾರ ಸ್ವಾಮೀಜಿ ಪುತ್ಥಳಿ ಪ್ರತಿಷ್ಠಾಪನೆಗೆ ಭೂಮಿ ಪೂಜೆ

    November 24, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.