nammatumakuru

    Subscribe to Updates

    Get the latest creative news from FooBar about art, design and business.

    What's Hot

    ಡಿಸೆಂಬರ್ 31ರಂದು ಸಿರಿಧಾನ್ಯ ಪಾಕ ಸ್ಪರ್ಧೆಗೆ ಅರ್ಜಿ: ವಿಜೇತರಿಗೆ ನಗದು ಬಹುಮಾನ | ಯಾರೆಲ್ಲ ಭಾಗವಹಿಸಬಹುದು?

    December 22, 2025

    ಚಾಮರಾಜನಗರ: ಗ್ರಾಮದ ಬಳಿ ಐದು ಹುಲಿಗಳ ಪ್ರತ್ಯಕ್ಷ; ಆತಂಕದಲ್ಲಿ ಜನತೆ, ನಿಷೇಧಾಜ್ಞೆ ಜಾರಿ

    December 22, 2025

    ಹುಸಿ ಬಾಂಬ್  ಇ–ಮೇಲ್ ಬೆದರಿಕೆ ಸಂದೇಶ: ಸರಗೂರು ತಾಲೂಕು ಕಚೇರಿಯಲ್ಲಿ ಬಾಂಬ್ ನಿಷ್ಕ್ರಿಯದಳ ಪರಿಶೀಲನೆ

    December 22, 2025
    Facebook Twitter Instagram
    ಟ್ರೆಂಡಿಂಗ್
    • ಡಿಸೆಂಬರ್ 31ರಂದು ಸಿರಿಧಾನ್ಯ ಪಾಕ ಸ್ಪರ್ಧೆಗೆ ಅರ್ಜಿ: ವಿಜೇತರಿಗೆ ನಗದು ಬಹುಮಾನ | ಯಾರೆಲ್ಲ ಭಾಗವಹಿಸಬಹುದು?
    • ಚಾಮರಾಜನಗರ: ಗ್ರಾಮದ ಬಳಿ ಐದು ಹುಲಿಗಳ ಪ್ರತ್ಯಕ್ಷ; ಆತಂಕದಲ್ಲಿ ಜನತೆ, ನಿಷೇಧಾಜ್ಞೆ ಜಾರಿ
    • ಹುಸಿ ಬಾಂಬ್  ಇ–ಮೇಲ್ ಬೆದರಿಕೆ ಸಂದೇಶ: ಸರಗೂರು ತಾಲೂಕು ಕಚೇರಿಯಲ್ಲಿ ಬಾಂಬ್ ನಿಷ್ಕ್ರಿಯದಳ ಪರಿಶೀಲನೆ
    • ಸಿದ್ದಗಂಗಾ ಶ್ರೀಗಳ ಮಿಂಚಿನ ಸಂಚಾರ ಸ್ಫೂರ್ತಿದಾಯಕ : ಸಸ್ಯಾಂದೋಲನ ನಡೆಸಲು ಎಂ.ಶಿವಕುಮಾರ್ ಮನವಿ
    • ಸಿದ್ದಗಂಗಾ ಮಠದ ಹಳೆಯ ವಿದ್ಯಾರ್ಥಿಗಳು ಭಕ್ತರು ಶ್ರೀಮಠದ ಆಸ್ತಿ : ಶ್ರೀ ಸಿದ್ಧಲಿಂಗ ಮಹಾ ಸ್ವಾಮೀಜಿ
    • ದರ್ಶನ್​​ ಇಲ್ಲದಿದ್ದಾಗ ಕೆಲವರು ಮಾತನಾಡುತ್ತಾರೆ, ಉದ್ವೇಗಕ್ಕೆ ಒಳಗಾಗಬೇಡಿ: ಅಭಿಮಾನಿಗಳಿಗೆ ವಿಜಯಲಕ್ಷ್ಮಿ ಸಂದೇಶ
    • ಹುಬ್ಬಳ್ಳಿ: ಅಂತರ್ಜಾತಿ ವಿವಾಹವಾಗಿದ್ದ ಗರ್ಭಿಣಿ ಮಗಳನ್ನೇ ಕೊಂದ ಪಾಪಿ ತಂದೆ!
    • ಬಂಜಾರ ಭವನ ಉದ್ಘಾಟನೆ:  ಏಪ್ರಿಲ್ ನಲ್ಲಿ ಸಾಮೂಹಿಕ ವಿವಾಹ:  ಜಿಲ್ಲಾಧ್ಯಕ್ಷ ನಾರಾಯಣ ನಾಯ್ಕ ಡಿ.
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಲೋಕಾಯುಕ್ತ ನ್ಯಾಯಾಧೀಶರ ಆದೇಶದ ಅನ್ವಯ ಹೇಮಾವತಿ ಕೆನಾಲ್ ಒತ್ತುವರಿ ಕಾರ್ಯಾಚರಣೆ
    ಕೊರಟಗೆರೆ April 11, 2025

