ತುಮಕೂರು: ಹೇಮಾವತಿ ಲಿಂಕ್ ಕಾಮಗಾರಿ ಯೋಜನೆ ವಿರೋಧಿಸಿ ನಡೆದ ಹೋರಾಟದಲ್ಲಿ ಭಾಗಿಯಾಗಿದ್ದ ಹೋರಾಟಗಾರರನ್ನು ಬಂಧಿಸಬಾರದು, ಅಲ್ಲದೆ ಈಗಾಗಲೇ ಸ್ವಾಮೀಜಿಗಳ ಮೇಲೆ ದಾಖಲಾಗಿರುವ FIR ಅನ್ನು ವಾಪಸ್ ಪಡೆಯಬೇಕು ಈ ಕುರಿತಂತೆ ಸರ್ಕಾರದೊಂದಿಗೆ ಮಾತನಾಡುವುದಾಗಿ ಕೇಂದ್ರ ವಲಯ ಐಜಿಪಿ ಲಾಬು ರಾಮ್ ಭರವಸೆ ನೀಡಿದ್ದಾರೆ ಎಂದು ತುರುವೇಕೆರೆ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಎಂ.ಟಿ.ಕೃಷ್ಣಪ್ಪ ತಿಳಿಸಿದ್ದಾರೆ.
ಅಲ್ಲದೆ ಈ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಎದುರು ನಡೆಸಲಾಗುತ್ತಿರುವ ಧರಣಿಯನ್ನು ಮುಂದೂಡಿದ್ದೇವೆ ಎಂದು ತಿಳಿಸಿದ್ದಾರೆ.ಧರಣಿಯಲ್ಲಿ ಬಿಜೆಪಿ ಶಾಸಕ ಸುರೇಶ್ ಗೌಡ ಮಾಜಿ ಸಚಿವ ಸೊಗಡು ಶಿವಣ್ಣ ಸೇರಿದಂತೆ ಮತ್ತಿತರರು ಹಾಜರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
————————————