ಎಲ್ಲೆಲ್ಲೂ ಭಾಷೆಯ ವಿಚಾರ ಚರ್ಚೆಯಾಗುತ್ತಿದೆ. ದಕ್ಷಿಣ ಭಾರತದ ಚಿತ್ರಗಳ ವಿರುದ್ಧ ಬಾಲಿವುಡ್ ನಟರ ಆಕ್ರೋಶ ಹೆಚ್ಚಾಗುತ್ತಿದೆ. ಆದರೆ ಈ ಹೊತ್ತಲ್ಲೇ ಬಾಲಿವುಡ್ ಸ್ಟಾರ್ಸ್ ವಿರುದ್ಧ ಐಎಎಸ್ ಅಧಿಕಾರಿಗಳು ಕೂಡ ರೊಚ್ಚಿಗೆದ್ದಿದ್ದಾರೆ. ಈ ಕೋಪಕ್ಕೆ ಕಾರಣ ಮಾತ್ರ ಗುಟ್ಕಾ ಜಾಹೀರಾತು.
ಅಜಯ್ ದೇವಗನ್, ಅಕ್ಷಯ್ ಕುಮಾರ್ ಹಾಗೂ ಶಾರುಖ್ ಖಾನ್ ಒಟ್ಟಾಗಿ ನಟಿಸಿರುವ ಪಾನ್ ಮಸಾಲ ಜಾಹೀರಾತಿನ ವಿರುದ್ಧ ದಿನದಿಂದ ದಿನಕ್ಕೆ ಆಕ್ರೋಶ ಹೆಚ್ಚಾಗುತ್ತಿದೆ. ಈ ಹೊತ್ತಲ್ಲೇ ಪಶ್ಚಿಮ ಬಂಗಾಳದ ಐಎಎಸ್ ಅಧಿಕಾರಿಯೊಬ್ಬರು ಈ ಮೂವರು ನಟರಿಗೆ ಟ್ವೀಟ್ ಮೂಲಕ ಬಿಸಿ ಮುಟ್ಟಿಸಿದ್ದಾರೆ.
ಅವನೀಶ್ ಶರಣ್ ಎಂಬ ಪಶ್ಚಿಮ ಬಂಗಾಳದ ಐಎಎಸ್ ಅಧಿಕಾರಿ ಹೀಗೆ ಬಾಲಿವುಡ್ ಸ್ಟಾರ್ಗಳ ಗುಟ್ಕಾ ಪ್ರೀತಿ ವಿರುದ್ಧ ರೊಚ್ಚಿಗೆದ್ದವರು.ಅವನೀಶ್ ಶರಣ್ ಕೋಲ್ಕತ್ತಾದ ಹೌರಾ ಸೇತುವೆಯ ಚಿತ್ರವನ್ನು ಟ್ವೀಟ್ ಮಾಡಿ, ಗುಟ್ಕಾ ತಿನ್ನುವವರಿಂದಲೇ ಈ ಸೇತುವೆ ಹಾಳಾಗುತ್ತಿದೆ ಎಂದು ಬರೆದುಕೊಂಡಿದ್ದರು.ಅವನೀಶ್ ಶರಣ್ ಹಂಚಿಕೊಂಡಿದ್ದ ಫೋಟೋದಲ್ಲಿ ಸೇತುವೆಯ ಮೇಲೆ ಗುಟ್ಕಾ ತಿಂದು, ಸೇತುವೆ ಹಾಳು ಮಾಡಿರುವ ದೃಶ್ಯವಿದೆ.ಅಲ್ಲದೆ ಟ್ವೀಟ್ನಲ್ಲಿ ಅಜಯ್ ದೇವಗನ್, ಅಕ್ಷಯ್ ಕುಮಾರ್, ಶಾರುಖ್ ಖಾನ್ ಅವರನ್ನೂ ಟ್ಯಾಗ್ ಮಾಡಿರುವ ಅವನೀಶ್, ಗುಟ್ಕಾ ಜಾಹೀರಾತಿನ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದರು.
ಇದೀಗ ಐಎಎಸ್ ಅಧಿಕಾರಿ ಅವನೀಶ್ ಶರಣ್ ಮಾಡಿರುವ ಟ್ವೀಟ್ ಎಲ್ಲಾ ಕಡೆ ವೈರಲ್ ಆಗುತ್ತಿದೆ. ಉತ್ತರ ಭಾರತದಲ್ಲಿ ಅಜಯ್ ದೇವಗನ್, ಅಕ್ಷಯ್ ಕುಮಾರ್ ಹಾಗೂ ಶಾರುಖ್ ಖಾನ್ ವಿರುದ್ಧ ದಿನದಿಂದ ದಿನಕ್ಕೆ ಆಕ್ರೋಶ ಹೆಚ್ಚಾಗುತ್ತಿದೆ. ಇಷ್ಟಾದರೂ ಅಕ್ಷಯ್ ಕುಮಾರ್ ಅವರನ್ನು ಹೊರತುಪಡಿಸಿ, ಇನ್ನುಳಿದ ಇಬ್ಬರು ನಟರು ತಮ್ಮ ಗುಟ್ಕಾ ಜಾಹೀರಾತಿನ ಬಗ್ಗೆ ಸ್ಪಷ್ಟನೆ ನೀಡುತ್ತಿಲ್ಲ. ಇದು ಬಾಲಿವುಡ್ ಅಭಿಮಾನಿಗಳ ಸಿಟ್ಟನ್ನು ಮತ್ತಷ್ಟು ಹೆಚ್ಚಾಗುವಂತೆ ಮಾಡಿದೆ.
ವರದಿ ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy