nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಿಗ್ ಬಾಸ್ ವಿನ್ನರ್ ‘ಗಿಲ್ಲಿ’ ಅಲ್ಲ, ನಿರ್ಮಲಾ ಸೀತಾರಾಮನ್! ಸದನದಲ್ಲಿ ಶಾಸಕ ಪ್ರದೀಪ್ ಈಶ್ವರ್ ವ್ಯಂಗ್ಯ

    January 28, 2026

    ಬಾರಾಮತಿಯಲ್ಲಿ ಭೀಕರ ವಿಮಾನ ಅಪಘಾತ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸೇರಿದಂತೆ ಆರು ಮಂದಿ ದುರ್ಮರಣ

    January 28, 2026

    ಬಿ.ಮಟಕೆರೆ ಪಬ್ಲಿಕ್ ಶಾಲೆ ಸಿಡಿಸಿ ಅಧ್ಯಕ್ಷರ ಆಯ್ಕೆ ವಿವಾದ: ಶಾಸಕರ ವಿರುದ್ಧ ಪೋಷಕರ ಆಕ್ರೋಶ

    January 28, 2026
    Facebook Twitter Instagram
    ಟ್ರೆಂಡಿಂಗ್
    • ಬಿಗ್ ಬಾಸ್ ವಿನ್ನರ್ ‘ಗಿಲ್ಲಿ’ ಅಲ್ಲ, ನಿರ್ಮಲಾ ಸೀತಾರಾಮನ್! ಸದನದಲ್ಲಿ ಶಾಸಕ ಪ್ರದೀಪ್ ಈಶ್ವರ್ ವ್ಯಂಗ್ಯ
    • ಬಾರಾಮತಿಯಲ್ಲಿ ಭೀಕರ ವಿಮಾನ ಅಪಘಾತ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸೇರಿದಂತೆ ಆರು ಮಂದಿ ದುರ್ಮರಣ
    • ಬಿ.ಮಟಕೆರೆ ಪಬ್ಲಿಕ್ ಶಾಲೆ ಸಿಡಿಸಿ ಅಧ್ಯಕ್ಷರ ಆಯ್ಕೆ ವಿವಾದ: ಶಾಸಕರ ವಿರುದ್ಧ ಪೋಷಕರ ಆಕ್ರೋಶ
    • ಪಾವಗಡ: 1,750 ಅಡಿಗಳ ಉದ್ದದ  ಬೃಹತ್ ತಿರಂಗಾ ಯಾತ್ರೆ
    • ಮೌಲ್ಯಯುತ ಮತವನ್ನು ಮಾರಿಕೊಳ್ಳಬೇಡಿ: ಪ್ರೊ.ರವಿವರ್ಮ ಕುಮಾರ್ ಕರೆ
    • ಜಗತ್ತಿನಲ್ಲಿಯೇ  ಭಾರತೀಯ ಸಂವಿಧಾನ ಶ್ರೇಷ್ಠವಾದುದು: ಪ್ರದೀಪ್ ಕುಮಾರ್
    • ಬೀದರ್: ಹಂದಿಕೇರಾ ಸರ್ಕಾರಿ ಶಾಲೆಯಲ್ಲಿ 77ನೇ ಗಣರಾಜ್ಯೋತ್ಸವದ ಅದ್ಧೂರಿ ಆಚರಣೆ
    • ಕೋಲಾರ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ: ರೈತ ಸಂಘದ ಜಿಲ್ಲಾಧ್ಯಕ್ಷನ ಬಂಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಲೋಕಾಯುಕ್ತ ನ್ಯಾಯಾಧೀಶರ ಆದೇಶದ ಅನ್ವಯ ಹೇಮಾವತಿ ಕೆನಾಲ್ ಒತ್ತುವರಿ ಕಾರ್ಯಾಚರಣೆ
    ಕೊರಟಗೆರೆ April 11, 2025

