nammatumakuru

    Subscribe to Updates

    Get the latest creative news from FooBar about art, design and business.

    What's Hot

    SIR ಪ್ರಕ್ರಿಯೆಯಲ್ಲಿ ಭಾಗವಹಿಸಿದ ಸಿಎಂ ಡಿ.ಕೆ. ಶಿವಕುಮಾರ್!

    June 30, 2026

    10ನೇ ತರಗತಿ ವಿದ್ಯಾರ್ಥಿಗೆ ಅಮಾನತು ಶಿಕ್ಷೆ: ಮರುಪ್ರವೇಶಕ್ಕೆ ನಿರಾಕರಣೆ, ನೊಂದು ಶಾಲೆಯಲ್ಲೇ ತಾಯಿ ವಿಷ ಸೇವನೆ..!

    June 30, 2026

    ಚಪ್ಪಲಿ ಎಸೆತ ಪ್ರಕರಣ: ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಶಾಸಕ ಪ್ರದೀಪ್ ಈಶ್ವರ್!

    June 30, 2026
    Facebook Twitter Instagram
    ಟ್ರೆಂಡಿಂಗ್
    • SIR ಪ್ರಕ್ರಿಯೆಯಲ್ಲಿ ಭಾಗವಹಿಸಿದ ಸಿಎಂ ಡಿ.ಕೆ. ಶಿವಕುಮಾರ್!
    • 10ನೇ ತರಗತಿ ವಿದ್ಯಾರ್ಥಿಗೆ ಅಮಾನತು ಶಿಕ್ಷೆ: ಮರುಪ್ರವೇಶಕ್ಕೆ ನಿರಾಕರಣೆ, ನೊಂದು ಶಾಲೆಯಲ್ಲೇ ತಾಯಿ ವಿಷ ಸೇವನೆ..!
    • ಚಪ್ಪಲಿ ಎಸೆತ ಪ್ರಕರಣ: ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಶಾಸಕ ಪ್ರದೀಪ್ ಈಶ್ವರ್!
    • ದಲಿತರಿಂದ ಮಲಗುಂಡಿ ಸ್ವಚ್ಛಗೊಳಿಸಿದ ಕೃತ್ಯ: ಡಿಸಿಎಂ ಪರಮೇಶ್ವರ್ ರಾಜೀನಾಮೆಗೆ ಬಿಜೆಪಿ ಎಸ್ ಸಿ ಮೋರ್ಚಾ ಒತ್ತಾಯ
    • ಸಮಸ್ಯೆಯನ್ನು ಆಲಿಸಲು ಪ್ರತಿನಿತ್ಯ ಪೋತಿ ಖಾತೆ ಅಭಿಯಾನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್
    • ಹೊಸ ಮೊಬೈಲ್ ಆಪ್ ನಿಂದ ಗೊಂದಲ: ಹಳೇ ರಸಗೊಬ್ಬರ ಮಾರಾಟ ವ್ಯವಸ್ಥೆ ಮುಂದುವರಿಸಲು ಕೃಷಿ ಪರಿಕರ ಮಾರಾಟಗಾರರ ಒತ್ತಾಯ
    • ಇಂದಿರಾ ಗಾಂಧಿ ವಸತಿ ಶಾಲೆ ದುರವಸ್ಥೆ: ಅಧಿಕಾರಿಗಳ ನಿರ್ಲಕ್ಷ್ಯ ಕಂಡು ವಿದ್ಯಾರ್ಥಿಗಳು, ಪೋಷಕರು ಕಂಗಾಲು
    • ನಮ್ಮ ತುಮಕೂರು ಫಲಶ್ರುತಿ: ಕಾರ್ಮಿಕರಿಂದ ಶೌಚಗುಂಡಿ ಸ್ವಚ್ಛಗೊಳಿಸಿದ ಪ್ರಕರಣ: ಸಫಾಯಿ ಕರ್ಮಚಾರಿಗಳ ಆಯೋಗ ಸ್ಥಳಕ್ಕೆ ಭೇಟಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪಾವಗಡ: ಹಿಂದೂ– ಮುಸ್ಲಿಮರ ಸೌಹಾರ್ದತೆಗೆ ಸಾಕ್ಷಿಯಾದ ಹಿಂದೂ ಮಹಾಗಣಪತಿ ವಿಸರ್ಜನೆ ಮೆರವಣಿಗೆ
    ಪಾವಗಡ September 17, 2024

    ಪಾವಗಡ: ಹಿಂದೂ– ಮುಸ್ಲಿಮರ ಸೌಹಾರ್ದತೆಗೆ ಸಾಕ್ಷಿಯಾದ ಹಿಂದೂ ಮಹಾಗಣಪತಿ ವಿಸರ್ಜನೆ ಮೆರವಣಿಗೆ

    By adminSeptember 17, 2024No Comments2 Mins Read
    pavagada

    Provided by
    Provided by

    ಪಾವಗಡ: ಹಿಂದೂ ಮಹಾ ಗಣಪತಿ ಯುವಕ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಹಿಂದೂ ಮಹಾ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಮುಸ್ಲಿಂ ಸಮಾಜದ ಅನೇಕ ಮಂದಿ ಯುವಕರಿಂದ ಸುಮಾರು ಎಂಟುನೂರಕ್ಕಿಂತ ಹೆಚ್ಚು ಮಂದಿಗೆ ಕೇಸರಿಬಾತ್‌, ಪಲವ್‌ ಹಾಗೂ ಕುಡಿವ ನೀರಿನ ಪಾಕೇಟ್‌ ವಿತರಿಸಿ ಶುಭಕೋರಿದ ಪ್ರಸಂಗ ಮಂಗಳವಾರ ತಾಲೂಕಿನ ವೈ.ಎನ್‌.ಹೊಸಕೋಟೆ ಗ್ರಾಮದಲ್ಲಿ ನಡೆಯಿತು.

    ತಾಲೂಕಿನ ವೈ.ಎನ್‌.ಹೊಸಕೋಟೆ ಹೋಬಳಿ ಕೇಂದ್ರಸ್ಥಾನವಾಗಿದ್ದು ಇಲ್ಲಿ ಹಿಂದೂಗಳಷ್ಟೇ ಹೆಚ್ಚು ಪ್ರಮಾಣದ ಮುಸ್ಲಿಂ ಬಾಂಧವರು ವಾಸವಾಗಿದ್ದಾರೆ. ವ್ಯಾಪಾರ ಇತರೆ ವಾಣಿಜ್ಯ ವ್ಯವಹಾರಗಳಲ್ಲಿ ತೊಡಗಿ ಜೀವನ ನಡೆಸುತ್ತಿದ್ದು ಮೊದಲಿನಿಂದಲೂ ಇಲ್ಲಿ ಹಿಂದೂ, ಮುಸ್ಲಿಂ ಭಾಂಧವರು ಸೌಹಾರ್ದತೆಯ ಬದುಕು ಕಟ್ಟಿಕೊಂಡಿದ್ದಾರೆ. ಈ ಭಾಗದ ಹಳ್ಳಿಗಳಲ್ಲಿ ಮೊಹರಂ ವೇಳೆ ಹಿಂದೂ ಮುಸ್ಲಿಂ ಸೇರಿ ಶಾಂತಿ ಸೌಹಾರ್ದತೆಯೊಂದಿಗೆ ಸಡಗರ ಸಂಭ್ರಮದಿಂದ ಮೊಹರಂ ಹಬ್ಬ ಆಚರಿಸುತ್ತಿರುವುದು ಸಾಮಾನ್ಯವಾಗಿದ್ದು, ಇದೇ ಹಾದಿಯಾಗಿ ಮಂಗಳವಾರ ಹಿಂದೂ ಮಹಾ ಗಣಪತಿ ವಿಸರ್ಜನೆಯ ವೇಳೆ ವೈ.ಎನ್‌.ಹೊಸಕೋಟೆಯ ಹಳೇ ಸರ್ಕಾರಿ ಆಸ್ಪತ್ರೆಯ ಮಸೀದಿ ಬಳಿ ಮೆರವಣಿಗೆ ತೆರಳುತ್ತಿದ್ದಂತೆ ಅಪಾರ ಸಂಖ್ಯೆಯ ಮುಸ್ಲಿಂ ಯುವಕರು ಒಂದೆಡೆ ಸೇರಿ ಹಿಂದೂ ಮಹಾ ಗಣಪತಿ ವಿಸರ್ಜನೆಯಲ್ಲಿ ಭಾಗವಹಿಸಿದ್ದ ಆನೇಕ ಮಂದಿ ಹಿಂದೂಗಳಿಗೆ ಕೆಸರಿಬಾತ್‌ ಹಾಗೂ ಬಿಸಿಬಿಸಿ ಪಲಾವ್‌,ಕುಡಿವ ನೀರಿನ ಪಾಕೇಟ್‌ಗಳನ್ನು ವಿತರಿಸಿ ಗಣಪತಿ ಹಬ್ಬದ ಶುಭಾಶಯ ಕೋರಿದ್ದಾರೆ.

    ಗಣಪತಿ ಹಬ್ಬದ ಹಿನ್ನಲೆಯಲ್ಲಿ ತಾಲೂಕಿನ ವೈ.ಎನ್‌.ಹೊಸಕೋಟೆ ಹಿಂದೂ ಮಹಾ ಗಣಪತಿ ಯುವಕ ಸಂಘದವರಿಂದ ಪಟ್ಟಣದ ಬಸ್‌ ನಿಲ್ದಾಣದ ಬೃಹತ್‌ ಶೆಲ್ಟರ್‌ ವೊಂದರಲ್ಲಿ ದೊಡ್ಡ ಗಾತ್ರದ ಹಿಂದೂ ಮಹಾ ಗಣಪತಿಯನ್ನು ಪ್ರತಿಷ್ಟಾಪಿಸಲಾಗಿತ್ತು. ಕಳೆದ 10ದಿನಗಳಿಂದ ನಿತ್ಯ ಪೂಜಾ ಕೈಂಕರ್ಯಗಳನ್ನು ಗಣೇಶನಿಗೆ ನೆರೆವೇರಿಸಿದ್ದು ಮಂಗಳವಾರ ವಿಸರ್ಜನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಈ ವೇಳೆ ಮಧ್ಯಾಹ್ನ 3ಗಂಟೆ ಬಳಿಕ ವಿಸರ್ಜನೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದು ಪುರಬೀದಿಯ ಪ್ರಮುಖ ರಸ್ತೆಗಳ ಮೂಲಕ ಶಾಂತಿ ರೀತಿಯಲ್ಲಿ ಸಡಗರ ಸಂಭ್ರಮದಿಂದ ಮೆರವಣಿಗೆ ಕಾರ್ಯಕ್ರಮ ನಡೆಸಿದರು.

    ರಾತ್ರಿ 7ಗಂಟೆಯ ಬಳಿಕ ಮೇಗಳಪಾಳ್ಯಕ್ಕೆ ಹೋಗುವ ರಸ್ತೆ ಪಕ್ಕದಲ್ಲಿರುವ ಕೆರೆಯೊಂದರಲ್ಲಿ ಗಣೇಶನ ವಿಸರ್ಜನಾ ಕಾರ್ಯಕ್ರಮ ಯಶಸ್ವಿಯಾಗಿ ನೆರೆವೇರಿಸಲಾಯಿತು.


    Provided by
    Provided by

    ಇಲ್ಲಿನ ಹಿಂದೂ ಮಹಾ ಗಣಪತಿ ಸಂಘದ ಎಲ್ಲಾ ಯುವಕರು ಭಾಗವಹಿಸಿದ್ದು,ಇದೇ ವೇಳೆ ಯಾವುದೇ ಆಹಿತಕರ ಘಟನೆ ನಡೆಯದಂತೆ ಬಿಗಿಪೊಲೀಸ್‌ ಬಂದೋಬಸ್ತು ಕೈಗೊಂಡಿದ್ದು ತುಮಕೂರು ಜಿಲ್ಲಾ ಅಡಿಷನಲ್‌ ಎಸ್‌ಪಿ ಕಾದರ್‌,ಮಧುಗಿರಿ ಡಿವೈಎಸ್‌ ಪಿ ರಾಮಚಂದ್ರಪ್ಪ ಹಾಗೂ ನಗರ ಸಿಪಿಐ ಸುರೇಶ್‌, ಪಿಎಸ್ ಐ ಮಾಳಪ್ಪನಾಲ್ವಡಿ ಸೇರಿದಂತೆ 80ಕ್ಕೂ ಹೆಚ್ಚು ಮಂದಿ ಪೊಲೀಸರು ಬಂದೋಬಸ್ತಿನಲ್ಲಿ ಇದ್ದರು.

    ವರದಿ: ನಂದೀಶ್ ನಾಯ್ಕ, ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಇಂದಿರಾ ಗಾಂಧಿ ವಸತಿ ಶಾಲೆ ದುರವಸ್ಥೆ: ಅಧಿಕಾರಿಗಳ ನಿರ್ಲಕ್ಷ್ಯ ಕಂಡು ವಿದ್ಯಾರ್ಥಿಗಳು, ಪೋಷಕರು ಕಂಗಾಲು

    June 30, 2026

    ಪಾವಗಡ: ನುಡಿದಂತೆ ನಡೆದ ಸ್ವತಂತ್ರ ಅಭ್ಯರ್ಥಿ ಚೇತನ್ ಬಾಬು; ಬಸ್ ನಿಲ್ದಾಣಕ್ಕೆ ಆಸನಗಳ ಕೊಡುಗೆ!

    June 28, 2026

    ವೈ.ಎನ್.ಹೊಸಕೋಟೆಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ ಯಶಸ್ವಿ: ಬಸ್ ನಿಲ್ದಾಣ, ಮನೆ–ಮನೆಗೆ ತೆರಳಿ ಮಕ್ಕಳಿಗೆ ಹನಿ ಹಾಕಿದ ಆರೋಗ್ಯ ತಂಡ

    June 28, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    SIR ಪ್ರಕ್ರಿಯೆಯಲ್ಲಿ ಭಾಗವಹಿಸಿದ ಸಿಎಂ ಡಿ.ಕೆ. ಶಿವಕುಮಾರ್!

    June 30, 2026

    ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ (ಜೂನ್ 30) ಚುನಾವಣಾ ಆಯೋಗದ ವತಿಯಿಂದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಅಂಗವಾಗಿ…

    10ನೇ ತರಗತಿ ವಿದ್ಯಾರ್ಥಿಗೆ ಅಮಾನತು ಶಿಕ್ಷೆ: ಮರುಪ್ರವೇಶಕ್ಕೆ ನಿರಾಕರಣೆ, ನೊಂದು ಶಾಲೆಯಲ್ಲೇ ತಾಯಿ ವಿಷ ಸೇವನೆ..!

    June 30, 2026

    ಚಪ್ಪಲಿ ಎಸೆತ ಪ್ರಕರಣ: ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಶಾಸಕ ಪ್ರದೀಪ್ ಈಶ್ವರ್!

    June 30, 2026

    ದಲಿತರಿಂದ ಮಲಗುಂಡಿ ಸ್ವಚ್ಛಗೊಳಿಸಿದ ಕೃತ್ಯ: ಡಿಸಿಎಂ ಪರಮೇಶ್ವರ್ ರಾಜೀನಾಮೆಗೆ ಬಿಜೆಪಿ ಎಸ್ ಸಿ ಮೋರ್ಚಾ ಒತ್ತಾಯ

    June 30, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.