nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಲು ಹೆಣ್ಣು ಮಕ್ಕಳಿಗೆ ಉಚಿತ ಲಸಿಕೆ: ಶಾಸಕ ಡಾ.ಎಚ್.ಡಿ.ರಂಗನಾಥ್

    May 12, 2026

    ಪಾವಗಡ: ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ

    May 11, 2026

    ಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಹರಿಂದ ಅರ್ಜಿ ಆಹ್ವಾನ

    May 11, 2026
    Facebook Twitter Instagram
    ಟ್ರೆಂಡಿಂಗ್
    • ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಲು ಹೆಣ್ಣು ಮಕ್ಕಳಿಗೆ ಉಚಿತ ಲಸಿಕೆ: ಶಾಸಕ ಡಾ.ಎಚ್.ಡಿ.ರಂಗನಾಥ್
    • ಪಾವಗಡ: ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ
    • ಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಹರಿಂದ ಅರ್ಜಿ ಆಹ್ವಾನ
    • ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
    • ಎಸ್.ಅಪ್ಪೇನಹಳ್ಳಿ: ಆಂಜನೇಯಸ್ವಾಮಿ ದೇವಸ್ಥಾನದ ಆವರಣದಲ್ಲಿ ನವಿಲು ನರ್ತನ; ಗ್ರಾಮಸ್ಥರಲ್ಲಿ ಕುತೂಹಲ
    • ನಾಲ್ಕು ದಶಕಗಳಿಂದ ರಸ್ತೆ ಅಭಿವೃದ್ಧಿ ಕಾಣದ ಬೆಟ್ಟಹಳ್ಳಿಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ರಂಗನಾಥ್ ಚಾಲನೆ
    • ಕಳ್ಳಂಬೆಳ್ಳ ಪೊಲೀಸರಿಂದ ರಕ್ಷಣೆ ಮತ್ತು ಕಾನೂನು ಅರಿವು ಕಾರ್ಯಕ್ರಮ
    • ಹರ್ತಿ ಪತ್ತಿನ ಸಹಕಾರ ಸಂಘದ ಕಟ್ಟಡಕ್ಕೆ ಸಚಿವ ಡಾ. ಜಿ. ಪರಮೇಶ್ವರ್ ಶಂಕುಸ್ಥಾಪನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಲೋಕಾಯುಕ್ತ ನ್ಯಾಯಾಧೀಶರ ಆದೇಶದ ಅನ್ವಯ ಹೇಮಾವತಿ ಕೆನಾಲ್ ಒತ್ತುವರಿ ಕಾರ್ಯಾಚರಣೆ
    ಕೊರಟಗೆರೆ April 11, 2025

    ಲೋಕಾಯುಕ್ತ ನ್ಯಾಯಾಧೀಶರ ಆದೇಶದ ಅನ್ವಯ ಹೇಮಾವತಿ ಕೆನಾಲ್ ಒತ್ತುವರಿ ಕಾರ್ಯಾಚರಣೆ

    By adminApril 11, 2025No Comments2 Mins Read

    ಕೊರಟಗೆರೆ: ಹೇಮಾವತಿ ಕೆನಾಲ್ ಒತ್ತುವರಿಯಾಗಿರುವುದರ ಬಗ್ಗೆ ಸಾಮಾಜಿಕ ಹೋರಾಟಗಾರನ ದೂರಿನ ಮೇರೆಗೆ ಲೋಕಾಯುಕ್ತ ಅಧಿಕಾರಿಗಳ ಆದೇಶದಂತೆ ತುಮಕೂರಿನ ಹೇಮಾವತಿ ನಾಲಾ ಉಪವಿಭಾಗ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಒತ್ತುವರಿಯ ಬಗ್ಗೆ ಕಾರ್ಯಾಚರಣೆ ಮಾಡಲಾಯಿತು.

    ಕೊರಟಗೆರೆ ತಾಲ್ಲೂಕಿನ ಕಸಬಾ ಹೋಬಳಿ ತೀತಾ ಗ್ರಾ.ಪಂ. ವ್ಯಾಪ್ತಿಯ ಗೊರವನಹಳ್ಳಿ ಗ್ರಾಮದ ಸರ್ವೇ ನಂ.16/3 ರಲ್ಲಿ 120ಮೀ ಉದ್ದದ ನಾಲೆ ಜಾಗ ಒತ್ತುವರಿಯಾದ ಬಗ್ಗೆ ಸಾಮಾಜಿಕ ಹೋರಾಟಗಾರ ಮಂಜುನಾಥ್ ಟಿ.ಕೆ. ಪ್ರಶ್ನಿಸಿ ತೆರವುಗೊಳಿಸುವಂತೆ ಲೋಕಾಯುಕ್ತರಿಗೆ ದೂರು ನೀಡಿದ್ದರು, ದೂರಿನ ಅನ್ವಯ ಲೋಕಾಯುಕ್ತ ಅಧಿಕಾರಿಗಳು ಮಧುಗಿರಿ ಎ.ಸಿ. ಮತ್ತು ಕೊರಟಗೆರೆ ತಹಶೀಲ್ದಾರ್ ಗೆ ಪರಿಶೀಲನೆ ನಡೆಸುವಂತೆ ಆದೇಶ ಮಾಡಲಾಗಿತ್ತು.


    Provided by
    Provided by

    ಲೋಕಾಯುಕ್ತರ ಆದೇಶದ ಅನ್ವಯ ತುಮಕೂರಿನ ಹೇಮಾವತಿ ನಾಲಾ ಉಪವಿಭಾಗ ಎಇಇ ಮತ್ತು ಕೊರಟಗೆರೆ ಕಂದಾಯ ಇಲಾಖೆ, ಭೂಮಾಪನ ಇಲಾಖೆಯ ಸಮಕ್ಷಮದಲ್ಲಿ ಸ್ಥಳ ಪರಿಶೀಲನೆ ನಡೆಸಿ ಹೇಮಾವತಿ ಲಿಂಕ್ ಕೆನಾಲ್ ಒತ್ತುವರಿ ಸಂಬಂಧಪಟ್ಟಂತೆ ಸಾಮಾಜಿಕ ಹೋರಾಟಗಾರ ಎದುರಲ್ಲೇ ಅಳತೆ ಮಾಡಿ ಲೋಕಾಯುಕ್ತರಿಗೆ ವರದಿ ಸಲ್ಲಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

    ಈ ವೇಳೆ ಹೇಮಾವತಿ ನಾಲಾ ಉಪವಿಭಾಗ ಜೆಇ ಅವಿನಾಶ್, ಆರ್‍ಐ ಬಸವರಾಜು, ವಿಎ ಪವನ್, ಸರ್ವೇಯರ್ ನಾಗಲಾಂಭಿಕೆ, ಎಡಿಎಲ್‍ಆರ್ ಮಹೇಶ್ ಸೇರಿದಂತೆ ಇತರರು ಹಾಜರಿದ್ದರು.

    ನೀರಿನ ಸೋರಿಕೆ ಬಗ್ಗೆ ಸಾರ್ವಜನಿಕರ ಆರೋಪ :

    ಗೊರವನಹಳ್ಳಿ ಗ್ರಾಮದಲ್ಲಿ ಒತ್ತುವರಿಯಾಗಿರುವುದನ್ನು ಹೇಮಾವತಿ ನಾಲಾ ಉಪವಿಭಾಗ ಮತ್ತು ಕಂದಾಯ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿ ಹೇಮಾವತಿ ನಾಲೆ ಒತ್ತುವರಿಗೆ ಸಂಬಂಧಪಟ್ಟಂತೆ ಅಳತೆ ಮಾಡಲಾಗಿದೆ. ಆದರೆ ತೀತಾ ಜಲಾಶಯದಿಂದ ಕತ್ತಿ ನಾಗೇನಹಳ್ಳಿಯವರೆಗೆ ಸುಮಾರು 22ಕಿ.ಮೀ ಅಂತರವಿದ್ದು, ಹೇಮಾವತಿ ನಾಲೆಯ ಬಗ್ಗೆ ಅರಿವಿಲ್ಲದೆ ಪರಿಶೀಲನೆ ನಡೆಸಿ ನಾಲೆ ಅಚ್ಚುಕಟ್ಟು ಮಾಡುವಲ್ಲಿ ವಿಫಲತೆಯ ಜೊತೆಗೆ ನೀರಿನ ಸೋರಿಕೆ ಬಗ್ಗೆ ಅಧಿಕಾರಿಗಳು ಗಮನಹರಿಸಿಲ್ಲ ಎಂದು ಸಾರ್ವಜನಿಕರು ಮಾಧ್ಯಮದ ಮುಂದೆ ಪ್ರತ್ಯೇಕವಾಗಿ ಆರೋಪಿಸಿದ್ದಾರೆ.

    ಲೋಕಾಯುಕ್ತ ನ್ಯಾಯಾಧೀಶರ ಆದೇಶದ ಅನ್ವಯ ಕಸಬಾ ಹೋಬಳಿ ಸರ್ವೇ ನಂ.16/3ರಲ್ಲಿ ಹೇಮಾವತಿ ನಾಲೆ ಮತ್ತು ತೀತಾ ಜಲಾಶಯಕ್ಕೆ ಸಂಬಂಧಿಸಿದ ಭೂಸ್ವಾಧೀನ ಒತ್ತುವಾರಿಯಾಗಿದೆ ಎಂದು ಹೋರಾಟಗಾರರು ದೂರು ನೀಡಿದ್ದರು, ಹೇಮಾವತಿ ನಾಲೆ ಉಪವಿಭಾಗ ಮತ್ತು ಕಂದಾಯ ಇಲಾಖೆ ಸಮಕ್ಷಮದಲ್ಲಿ ಅಳತೆ ಮಾಡಲಾಗಿದೆ. ಭೂ ಸ್ವಾಧೀನದ ಬಗ್ಗೆ ಸರ್ವೇ ಮಾಡಲಾದ ವರದಿಯನ್ನು ಲೋಕಾಯುಕ್ತ ಅಧಿಕಾರಿಗಳಿಗೆ ಸಲ್ಲಿಸಿ ನಿರ್ದೇಶನ ಪಡೆದ ನಂತರ ಅಗತ್ಯ ಕ್ರಮ ಕೈಗೊಳ್ಳಲಾಗುವುದು.

    — ಕೆ.ಮಂಜುನಾಥ್, ತಹಶೀಲ್ದಾರ್, ಕೊರಟಗೆರೆ.


    ಹೇಮಾವತಿ ಕೆನಾಲ್ ಜಾಗದಲ್ಲಿ ಅಂಗಡಿ ಮುಗ್ಗಂಟುಗಳು ತಲೆ ಎತ್ತಿರುವುದು ಕಂಡುಬಂದಿದೆ. ಈ ಹಿಂದೆ ಅಳತೆ ಮಾಡಿ ಹೇಮಾವತಿ ನಾಲೆಯ ಮೇಲಿನ ಅಧಿಕಾರಿಗಳಿಗೆ ವರದಿ ಸಲ್ಲಿಸಲಾಯಿತ್ತು. ಒತ್ತುವರಿಯ ಬಗ್ಗೆ ದೂರು ನೀಡಿದ ಕಾರಣ ಕಂದಾಯ ಇಲಾಖೆ ನೇತೃತ್ವದಲ್ಲಿ ಅಳತೆ ಮಾಡಲಾಗಿದೆ. ಒತ್ತುವರಿ ಬಗ್ಗೆ ಮಧುಗಿರಿ ಉಪ ವಿಭಾಗಧಿಕಾರಿಗಳ ಗಮನಕ್ಕೆ ತಂದು ಚಾನಲ್ ಅಭಿವೃದ್ಧಿ ಪಡಿಸಿ ರೈತರಿಗೆ ಅವಶ್ಯಕತೆ ಇದ್ದಲ್ಲಿ ಚಾನಲ್ ಮೂಲಕ ನೀರು ಹರಿಸಲಾಗುವುದು.

    — ಸಂಪತ್‍ ಕುಮಾರ್, ಎಇಇ, ಹೇಮಾವತಿ ನಾಲಾ ಉಪವಿಭಾಗ, ತುಮಕೂರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಕೊರಟಗೆರೆ: ವಡೇರಹಳ್ಳಿ ಬಳಿ ಬಫರ್ ಡ್ಯಾಂ ನಿರ್ಮಾಣಕ್ಕೆ ರೈತರ ವಿರೋಧ

    May 9, 2026

    ಪಟ್ಟಣ ಪಂಚಾಯತಿಯಿಂದ ಪುರಸಭೆಗೆ ಮೇಲ್ದರ್ಜೆ: ನಾಮಫಲಕ ಅನಾವರಣ, ಸೋಲಾರ್ ಪ್ಲಾಂಟ್ ಉದ್ಘಾಟನೆ

    May 1, 2026

    ಶಿಕ್ಷಣ ಜೀವನವನ್ನು ರೂಪಿಸುವ ಶಕ್ತಿ: ಶಿವರುದ್ರ ಮಹಾ ಸ್ವಾಮೀಜಿ

    April 26, 2026

    Comments are closed.

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕುಣಿಗಲ್

    ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಲು ಹೆಣ್ಣು ಮಕ್ಕಳಿಗೆ ಉಚಿತ ಲಸಿಕೆ: ಶಾಸಕ ಡಾ.ಎಚ್.ಡಿ.ರಂಗನಾಥ್

    May 12, 2026

    ಕುಣಿಗಲ್: ಮಹಿಳೆಯರ ಬದುಕಿಗೆ ಮಾರಕವಾಗಿರುವ, ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಲು 14 ವರ್ಷ ಮೇಲ್ಪಟ್ಟ ಎಲ್ಲಾ ಹೆಣ್ಣು ಮಕ್ಕಳು ಕಡ್ಡಾಯವಾಗಿ ಎಚ್‌…

    ಪಾವಗಡ: ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ

    May 11, 2026

    ಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಹರಿಂದ ಅರ್ಜಿ ಆಹ್ವಾನ

    May 11, 2026

    ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    May 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.