nammatumakuru

    Subscribe to Updates

    Get the latest creative news from FooBar about art, design and business.

    What's Hot

    ತೆಲಂಗಾಣ | ಭೀಕರ ರಸ್ತೆ ಅಪಘಾತ: 24 ಸಾವು, ಎಂಟು ಮಂದಿಗೆ ಗಾಯ

    November 3, 2025

    ವಿದ್ಯುತ್ ಸ್ಪರ್ಶದಿಂದ ಆನೆಗಳು ಸಾವು: ತನಿಖೆಗೆ ಸಚಿವ ಈಶ್ವರ ಬಿ ಖಂಡ್ರೆ ಆದೇಶ

    November 3, 2025

    ಮಾತಿನ ಮಲ್ಲಿ ಮಲ್ಲಮ್ಮ ಬಿಗ್ ಬಾಸ್ ನಿಂದ ಔಟ್ ಆಗಿದ್ದು ಹೇಗೆ?

    November 3, 2025
    Facebook Twitter Instagram
    ಟ್ರೆಂಡಿಂಗ್
    • ತೆಲಂಗಾಣ | ಭೀಕರ ರಸ್ತೆ ಅಪಘಾತ: 24 ಸಾವು, ಎಂಟು ಮಂದಿಗೆ ಗಾಯ
    • ವಿದ್ಯುತ್ ಸ್ಪರ್ಶದಿಂದ ಆನೆಗಳು ಸಾವು: ತನಿಖೆಗೆ ಸಚಿವ ಈಶ್ವರ ಬಿ ಖಂಡ್ರೆ ಆದೇಶ
    • ಮಾತಿನ ಮಲ್ಲಿ ಮಲ್ಲಮ್ಮ ಬಿಗ್ ಬಾಸ್ ನಿಂದ ಔಟ್ ಆಗಿದ್ದು ಹೇಗೆ?
    • ಎಲ್ಲ ಆರೋಪಗಳನ್ನು ನಿರಾಕರಿಸಿದ ನಟ ದರ್ಶನ್ ಮತ್ತು ಇತರ ಆರೋಪಿಗಳು
    • ಬಿಹಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಜಾನಸನ್ ಘೋಡೆ ಪ್ರಚಾರ
    • ಮೈಸೂರು ಗ್ರೇಟರ್ ಮೈಸೂರು ಆಗಬೇಕು: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
    • ತುಮಕೂರು | ನಕಲಿ ಮದ್ಯ ಸೇವಿಸಿ  15 ಮಂದಿ ಅಸ್ವಸ್ಥ
    • ಲಾರಿಗೆ ಟಿಟಿ ವಾಹನ ಡಿಕ್ಕಿ: ಇಬ್ಬರು ಸಾವು , 7 ಮಂದಿಗೆ ಗಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಚಿವ ಬಿ.ಸಿ.ನಾಗೇಶ್  ಅವರಿಂದ ಹಾಲ್ಕುರಿಕೆ ಕೆರೆಗೆ ಹೇಮಾವತಿ ನಾಲೆ ಕಾಮಗಾರಿಗೆ ಗುದ್ದಲಿ ಪೂಜೆ
    Uncategorized May 4, 2022

    ಸಚಿವ ಬಿ.ಸಿ.ನಾಗೇಶ್  ಅವರಿಂದ ಹಾಲ್ಕುರಿಕೆ ಕೆರೆಗೆ ಹೇಮಾವತಿ ನಾಲೆ ಕಾಮಗಾರಿಗೆ ಗುದ್ದಲಿ ಪೂಜೆ

    By adminMay 4, 2022No Comments2 Mins Read
    b c nagesh

    ತಿಪಟೂರು: ತಾಲ್ಲೂಕಿನ ಹಾಲ್ಕುರಿಕೆ ಕೆರೆಗೆ ಹೇಮಾವತಿ ಯೋಜನೆಯ ತುಮಕೂರು ಶಾಖಾ ನಾಲೆಯಿಂದ ಚಿಕ್ಕನಾಯ್ಕನಹಳ್ಳಿ ತಾಲ್ಲೋಕಿನ  22ಕೆರೆಗಳಿಗೆ ನೀರು ಒದಗಿಸುವ ಯೋಜನೆಯ ಭಾಗವಾಗಿ ತಿಪಟೂರು ತಾಲ್ಲೂಕಿನ ಹಾಲ್ಕುರಿಕೆರೆ ಹಾಗೂ ಪಟ್ಟದದೇವರಕೆರೆಗಳಿಗೆ ನೀರುಹರಿಸುವ ಕಾಮಗಾರಿಗೆ ಪ್ರಾಥಮಿಕ ಹಾಗೂ ಪ್ರೌಡಶಿಕ್ಷಣ ಸಚಿವ ಬಿ.ಸಿ ನಾಗೇಶ್ ಗುದ್ದಲಿಪೂಜೆ ನೆರವೇರಿಸಿದರು.

