nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಜ್ಯದ ಆರ್ಥಿಕ ಸ್ಥಿತಿ ಸುಭದ್ರ: ಬಿಜೆಪಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

    April 1, 2026

    ತುಮಕೂರು: ಅಣ್ಣನಿಂದಲೇ ತಮ್ಮನ ಕೊಲೆ; ಸುಳ್ಳು ಕಥೆ ಕಟ್ಟಿ ಸಿಕ್ಕಿಬಿದ್ದ ತಂದೆ–ಮಗ!

    April 1, 2026

    ಗುಣಮಟ್ಟದ ಹಾಲು ಶೇಖರಣೆ: ತುಮಕೂರು ಜಿಲ್ಲೆ ರಾಜ್ಯದಲ್ಲೇ ಪ್ರಥಮ: ಶಾಸಕ ಎಚ್.ವಿ.ವೆಂಕಟೇಶ್

    April 1, 2026
    Facebook Twitter Instagram
    ಟ್ರೆಂಡಿಂಗ್
    • ರಾಜ್ಯದ ಆರ್ಥಿಕ ಸ್ಥಿತಿ ಸುಭದ್ರ: ಬಿಜೆಪಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು
    • ತುಮಕೂರು: ಅಣ್ಣನಿಂದಲೇ ತಮ್ಮನ ಕೊಲೆ; ಸುಳ್ಳು ಕಥೆ ಕಟ್ಟಿ ಸಿಕ್ಕಿಬಿದ್ದ ತಂದೆ–ಮಗ!
    • ಗುಣಮಟ್ಟದ ಹಾಲು ಶೇಖರಣೆ: ತುಮಕೂರು ಜಿಲ್ಲೆ ರಾಜ್ಯದಲ್ಲೇ ಪ್ರಥಮ: ಶಾಸಕ ಎಚ್.ವಿ.ವೆಂಕಟೇಶ್
    • ಸಿದ್ದಗಂಗಾ ಮಠವು ಕರುಣಾ ಗಂಗೆಯಾಗಿ ಹರಿಯುತ್ತಿದೆ: ರಾಷ್ಟ್ರಪತಿ ದ್ರೌಪದಿ ಮುರ್ಮು
    • ತುಮಕೂರು: ಅಂತರಸನಹಳ್ಳಿ ಸೇತುವೆ ಬಳಿ ರಸ್ತೆಯಲ್ಲೇ ಹರಿಯುತ್ತಿದೆ ಕೊಳಚೆ ನೀರು; ವಾಹನ ಸವಾರರ ಪರದಾಟ
    • ಶಿವಕುಮಾರ ಸ್ವಾಮೀಜಿ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು
    • ನಡೆಯುವ ದೇವರು, ತ್ರಿವಿಧ ದಾಸೋಹಿ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಅವರ 119ನೇ ಜನ್ಮದಿನದ ಹಾರ್ದಿಕ ಶುಭಾಶಯಗಳು
    • ಇಂದು ಸಿದ್ದಗಂಗಾ ಮಠದಲ್ಲಿ ಶಿವಕುಮಾರ ಸ್ವಾಮೀಜಿ 119ನೇ ಜನ್ಮದಿನೋತ್ಸವ ಸಂಭ್ರಮ: ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹಿಂದುಳಿದ ಸಮುದಾಯಗಳು ಶಿಕ್ಷಣ, ಸಂಘಟನೆ, ಹೋರಾಟ ಮೂಲಕ ಮುಖ್ಯ ವಾಹಿನಿಗೆ ಬರಲು ಸಾಧ್ಯ: ಡಾ.ಬಸವ ರಮಾನಂದ ಸ್ವಾಮೀಜಿ
    ತಿಪಟೂರು January 3, 2023

    ಹಿಂದುಳಿದ ಸಮುದಾಯಗಳು ಶಿಕ್ಷಣ, ಸಂಘಟನೆ, ಹೋರಾಟ ಮೂಲಕ ಮುಖ್ಯ ವಾಹಿನಿಗೆ ಬರಲು ಸಾಧ್ಯ: ಡಾ.ಬಸವ ರಮಾನಂದ ಸ್ವಾಮೀಜಿ