    ಲೋಕಾಯುಕ್ತ ನ್ಯಾಯಾಧೀಶರ ಆದೇಶದ ಅನ್ವಯ ಹೇಮಾವತಿ ಕೆನಾಲ್ ಒತ್ತುವರಿ ಕಾರ್ಯಾಚರಣೆ

    By adminApril 11, 2025No Comments2 Mins Read

    ಕೊರಟಗೆರೆ: ಹೇಮಾವತಿ ಕೆನಾಲ್ ಒತ್ತುವರಿಯಾಗಿರುವುದರ ಬಗ್ಗೆ ಸಾಮಾಜಿಕ ಹೋರಾಟಗಾರನ ದೂರಿನ ಮೇರೆಗೆ ಲೋಕಾಯುಕ್ತ ಅಧಿಕಾರಿಗಳ ಆದೇಶದಂತೆ ತುಮಕೂರಿನ ಹೇಮಾವತಿ ನಾಲಾ ಉಪವಿಭಾಗ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಒತ್ತುವರಿಯ ಬಗ್ಗೆ ಕಾರ್ಯಾಚರಣೆ ಮಾಡಲಾಯಿತು.

    ಕೊರಟಗೆರೆ ತಾಲ್ಲೂಕಿನ ಕಸಬಾ ಹೋಬಳಿ ತೀತಾ ಗ್ರಾ.ಪಂ. ವ್ಯಾಪ್ತಿಯ ಗೊರವನಹಳ್ಳಿ ಗ್ರಾಮದ ಸರ್ವೇ ನಂ.16/3 ರಲ್ಲಿ 120ಮೀ ಉದ್ದದ ನಾಲೆ ಜಾಗ ಒತ್ತುವರಿಯಾದ ಬಗ್ಗೆ ಸಾಮಾಜಿಕ ಹೋರಾಟಗಾರ ಮಂಜುನಾಥ್ ಟಿ.ಕೆ. ಪ್ರಶ್ನಿಸಿ ತೆರವುಗೊಳಿಸುವಂತೆ ಲೋಕಾಯುಕ್ತರಿಗೆ ದೂರು ನೀಡಿದ್ದರು, ದೂರಿನ ಅನ್ವಯ ಲೋಕಾಯುಕ್ತ ಅಧಿಕಾರಿಗಳು ಮಧುಗಿರಿ ಎ.ಸಿ. ಮತ್ತು ಕೊರಟಗೆರೆ ತಹಶೀಲ್ದಾರ್ ಗೆ ಪರಿಶೀಲನೆ ನಡೆಸುವಂತೆ ಆದೇಶ ಮಾಡಲಾಗಿತ್ತು.


    Provided by
    Provided by

    ಲೋಕಾಯುಕ್ತರ ಆದೇಶದ ಅನ್ವಯ ತುಮಕೂರಿನ ಹೇಮಾವತಿ ನಾಲಾ ಉಪವಿಭಾಗ ಎಇಇ ಮತ್ತು ಕೊರಟಗೆರೆ ಕಂದಾಯ ಇಲಾಖೆ, ಭೂಮಾಪನ ಇಲಾಖೆಯ ಸಮಕ್ಷಮದಲ್ಲಿ ಸ್ಥಳ ಪರಿಶೀಲನೆ ನಡೆಸಿ ಹೇಮಾವತಿ ಲಿಂಕ್ ಕೆನಾಲ್ ಒತ್ತುವರಿ ಸಂಬಂಧಪಟ್ಟಂತೆ ಸಾಮಾಜಿಕ ಹೋರಾಟಗಾರ ಎದುರಲ್ಲೇ ಅಳತೆ ಮಾಡಿ ಲೋಕಾಯುಕ್ತರಿಗೆ ವರದಿ ಸಲ್ಲಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

    ಈ ವೇಳೆ ಹೇಮಾವತಿ ನಾಲಾ ಉಪವಿಭಾಗ ಜೆಇ ಅವಿನಾಶ್, ಆರ್‍ಐ ಬಸವರಾಜು, ವಿಎ ಪವನ್, ಸರ್ವೇಯರ್ ನಾಗಲಾಂಭಿಕೆ, ಎಡಿಎಲ್‍ಆರ್ ಮಹೇಶ್ ಸೇರಿದಂತೆ ಇತರರು ಹಾಜರಿದ್ದರು.