    ಲೋಕಾಯುಕ್ತ ನ್ಯಾಯಾಧೀಶರ ಆದೇಶದ ಅನ್ವಯ ಹೇಮಾವತಿ ಕೆನಾಲ್ ಒತ್ತುವರಿ ಕಾರ್ಯಾಚರಣೆ

    By adminApril 11, 2025No Comments2 Mins Read

    ಕೊರಟಗೆರೆ: ಹೇಮಾವತಿ ಕೆನಾಲ್ ಒತ್ತುವರಿಯಾಗಿರುವುದರ ಬಗ್ಗೆ ಸಾಮಾಜಿಕ ಹೋರಾಟಗಾರನ ದೂರಿನ ಮೇರೆಗೆ ಲೋಕಾಯುಕ್ತ ಅಧಿಕಾರಿಗಳ ಆದೇಶದಂತೆ ತುಮಕೂರಿನ ಹೇಮಾವತಿ ನಾಲಾ ಉಪವಿಭಾಗ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಒತ್ತುವರಿಯ ಬಗ್ಗೆ ಕಾರ್ಯಾಚರಣೆ ಮಾಡಲಾಯಿತು.

    ಕೊರಟಗೆರೆ ತಾಲ್ಲೂಕಿನ ಕಸಬಾ ಹೋಬಳಿ ತೀತಾ ಗ್ರಾ.ಪಂ. ವ್ಯಾಪ್ತಿಯ ಗೊರವನಹಳ್ಳಿ ಗ್ರಾಮದ ಸರ್ವೇ ನಂ.16/3 ರಲ್ಲಿ 120ಮೀ ಉದ್ದದ ನಾಲೆ ಜಾಗ ಒತ್ತುವರಿಯಾದ ಬಗ್ಗೆ ಸಾಮಾಜಿಕ ಹೋರಾಟಗಾರ ಮಂಜುನಾಥ್ ಟಿ.ಕೆ. ಪ್ರಶ್ನಿಸಿ ತೆರವುಗೊಳಿಸುವಂತೆ ಲೋಕಾಯುಕ್ತರಿಗೆ ದೂರು ನೀಡಿದ್ದರು, ದೂರಿನ ಅನ್ವಯ ಲೋಕಾಯುಕ್ತ ಅಧಿಕಾರಿಗಳು ಮಧುಗಿರಿ ಎ.ಸಿ. ಮತ್ತು ಕೊರಟಗೆರೆ ತಹಶೀಲ್ದಾರ್ ಗೆ ಪರಿಶೀಲನೆ ನಡೆಸುವಂತೆ ಆದೇಶ ಮಾಡಲಾಗಿತ್ತು.


    Provided by
    Provided by

    ಲೋಕಾಯುಕ್ತರ ಆದೇಶದ ಅನ್ವಯ ತುಮಕೂರಿನ ಹೇಮಾವತಿ ನಾಲಾ ಉಪವಿಭಾಗ ಎಇಇ ಮತ್ತು ಕೊರಟಗೆರೆ ಕಂದಾಯ ಇಲಾಖೆ, ಭೂಮಾಪನ ಇಲಾಖೆಯ ಸಮಕ್ಷಮದಲ್ಲಿ ಸ್ಥಳ ಪರಿಶೀಲನೆ ನಡೆಸಿ ಹೇಮಾವತಿ ಲಿಂಕ್ ಕೆನಾಲ್ ಒತ್ತುವರಿ ಸಂಬಂಧಪಟ್ಟಂತೆ ಸಾಮಾಜಿಕ ಹೋರಾಟಗಾರ ಎದುರಲ್ಲೇ ಅಳತೆ ಮಾಡಿ ಲೋಕಾಯುಕ್ತರಿಗೆ ವರದಿ ಸಲ್ಲಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

    ಈ ವೇಳೆ ಹೇಮಾವತಿ ನಾಲಾ ಉಪವಿಭಾಗ ಜೆಇ ಅವಿನಾಶ್, ಆರ್‍ಐ ಬಸವರಾಜು, ವಿಎ ಪವನ್, ಸರ್ವೇಯರ್ ನಾಗಲಾಂಭಿಕೆ, ಎಡಿಎಲ್‍ಆರ್ ಮಹೇಶ್ ಸೇರಿದಂತೆ ಇತರರು ಹಾಜರಿದ್ದರು.