    ನಂತರ  ಹಾಲ್ಕುರಿಕೆ ಗ್ರಾಮದೇವತೆ ಶ್ರೀಕೆಂಪಮ್ಮ ದೇವಿ ದೇವಾಲಯ ಆವರಣದಲ್ಲಿ ಆಯೋಜಿಸಿದ್ದ ವಿಶ್ವಗುರು ಶ್ರೀ ಬಸವೇಶ್ವರ ಜಯಂತಿ ಹಾಗೂ ಸಚಿವ ಬಿ.ಸಿ. ನಾಗೇಶ್ ರವರಿಗೆ ಅಭಿನಂದನಾ ಸಮಾರಂಭದಲ್ಲಿ  ಸಾರ್ವಜನಿಕರಿಂದ  ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಹಾಲ್ಕುರಿಕೆ ಕೆರೆಗೆ ಹೇಮಾವತಿ ನೀರು ಹರಿಸಬೇಕು ಎನ್ನುವುದು ಈ ಭಾಗದ ಜನರ ದಶಕಗಳ ಕನಸು ಹಲವಾರು ಅಡ್ಡಿ ಅತಂಕಗಳನ್ನ ನಿವಾರಿಸಿ ಪ್ರಾರಂಭಗೊಳುತ್ತಿದ್ದು,  ಯೋಜನೆಯನ್ನ ಶೀಘ್ರವಾಗಿ ಪೂರ್ಣಗೊಳಿಸುವಂತೆ  ಗುತ್ತಿಗೆದಾರರಿಗೆ ಸೂಚಿಸಲಾಗಿದೆ ಎಂದರು.


    Provided by
    Provided by

    ಸಚಿವ ಜೆ.ಸಿ. ಮಾಧುಸ್ವಾಮಿಯವರ ಸಹಕಾರ, ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹಾಗೂ  ನೀರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರ ಸಹಕಾರದಿಂದ ಸುಮಾರು 89ಕೋಟಿ ವೆಚ್ಚದ ಕಾಮಗಾರಿಗೆ ಪೂಜೆ ಮಾಡುತ್ತಿದ್ದು, ಈ ವರ್ಷದ ಹೇಮಾವತಿ ನಾಲೆ ನೀರು ಬಿಡುವುದರ ಒಳಗೆ ಕಾಮಗಾರಿ ಪೂರ್ಣಗೊಳಿಸಿ  ಹಾಲ್ಕುರಿಕೆ ಕೆರೆ ಹಾಗೂ ಪಟ್ಟದದೇವರ ಕೆರೆಗೆ ನೀರು ಹರಿಸಲಾಗುವುದು  ಎಂದು ಅವರು ತಿಳಿಸಿದರು.

    ಕಾಮಗಾರಿಗೆ ಶೀಘ್ರವಾಗಿ ಪೂರ್ಣಗೊಳ್ಳಲು ಸಹಕಾರ ಅಗತ್ಯವಾಗಿದ್ದು,  ಸಾರ್ವಜನಿಕರು ಸಹಕಾರ ನೀಡಬೇಕು. ನಿಯಮಬದ್ದವಾಗಿ ಭೂಸ್ವಾಧೀನಕ್ಕೆ ಅರ್ಹ ಇರುವ ರೈತರಿಗೆ ಅನ್ಯಾಯವಾಗದಂತೆ ಪರಿಹಾರ ದೊರೆಯುವಂತೆ ಮಾಡಲಾಗುವುದು. ಅರಣ್ಯ ಇಲಾಖೆಯ ಅನುಮೋದನೆ ಪಡೆಯಲು ಸಾಕಷ್ಟು ಅಡ್ಡಿ ಆತಂಕಗಳು ಎದುರಾದವು. ಅರಣ್ಯ ಇಲಾಖೆಯಿಂದ ಬಳಸಿಕೊಳ್ಳುವ ಭೂಮಿಗೆ ಪರ್ಯಾಯವಾಗಿ ತಾಲ್ಲೂಕಿನ ರಜತಾದ್ರಿಪುರ ಹಾಗೂ ಕೋಡಿಹಳ್ಳಿ ಬಳಿ ಭೂಮಿ ನೀಡಲಾಗಿದೆ . ನಮ್ಮ ಸರ್ಕಾರ ನೀರಾವರಿ ಯೋಜನೆಗಳ ಅನುಷ್ಠಾನಗೊಳಿಸಲು ಬದ್ದವಾಗಿದೆ ಎಂದು ಅವರು ಇದೇ ವೇಳೆ ತಿಳಿಸಿದರು.

     ತಾಲ್ಲೂಕಿನ 180ಕೋಟಿ ವೆಚ್ಚದ ನೀರಾವರಿ ಯೋಜನೆ ಹಣ ಮಂಜೂರಾಗಿದ್ದು, ಶೀಘ್ರವಾಗಿ ಮುಖ್ಯಮಂತ್ರಿಗಳಿಂದ ಯೋಜನೆಗೆ ಚಾಲನೆ ದೊರೆಯಲಿದೆ. ತಾಲ್ಲೂಕಿನಲ್ಲಿ ಸಣ್ಣೆನಹಳ್ಳಿ ಏತನೀರಾವರಿ ಯೋಜನೆ .ಹೊನ್ನವಳ್ಳಿ ಹೆಚ್ಚುವರಿ ಏತನೀರಾವರಿ ಯೋಜನೆ.ರಂಗಾಪುರ.ಕಿಬ್ಬನಹಳ್ಳಿ ಏತನೀರಾವರಿ ಸೇರಿದಂತೆ ಹಲವಾರು ನೀರಾವರಿ ಯೋಜನೆಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದರು.

    ಕಾರ್ಯಕ್ರಮಕ್ಕೆ  ಶ್ರೀಮತಿ ವೀಣಾನಾಗೇಶ್.ಬಿಜೆಪಿ ಅಧ್ಯಕ್ಷ ಬಳ್ಳೆಕಟ್ಟೆ ಸುರೇಶ್. ಮುಖಂಡರಾದ ಗಂಗರಾಜು.ಹರಿಸಮದ್ರ ಗಂಗಾಧರ್.ಹೆಚ್.ವಿ ನಾಗರಾಜು.ದೊಡ್ಡಯ್ಯ.ಸಿದ್ದಯ್ಯ.ಮಂತ್ತಾದವರು ಭಾಗವಹಿಸಿದ್ದರು.

    ವರದಿ: ಆನಂದ, ತಿಪಟೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಪದವೀಧರರ ಮತಪಟ್ಟಿಗೆ ಹೆಸರು ನೋಂದಾಯಿಸಲು ದಿನಾಂಕ ವಿಸ್ತರಣೆ ಮಾಡಲು ಮನವಿ

    October 30, 2025

    ಯಶಸ್ವಿನಿ ಟ್ರಸ್ಟಿಯಾಗಿ ಡಾ. ಶ್ರೀಧರ್ ನೇಮಕ ಹಿಂಪಡೆದ ಕ್ರಮ ಸ್ವಾಗತ: ಸಿ.ಬಿ.ಶಶಿಧರ್

    October 30, 2025

    ವನ್ಯಜೀವಿ–ಮಾನವ ಸಂಘರ್ಷ ನಿರ್ವಹಣಾ ಕಾರ್ಯಪಡೆ ರಚನೆಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ

    October 28, 2025

    Leave A Reply Cancel Reply

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ತೆಲಂಗಾಣ | ಭೀಕರ ರಸ್ತೆ ಅಪಘಾತ: 24 ಸಾವು, ಎಂಟು ಮಂದಿಗೆ ಗಾಯ

    November 3, 2025

    ತೆಲಂಗಾಣ: ಜಲ್ಲಿಕಲ್ಲು ತುಂಬಿಕೊಂಡು ಹೋಗುತ್ತಿದ್ದ ಟ್ರಕ್ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 24…

    ವಿದ್ಯುತ್ ಸ್ಪರ್ಶದಿಂದ ಆನೆಗಳು ಸಾವು: ತನಿಖೆಗೆ ಸಚಿವ ಈಶ್ವರ ಬಿ ಖಂಡ್ರೆ ಆದೇಶ

    November 3, 2025

    ಮಾತಿನ ಮಲ್ಲಿ ಮಲ್ಲಮ್ಮ ಬಿಗ್ ಬಾಸ್ ನಿಂದ ಔಟ್ ಆಗಿದ್ದು ಹೇಗೆ?

    November 3, 2025

    ಎಲ್ಲ ಆರೋಪಗಳನ್ನು ನಿರಾಕರಿಸಿದ ನಟ ದರ್ಶನ್ ಮತ್ತು ಇತರ ಆರೋಪಿಗಳು

    November 3, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.