ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ನಗರದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಸುರೇಖಾಮಣಿ, ಗ್ರಾಮಾಂತರ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ನಾಗರತ್ನಮ್ಮರವರ ಅಧ್ಯಕ್ಷತೆಯಲ್ಲಿ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮ ಹಿರಿಯೂರು ತಾಲ್ಲೂಕಿನ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು.
ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಪಕ್ಷದ ಜಿಲ್ಲಾ ಮಹಿಳಾ ಪ್ರಧಾನ ಕಾರ್ಯದರ್ಶಿಯಾದ ರಜೀಯಾ ಸುಲ್ತಾನ್, ಈ ದಿನ ಮಹಿಳೆಯರಿಗೆ ತುಂಬಾ ಮಹತ್ವವಾದ ದಿನ, ಒಂದು ಹೆಣ್ಷು ಮಗಳು ಕೇವಲ ಮನೆಗೆ ಮಾತ್ರ ಮೀಸಲಾಗಿಲ್ಲ, ಹೆಣ್ಣು ಮಕ್ಕಳು ಸಮಾಜದಲ್ಲಿ ಸದಾ ಏನಾದರೂ ಒಂದು ಸಾಧನೆ ಮಾಡಲೇಬೇಕು.ಈ ಸಾಧನೆಗೆ ಮನೆಯಲ್ಲಿನ ತಂದೆ, ತಾಯಿ ಅಥವಾ ಪತಿಯ ಸಹಕಾರ ಪ್ರೋತ್ಸಾಹ ಅಷ್ಟೇ ಅಗತ್ಯ ಎಂದರು.
ಮಾಜಿ ಸಚಿವ ಡಿ.ಸುಧಾಕರ್ ರವರು ಮಾತನಾಡಿ, ನಾನು 2008 ರಲ್ಲಿ ಹಿರಿಯೂರು ಕ್ಷೇತ್ರದಲ್ಲಿ ಮೊದಲ ಬಾರಿಗೆ ಸ್ವತಂತ್ರ ಅಭ್ಯರ್ಥಿಯಾಗಿ ಹಿರಿಯೂರು ಕ್ಷೇತ್ರದಲ್ಲಿ ಶಾಸಕರಾಗಿ ಚುನಾವಣೆಯಲ್ಲಿ ಗೆಲ್ಲಲು ಕಾರಣ ಈ ನಮ್ಮ ಹಿರಿಯೂರು ತಾಲ್ಲೂಕಿನ ಮಹಿಳೆಯರು ಎಂದು ಸ್ಮರಿಸಿಕೊಂಡರು.
ಈ ಸಂದರ್ಭದಲ್ಲಿ ಹಿರಿಯೂರು ತಾಲ್ಲೂಕಿನ ಮಾಜಿ ಶಾಸಕರಾದ ಡಿ.ಸುಧಾಕರ್ ಹಿರಿಯೂರು ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಸುರೇಖಾಮಣಿ, ಗ್ರಾಮಾಂತರ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ನಾಗರತ್ನಮ್ಮ, ಕೆ.ಪಿ.ಸಿ.ಸಿ ಸದಸ್ಯರಾದ ಎ.ಎಂ.ಅಮೃತೇಶ್ವರಸ್ವಾಮಿ, ಹಿರಿಯೂರು ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಖಾದಿ ಜೆ.ರಮೇಶ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ನಾಗೇಂದ್ರನಾಯ್ಕ, ಜಿಲ್ಲಾ ಮಹಿಳಾ ಪ್ರಧಾನ ಕಾರ್ಯದರ್ಶಿಗಳಾದ ರಜೀಯಾ ಸುಲ್ತಾನ, ತಾಲ್ಲೂಕು ಮಹಿಳಾ ಉಪಾಧ್ಯಕ್ಷರಾದ ಚೇತನ್ ಕುಮಾರಿ, ಮಹಿಳಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಎಮ್. ಎಸ್.ಗೌರಿ ಮುರುಳಿಧರನ್ , ನಗರಸಭೆ ಸದಸ್ಯರಾದ ರತ್ನಕ್ಕ, ಮಮತ, ಸುರೇಖಾಮಣಿ, ಮೊದಲಮರಿಯಾ, ಶಿವರಂಜಿನಿ, ವಿಶಾಲಾಕ್ಷಮ್ಮ, ಗೀತಾಗಂಗಾಧರ್, ಸಮಿವುಲ್ಲಾ, ಜಬೀವುಲ್ಲಾ, ಐಮಂಗಲ ಹೋಬಳಿಯ ಐಮಂಗಲ ಗ್ರಾಮ ಪಂಚಾಯತಿಯ ಮಾಜಿ ಅಧ್ಯಕ್ಷರಾದ ಕಲ್ಲಹಟ್ಟಿ ಹರೀಶ್ , ಹಾಗೂ ಕಾರ್ಮಿಕ ವಿಭಾಗದ ಶಿವಕುಮಾರ್ ವಿ , ಹಾಗೂ ಗಿರೀಶ್ ಕುಮಾರ್ ವಿ . ಜಿ ಎಲ್ ಮೂರ್ತಿ. ಹಾಗೂ ಹಿರಿಯೂರು ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯಿತಿ ಬ್ಲಾಕ್ ಮಹಿಳಾ ಅಧ್ಯಕ್ಷರು, ನಗರದ ವಾರ್ಡ್ ಮಹಿಳಾ ಅಧ್ಯಕ್ಷರು, ಉಪಸ್ಥಿತರಿದ್ದರು.
ವರದಿ: ಮುರುಳಿಧರನ್ ಆರ್. ಹಿರಿಯೂರು. ( ಚಿತ್ರದುರ್ಗ – ದಾವಣಗೆರೆ )
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy