ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಕಾಂಗ್ರೆಸ್ ಕಛೇರಿಯಲ್ಲಿ ಮಾಜಿ ಸಚಿವರಾದ ಡಿ.ಸುಧಾಕರ್ ನೇತೃತ್ವದಲ್ಲಿ ಹಿರಿಯೂರು ತಾಲ್ಲೂಕು ಮಹಿಳಾ ಕಾಂಗ್ರೆಸ್ ಸಭೆಯನ್ನು ಏರ್ಪಡಿಸಲಾಗಿತ್ತು.
ಸಭೆಯನ್ನುದ್ದೇಶಿಸಿ ಮಾತನಾಡಿದ ಡಿ.ಸುಧಾಕರ್, ಮಹಿಳೆಯರಿಗೆ ಹೆಚ್ಚಿನ ರಾಜಕೀಯ ಸ್ಥಾನವನ್ನು ನೀಡುವ ಏಕೈಕ ಪಕ್ಷ ಕಾಂಗ್ರೆಸ್ ಆಗಿದೆ. ಮಾಜಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಮೊಟ್ಟಮ್ಮ ನವರು ಸ್ತ್ರೀ ಶಕ್ತಿ ಸಂಘಗಳಿಗೆ ಅನುದಾನವನ್ನು ಕೊಟ್ಟು ಮಹಿಳೆಯರ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ನೆರವಾದರು. ನನ್ನ ಆಡಳಿತ ಅವಧಿಯಲ್ಲಿ ಸ್ತ್ರೀ ಶಕ್ತಿ ಭವನಗಳನ್ನು ಹಾಗೂ ಸ್ವ ಸಹಾಯ ಸಂಘಗಳಿಗೆ ಡಿ.ಸಿ.ಸಿ. ಬ್ಯಾಂಕ್ ವತಿಯಿಂದ ಸಹಾಯ ಧನವನ್ನ ನೀಡಿದ್ದೆ ಎಂದು ಅವರು ತಿಳಿಸಿದರು.
ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಗೀತಾ ನಂದಿನಿ ಗೌಡ ಮಾತನಾಡಿ, ಹೆಣ್ಣು ಮಕ್ಕಳು ರಾಜಕೀಯದಲ್ಲಿ ಗುರುತಿಸಿಕೊಂಡು ಸಮಾಜದ ಮುಖ್ಯವಾಹಿನಿಗೆ ಬರಬೇಕೆಂದು ತಿಳಿಸಿದರು.
ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯೆ ಶಶಿಕಲಾ ಮಾತನಾಡಿ, ಹೆಣ್ಣು ಸಮಾಜದ ಕಣ್ಣು. ನಿಮ್ಮ ಕೆಲಸದ ನಡುವೆಯೂ ರಾಜಕೀಯವಾಗಿ ಮುಂದೆ ಬರಬೇಕು,. ಮುಂದೆ ಶೈಕ್ಷಣಿಕವಾಗಿ ನಡೆಯುವಂತಹ ಜಿಲ್ಲಾ ಪಂಚಾಯಿತಿ ತಾಲ್ಲೂಕು ಪಂಚಾಯಿತಿ ಚುನಾವಣೆ ಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನ ಗೆಲ್ಲಿಸಬೇಕು. ಮುಂಬರುವ ವಿಧಾನಸಭಾ ಚುನಾವಣೆಗೆ ಡಿ.ಸುಧಾಕರ್ ಅವರನ್ನು ಗೆಲ್ಲಿಸುವುದರ ಮೂಲಕ ಭ್ರಷ್ಟ ಬಿ.ಜೆ.ಪಿ ಸರ್ಕಾರದ ಆಡಳಿತವನ್ನು ಕಡೆಗಣಿಸ ಬೇಕೆಂದು ಕರೆ ನೀಡಿದರು.
ಕೆ.ಪಿ.ಸಿ.ಸಿ ಸದಸ್ಯರಾದ ಎ.ಎಂ.ಅಮೃತೇಶ್ವರಸ್ವಾಮಿ ಮಾತನಾಡಿ, ಪಕ್ಷ ಸಂಘಟನೆ ಬಗ್ಗೆ ತಿಳಿಸಿದರು. ಇದೇ ಸಂದರ್ಭದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಹಾಗೂ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಡಾ.ಪುಷ್ಪಾ ಅಮರ್ ನಾಥ್ ಆದೇಶದ ಮೇರೆಗೆ ಡಿ.ಸುಧಾಕರ್ ರವರ ಸಲಹೆ ಮೇರೆಗೆ ಮತ್ತು ಚಿತ್ರದುರ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಗೀತಾನಂದಿನಿಗೌಡ ” ರವರ ಸೂಚನೆಯ ಮೇರೆಗೆ ಹಿರಿಯೂರು ನಗರದ 31 ವಾರ್ಡ್ ಗಳು ಹಾಗೂ 31 ಗ್ರಾಮಪಂಚಾಯತಿಯ ಅಧ್ಯಕ್ಷರು , ಉಪಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿ ಗಳು ಹಾಗೂ ಪದಾಧಿಕಾರಿಗಳ ನೇಮಕಾತಿ ಆದೇಶ ಪತ್ರವನ್ನು ಕಾಂಗ್ರೆಸ್ ಪಕ್ಷದ ನೂತನ ಪದಾಧಿಕಾರಿಗಳಿಗೆ ಡಿ. ಸುಧಾಕರ್ ರವರ ನೇತೃತ್ವದಲ್ಲಿ ನೀಡಲಾಯಿತು.
ಈ ಕಾರ್ಯಕ್ರಮದಲ್ಲಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಗೀತ ನಂದಿನಿ ಗೌಡ, ಹಿರಿಯೂರು ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಸುರೇಖಾಮಣಿ, ಗ್ರಾಮಾಂತರ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ನಾಗರತ್ನಮ್ಮ, ಕೆ.ಪಿ.ಸಿ.ಸಿ ಸದಸ್ಯರಾದ ಎ.ಎಂ.ಅಮೃತೇಶ್ವರಸ್ವಾಮಿ, ಹಿರಿಯೂರು ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಖಾದಿ ಜೆ.ರಮೇಶ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ನಾಗೇಂದ್ರನಾಯ್ಕ, ಜಿಲ್ಲಾ ಮಹಿಳಾ ಪ್ರಧಾನ ಕಾರ್ಯದರ್ಶಿಗಳಾದ ರಜೀಯಾ ಸುಲ್ತಾನ, ತಾಲ್ಲೂಕು ಮಹಿಳಾ ಉಪಾಧ್ಯಕ್ಷರಾದ ಚೇತನ್ ಕುಮಾರಿ, ನಗರಸಭೆ ಸದಸ್ಯರಾದ ರತ್ನಕ್ಕ, ನಗರಸಭೆ ಸದಸ್ಯರಾದ ಮಮತ, ಸುರೇಖಾಮಣಿ, ಕವಿತ, ಮೊದಲಮರಿಯಾ, ಶಿವರಂಜಿನಿ, ವಿಶಾಲಾಕ್ಷಮ್ಮ, ಗೀತಾಗಂಗಾಧರ್, ಸಮಿವುಲ್ಲಾ, ಜಬೀವುಲ್ಲಾ, ಹಾಗೂ ಕಾರ್ಮಿಕ ವಿಭಾಗದ ಶಿವಕುಮಾರ್ ವಿ , ಗಿರೀಶ್ ಕುಮಾರ್ ವಿ . ಜ್ಞಾನೇಶ್, ನೂತನ ಮಹಿಳಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಶ್ರೀಮತಿ. ಎಮ್ ಎಸ್ ಗೌರಿ ಮುರುಳಿಧರನ್ ಹಿರಿಯೂರು. ಹಾಗೂ ಹಿರಿಯೂರು ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯಿತಿ ಬ್ಲಾಕ್ ಮಹಿಳಾ ಅಧ್ಯಕ್ಷರು, ನಗರದ ವಾರ್ಡ್ ಮಹಿಳಾ ಅಧ್ಯಕ್ಷರು, ಉಪಸ್ಥಿತರಿದ್ದರು.
ವರದಿ: ಮುರುಳಿಧರನ್ ಆರ್., ಹಿರಿಯೂರು. ( ಚಿತ್ರದುರ್ಗ – ದಾವಣಗೆರೆ ).
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB