ಸಿಎಂ ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರ ಬಂದ ನಂತರ ಜಿಹಾದಿ ಕರ್ನಾಟಕ ಸೃಷ್ಟಿಯಾಗಿದೆ. ಹಿಂದೂಗಳ ರಕ್ತಕ್ಕೆ ಬೆಲೆಯೇ ಇಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ಕಚೇರಿಯಲ್ಲಿ ಕಾಂಗ್ರೆಸ್ ದುರಾಡಳಿತದ ಆರೋಪ ಪಟ್ಟಿಯನ್ನು ಆರ್. ಅಶೋಕ್ ಬಿಡುಗಡೆ ಮಾಡಿದರು. ನಂತರ ಮಾತನಾಡಿದ ಆರ್. ಅಶೋಕ್, ರಾಜ್ಯದಲ್ಲಿ ಹಿಂದೂಗಳ ಕಗ್ಗೊಲೆ, ಲವ್ ಜಿಹಾದ್, ಹಿಂದೂಗಳ ಮೇಲೆ ದಾಳಿ ನಡೆಯುತ್ತಿದೆ. ಲವ್ ಜಿಹಾದ್ ಗೆ ಕಾಂಗ್ರೆಸ್ ನವರು ಕೂಡ ಒಳಗಾಗಿದ್ದಾರೆ. ಹುಬ್ಬಳ್ಳಿಯಲ್ಲಿ ನಡೆದ ಲವ್ ಜಿಹಾದ್ ನಲ್ಲಿ ಹಿಂದೂ ಯುವತಿ ಬರ್ಬರ ಕೊಲೆಗೀಡಾಗಿರುವುದನ್ನು ಬಿಜೆಪಿ ಉಗ್ರವಾಗಿ ವಿರೋಧಿಸುತ್ತದೆ. ಕರ್ನಾಟಕವನ್ನು ಡಾನ್ ಗಳು ನಡೆಸುತ್ತಿರುವಂತಹ ಪರಿಸ್ಥಿತಿ ಇದ್ದು, ಸರ್ಕಾರ ಕಾನೂನನ್ನು ಗೂಂಡಾಗಳಿಗೆ ನೀಡಿದೆ ಎಂದರು.
ಲವ್ ಪ್ರಕರಣ, ಕುಟುಂಬದ ಸಮಸ್ಯೆ ಎಂದು ಹೇಳುವ ಕಾಂಗ್ರೆಸ್ ನಾಯಕರಿಗೆ ನಾಚಿಕೆಯಾಗಬೇಕು. ಇದು ಲವ್ ಜಿಹಾದ್ ಎಂದು ಯುವತಿಯ ತಂದೆ, ಕಾಂಗ್ರೆಸ್ ಕಾರ್ಪೊರೇಟರ್ ಹೇಳುತ್ತಿದ್ದಾರೆ. ಕುಟುಂಬದವರು ಕಣ್ಣೀರು ಹರಿಸುವಾಗ ಕೊಲೆಯಾದ ಯುವತಿಯ ಬಗ್ಗೆ ಹೀನಾಯವಾಗಿ ಮಾತಾಡುತ್ತಿದ್ದಾರೆ. ಚುನಾವಣೆಯಲ್ಲಿ ಇದು ಚರ್ಚೆಯಾದರೆ ಕಾಂಗ್ರೆಸ್ ಮುಖಕ್ಕೆ ಮಂಗಳಾರತಿಯಾಗಲಿದೆ ಎಂಬ ಕಾರಣಕ್ಕೆ ಸಿದ್ದರಾಮಯ್ಯನವರೇ ಈ ರೀತಿ ಮಾತಾಡುತ್ತಿದ್ದಾರೆ. ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲದಂತೆ ಸರ್ಕಾರ ನಡೆದುಕೊಳ್ಳುತ್ತಿದೆ ಎಂದರು.
ಲವ್ ಜಿಹಾದ್ ಮಾಡುವವರಿಗೆ ಪಾಸ್ ಪೋರ್ಟ್, ಕೊಲೆ, ಗಲಭೆ ಮಾಡುವವರಿಗೆ ವೀಸಾ ನೀಡಲಾಗಿದೆ. ಬೆಳಗಾವಿಯಲ್ಲಿ ದಲಿತ ಮಹಿಳೆಯನ್ನು ಬೆತ್ತಲೆ ಮಾಡಿದ್ದಕ್ಕೆ ಆ ಪ್ರಕರಣವನ್ನೇ ಮುಚ್ಚಿಹಾಕುವ ಪ್ರಯತ್ನ ನಡೆದಿತ್ತು. ಶಿವಮೊಗ್ಗದಲ್ಲಿ ಕೋಮು ಗಲಭೆ ನಡೆದಾಗ ಪೊಲೀಸರು ಏನೂ ಮಾಡಲಿಲ್ಲ. ಬಾಂಬ್ ಸ್ಪೋಟವನ್ನು ಸಚಿವರೇ ವ್ಯಾಪಾರದ ವ್ಯಾಜ್ಯ ಎಂದರು. ರಾಮೋತ್ಸವದಲ್ಲಿ ಜೈ ಶ್ರೀರಾಮ್ ಎಂದಾಗ ಮುಸ್ಲಿಮರು ಹಲ್ಲೆ ಮಾಡಿದ್ದರು. ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಮುಸ್ಲಿಮರು ಥಳಿಸಿದ್ದಾರೆ. ಗದಗದಲ್ಲಿ ಒಂದೇ ಕುಟುಂಬದ ಕೊಲೆಯಾಗಿದೆ. ಕುಣಿಗಲ್ ನಲ್ಲಿ ಬಿಜೆಪಿ ಬೆಂಬಲಿಗನ ತೋಟಕ್ಕೆ ಬೆಂಕಿ ಹಚ್ಚಲಾಗಿದೆ. ಚಿತ್ರನಟಿಗೆ ಹಲ್ಲೆ ಮಾಡಲಾಗಿದೆ. ಕೋಲಾರದಲ್ಲಿ ಶ್ರೀರಾಮನ ಫ್ಲೆಕ್ಸ್ ಕಿತ್ತುಹಾಕುವ ಕೆಲಸ ನಡೆದಿದೆ. ಇಷ್ಟಾದರೂ ಸಿಎಂ ಸಿದ್ದರಾಮಯ್ಯ ಏನೂ ಮಾಡಿಲ್ಲ. ಓಲೈಕೆ ರಾಜಕಾರಣ ಪರಾಕಾಷ್ಠೆಗೆ ತಲುಪಿದೆ ಎಂದು ದೂರಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


