nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಿದ್ದಗಂಗಾ ಮಠದಲ್ಲಿ ಸಂಭ್ರಮದ ನಾಮಕರಣ ಮಹೋತ್ಸವ: 119 ಮಕ್ಕಳಿಗೆ ‘ಶಿವಕುಮಾರ’ ನಾಮಕರಣ

    April 5, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ಡಾ.ಬಾಬು ಜಗಜೀವನರಾಮ್’ರವರ119ನೇ ಜಯಂತಿ ಆಚರಣೆ

    April 5, 2026
    Facebook Twitter Instagram
    ಟ್ರೆಂಡಿಂಗ್
    • ಸಿದ್ದಗಂಗಾ ಮಠದಲ್ಲಿ ಸಂಭ್ರಮದ ನಾಮಕರಣ ಮಹೋತ್ಸವ: 119 ಮಕ್ಕಳಿಗೆ ‘ಶಿವಕುಮಾರ’ ನಾಮಕರಣ
    • ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ
    • ಡಾ.ಬಾಬು ಜಗಜೀವನರಾಮ್’ರವರ119ನೇ ಜಯಂತಿ ಆಚರಣೆ
    • ತಿಪಟೂರು: ಕುಡಿಯುವ ನೀರಿನ ಸಮಸ್ಯೆ ಬಗೆಹರಿಸದಿದ್ದರೆ ನಗರಸಭೆ ಮುಂದೆ ಪ್ರತಿಭಟನೆ: ಕೆ.ಟಿ.ಶಾಂತಕುಮಾರ್ ಎಚ್ಚರಿಕೆ
    • ತಿಪಟೂರು: ಕಾರು–ಬೈಕ್ ನಡುವೆ ಭೀಕರ ಅಪಘಾತ: ವೆಲ್ಡಿಂಗ್ ಕಾರ್ಮಿಕ ಸಾವು
    • ಶಿರಾ ಬಳಿ ಭೀಕರ ರಸ್ತೆ ಅಪಘಾತ: ಕೆಎಸ್‌ ಆರ್‌ ಟಿಸಿ ಮತ್ತು ಖಾಸಗಿ ಬಸ್‌ ನಡುವೆ ಡಿಕ್ಕಿ, ಇಬ್ಬರು ಸಾವು
    • ಡಾ.ಶಿವಕುಮಾರ್ ಸ್ವಾಮೀಜಿಗಳಿಂದಾಗಿ ತುಮಕೂರು ದಾಸೋಹ ಯೂನಿವರ್ಸಿಟಿಯಾಗಿದೆ: ಹಿರೇಮಠ ಶ್ರೀ
    • ನಿಂದನೆ: ಟೆಂಪಲ್ ವಿಭಾಗೀಯ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ದರ್ಶನ್ ವಿರುದ್ಧ ಗುತ್ತಿಗೆದಾರರಿಂದ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಲೋಕಾಯುಕ್ತ ನ್ಯಾಯಾಧೀಶರ ಆದೇಶದ ಅನ್ವಯ ಹೇಮಾವತಿ ಕೆನಾಲ್ ಒತ್ತುವರಿ ಕಾರ್ಯಾಚರಣೆ
    ಕೊರಟಗೆರೆ April 11, 2025

    ಲೋಕಾಯುಕ್ತ ನ್ಯಾಯಾಧೀಶರ ಆದೇಶದ ಅನ್ವಯ ಹೇಮಾವತಿ ಕೆನಾಲ್ ಒತ್ತುವರಿ ಕಾರ್ಯಾಚರಣೆ

    By adminApril 11, 2025No Comments2 Mins Read

    ಕೊರಟಗೆರೆ: ಹೇಮಾವತಿ ಕೆನಾಲ್ ಒತ್ತುವರಿಯಾಗಿರುವುದರ ಬಗ್ಗೆ ಸಾಮಾಜಿಕ ಹೋರಾಟಗಾರನ ದೂರಿನ ಮೇರೆಗೆ ಲೋಕಾಯುಕ್ತ ಅಧಿಕಾರಿಗಳ ಆದೇಶದಂತೆ ತುಮಕೂರಿನ ಹೇಮಾವತಿ ನಾಲಾ ಉಪವಿಭಾಗ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಒತ್ತುವರಿಯ ಬಗ್ಗೆ ಕಾರ್ಯಾಚರಣೆ ಮಾಡಲಾಯಿತು.

    ಕೊರಟಗೆರೆ ತಾಲ್ಲೂಕಿನ ಕಸಬಾ ಹೋಬಳಿ ತೀತಾ ಗ್ರಾ.ಪಂ. ವ್ಯಾಪ್ತಿಯ ಗೊರವನಹಳ್ಳಿ ಗ್ರಾಮದ ಸರ್ವೇ ನಂ.16/3 ರಲ್ಲಿ 120ಮೀ ಉದ್ದದ ನಾಲೆ ಜಾಗ ಒತ್ತುವರಿಯಾದ ಬಗ್ಗೆ ಸಾಮಾಜಿಕ ಹೋರಾಟಗಾರ ಮಂಜುನಾಥ್ ಟಿ.ಕೆ. ಪ್ರಶ್ನಿಸಿ ತೆರವುಗೊಳಿಸುವಂತೆ ಲೋಕಾಯುಕ್ತರಿಗೆ ದೂರು ನೀಡಿದ್ದರು, ದೂರಿನ ಅನ್ವಯ ಲೋಕಾಯುಕ್ತ ಅಧಿಕಾರಿಗಳು ಮಧುಗಿರಿ ಎ.ಸಿ. ಮತ್ತು ಕೊರಟಗೆರೆ ತಹಶೀಲ್ದಾರ್ ಗೆ ಪರಿಶೀಲನೆ ನಡೆಸುವಂತೆ ಆದೇಶ ಮಾಡಲಾಗಿತ್ತು.


    Provided by
    Provided by

    ಲೋಕಾಯುಕ್ತರ ಆದೇಶದ ಅನ್ವಯ ತುಮಕೂರಿನ ಹೇಮಾವತಿ ನಾಲಾ ಉಪವಿಭಾಗ ಎಇಇ ಮತ್ತು ಕೊರಟಗೆರೆ ಕಂದಾಯ ಇಲಾಖೆ, ಭೂಮಾಪನ ಇಲಾಖೆಯ ಸಮಕ್ಷಮದಲ್ಲಿ ಸ್ಥಳ ಪರಿಶೀಲನೆ ನಡೆಸಿ ಹೇಮಾವತಿ ಲಿಂಕ್ ಕೆನಾಲ್ ಒತ್ತುವರಿ ಸಂಬಂಧಪಟ್ಟಂತೆ ಸಾಮಾಜಿಕ ಹೋರಾಟಗಾರ ಎದುರಲ್ಲೇ ಅಳತೆ ಮಾಡಿ ಲೋಕಾಯುಕ್ತರಿಗೆ ವರದಿ ಸಲ್ಲಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

    ಈ ವೇಳೆ ಹೇಮಾವತಿ ನಾಲಾ ಉಪವಿಭಾಗ ಜೆಇ ಅವಿನಾಶ್, ಆರ್‍ಐ ಬಸವರಾಜು, ವಿಎ ಪವನ್, ಸರ್ವೇಯರ್ ನಾಗಲಾಂಭಿಕೆ, ಎಡಿಎಲ್‍ಆರ್ ಮಹೇಶ್ ಸೇರಿದಂತೆ ಇತರರು ಹಾಜರಿದ್ದರು.

    ನೀರಿನ ಸೋರಿಕೆ ಬಗ್ಗೆ ಸಾರ್ವಜನಿಕರ ಆರೋಪ :

    ಗೊರವನಹಳ್ಳಿ ಗ್ರಾಮದಲ್ಲಿ ಒತ್ತುವರಿಯಾಗಿರುವುದನ್ನು ಹೇಮಾವತಿ ನಾಲಾ ಉಪವಿಭಾಗ ಮತ್ತು ಕಂದಾಯ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿ ಹೇಮಾವತಿ ನಾಲೆ ಒತ್ತುವರಿಗೆ ಸಂಬಂಧಪಟ್ಟಂತೆ ಅಳತೆ ಮಾಡಲಾಗಿದೆ. ಆದರೆ ತೀತಾ ಜಲಾಶಯದಿಂದ ಕತ್ತಿ ನಾಗೇನಹಳ್ಳಿಯವರೆಗೆ ಸುಮಾರು 22ಕಿ.ಮೀ ಅಂತರವಿದ್ದು, ಹೇಮಾವತಿ ನಾಲೆಯ ಬಗ್ಗೆ ಅರಿವಿಲ್ಲದೆ ಪರಿಶೀಲನೆ ನಡೆಸಿ ನಾಲೆ ಅಚ್ಚುಕಟ್ಟು ಮಾಡುವಲ್ಲಿ ವಿಫಲತೆಯ ಜೊತೆಗೆ ನೀರಿನ ಸೋರಿಕೆ ಬಗ್ಗೆ ಅಧಿಕಾರಿಗಳು ಗಮನಹರಿಸಿಲ್ಲ ಎಂದು ಸಾರ್ವಜನಿಕರು ಮಾಧ್ಯಮದ ಮುಂದೆ ಪ್ರತ್ಯೇಕವಾಗಿ ಆರೋಪಿಸಿದ್ದಾರೆ.

    ಲೋಕಾಯುಕ್ತ ನ್ಯಾಯಾಧೀಶರ ಆದೇಶದ ಅನ್ವಯ ಕಸಬಾ ಹೋಬಳಿ ಸರ್ವೇ ನಂ.16/3ರಲ್ಲಿ ಹೇಮಾವತಿ ನಾಲೆ ಮತ್ತು ತೀತಾ ಜಲಾಶಯಕ್ಕೆ ಸಂಬಂಧಿಸಿದ ಭೂಸ್ವಾಧೀನ ಒತ್ತುವಾರಿಯಾಗಿದೆ ಎಂದು ಹೋರಾಟಗಾರರು ದೂರು ನೀಡಿದ್ದರು, ಹೇಮಾವತಿ ನಾಲೆ ಉಪವಿಭಾಗ ಮತ್ತು ಕಂದಾಯ ಇಲಾಖೆ ಸಮಕ್ಷಮದಲ್ಲಿ ಅಳತೆ ಮಾಡಲಾಗಿದೆ. ಭೂ ಸ್ವಾಧೀನದ ಬಗ್ಗೆ ಸರ್ವೇ ಮಾಡಲಾದ ವರದಿಯನ್ನು ಲೋಕಾಯುಕ್ತ ಅಧಿಕಾರಿಗಳಿಗೆ ಸಲ್ಲಿಸಿ ನಿರ್ದೇಶನ ಪಡೆದ ನಂತರ ಅಗತ್ಯ ಕ್ರಮ ಕೈಗೊಳ್ಳಲಾಗುವುದು.

    — ಕೆ.ಮಂಜುನಾಥ್, ತಹಶೀಲ್ದಾರ್, ಕೊರಟಗೆರೆ.


