nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶುಂಠಿ ಬೇಗ ಹಾಳಾಗದಂತೆ ಇಡುವುದು ಹೇಗೆ?

    July 25, 2026

    ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ 56 ಜವಾನ ಹುದ್ದೆಗಳ ಭರ್ತಿ: ಆನ್‌ ಲೈನ್ ಅರ್ಜಿ ಆಹ್ವಾನ

    July 25, 2026

    ಮಾಜಿ ಸಚಿವ ಸಿ. ವೀರಣ್ಣ ಇನ್ನಿಲ್ಲ: ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ | ಡಿಸಿಎಂ ಡಾ.ಜಿ.ಪರಮೇಶ್ವರ್ ಸೇರಿದಂತೆ ಹಲವು ನಾಯಕರಿಂದ ಸಂತಾಪ

    July 25, 2026
    Facebook Twitter Instagram
    ಟ್ರೆಂಡಿಂಗ್
    • ಶುಂಠಿ ಬೇಗ ಹಾಳಾಗದಂತೆ ಇಡುವುದು ಹೇಗೆ?
    • ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ 56 ಜವಾನ ಹುದ್ದೆಗಳ ಭರ್ತಿ: ಆನ್‌ ಲೈನ್ ಅರ್ಜಿ ಆಹ್ವಾನ
    • ಮಾಜಿ ಸಚಿವ ಸಿ. ವೀರಣ್ಣ ಇನ್ನಿಲ್ಲ: ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ | ಡಿಸಿಎಂ ಡಾ.ಜಿ.ಪರಮೇಶ್ವರ್ ಸೇರಿದಂತೆ ಹಲವು ನಾಯಕರಿಂದ ಸಂತಾಪ
    • NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
    • ಜು. 29ರಂದು ಔರಾದ್‌ನಲ್ಲಿ ತಾಲೂಕು ಪತ್ರಿಕಾ ದಿನಾಚರಣೆ: ಶಾಸಕ ಪ್ರಭು ಚವ್ಹಾಣ್ ಉದ್ಘಾಟನೆ
    • ಡಾ.ದರಗೊಂಡ ಉದಯಸಿಂಗ್ ‘ಜೈ ಕರವೇ’ ವೈದ್ಯಕೀಯ ಘಟಕದ ಬೀದರ್ ಜಿಲ್ಲಾಧ್ಯಕ್ಷರಾಗಿ ಆಯ್ಕೆ
    • ಗ್ರಾಮೀಣ ಪ್ರತಿಭೆಯ ವೈದ್ಯಕೀಯ ಕನಸು ನನಸು: ನೀಟ್ ನಲ್ಲಿ ಕೊರಟಗೆರೆಯ ಸುಭಾಷ್ ಗೆ ಭರ್ಜರಿ ಸಾಧನೆ!
    • ಕೊರಟಗೆರೆ: ಮತದಾರರ ಗಣಕೀಯ ನಮೂನೆ ತಲುಪಿಸುವಲ್ಲಿ 100% ಸಾಧನೆ; ಶೇ.82.25 ರಷ್ಟು ಡಿಜಿಟಲ್ ಸೇರ್ಪಡೆ ಪೂರ್ಣ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಲಕ್ಕುಂಡಿ ಸ್ತಬ್ಧಚಿತ್ರಕ್ಕೆ ಓಟ್ ಮಾಡಲು ಹೇಮಂತ್ ನಿಂಬಾಳ್ಕರ್ ಮನವಿ
    ರಾಜ್ಯ ಸುದ್ದಿ January 28, 2025

    ಲಕ್ಕುಂಡಿ ಸ್ತಬ್ಧಚಿತ್ರಕ್ಕೆ ಓಟ್ ಮಾಡಲು ಹೇಮಂತ್ ನಿಂಬಾಳ್ಕರ್ ಮನವಿ

    By adminJanuary 28, 2025No Comments2 Mins Read

    ತುಮಕೂರು:  ದೆಹಲಿಯಲ್ಲಿ ಜನವರಿ 26ರಂದು ನಡೆದ 76ನೇ ಗಣರಾಜ್ಯೋತ್ಸವದ ಅಂಗವಾಗಿ ಪಥ ಸಂಚಲನದಲ್ಲಿ ಭಾಗವಹಿಸಿದ್ದ ವಿವಿಧ ರಾಜ್ಯಗಳ ಸ್ತಬ್ಧಚಿತ್ರಗಳನ್ನು ಜನಾಭಿಪ್ರಾಯ ಆಧರಿಸಿ ಪ್ರಶಸ್ತಿಗೆ ಪರಿಗಣಿಸಲು ಕೇಂದ್ರ ಸರ್ಕಾರದ ರಕ್ಷಣಾ ಸಚಿವಾಲಯವು ಆನ್‌ ಲೈನ್‌ ನಲ್ಲಿ ಓಟ್ ಮಾಡಲು ಅವಕಾಶ ಕಲ್ಪಿಸಿದೆ.

    ಈ ಬಾರಿ ಕರ್ನಾಟಕವು ‘ಲಕ್ಕುಂಡಿ: ಶಿಲ್ಪಕಲೆಯ ತೊಟ್ಟಿಲುʼ ಸ್ತಬ್ಧಚಿತ್ರದೊಂದಿಗೆ ದೆಹಲಿಯ ಪಥಸಂಚಲನದಲ್ಲಿ ಭಾಗವಹಿಸಿದ್ದು, ಅಪಾರ ಜನರ ಮೆಚ್ಚುಗೆಗೆ ಪಾತ್ರವಾಗಿರುವ ನಮ್ಮ ರಾಜ್ಯದ ಸ್ತಬ್ಧಚಿತ್ರವನ್ನು ಓಟ್ ಮಾಡಿ ಬೆಂಬಲಿಸುವಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಹೇಮಂತ್ ಎಂ. ನಿಂಬಾಳ್ಕರ್ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

    ಕೇಂದ್ರ ಸರ್ಕಾರವು ಅತ್ಯುತ್ತಮ ಸ್ತಬ್ಧಚಿತ್ರದ ಆಯ್ಕೆಗಾಗಿ ಸಾರ್ವಜನಿಕರು ಆನ್‌ಲೈನ್, ಇ–ಮೇಲ್ ಮತ್ತು ಎಸ್‌ ಎಂಎಸ್ ಮೂಲಕ ಓಟ್ ಮಾಡಲು ಅವಕಾಶ ಕಲ್ಪಿಸಿದೆ. ಜನವರಿ 28ರ ಮಧ್ಯರಾತ್ರಿ 12ರವರೆಗೆ ಓಟ್ ಮಾಡಲು ಅವಕಾಶವಿದೆ. ಸಾರ್ವಜನಿಕರು ನಿಗಧಿತ ಅವಧಿಯೊಳಗೆ ಓಟ್ ಮಾಡಿ ರಾಜ್ಯದ ಸ್ತಬ್ಧಚಿತ್ರವನ್ನು ಬೆಂಬಲಿಸುವಂತೆ ಅವರು ಮನವಿ ಮಾಡಿದ್ದಾರೆ.

    ಓಟ್ ಮಾಡುವ ವಿಧಾನದ ಬಗ್ಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಕಿರುಚಿತ್ರವನ್ನು ಸಹ ಬಿಡುಗಡೆಗೊಳಿಸಿದೆ. ಇದನ್ನು ಅನುಸರಿಸಿ, Lakkundi Cradle of stone Craft ವಿಷಯದ ಸ್ತಬ್ಧಚಿತ್ರಕ್ಕೆ ಹೆಚ್ಚು ಹೆಚ್ಚು ಓಟ್ ಮಾಡುವ ಮೂಲಕ ಬೆಂಬಲ ಹಾಗೂ ಮೆಚ್ಚುಗೆ ಸೂಚಿಸಬೇಕೆಂದು ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