    ನೀರಿನ ಸೋರಿಕೆ ಬಗ್ಗೆ ಸಾರ್ವಜನಿಕರ ಆರೋಪ :

    ಗೊರವನಹಳ್ಳಿ ಗ್ರಾಮದಲ್ಲಿ ಒತ್ತುವರಿಯಾಗಿರುವುದನ್ನು ಹೇಮಾವತಿ ನಾಲಾ ಉಪವಿಭಾಗ ಮತ್ತು ಕಂದಾಯ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿ ಹೇಮಾವತಿ ನಾಲೆ ಒತ್ತುವರಿಗೆ ಸಂಬಂಧಪಟ್ಟಂತೆ ಅಳತೆ ಮಾಡಲಾಗಿದೆ. ಆದರೆ ತೀತಾ ಜಲಾಶಯದಿಂದ ಕತ್ತಿ ನಾಗೇನಹಳ್ಳಿಯವರೆಗೆ ಸುಮಾರು 22ಕಿ.ಮೀ ಅಂತರವಿದ್ದು, ಹೇಮಾವತಿ ನಾಲೆಯ ಬಗ್ಗೆ ಅರಿವಿಲ್ಲದೆ ಪರಿಶೀಲನೆ ನಡೆಸಿ ನಾಲೆ ಅಚ್ಚುಕಟ್ಟು ಮಾಡುವಲ್ಲಿ ವಿಫಲತೆಯ ಜೊತೆಗೆ ನೀರಿನ ಸೋರಿಕೆ ಬಗ್ಗೆ ಅಧಿಕಾರಿಗಳು ಗಮನಹರಿಸಿಲ್ಲ ಎಂದು ಸಾರ್ವಜನಿಕರು ಮಾಧ್ಯಮದ ಮುಂದೆ ಪ್ರತ್ಯೇಕವಾಗಿ ಆರೋಪಿಸಿದ್ದಾರೆ.

    ಲೋಕಾಯುಕ್ತ ನ್ಯಾಯಾಧೀಶರ ಆದೇಶದ ಅನ್ವಯ ಕಸಬಾ ಹೋಬಳಿ ಸರ್ವೇ ನಂ.16/3ರಲ್ಲಿ ಹೇಮಾವತಿ ನಾಲೆ ಮತ್ತು ತೀತಾ ಜಲಾಶಯಕ್ಕೆ ಸಂಬಂಧಿಸಿದ ಭೂಸ್ವಾಧೀನ ಒತ್ತುವಾರಿಯಾಗಿದೆ ಎಂದು ಹೋರಾಟಗಾರರು ದೂರು ನೀಡಿದ್ದರು, ಹೇಮಾವತಿ ನಾಲೆ ಉಪವಿಭಾಗ ಮತ್ತು ಕಂದಾಯ ಇಲಾಖೆ ಸಮಕ್ಷಮದಲ್ಲಿ ಅಳತೆ ಮಾಡಲಾಗಿದೆ. ಭೂ ಸ್ವಾಧೀನದ ಬಗ್ಗೆ ಸರ್ವೇ ಮಾಡಲಾದ ವರದಿಯನ್ನು ಲೋಕಾಯುಕ್ತ ಅಧಿಕಾರಿಗಳಿಗೆ ಸಲ್ಲಿಸಿ ನಿರ್ದೇಶನ ಪಡೆದ ನಂತರ ಅಗತ್ಯ ಕ್ರಮ ಕೈಗೊಳ್ಳಲಾಗುವುದು.

    — ಕೆ.ಮಂಜುನಾಥ್, ತಹಶೀಲ್ದಾರ್, ಕೊರಟಗೆರೆ.


    ಹೇಮಾವತಿ ಕೆನಾಲ್ ಜಾಗದಲ್ಲಿ ಅಂಗಡಿ ಮುಗ್ಗಂಟುಗಳು ತಲೆ ಎತ್ತಿರುವುದು ಕಂಡುಬಂದಿದೆ. ಈ ಹಿಂದೆ ಅಳತೆ ಮಾಡಿ ಹೇಮಾವತಿ ನಾಲೆಯ ಮೇಲಿನ ಅಧಿಕಾರಿಗಳಿಗೆ ವರದಿ ಸಲ್ಲಿಸಲಾಯಿತ್ತು. ಒತ್ತುವರಿಯ ಬಗ್ಗೆ ದೂರು ನೀಡಿದ ಕಾರಣ ಕಂದಾಯ ಇಲಾಖೆ ನೇತೃತ್ವದಲ್ಲಿ ಅಳತೆ ಮಾಡಲಾಗಿದೆ. ಒತ್ತುವರಿ ಬಗ್ಗೆ ಮಧುಗಿರಿ ಉಪ ವಿಭಾಗಧಿಕಾರಿಗಳ ಗಮನಕ್ಕೆ ತಂದು ಚಾನಲ್ ಅಭಿವೃದ್ಧಿ ಪಡಿಸಿ ರೈತರಿಗೆ ಅವಶ್ಯಕತೆ ಇದ್ದಲ್ಲಿ ಚಾನಲ್ ಮೂಲಕ ನೀರು ಹರಿಸಲಾಗುವುದು.

    — ಸಂಪತ್‍ ಕುಮಾರ್, ಎಇಇ, ಹೇಮಾವತಿ ನಾಲಾ ಉಪವಿಭಾಗ, ತುಮಕೂರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಕುಂಚಿಟಿಗ ಮಹಾ ಸಂಸ್ಥಾನ ಮಠಕ್ಕೆ ನಿ. ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆ ಭೇಟಿ

    December 20, 2025

    ಗ್ರಾಮೋದ್ಯೋಗ ವಿಕಾಸ್ ಯೋಜನೆಯಡಿ ಕುಂಬಾರ ಸಶಕ್ತಿಕರಣ ಅಡಿಯಲ್ಲಿ ಚಕ್ರ ಕುಂಬಾರಿಕೆ ತರಬೇತಿ

    December 18, 2025

    ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಪತ್ರ ಬರಹಗಾರರಿಂದ ಪ್ರತಿಭಟನೆ

    December 16, 2025

    Comments are closed.

    Our Picks

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಡಿಸೆಂಬರ್ 31ರಂದು ಸಿರಿಧಾನ್ಯ ಪಾಕ ಸ್ಪರ್ಧೆಗೆ ಅರ್ಜಿ: ವಿಜೇತರಿಗೆ ನಗದು ಬಹುಮಾನ | ಯಾರೆಲ್ಲ ಭಾಗವಹಿಸಬಹುದು?

    December 22, 2025

    ತುಮಕೂರು: ಕೃಷಿ ಇಲಾಖೆಯು ಸಿರಿಧಾನ್ಯ ಮತ್ತು ಸಾವಯವ ಅಂತರಾಷ್ಟ್ರೀಯ ವಾಣಿಜ್ಯ ಮೇಳ–2025ರ ಪ್ರಯುಕ್ತ ಡಿಸೆಂಬರ್ 31ರಂದು ಬೆಳಿಗ್ಗೆ 11 ಗಂಟೆಗೆ…

    ಚಾಮರಾಜನಗರ: ಗ್ರಾಮದ ಬಳಿ ಐದು ಹುಲಿಗಳ ಪ್ರತ್ಯಕ್ಷ; ಆತಂಕದಲ್ಲಿ ಜನತೆ, ನಿಷೇಧಾಜ್ಞೆ ಜಾರಿ

    December 22, 2025

    ಹುಸಿ ಬಾಂಬ್  ಇ–ಮೇಲ್ ಬೆದರಿಕೆ ಸಂದೇಶ: ಸರಗೂರು ತಾಲೂಕು ಕಚೇರಿಯಲ್ಲಿ ಬಾಂಬ್ ನಿಷ್ಕ್ರಿಯದಳ ಪರಿಶೀಲನೆ

    December 22, 2025

    ಸಿದ್ದಗಂಗಾ ಶ್ರೀಗಳ ಮಿಂಚಿನ ಸಂಚಾರ ಸ್ಫೂರ್ತಿದಾಯಕ : ಸಸ್ಯಾಂದೋಲನ ನಡೆಸಲು ಎಂ.ಶಿವಕುಮಾರ್ ಮನವಿ

    December 22, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.