    ಹೇಮಾವತಿ ಕೆನಾಲ್ ಜಾಗದಲ್ಲಿ ಅಂಗಡಿ ಮುಗ್ಗಂಟುಗಳು ತಲೆ ಎತ್ತಿರುವುದು ಕಂಡುಬಂದಿದೆ. ಈ ಹಿಂದೆ ಅಳತೆ ಮಾಡಿ ಹೇಮಾವತಿ ನಾಲೆಯ ಮೇಲಿನ ಅಧಿಕಾರಿಗಳಿಗೆ ವರದಿ ಸಲ್ಲಿಸಲಾಯಿತ್ತು. ಒತ್ತುವರಿಯ ಬಗ್ಗೆ ದೂರು ನೀಡಿದ ಕಾರಣ ಕಂದಾಯ ಇಲಾಖೆ ನೇತೃತ್ವದಲ್ಲಿ ಅಳತೆ ಮಾಡಲಾಗಿದೆ. ಒತ್ತುವರಿ ಬಗ್ಗೆ ಮಧುಗಿರಿ ಉಪ ವಿಭಾಗಧಿಕಾರಿಗಳ ಗಮನಕ್ಕೆ ತಂದು ಚಾನಲ್ ಅಭಿವೃದ್ಧಿ ಪಡಿಸಿ ರೈತರಿಗೆ ಅವಶ್ಯಕತೆ ಇದ್ದಲ್ಲಿ ಚಾನಲ್ ಮೂಲಕ ನೀರು ಹರಿಸಲಾಗುವುದು.

    — ಸಂಪತ್‍ ಕುಮಾರ್, ಎಇಇ, ಹೇಮಾವತಿ ನಾಲಾ ಉಪವಿಭಾಗ, ತುಮಕೂರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಕೊರಟಗೆರೆ: ಪರವಾನಗಿ ಭೂಮಾಪಕರ ಭದ್ರತೆ ಮತ್ತು ಸೌಲಭ್ಯಕ್ಕೆ ಒತ್ತಾಯಿಸಿ ಪ್ರತಿಭಟನೆ

    March 31, 2026

    ಸಾಲಬಾಧೆಯಿಂದ ರೈತ ಆತ್ಮಹತ್ಯೆ: ಮೃತ ರೈತ ರಮೇಶ್ ಮನೆಗೆ ತಾಲ್ಲೂಕು ಆಡಳಿತ ಭೇಟಿ

    March 29, 2026

    ತುಮಕೂರು ಹಾಲು  ಒಕ್ಕೂಟದಿಂದ ಮಿಶ್ರತಳಿ ರಸುಗಳ ಹಾಲು ಕರೆಯುವ ಸ್ಪರ್ಧೆ ಯಶಸ್ವಿ : ಅತಿ ಹೆಚ್ಚು ಹಾಲು ಕರೆದ ರೈತರಿಗೆ 30,000 ನಗದು ಪ್ರಥಮ ಬಹುಮಾನ

    March 28, 2026

    Comments are closed.

    Our Picks

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಸಿದ್ದಗಂಗಾ ಮಠದಲ್ಲಿ ಸಂಭ್ರಮದ ನಾಮಕರಣ ಮಹೋತ್ಸವ: 119 ಮಕ್ಕಳಿಗೆ ‘ಶಿವಕುಮಾರ’ ನಾಮಕರಣ

    April 5, 2026

    ತುಮಕೂರು: ನಡೆದಾಡುವ ದೇವರು, ಪರಮಪೂಜ್ಯ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಗಳ ಜನ್ಮದಿನದ ಅಂಗವಾಗಿ ಸಿದ್ದಗಂಗಾ ಮಠದಲ್ಲಿಂದು ಅತ್ಯಂತ ಸಡಗರದ…

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ಡಾ.ಬಾಬು ಜಗಜೀವನರಾಮ್’ರವರ119ನೇ ಜಯಂತಿ ಆಚರಣೆ

    April 5, 2026

    ತಿಪಟೂರು: ಕುಡಿಯುವ ನೀರಿನ ಸಮಸ್ಯೆ ಬಗೆಹರಿಸದಿದ್ದರೆ ನಗರಸಭೆ ಮುಂದೆ ಪ್ರತಿಭಟನೆ: ಕೆ.ಟಿ.ಶಾಂತಕುಮಾರ್ ಎಚ್ಚರಿಕೆ

    April 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.