ಹಿರಿಯೂರು: ಹಿರಿಯೂರು ತಾಲ್ಲೂಕಿನ ವಾಣಿವಿಲಾಸಪುರ ಗ್ರಾಮದಲ್ಲಿ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯ ಆವರಣದಲ್ಲಿ ಕಾಂಗ್ರೆಸ್ ಡಿಜಿಟಲ್ ಸದಸ್ಯತ್ವ ಅಭಿಯಾನ ಕಾರ್ಯಕ್ರಮ ನಡೆಯಿತು.
ತಾಲ್ಲೂಕಿನ ಮಾಜಿ ಶಾಸಕ, ಮಾಜಿ ಸಚಿವ ಡಿ.ಸುಧಾಕರ್ ರವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಖಾದಿ ರಮೇಶ್ ಭಾಗವಹಿಸಿದ್ದರು.
ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಆರ್ . ನಾಗೇಂದ್ರ ನಾಯ್ಕ, ಪಕ್ಷ ಅಂತ ಬಂದರೆ ನಾವುಗಳೆಲ್ಲರೂ ಸಹ ಒಂದೇ ಕುಟುಂಬದವರಾಗಿರಬೇಕು. ಯಾವುದೇ ಸಮಯ ಸಂದರ್ಭ ಬಂದರೂ ಸಹ ನಮ್ಮಲ್ಲಿ ಇರುವ ಒಗ್ಗಟ್ಟನ್ನು ಮತ್ತೊಬ್ಬರಿಗಾಗಿ ಬಿಟ್ಟುಕೊಡಬಾರದು. ಮುಂದಿನ ದಿನಗಳಲ್ಲಿ ಬರುವಂತಹ ತಾಲ್ಲೂಕು ಪಂಚಾಯತಿ, ಜಿಲ್ಲಾ ಪಂಚಾಯತಿ ಚುನಾವಣೆ ಯಲ್ಲಿ ಒಗ್ಗಟ್ಟು ಪ್ರದರ್ಶಿಸಬೇಕು. ಭಿನ್ನಾಭಿಪ್ರಾಯಗಳನ್ನು ತೊರೆದು ಕೆಲಸ ಮಾಡಬೇಕು ಎಂದು ಅವರು ಕಾರ್ಯಕರ್ತರಿಗೆ ಕರೆ ನೀಡಿದರು.
ಕೆಪಿಸಿಸಿ ಸದಸ್ಯರಾದ ಅಮೃತೇಶ್ವರ್ ಮಾತನಾಡಿ, ನಮ್ಮ ಪಕ್ಷದಲ್ಲಿ ಪ್ರತಿಯೊಬ್ಬರೂ ಸಹ ಪಕ್ಷದ ಪರವಾಗಿ ಇನ್ನು ಅತಿ ಹೆಚ್ಚಿನ ರೀತಿಯಲ್ಲಿ ಕರ್ತವ್ಯ ನಿಷ್ಠೆಯಿಂದ ದುಡಿಯಬೇಕು ಎಂದು ತಿಳಿಸಿದರು.
ಹಿರಿಯೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಖಾದಿರಮೇಶ್ ಮಾತನಾಡಿ, ಈ ಡಿಜಿಟಲ್ ಸದಸ್ಯತ್ವದ ಮೆಂಬರ್ ಶಿಪ್ ಗಳ ಪಟ್ಟಿಗಳ ಸಂಪೂರ್ಣ ಮಾಹಿತಿ ನವದೆಹಲಿಯ ಕಾಂಗ್ರೆಸ್ ಕಛೇರಿಯಲ್ಲಿ ಆನ್ ಲೈನ್ ಮೂಲಕ ಕೆಪಿಸಿಸಿಯಲ್ಲಿ ನೊಂದಾಯಿಸಲ್ಪಟ್ಟಿರುತ್ತದೆ . ಆದುದರಿಂದ ಪ್ರತಿಯೊಬ್ಬರೂ ಸಹ ಈ ಡಿಜಿಟಲ್ ಸದಸ್ಯತ್ವ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ನಂತರ ಕೆಪಿಸಿಸಿ ಡಾ.ಸುಜಾತ ಮಾತನಾಡಿದರು. ಈ ಸಂದರ್ಭದಲ್ಲಿ ವಾಣಿವಿಲಾಸಪುರ ಗ್ರಾಮ ಪಂಚಾಯತಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಅತಾವುಲ್ಲಾ , ಕೆ ಪಿ ಸಿ ಸಿ ಸದಸ್ಯರಾದ ಅಮೃತೇಶ್ವರ್, ಮಾಜಿ ಜಿಲ್ಲಾ ಪಂಚಾಯತಿ ಸದಸ್ಯರಾದ ಆರ್ .ನಾಗೇಂದ್ರ ನಾಯ್ಕ, ಯೂತ್ ಕಾಂಗ್ರೆಸ್ ಅಧ್ಯಕ್ಷರಾದ ಗುರು, ಪಿ ಎ ಸಿ ಎಸ್ ಅಧ್ಯಕ್ಷರಾದ ಕಾಮರಾಜ್ , ವಾಣಿವಿಲಾಸಪುರ ಗ್ರಾಮ ಪಂಚಾಯತಿ ಯೂತ್ ಕಾಂಗ್ರೆಸ್ ಅಧ್ಯಕ್ಷರಾದ ಕುಮಾರ್ , ಗ್ರಾಮ ಪಂಚಾಯತಿ ಸದಸ್ಯರಾದ ರಘು, ಮಹಬೂಬಿ, ಹಾಗೂ ಪಾಲಾಕ್ಷ , ವಾಣಿವಿಲಾಸಪುರ ಗ್ರಾಮದ ನವೀದ್, ಪ್ರವೀಣ್, ರಘು, ವಿಕಾಸ್ ಉಮೇಶ್ ಇತರರು ಉಪಸ್ಥಿತರಿದ್ದರು.
ವರದಿ: ಮುರುಳಿಧರನ್ ಆರ್. ಹಿರಿಯೂರು ( ಚಿತ್ರದುರ್ಗ ).
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy