ತುರುವೇಕೆರೆ: ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಪ್ರತಿ ಹಳ್ಳಿಗಳಲ್ಲಿಯೂ ಮೂಲಭೂತ ಸೌಕರ್ಯ ಒದಗಿಸುವ ಮೂಲಕ ಗ್ರಾಮಗಳನ್ನು ಅಭಿವೃದ್ಧಿಪಡಿಸುವುದೇ ನಮ್ಮ ಗುರಿಯಾಗಿದೆ ಎಂದು ಮುತ್ತುಗದಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಎಂ.ಆರ್.ಗಿರೀಶ್ ತಿಳಿಸಿದರು.
ತಾಲೂಕಿನ ಮದ್ದನಹಳ್ಳಿ ಗೇಟ್ ಬಳಿ ಗ್ರಾಮ ಪಂಚಾಯಿತಿ ವತಿಯಿಂದ ಅಳವಡಿಸಿರುವ ಮಾರ್ಗಸೂಚಿ ಸೂಚನಾ ನಾಮಫಲಕವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ಮುತ್ತುಗದ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಪ್ರತಿ ಹಳ್ಳಿಗಳಿಗೂ ಮೂಲಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಹಲವು ಕಾರ್ಯಗಳನ್ನು ಗ್ರಾಮ ಪಂಚಾಯಿತಿಯ ಸರ್ವ ಸದಸ್ಯರ ಹಾಗೂ ಗ್ರಾಮಸ್ಥರ ಸಹಕಾರದೊಂದಿಗೆ ನಡೆಸಲಾಗಿದೆ. ಕೊಟ್ಟ ಮಾತಿನಂತೆ ಮುಂದೆಯೂ ಸಹ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನೆರವೇರಿಸಲಿದ್ದು, ಮುಂದೆಯೂ ಸಹಾಯ ಎಲ್ಲರ ಸಹಕಾರ ಹೀಗೆ ಇರಲಿ ಎಂದು ಮನವಿ ಮಾಡಿದರು.
ಮುಖಂಡರಾದ ಬಿ.ಎಂ.ಎಸ್.ಉಮೇಶ್ ಮಾತನಾಡಿ, ನಮ್ಮ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಲವು ಅಭಿವೃದ್ಧಿ ಕಾರ್ಯಗಳು ನಡೆಯುತ್ತಿರುವುದು ಸಂತಸವಾಗಿದೆ. ಮುಂದೆಯೂ ಸಹ ಪಕ್ಷಾತೀತವಾಗಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳು ಜರುಗಬೇಕು ಎಂದರು.
ಈ ಸಂದರ್ಭದಲ್ಲಿ ಗ್ರಾ.ಪಂ. ಉಪಾಧ್ಯಕ್ಷೆ ನಳಿನಾ ಶಿವಕುಮಾರ್, ಸದಸ್ಯರಾದ ಯೋಗೇಶ್, ಶಿವಕುಮಾರ್, ಲಕ್ಷ್ಮಮ್ಮ, ಅಫ್ರಜ್ ಉನ್ನಿಸಾ, ಮುಖಂಡರಾದ ಸೋಮಶೇಖರ್, ಆನಂದಕುಮಾರ್, ತಮ್ಮಯ್ಯ, ರಾಜೇಂದ್ರ ಹಾಗೂ ಗ್ರಾ.ಪಂ. ಕಾರ್ಯದರ್ಶಿ ಶಿವಕುಮಾರ್, ಸಿಬ್ಬಂದಿಗಳಾದ ಮಂಜುನಾಥ್ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ವರದಿ: ಸಚಿನ್ ಮಾಯಸಂದ್ರ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5