    ಓಟ್ ಮಾಡುವ ವಿಧಾನ:

    https://www.mygov.in/group-poll/vote-your-favourite-tableau-and-marching-contingent-republic-day-parade-2025 /  ಕೊಂಡಿಯನ್ನು ಕ್ಲಿಕ್ ಮಾಡಿ ನಂತರ Login to participate  ಮೇಲೆ ಕ್ಲಿಕ್ ಮಾಡಬೇಕು. ಓಟ್ ಮಾಡುವವರು ತಮ್ಮ ನೋಂದಾಯಿತ ಮೊಬೈಲ್ ನಂಬರ್ ಅಥವಾ ಇಮೇಲ್ ವಿವರ ನಮೂದಿಸಿ, ತಾವು ಸ್ವೀಕರಿಸುವ ಓಟಿಪಿ ನಮೂದಿಸಿ, ನಂತರ Resend OTP/ Submitted ಇದರಲ್ಲಿ  submitt s ಕ್ಲಿಕ್ ಮಾಡಿದಾಗ ಎಲ್ಲಾ ಸ್ತಬ್ಧಚಿತ್ರಗಳ ಮಾಹಿತಿ ಕಾಣುತ್ತದೆ. Lakkundi : cradle of stone craft ಅನ್ನು ಕ್ಲಿಕ್ ಮಾಡಿ ತಮ್ಮ ಮತವನ್ನು ದಾಖಲಿಸಬಹುದು. ತಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಯಿಂದ MYGOVPOLL 357037,12 ಟೈಪ್ ಮಾಡಿ 7738299899 ಮೊಬೈಲ್ ಸಂಖ್ಯೆಗೆ ಎಸ್‌ ಎಂಎಸ್ ಮೂಲಕ ಓಟ್ ಮಾಡಬಹುದಾಗಿದೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4


    Provided by
    Provided by
    admin
    • Website

    Related Posts

    ಸರ್ಕಾರಿ ಶಾಲೆಗಳ ಕಾರ್ಪೊರೇಟ್ ದತ್ತು ನೀತಿಗೆ ಎಐಡಿಎಸ್ ಒ ತೀವ್ರ ಆಕ್ರೋಶ: ಜನಾಂದೋಲನಕ್ಕೆ ಕರೆ

    July 25, 2026

    ತುಮಕೂರು: ಬಂಟ್ವಾಳದಲ್ಲಿ ನಡೆದ ಯುವತಿಯ ಭೀಕರ ಹತ್ಯೆಗೆ ಮಹಿಳಾ ಸಾಂಸ್ಕೃತಿಕ ಸಂಘಟನೆ ಖಂಡನೆ

    July 20, 2026

    ಸಂಕಷ್ಟದಲ್ಲೂ ಕೈಬಿಡದ ಸಂಗಾತಿ: ದೇವೇಗೌಡರ 72 ವರ್ಷಗಳ ಪಯಣಕ್ಕೆ ನೆರಲಾಗಿದ್ದ ಚೆನ್ನಮ್ಮ

    July 19, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    Uncategorized

    ಶುಂಠಿ ಬೇಗ ಹಾಳಾಗದಂತೆ ಇಡುವುದು ಹೇಗೆ?

    July 25, 2026

    ಶುಂಠಿಯು ಪ್ರತಿಯೊಬ್ಬರ ಅಡುಗೆಮನೆಯಲ್ಲಿಯೂ ಅತ್ಯಗತ್ಯವಾಗಿ ಬಳಸುವ ಒಂದು ಪ್ರಮುಖ ಪದಾರ್ಥ. ಚಹಾ, ಸಾರು, ಕರ್ರಿ ಅಥವಾ ವಿವಿಧ ಖಾದ್ಯಗಳಿಗೆ ಶುಂಠಿ…

    ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ 56 ಜವಾನ ಹುದ್ದೆಗಳ ಭರ್ತಿ: ಆನ್‌ ಲೈನ್ ಅರ್ಜಿ ಆಹ್ವಾನ

    July 25, 2026

    ಮಾಜಿ ಸಚಿವ ಸಿ. ವೀರಣ್ಣ ಇನ್ನಿಲ್ಲ: ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ | ಡಿಸಿಎಂ ಡಾ.ಜಿ.ಪರಮೇಶ್ವರ್ ಸೇರಿದಂತೆ ಹಲವು ನಾಯಕರಿಂದ ಸಂತಾಪ

    July 25, 2026

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.