    ನೀರಿನ ಸೋರಿಕೆ ಬಗ್ಗೆ ಸಾರ್ವಜನಿಕರ ಆರೋಪ :

    ಗೊರವನಹಳ್ಳಿ ಗ್ರಾಮದಲ್ಲಿ ಒತ್ತುವರಿಯಾಗಿರುವುದನ್ನು ಹೇಮಾವತಿ ನಾಲಾ ಉಪವಿಭಾಗ ಮತ್ತು ಕಂದಾಯ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿ ಹೇಮಾವತಿ ನಾಲೆ ಒತ್ತುವರಿಗೆ ಸಂಬಂಧಪಟ್ಟಂತೆ ಅಳತೆ ಮಾಡಲಾಗಿದೆ. ಆದರೆ ತೀತಾ ಜಲಾಶಯದಿಂದ ಕತ್ತಿ ನಾಗೇನಹಳ್ಳಿಯವರೆಗೆ ಸುಮಾರು 22ಕಿ.ಮೀ ಅಂತರವಿದ್ದು, ಹೇಮಾವತಿ ನಾಲೆಯ ಬಗ್ಗೆ ಅರಿವಿಲ್ಲದೆ ಪರಿಶೀಲನೆ ನಡೆಸಿ ನಾಲೆ ಅಚ್ಚುಕಟ್ಟು ಮಾಡುವಲ್ಲಿ ವಿಫಲತೆಯ ಜೊತೆಗೆ ನೀರಿನ ಸೋರಿಕೆ ಬಗ್ಗೆ ಅಧಿಕಾರಿಗಳು ಗಮನಹರಿಸಿಲ್ಲ ಎಂದು ಸಾರ್ವಜನಿಕರು ಮಾಧ್ಯಮದ ಮುಂದೆ ಪ್ರತ್ಯೇಕವಾಗಿ ಆರೋಪಿಸಿದ್ದಾರೆ.

    ಲೋಕಾಯುಕ್ತ ನ್ಯಾಯಾಧೀಶರ ಆದೇಶದ ಅನ್ವಯ ಕಸಬಾ ಹೋಬಳಿ ಸರ್ವೇ ನಂ.16/3ರಲ್ಲಿ ಹೇಮಾವತಿ ನಾಲೆ ಮತ್ತು ತೀತಾ ಜಲಾಶಯಕ್ಕೆ ಸಂಬಂಧಿಸಿದ ಭೂಸ್ವಾಧೀನ ಒತ್ತುವಾರಿಯಾಗಿದೆ ಎಂದು ಹೋರಾಟಗಾರರು ದೂರು ನೀಡಿದ್ದರು, ಹೇಮಾವತಿ ನಾಲೆ ಉಪವಿಭಾಗ ಮತ್ತು ಕಂದಾಯ ಇಲಾಖೆ ಸಮಕ್ಷಮದಲ್ಲಿ ಅಳತೆ ಮಾಡಲಾಗಿದೆ. ಭೂ ಸ್ವಾಧೀನದ ಬಗ್ಗೆ ಸರ್ವೇ ಮಾಡಲಾದ ವರದಿಯನ್ನು ಲೋಕಾಯುಕ್ತ ಅಧಿಕಾರಿಗಳಿಗೆ ಸಲ್ಲಿಸಿ ನಿರ್ದೇಶನ ಪಡೆದ ನಂತರ ಅಗತ್ಯ ಕ್ರಮ ಕೈಗೊಳ್ಳಲಾಗುವುದು.

    — ಕೆ.ಮಂಜುನಾಥ್, ತಹಶೀಲ್ದಾರ್, ಕೊರಟಗೆರೆ.


    ಹೇಮಾವತಿ ಕೆನಾಲ್ ಜಾಗದಲ್ಲಿ ಅಂಗಡಿ ಮುಗ್ಗಂಟುಗಳು ತಲೆ ಎತ್ತಿರುವುದು ಕಂಡುಬಂದಿದೆ. ಈ ಹಿಂದೆ ಅಳತೆ ಮಾಡಿ ಹೇಮಾವತಿ ನಾಲೆಯ ಮೇಲಿನ ಅಧಿಕಾರಿಗಳಿಗೆ ವರದಿ ಸಲ್ಲಿಸಲಾಯಿತ್ತು. ಒತ್ತುವರಿಯ ಬಗ್ಗೆ ದೂರು ನೀಡಿದ ಕಾರಣ ಕಂದಾಯ ಇಲಾಖೆ ನೇತೃತ್ವದಲ್ಲಿ ಅಳತೆ ಮಾಡಲಾಗಿದೆ. ಒತ್ತುವರಿ ಬಗ್ಗೆ ಮಧುಗಿರಿ ಉಪ ವಿಭಾಗಧಿಕಾರಿಗಳ ಗಮನಕ್ಕೆ ತಂದು ಚಾನಲ್ ಅಭಿವೃದ್ಧಿ ಪಡಿಸಿ ರೈತರಿಗೆ ಅವಶ್ಯಕತೆ ಇದ್ದಲ್ಲಿ ಚಾನಲ್ ಮೂಲಕ ನೀರು ಹರಿಸಲಾಗುವುದು.

    — ಸಂಪತ್‍ ಕುಮಾರ್, ಎಇಇ, ಹೇಮಾವತಿ ನಾಲಾ ಉಪವಿಭಾಗ, ತುಮಕೂರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಕೊರಟಗೆರೆ: 50 ಕೋಟಿಗಳ ವಿಶೇಷ ಅನುದಾನದಲ್ಲಿ ಮೂಲಭೂತ ಸೌಕರ್ಯಕ್ಕೆ ಹೆಚ್ಚಿನ ಆದ್ಯತೆ: ಸಚಿವ ಡಾ.ಜಿ.ಪರಮೇಶ್ವರ್

    January 21, 2026

    ಕೊರಟಗೆರೆ: ಇ–ಸ್ವತ್ತು ಸಾಫ್ಟ್‌ವೇರ್ ದೋಷ, 49,521 ಅರ್ಜಿಗಳು ಬಾಕಿ: ಸಾರ್ವಜನಿಕರ ಆಕ್ರೋಶ

    January 20, 2026

    ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ |  ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ

    January 19, 2026

    Comments are closed.

    Our Picks

    ಬಾರಾಮತಿಯಲ್ಲಿ ಭೀಕರ ವಿಮಾನ ಅಪಘಾತ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸೇರಿದಂತೆ ಆರು ಮಂದಿ ದುರ್ಮರಣ

    January 28, 2026

    77ನೇ ಗಣರಾಜ್ಯೋತ್ಸವ ಸಂಭ್ರಮ: ಗಮನಸೆಳೆದ ಭಾರತದ ಸೇನಾ ಶಕ್ತಿ ಮತ್ತು ಸಾಂಸ್ಕೃತಿಕ ವೈಭವ

    January 26, 2026

    ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ

    January 17, 2026

    EPF ರಿಟರ್ನ್ ಸಲ್ಲಿಕೆಗೆ ಜನವರಿ 20ರವರೆಗೆ ಅವಧಿ ವಿಸ್ತರಣೆ

    January 17, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬಿಗ್ ಬಾಸ್ ವಿನ್ನರ್ ‘ಗಿಲ್ಲಿ’ ಅಲ್ಲ, ನಿರ್ಮಲಾ ಸೀತಾರಾಮನ್! ಸದನದಲ್ಲಿ ಶಾಸಕ ಪ್ರದೀಪ್ ಈಶ್ವರ್ ವ್ಯಂಗ್ಯ

    January 28, 2026

    ಬೆಂಗಳೂರು: ಕನ್ನಡ ಬಿಗ್ ಬಾಸ್ ಸೀಸನ್ 12ರ ವಿನ್ನರ್ ಪಟ್ಟ ಗಿಲ್ಲಿ ನಟ ಪಾಲಾಗಿದ್ದರೂ, ವಿಧಾನಸಭೆಯಲ್ಲಿ ಈ ವಿಷಯವು ಒಂದು…

    ಬಾರಾಮತಿಯಲ್ಲಿ ಭೀಕರ ವಿಮಾನ ಅಪಘಾತ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸೇರಿದಂತೆ ಆರು ಮಂದಿ ದುರ್ಮರಣ

    January 28, 2026

    ಬಿ.ಮಟಕೆರೆ ಪಬ್ಲಿಕ್ ಶಾಲೆ ಸಿಡಿಸಿ ಅಧ್ಯಕ್ಷರ ಆಯ್ಕೆ ವಿವಾದ: ಶಾಸಕರ ವಿರುದ್ಧ ಪೋಷಕರ ಆಕ್ರೋಶ

    January 28, 2026

    ಪಾವಗಡ: 1,750 ಅಡಿಗಳ ಉದ್ದದ  ಬೃಹತ್ ತಿರಂಗಾ ಯಾತ್ರೆ

    January 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.