    By adminJanuary 3, 2023No Comments3 Mins Read
    thepatur

    ತಿಪಟೂರು: ಹಿಂದುಳಿದ ಸಮುದಾಯಗಳು ಶಿಕ್ಷಣ, ಸಂಘಟನೆ, ಹೋರಾಟ ಮೂಲಕ ಸಮಾಜದ ಮುಖ್ಯ ವಾಹಿನಿಗೆ ಬರಲು ಸಾಧ್ಯ, ಸಂಘಟನೆ ಇಲ್ಲದೆ, ಶಕ್ತಿ ಇಲ್ಲ ಎಂದು ದಾಬಸಪೇಟೆ ಹೆಗ್ಗುಂದದ ಶ್ರೀ ಹೊನಕಲ್ಲು ಮಲ್ಲೇಶ್ವರ ಪೀಠಾಧ್ಯಕ್ಷರಾದ ಡಾ.ಬಸವ ರಮಾನಂದ ಸ್ವಾಮೀಜಿ ಹೇಳಿದರು.

    ನಗರದ ಕಲ್ಪತರು ಕ್ರೀಡಾಂಗಣದಲ್ಲಿ ಕಾಂಗ್ರೆಸ್ ಮುಖಂಡ ಕೆ.ಟಿ.ಶಾಂತಕುಮಾರ್ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಹಿಂದುಳಿದ ವರ್ಗಗಳ ಜಾಗೃತಿ ಸಮಾವೇಶ ಕಾರ್ಯಕ್ರಮವನ್ನು ಉದ್ಘಾಟಿಸಿ, ಆಶೀರ್ವಚನ ನೀಡಿದ ಶ್ರೀಗಳು, ಸಂಘಟನೆ ಎಂಬುದು ಜೇನುಗೂಡಿನಂತೆ ಇರಬೇಕು, ಶಿಕ್ಷಣದಲ್ಲಿ ಪ್ರಜ್ಞಾವಂತರಾದರೆ ಅಭಿವೃದ್ಧಿ ಹೊಂದಲು ಸಾಧ್ಯ, ಆತ್ಮಶಕ್ತಿ ಕುಗ್ಗಿಸಿಕೊಳ್ಳದೆ ಹೋರಾಟ ಮಾಡುವ ಮನೋಭಾವ ನಮ್ಮಲ್ಲಿ ಬರಬೇಕು, ಚುನಾವಣೆ ಸಂದರ್ಭದಲ್ಲಿ ನಾವು ಹಾಕುವ ಮತಕ್ಕೆ ಶಕ್ತಿ ಬಹಳಷ್ಟು ಇದೆ, ನಮ್ಮ ಸಮಸ್ಯೆ ಕೇಳುವ ಯೋಗ್ಯರಿಗೆ ಮತ ಹಾಕಬೇಕು, ಯಾವುದೇ ಮೂಲಭೂತ ಸಮಸ್ಯೆ ಇದ್ದರೂ ಕೂಡ ಜನಪ್ರತಿನಿಧಿಗಳಿಗೆ ಅಧಿಕಾರಿಗಳಿಗೆ ಪ್ರಶ್ನಿಸುವ ಕೆಲಸ ಪ್ರತಿಯೊಬ್ಬರು ಮಾಡಬೇಕು. ಕಲ್ಪತರು ನಾಡಿನಲ್ಲಿ ಕೆ.ಟಿ.ಶಾಂತಕುಮಾರ್ ಅವರು ಜನ ನಾಯಕರಾಗಿ ಜನ ಸೇವೆಯ ಮೂಲಕ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸಿದ್ದಾರೆ, ಈ ತಾಲೂಕಿನ ಮನೆ ಮಗನಂತಾಗಿರುವ ಕೆ.ಟಿ.ಶಾಂತಕುಮಾರ್ ಅವರಿಗೆ ಇನ್ನಷ್ಟು ಕೆಲಸ ಮಾಡಲು ಶಕ್ತಿ ತುಂಬಬೇಕು ಎಂದರು.


