ಕೊರಟಗೆರೆ: ಪಟ್ಟಣದ ರಾಮೇಶ್ವರ ಸಮುದಾಯ ಭವನದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಸಂಘದ ವತಿಯಿಂದ ಸೃಜನಶೀಲ ಕಾರ್ಯಕ್ರಮದಡಿಯಲ್ಲಿ ಗ್ರಾಮೀಣ ಹೆಣ್ಣುಮಕ್ಕಳಿಗೆ ತುಳಸಿಕಟ್ಟೆ ವಿತರಣೆ ಮಾಡಲಾಗಿತ್ತು.
ಪಟ್ಟಣ ಪಂಚಾಯ್ತಿ ಅಧ್ಯಕ್ಷೆ ಕಾವ್ಯ ಶ್ರೀ ಮಾತನಾಡಿ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ವತಿಯಿಂದ ಗ್ರಾಮೀಣ ಭಾಗದ ಹೆಣ್ಣು ಮಕ್ಕಳಿಗೆ ಸ್ವಂತ ದುಡಿಮೆಗೆ ಅನುಕೂಲವಾಗುವಂತೆ ಹೆಣ್ಣುಮಕ್ಕಳಿಗೆ ಅನೇಕ ಅನುಕೂಲಗಳನ್ನು ಮಾಡಿಕೊಡುತ್ತಿದೆ ಎಂದರು.
ಮದುವೆಯಾಗಿ ಗಂಡನ ಮನೆಗೆ ಬಂದಿರುವ ಹೆಣ್ಣು ಮಕ್ಕಳು ಮನೆಯಲ್ಲಿಯೇ ಇರಬೇಕಿತ್ತು. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವದ್ಧಿ ಸಂಸ್ಥೆಯ ವತಿಯಿಂದ ಅಂತಹ ಹೆಣ್ಣು ಮಕ್ಕಳು ಸ್ವಾವಲಂಬಿ ಆಗಲು ಅನೇಕ ಯೋಜನೆಗಳನ್ನು ರೂಪಿಸಿದೆ. ಅವರ ಸ್ಕೂಲಿಗಾಗಿ ಸಂಸ್ಥೆ ವತಿಯಿಂದ ಲೋನ್ ಕೂಡ ಕೊಡಲಾಗುತ್ತಿದೆ. ಹೆಣ್ಣುಮಕ್ಕಳಿಗೆ ಲೋನ್ ಕೊಡುವುದರಿಂದ ಸರಿಯಾದ ಸಮಯಕ್ಕೆ ತಿರುಗಿಸುತ್ತಾರೆ ಹಾಗೆಯೇ ಆ ಹಣದಿಂದ ತಮ್ಮ ಉತ್ತಮ ಭವಿಷ್ಯವನ್ನು ರೂಪಿಸಿಕೊಂಡಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯು ಹೀಗೆ ಮುಂದುವರಿಯಲಿ ಎಂದು ಆಶಿಸುತ್ತೇನೆ ಎಂದು ತಿಳಿಸಿದರು.
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿಯ ಯೋಜನಾಧಿಕಾರಿ ಬಾಲಕೃಷ್ಣ ಮಾತನಾಡಿ , ಪೂಜ್ಯ ಶ್ರೀ ವೀರೇಂದ್ರ ಹೆಗ್ಗಡೆಯವರ ಕರ್ನಾಟಕ ರಾಜ್ಯದ ಗ್ರಾಮೀಣ ಭಾಗದ ಹೆಣ್ಣುಮಕ್ಕಳ ಅಭಿವೃದ್ಧಿಯೇ ಸ್ವಾವಲಂಬಿಗಳಾಗಿ ಅವರ ದುಡಿಮೆ ಅವರ ಕುಟುಂಬಕ್ಕೆ ಆಧಾರವಾಗಬೇಕು ಯಾರ ಅಡಿಯಲ್ಲಿಯೂ ಹೆಣ್ಣು ಮಕ್ಕಳು ಇರಬಾರದು ಗಂಡುಮಕ್ಕಳ ಸಮಾನರಾಗಿ ಹೆಣ್ಣು ಮಕ್ಕಳು ದುಡಿಯುತ್ತಿದ್ದಾರೆ. ಅಂತಹ ಹೆಣ್ಣುಮಕ್ಕಳಿಗೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯು ಅವರ ಸ್ವಂತ ದುಡಿಮೆಗೆ ಅವಕಾಶ ಕಲ್ಪಿಸಿಕೊಟ್ಟಿದೆ ಇಂದು ಎಷ್ಟೋ ಗ್ರಾಮೀಣ ಭಾಗಗಳಲ್ಲಿ ಹೆಣ್ಣು ಮಕ್ಕಳು ತಮ್ಮ ಸ್ವಂತ ದುಡಿಮೆಯಿಂದ ಸಂಸಾರಗಳನ್ನು ಸಾಕುತ್ತಿದ್ದಾರೆ ಇಂತಹ ಕಾರ್ಯಗಳಿಗೆ ಮುನ್ನುಡಿ ಬರೆದ ಶ್ರೀ ವೀರೇಂದ್ರ ಹೆಗ್ಗಡೆಯವರಿಗೆ ಅನಂತಾನಂತ ಧನ್ಯವಾದಗಳು ಹಾಗೆಯೇ ಇಂತಹ ಯೋಜನೆಗಳು ಬೆಟ್ಟದ ರೀತಿ ಬೆಳೆಯಲಿ ಎಂಬುವುದೇ ಎಲ್ಲರ ಆಶಯ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯ್ತಿ ಉಪಾಧ್ಯಕ್ಷರಾದ ಭಾರತಿಸಿದ್ದಮಲ್ಲಪ್ಪ , ಸದಸ್ಯರಾದ ಪ್ರದೀಪ್ ಕುಮಾರ್, ಹೇಮಲತಾ ಮಂಜುನಾಥ್ , ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಸಮನ್ವಯ ಅಧಿಕಾರಿ ಶ್ರುತಿ ಸೇವಾ ಪ್ರತಿನಿಧಿಗಳು ಕೇಂದ್ರ ಸದಸ್ಯರು ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಪ್ರತಿನಿಧಿಗಳು ಹಾಜರಿದ್ದರು.
ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB