ಬೀದರ್: ಹೊಕ್ರಣಾ ಗ್ರಾಮದ ಶಿವಾಜಿ ಚೌಕ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಸಾರಾಯಿ ಪ್ಯಾಕೇಟ್ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಮೇಲೆ ದಾಳಿ ಮಾಡಿದ ಔರಾದ–ಬಿ ಪೊಲೀಸ್ ಠಾಣೆ ಪೊಲೀಸರು 1665 ರೂಪಾಯಿ ಬೆಲೆ ಬಾಳುವ ಸಾರಾಯಿ ಪ್ಯಾಕೆಟ್ ಜಪ್ತಿ ಮಾಡಿ ಆರೋಪಿಯ ವಿರುದ್ಧ ಕಾನೂನು ಕ್ರಮಕೈಗೊಂಡಿದ್ದಾರೆ.
ಬೀದರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಪ್ರದೀಪ್ ಗುಂಟಿ ಅವರ ನಿರ್ದೇಶನದಂತೆ ಔರಾದ–ಬಿ ಪೊಲೀಸ್ ಠಾಣೆಯ ಪಿ.ಎಸ್.ಐ ವಾಸೀಮ ಪಟೇಲ್ ಅವರ ನೇತೃತ್ವದಲ್ಲಿ ಪೊಲೀಸರು ವ್ಯಕ್ತಿಯ ಮೇಲೆ ದಾಳಿ ನಡೆಸಿ, ಸಾರಾಯಿ ಪ್ಯಾಕೇಟ್ ಜಪ್ತಿ ಮಾಡಿಕೊಂಡಿದ್ದಾರೆ.
ಅಕ್ರಮ ಸರಾಯಿ ಮಾರಾಟದ ಮೇಲೆ ದಾಳಿಯಲ್ಲಿ ಶ್ರಮಿಸಿದ ಔರಾದ–ಬಿ ಪೊಲೀಸ್ ಠಾಣೆಯ ಪಿ.ಎಸ್.ಐ ಮತ್ತು ಹೊಕ್ರಣಾ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಯ ಕಾರ್ಯಕ್ಕೆ ಪೊಲೀಸ್ ವರಿಷ್ಠಾಧಿಕಾರಿಗಳಾದ ಪ್ರದೀಪ್ ಗುಂಟಿ ಶ್ಲಾಘಿಸಿದ್ದಾರೆ.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4