    Provided by
    Provided by

    ಕುಪ್ಪೂರು ತಮ್ಮಡಿ ಹಳ್ಳಿಯ ಸುಕ್ಷೇತ್ರ ಅಧ್ಯಕ್ಷರಾದ ಡಾ.ಅಭಿನವ ಮಲ್ಲಿಕಾರ್ಜುನ ದೇಶಿ ಕೇಂದ್ರ ಮಹಾಸ್ವಾಮಿಜಿ ಮಾತನಾಡಿ, ಜೀವನ ಸಾರ್ಥಕವಾಗಲು ಮನುಷ್ಯನಾದವನು ನಿಸ್ವಾರ್ಥ ಸೇವೆ ಮಾಡಬೇಕು. ತಾಲೂಕಿನಲ್ಲಿ ಮೂಲಸೌಕರ್ಯದಿಂದ ವಂಚಿತರಾದವರಿಗೆ ಕೆ.ಟಿ. ಶಾಂತಕುಮಾರ್ ರವರು ಆಶ್ರಯದಾತರಾಗಿದ್ದಾರೆ. ನಿಜವಾದ ನಾಯಕ ಲಕ್ಷಣದ ವ್ಯಕ್ತಿತ್ವ ಶಾಂತಕುಮಾರ್ ಅವರಲ್ಲಿ ಇದೆ ಎಂದರು.

    ಆದಿಚುಂಚನಗಿರಿ ಮಠದ ಕಾರ್ಯದರ್ಶಿ ಪ್ರಸನ್ನನಾಥ ಮಹಾಸ್ವಾಮೀಜಿ ಮಾತನಾಡಿ, ಕಲ್ಪತರು ನಾಡಿನಲ್ಲಿ ಸಮಾಜಮುಖಿ ಕಾರ್ಯದಲ್ಲಿ ಬಹಳ ವರ್ಷಗಳಿಂದ ರೈತಾಪಿ ವರ್ಗ ಸೇರಿದಂತೆ, ಬಡ ಮಕ್ಕಳಿಗೆ ಅನೇಕ ಸಹಾಯ ಸಹಕಾರವನ್ನುಶಾಂತಕುಮಾರ್ ಅವರು ಮಾಡಿರುವುದನ್ನು ನಾವು ಕೇಳಿದ್ದೇವೆ. ಕರೋನಾ ಸಂದರ್ಭದಲ್ಲಿ ಶಾಂತಕುಮಾರ್ ಹಮ್ಮಿಕೊಂಡಿದ್ದ ಕಾರ್ಯಕ್ರಮಗಳು ಜನತೆ ಮರೆತಿಲ್ಲ. ಮಕ್ಕಳಿಗೆ ಪಠ್ಯಪುಸ್ತಕ, ಪ್ರತಿಭಾ ಪುರಸ್ಕಾರ ಮತ್ತಿತರ ಸಮಾಜಮುಖಿ ಕಾರ್ಯ ಶಾಂತಕುಮಾರ್ ರವರು ಮಾಡುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದರು.

    ತಾಲೂಕು ಕುರುಬ ಸಮಾಜದ ಅಧ್ಯಕ್ಷ ಚಂದ್ರೇಗೌಡ ಮಾತನಾಡಿ, ಸಣ್ಣಪುಟ್ಟ ಸಮುದಾಯಗಳ ಭವನಗಳ ನಿರ್ಮಾಣಕ್ಕೆ ಜನಪ್ರತಿನಿಧಿಗಳು ಸರ್ಕಾರದಿಂದ ಹಣ ನೀಡಲು ಮೀನಾ ಮೇಷ ಎಣಿಸುತ್ತಾರೆ. ಅಹಿಂದ ಸಮಾಜ ಒಗ್ಗೂಡಬೇಕು ಎಂದರು.

