nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶ್ರವಣ ಸಮಸ್ಯೆ ನಿವಾರಣೆಗೆ ಮಾನವೀಯ ಸ್ಪಂದನೆ: ತುಮಕೂರಿನಲ್ಲಿ ಉಚಿತ ತಪಾಸಣೆ, ಶ್ರವಣ ಯಂತ್ರಕ್ಕೆ 40% ಸಹಾಯಧನ

    June 22, 2026

    ತುಮಕೂರಿನಲ್ಲಿ ಉಚಿತ ಶ್ರವಣ ತಪಾಸಣೆ, ಶ್ರವಣ ಯಂತ್ರಗಳಿಗೆ ಶೇ.40ರಷ್ಟು ಸಹಾಯಧನ | ಜೂ.27ರಂದು ಕಾರ್ಯಕ್ರಮ

    June 22, 2026

    ಮಕ್ಕಳಿಗೆ ಅಸಾಧಾರಣ ಜಿಲ್ಲಾ ಮಟ್ಟದ ಪ್ರಶಸ್ತಿ: 10 ಸಾವಿರ ನಗದು ಬಹುಮಾನಕ್ಕೆ ಅರ್ಜಿ ಸಲ್ಲಿಸಿ

    June 22, 2026
    Facebook Twitter Instagram
    ಟ್ರೆಂಡಿಂಗ್
    • ಶ್ರವಣ ಸಮಸ್ಯೆ ನಿವಾರಣೆಗೆ ಮಾನವೀಯ ಸ್ಪಂದನೆ: ತುಮಕೂರಿನಲ್ಲಿ ಉಚಿತ ತಪಾಸಣೆ, ಶ್ರವಣ ಯಂತ್ರಕ್ಕೆ 40% ಸಹಾಯಧನ
    • ತುಮಕೂರಿನಲ್ಲಿ ಉಚಿತ ಶ್ರವಣ ತಪಾಸಣೆ, ಶ್ರವಣ ಯಂತ್ರಗಳಿಗೆ ಶೇ.40ರಷ್ಟು ಸಹಾಯಧನ | ಜೂ.27ರಂದು ಕಾರ್ಯಕ್ರಮ
    • ಮಕ್ಕಳಿಗೆ ಅಸಾಧಾರಣ ಜಿಲ್ಲಾ ಮಟ್ಟದ ಪ್ರಶಸ್ತಿ: 10 ಸಾವಿರ ನಗದು ಬಹುಮಾನಕ್ಕೆ ಅರ್ಜಿ ಸಲ್ಲಿಸಿ
    • 20 ಜೋಡಿಗಳ ಸಾಮೂಹಿಕ ವಿವಾಹ: 10 ಸಾವಿರ ಗ್ರಂಥ ದಾಸೋಹಕ್ಕೆ ಚಾಲನೆ | ಬದುಕಿನ ವಿಕಾಸಕ್ಕೆ ಧರ್ಮವೇ ಅಡಿಪಾಯ: ಶ್ರೀರಂಭಾಪುರಿ ಜಗದ್ಗುರು
    • ಜೂನ್ 24 ರಂದು ಟಾಟಾ ಪವರ್ ಖಾಸಗೀಕರಣ ವಿರೋಧಿಸಿ ಬೃಹತ್ ಪ್ರತಿಭಟನೆ
    • ‘ಪ್ರತಿಯೊಂದು ಮಠವೂ ಪುಸ್ತಕ ದಾಸೋಹ ನಡೆಸಲಿ’: ಸಿದ್ದರಬೆಟ್ಟದ ರಂಭಾಪುರಿ ಶಾಖಾ ಮಠದ ವಾರ್ಷಿಕೋತ್ಸವದಲ್ಲಿ ಹುಲಿಕಲ್ ನಟರಾಜ್
    • ತುಮಕೂರಿನ ವಿವಿಧ ಯೋಗ ಸಂಸ್ಥೆಗಳಿಂದ ಸಾಮೂಹಿಕ ಯೋಗ: ಮಾನಸಿಕ ಒತ್ತಡ ನಿವಾರಣೆಗೆ ಯೋಗ ಸಹಕಾರಿ
    • ಪಾವಗಡದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜಾಗತಿಕ ಹೆಮ್ಮಾರಿಯಾಗುತ್ತಿದೆ ಹಸಿವು, ಯುದ್ಧಗಳಿಂದ ಮತ್ತಷ್ಟು ಆಹಾರದ ಕೊರತೆ
    ಸ್ಪೆಷಲ್ ನ್ಯೂಸ್ May 6, 2022

    ಜಾಗತಿಕ ಹೆಮ್ಮಾರಿಯಾಗುತ್ತಿದೆ ಹಸಿವು, ಯುದ್ಧಗಳಿಂದ ಮತ್ತಷ್ಟು ಆಹಾರದ ಕೊರತೆ

    By adminMay 6, 2022No Comments2 Mins Read
    food

    Provided by
    Provided by

    ಉಕ್ರೇನ್ ಯುದ್ಧ ಜಾಗತಿಕ ಪರಿಣಾಮ ಬೀರುವುದರಿಂದ ದಿನನಿತ್ಯದ ಆಹಾರಕ್ಕೆ ಪರದಾಡುವವರ ಸಂಖ್ಯೆಗರಿಷ್ಠ ಮಟ್ಟಕ್ಕೆ ತಲುಪಿದೆ ಎಂದು ವಿಶ್ವಸಂಸ್ಥೆ ಆತಂಕ ವ್ಯಕ್ತ ಪಡಿಸಿದೆ.ಹವಾಮಾನ ವೈಪರೀತ್ಯಗಳು, ಕೊರೊನಾ ಸಾಂಕ್ರಾಮಿಕದ ಆರ್ಥಿಕ ಪರಿಣಾಮ, ಉಕ್ರೇನ್ ಸಂಘರ್ಷಗಳು ಮೂರು ವಿಷಕಾರಿ ಸಂಯೋಜನೆಯಾಗಿದ್ದು, 2021 ರಲ್ಲಿ 53 ದೇಶಗಳ ಸುಮಾರು 193 ಮಿಲಿಯನ್ ಜನರು ತೀವ್ರ ಆಹಾರ ಕೊರತೆ ಅನುಭವಿಸಿದರು. ಈ ವರ್ಷ ಅದಕ್ಕೆ ಮತ್ತೆ 40 ಮಿಲಿಯನ್ ಜನ ಸೇರ್ಪಡೆಯಾಗಿದ್ಧಾರೆ ಎಂದು ವಿಶ್ವಸಂಸ್ಥೆ ಹೇಳಿದೆ.

    ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆ ವಿಶ್ವ ಆಹಾರ ಕಾರ್ಯಕ್ರಮ ಮತ್ತು ಯುರೋಪಿಯನ್ ಯೂನಿಯನ್ ಜಂಟಿಯಾಗಿ ತಯಾರಿಸಿದ ಆಹಾರ ಬಿಕ್ಕಟ್ಟಿನ ಜಾಗತಿಕ ವರದಿಯಲ್ಲಿ ಈ ಅಂಕಿಅಂಶಗಳು ಕಾಣಿಸಿಕೊಂಡಿವೆ.ವರದಿಯ ಪ್ರಕಾರ ಅಫ್ಘಾನಿಸ್ತಾನ, ಕಾಂಗೋ, ಇಥಿಯೋಪಿಯಾ, ನೈಜೀರಿಯಾ, ದಕ್ಷಿಣ ಸುಡಾನ್, ಸಿರಿಯಾ ಮತ್ತು ಯೆಮೆನ್ ಸೇರಿದಂತೆ ಸುದೀರ್ಘ ಸಂಘರ್ಷಗಳನ್ನು ಅನುಭವಿಸುತ್ತಿರುವ ದೇಶಗಳು ಆಹಾರದ ಕೊರತೆ ಅನುಭವಿಸುತ್ತಿವೆ.

    ದೀರ್ಘಕಾಲದ ಬರ, ಹೆಚ್ಚುತ್ತಿರುವ ಆಹಾರ ಬೆಲೆಗಳು ಮತ್ತು ನಿರಂತರ ಹಿಂಸಾಚಾರದಿಂದಾಗಿ ಸೊಮಾಲಿಯಾ 2022 ರಲ್ಲಿ ವಿಶ್ವದ ಅತ್ಯಂತ ಕೆಟ್ಟ ಆಹಾರ ಬಿಕ್ಕಟ್ಟನ್ನು ಎದುರಿಸಲಿದೆ ಎಂದು ವರದಿ ಮುನ್ಸೂಚನೆ ನೀಡಿದೆ. ಸೋಮಾಲಿದಲ್ಲಿ 6 ಮಿಲಿಯನ್ ಜನ ತೀವ್ರ ಆಹಾರ ಬಿಕ್ಕಟ್ಟಿಗೆ ಸಿಲುಕಬಹುದು.

    ಆಹಾರ ಉತ್ಪಾದನೆಗೆ ಗ್ರಾಮೀಣ ಭಾಗವನ್ನು ಬೆಂಬಲಿಸದಿದ್ದರೆ ಹಸಿವು, ಕುಸಿಯುವ ಜೀವನ ಮಟ್ಟ ವಿನಾಶಕ ಪರಿಣಾಮ ಸೃಷ್ಟಿಸಲಿದೆ. ಮುಂದಿನ ಅನಾವುತಗಳನ್ನು ತಡೆಯಲು ಈಗಿನಿಂದಲೇ ಬೃಹತ್ ಪ್ರಮಾಣದ ತುರ್ತು ಕ್ರಮಗಳ ಅಗತ್ಯವಿದೆ ಎಂದು ವಿಶ್ವಸಂಸ್ಥೆ ಎಚ್ಚರಿಸಿದೆ.ಗೋ, ರಸಗೊಬ್ಬರ ಮತ್ತು ಇತರ ಆಹಾರ ಪೂರೈಕೆಗಾಗಿ ಉಕ್ರೇನ್ ಮತ್ತು ರಷ್ಯಾವನ್ನು ಅವಲಂಬಿಸಿರುವ ಸೋಮಾಲಿಯಾ ಹಾಗೂ ಅನೇಕ ಆಫ್ರಿಕನ್ ದೇಶಗಳಿಗೆ ಪ್ರಸ್ತುತ ನಡೆಯುತ್ತಿರುವ ಯುದ್ಧ ಸಂಕಷ್ಟ ತಂದಿಟ್ಟಿದೆ.ಹೆಚ್ಚುತ್ತಿರುವ ಆಹಾರ ಹಾಗೂ ತೈಲ ಬೆಲೆಗಳು, ಹಣದುಬ್ಬರದಿಂದಾಗಿ 47 ಮಿಲಿಯನ್ ಜನರು ಬಿಕ್ಕಟ್ಟಿಗೆ ಸಿಲುಕಿದ್ದಾರೆ.


    Provided by
    Provided by

    ಇದಕ್ಕೂ ಮೊದಲು ಕೋವಿಡ್ ನಿಂದಾಗಿ ಆದಾಯ ಕುಸಿತವಾಗಿ ಆಹಾರದ ಬೆಲೆಗಳು 10 ವರ್ಷಗಳ ಗರಿಷ್ಠ ಮಟ್ಟಕ್ಕೆ ತಲುಪಿದ್ದವು. ಇಂಧನ ಬೆಲೆಗಳು ಏಳು ವರ್ಷಗಳಲ್ಲೇ ಗರಿಷ್ಠ ಮಟ್ಟದಲ್ಲಿವೆ ಎಂದು ವರದಿ ವಿವರಿಸಿದೆ.ಉಕ್ರೇನ್ ಯುದ್ಧ ಧಾನ್ಯಗಳು ಮತ್ತು ಸಸ್ಯಜನ್ಯ ಎಣ್ಣೆಗಳಂತಹ ಸರಕುಗಳ ಬೆಲೆಗಳನ್ನು ದಾಖಲೆಯ ಗರಿಷ್ಠ ಮಟ್ಟಕ್ಕೆ ಹೆಚ್ಚಿಸಿವೆ. ಹಸಿವು ಮತ್ತು ಅಪೌಷ್ಟಿಕತೆ ಹೆಚ್ಚಾಗುತ್ತಿದೆ.

    2016ರಲ್ಲಿ ಶೇ.11ರಷ್ಟು ಜನ ಆಹಾರ ಅಭದ್ರತೆಯನ್ನು ಅನುಭವಿಸಿದ್ದರೆ, 2021ರಲ್ಲಿ ಅದು ಶೇ. 22 ಏರಿತ್ತು. ತುರ್ತು ಸಂದರ್ಭಗಳ ಬಳಕೆಗಾಗಿ 2021 ರಲ್ಲಿ 8.1 ಶತಕೋಟಿ ಡಾಲರ್ ನಿ ತುರ್ತು ಕೆಲಸಕ್ಕೆ ಲಭ್ಯವಿತ್ತು, 2017 ಕ್ಕಿಂತಲೂ ಇದು 25ರಷ್ಟು ಕಡಿಮೆಯಾಗಿದೆ ಎಂದು ವಿವರಿಸಲಾಗಿದೆ.
    ಆಹಾರ ಭದ್ರತೆಯನ್ನು ನಿಗಿಸಲು ಮಳೆಗಾಲ ಆರಂಭದಲ್ಲಿ ನಾಟಿಗಾಗಿ 1.5 ಶತಕೋಟಿ ಡಾಲರ್ ನೆರವು ನೀಡುವ ಅಗತ್ಯ ಇದೆ. ಇದನ್ನು ಈಗ ನಿರ್ಲಕ್ಷ್ಯಿಸಿದರೆ ಮುಂದಿನ ದಿನಗಳಲ್ಲಿ ಸಾವಿರ ಪಟ್ಟು ಹೆಚ್ಚು ಖರ್ಚು ಮಾಡಬೇಕಿದೆ ಎಂದು ವಿಶ್ವಸಂಸ್ಥೆ ಪ್ರಮುಖರು ಎಚ್ಚರಿಸಿದ್ದಾರೆ.

    ವರದಿ: ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಭಾರತದ ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು

    June 5, 2026

    ವಿಜಯ ರಾಘವೇಂದ್ರ ನಟನೆಯ ಕೌಟುಂಬಿಕ ಕಥಾನಕ “ಶ್ರೀಮತಿ ಸಿಂಧೂರ” ಆಡಿಯೋ ಟೀಸರ್ ರಿಲೀಸ್

    May 2, 2026

    ಬೆಟ್ಟಿಂಗ್ ಆಟದ ಹಿನ್ನೆಲೆಯ ಚಿತ್ರ ’ಲೂಪ್’ ಮೇ 8ಕ್ಕೆ ತೆರೆಗೆ

    April 27, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಶ್ರವಣ ಸಮಸ್ಯೆ ನಿವಾರಣೆಗೆ ಮಾನವೀಯ ಸ್ಪಂದನೆ: ತುಮಕೂರಿನಲ್ಲಿ ಉಚಿತ ತಪಾಸಣೆ, ಶ್ರವಣ ಯಂತ್ರಕ್ಕೆ 40% ಸಹಾಯಧನ

    June 22, 2026

    ತುಮಕೂರು: ಆರೋಗ್ಯ ಸೇವೆಗಳು ಪ್ರತಿಯೊಬ್ಬರಿಗೂ ಸುಲಭವಾಗಿ ತಲುಪಬೇಕು ಎಂಬ ಉದ್ದೇಶದಿಂದ ಸಾಮಾಜಿಕ ಸಂಘಟನೆಗಳು ಹಾಗೂ ಸೇವಾ ಮನೋಭಾವದ ವ್ಯಕ್ತಿಗಳು ಕೈಜೋಡಿಸಿದಾಗ…

    ತುಮಕೂರಿನಲ್ಲಿ ಉಚಿತ ಶ್ರವಣ ತಪಾಸಣೆ, ಶ್ರವಣ ಯಂತ್ರಗಳಿಗೆ ಶೇ.40ರಷ್ಟು ಸಹಾಯಧನ | ಜೂ.27ರಂದು ಕಾರ್ಯಕ್ರಮ

    June 22, 2026

    ಮಕ್ಕಳಿಗೆ ಅಸಾಧಾರಣ ಜಿಲ್ಲಾ ಮಟ್ಟದ ಪ್ರಶಸ್ತಿ: 10 ಸಾವಿರ ನಗದು ಬಹುಮಾನಕ್ಕೆ ಅರ್ಜಿ ಸಲ್ಲಿಸಿ

    June 22, 2026

    20 ಜೋಡಿಗಳ ಸಾಮೂಹಿಕ ವಿವಾಹ: 10 ಸಾವಿರ ಗ್ರಂಥ ದಾಸೋಹಕ್ಕೆ ಚಾಲನೆ | ಬದುಕಿನ ವಿಕಾಸಕ್ಕೆ ಧರ್ಮವೇ ಅಡಿಪಾಯ: ಶ್ರೀರಂಭಾಪುರಿ ಜಗದ್ಗುರು

    June 22, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.