    ಕಾಂಗ್ರೆಸ್ ಮುಖಂಡ ಕೆ.ಟಿ.ಶಾಂತಕುಮಾರ್ ಮಾತನಾಡಿ, ಚುನಾವಣಾ ಸಂದರ್ಭದಲ್ಲಿ ಯಾವುದೇ ಅಭ್ಯರ್ಥಿ ಗೆಲುವು ಪಡೆಯಬೇಕಾದರೆ ಹಿಂದುಳಿದ ವರ್ಗಗಳ ಮತ ನಿರ್ಣಾಯಕ ಪಾತ್ರ ವಹಿಸುತ್ತದೆ. ಹಿಂದುಳಿದ ಸಮಾಜಗಳು ಒಗ್ಗೂಡ ಬೇಕು, ಸಂಘಟನೆ ಬಲವಾದರೆ ಏನನ್ನು ಬೇಕಾದರೂ ಪಡೆಯಲು ಸಾಧ್ಯ, ತಾಲೂಕಿನ ಜನಪ್ರತಿನಿಧಿಗಳು ಹಿಂದುಳಿದ ಸಮುದಾಯಕ್ಕೆ ಕೇವಲ ಆಶ್ವಾಸನೆ ನೀಡಿದ್ದು ಬಿಟ್ಟರೆ, ಸಮುದಾಯಗಳ ಅಭಿವೃದ್ಧಿಗೆ ಯಾವುದೇ ನೆರವು ಇದುವರೆಗೂ ನೀಡಿಲ್ಲ, ಕೇವಲ ಗುದ್ದಲಿ ಪೂಜೆ ನೆಪದಲ್ಲಿ ಚುನಾವಣೆ ಸಂದರ್ಭದಲ್ಲಿ ಜನಪ್ರತಿನಿಧಿಗಳು ಗಿಮಿಕ್ ಮಾಡಿದ್ದು ಬಿಟ್ಟರೆ, ಹಿಂದುಳಿದ ವರ್ಗದ ಸಮುದಾಯಗಳ ಬಗ್ಗೆ ಸ್ವಲ್ಪವೂ ಕಾಳಜಿ ಇಲ್ಲ, ತಾಲೂಕಿನ ನೂರಾರು ಶಾಲೆಗಳು ಇಂದಿಗೂ ಕೂಡ ಶಿಥಿಲಾವಸ್ಥೆಯಲ್ಲಿವೆ, ಆದರೆ ಶಿಕ್ಷಣ ಮಂತ್ರಿಗಳಿಗೆ ಯಾವುದು ಗಮನಕ್ಕೆ ಬರುತ್ತಿಲ್ಲವೇ? ಕಳೆದ ಹಲವಾರು ವರ್ಷಗಳಿಂದ ನಾನು ತಾಲೂಕಿನ ಜನತೆಯ ಜೊತೆ ನಿರಂತರವಾಗಿ ಜೊತೆಯಾಗಿ ಇದ್ದೇನೆ, ಬಡತನದಲ್ಲಿ ಹುಟ್ಟಿದ ನನಗೆ ಕಷ್ಟ ಅಂದರೆ ಏನು ಎಂದು ತಿಳಿದಿದೆ, ಈ ತಾಲೂಕಿನಲ್ಲಿ ಸಾವಿರಾರು ನೊಂದ ಕುಟುಂಬಗಳು ಇವೆ, ತಾಲೂಕಿನ ಹೊಂದಾಣಿಕೆ ರಾಜಕಾರಣದಿಂದಾಗಿ ಬಡವರಿಗೆ ನ್ಯಾಯ ದೊರಕುತ್ತಿಲ್ಲ, ತಾಲೂಕಿನ ಜನರು ನನಗೆ ಶಕ್ತಿ ತುಂಬಿದರೆ ದಿನದ 24 ಗಂಟೆ ನಾನು ಸೇವೆ ಮಾಡಲು ಸಿದ್ದನಾಗಿದ್ದೇನೆ. ಬರುವ ವಿಧಾನಸಭಾ ಚುನಾವಣೆಯಲ್ಲಿ ನನಗೆ ಒಂದು ಅವಕಾಶ ತಾಲೂಕಿನ ಜನತೆ ನೀಡಬೇಕು ಎಂದರು.

    ಇದೇ ಸಂದರ್ಭದಲ್ಲಿ ತಾಲೂಕಿನ ಹಿಂದುಳಿದ ಸಮುದಾಯ ಭವನಗಳ ನಿರ್ಮಾಣಕ್ಕೆ ಕೆ.ಟಿ.ಶಾಂತಕುಮಾರ್ ವೈಯಕ್ತಿಕವಾಗಿ ಧನಸಹಾಯ ನೀಡಿದರು, ಅಲ್ಲದೆ ಎಸ್ ಎಸ್ ಎಲ್ ಸಿ ಹಾಗೂ ಪಿ ಯು ಸಿ ಯಲ್ಲಿ ಅತಿ ಹೆಚ್ಚು ಅಂಕ ಪಡೆದ ಹಿಂದುಳಿದ ಸಮುದಾಯದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ, ವಿಕಲಾಂಗ ಮಕ್ಕಳಿಗೆ ಸಹಾಯ ನೀಡಿದರು, ಕಾರ್ಯಕ್ರಮದಲ್ಲಿ ಹಿಂದುಳಿದ ಸಮುದಾಯದ ಮುಖಂಡರಾದ ಶಿವಪುರದ ಸಿದ್ದರಾಮಯ್ಯ, ಲಿಂಗಯ್ಯ, ನಿಜಲಿಂಗಪ್ಪ ,ನಾಗರಾಜು, ಬಾಲರಾಜು, ಪ್ರಕಾಶ್, ಪರಮೇಶ ಆಚಾರ್, ಚಂದ್ರಣ್ಣ, ಲೋಕೇಶ್, ಉಗ್ರಯ್ಯ ಸೇರಿದಂತೆ, ಅಪಾರ ಸಂಖ್ಯೆಯಲ್ಲಿ ಹಿಂದುಳಿದ ಸಮುದಾಯದ ಜನರು ಸಮಾವೇಶದಲ್ಲಿ ಪಾಲ್ಗೊಂಡಿದ್ದರು.

    ವರದಿ: ಆನಂದ್, ತಿಪಟೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಸಮಾಜ ಕಲ್ಯಾಣ ಕಚೇರಿಯಲ್ಲಿ ಆತ್ಮಹತ್ಯೆ ಪ್ರಕರಣ: ಪರಿಶೀಲನೆ ಮಾಡದೆ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬಾರದು: ಯಗಚಿ ಕಟ್ಟೆ ರಾಘವೇಂದ್ರ ಒತ್ತಾಯ

    March 25, 2026

    ತಿಪಟೂರು: ಸಾರ್ವಜನಿಕ ಶೌಚಾಲಯಗಳಿಗೆ ಬೀಗ; ಬಯಲು ವಿಸರ್ಜನೆಗೆ ಮೊರೆ ಹೋದ ಜನತೆ

    March 25, 2026

    ದೇವನಹಳ್ಳಿ ಬಳಿ ಭೀಕರ ಅಪಘಾತ: ವಾರಾಣಸಿಗೆ ತೆರಳುತ್ತಿದ್ದ ತಿಪಟೂರಿನ ಮೂವರು ಮಹಿಳೆಯರ ಸಾವು

    March 22, 2026

    Comments are closed.

    Our Picks

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ರಾಜ್ಯದ ಆರ್ಥಿಕ ಸ್ಥಿತಿ ಸುಭದ್ರ: ಬಿಜೆಪಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

    April 1, 2026

    ದಾವಣಗೆರೆ: ಕರ್ನಾಟಕದ ಆರ್ಥಿಕ ಪರಿಸ್ಥಿತಿ ಸುಭದ್ರವಾಗಿದ್ದು, ಜಿಎಸ್‌ಟಿ ಸಂಗ್ರಹ ಮತ್ತು ಹೂಡಿಕೆಯಲ್ಲಿ ರಾಜ್ಯ ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ…

    ತುಮಕೂರು: ಅಣ್ಣನಿಂದಲೇ ತಮ್ಮನ ಕೊಲೆ; ಸುಳ್ಳು ಕಥೆ ಕಟ್ಟಿ ಸಿಕ್ಕಿಬಿದ್ದ ತಂದೆ–ಮಗ!

    April 1, 2026

    ಗುಣಮಟ್ಟದ ಹಾಲು ಶೇಖರಣೆ: ತುಮಕೂರು ಜಿಲ್ಲೆ ರಾಜ್ಯದಲ್ಲೇ ಪ್ರಥಮ: ಶಾಸಕ ಎಚ್.ವಿ.ವೆಂಕಟೇಶ್

    April 1, 2026

    ಸಿದ್ದಗಂಗಾ ಮಠವು ಕರುಣಾ ಗಂಗೆಯಾಗಿ ಹರಿಯುತ್ತಿದೆ: ರಾಷ್ಟ್ರಪತಿ ದ್ರೌಪದಿ ಮುರ್ಮು

    April 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.