nammatumakuru

    Subscribe to Updates

    Get the latest creative news from FooBar about art, design and business.

    What's Hot

    ನೇಪಾಳಕ್ಕೆ ಪ್ರವಾಸ ಹೋಗಿದ್ದ ಶಿವಮೊಗ್ಗದ 6  ಮಂದಿ ಸುರಕ್ಷಿತ; ಪ್ರವಾಸ ಮೊಟಕುಗೊಳಿಸಿ ಭಾರತಕ್ಕೆ ವಾಪಸ್

    August 28, 2026

    ವಸತಿ ರಹಿತರಿಗೆ ಗುಡ್‌ ನ್ಯೂಸ್‌: ಪ್ರತಿ ಜಿಲ್ಲೆಯಲ್ಲೂ 50,000 ನಿವೇಶನ; ಡಿಸೆಂಬರ್ ಒಳಗೆ 5 ಲಕ್ಷ ಪ್ಲಾಟ್‌ ಗಳ ವಿತರಣೆಗೆ ಸರ್ಕಾರದ ಸಿದ್ಧತೆ

    August 28, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026
    Facebook Twitter Instagram
    ಟ್ರೆಂಡಿಂಗ್
    • ನೇಪಾಳಕ್ಕೆ ಪ್ರವಾಸ ಹೋಗಿದ್ದ ಶಿವಮೊಗ್ಗದ 6  ಮಂದಿ ಸುರಕ್ಷಿತ; ಪ್ರವಾಸ ಮೊಟಕುಗೊಳಿಸಿ ಭಾರತಕ್ಕೆ ವಾಪಸ್
    • ವಸತಿ ರಹಿತರಿಗೆ ಗುಡ್‌ ನ್ಯೂಸ್‌: ಪ್ರತಿ ಜಿಲ್ಲೆಯಲ್ಲೂ 50,000 ನಿವೇಶನ; ಡಿಸೆಂಬರ್ ಒಳಗೆ 5 ಲಕ್ಷ ಪ್ಲಾಟ್‌ ಗಳ ವಿತರಣೆಗೆ ಸರ್ಕಾರದ ಸಿದ್ಧತೆ
    • ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ
    • 175 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿ: ಆರ್. ಅಶೋಕ್ ಆಗ್ರಹ
    • ತಂದೆ—ತಾಯಿ, ಅಕ್ಕ—ಭಾವನ ಸ್ಮರಣಾರ್ಥ ಸಮುದಾಯ ಆರೋಗ್ಯ ಕೇಂದ್ರಕ್ಕೆ ನೂತನ ವಾರ್ಡ್ ನಿರ್ಮಿಸಿದ ಉದ್ಯಮಿ
    • ಬರಪೀಡಿತ ಪ್ರದೇಶ ಘೋಷಣೆ: ಶಾಸಕ ಡಾ. ಶೈಲೇಂದ್ರ ಬೆಲ್ದಾಳೆಗೆ ಚೇತನ್ ಸೊರಳ್ಳಿ ಅಭಿನಂದನೆ
    • ಹೇಮಾವತಿ ಜಲಾಶಯ ಯೋಜನೆಯ ನೀರಾವರಿ ಸಲಹಾ ಸಮಿತಿ ಸಭೆ: ರೈತರ ಹಿತ ಹಾಗೂ ನೀರಿನ ಸಮರ್ಪಕ ನಿರ್ವಹಣೆಗೆ ಒತ್ತು
    • ಹಳ್ಳಿಮೈಸೂರು ಆಸ್ಪತ್ರೆ, ಬಸ್ ನಿಲ್ದಾಣಕ್ಕೆ ಸಂಸದ ಶ್ರೇಯಸ್ ಎಂ. ಪಟೇಲ್ ದಿಢೀರ್ ಭೇಟಿ: ಸಮಸ್ಯೆಗಳ ಶೀಘ್ರ ಪರಿಹಾರಕ್ಕೆ ಸ್ಥಳದಲ್ಲೇ ಖಡಕ್ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರಿನಲ್ಲಿ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣಿಗೆಗೆ ಚಾಲನೆ:  ಇಲ್ಲಿದೆ ಸಂಪೂರ್ಣ ವರದಿ
    ರಾಜ್ಯ ಸುದ್ದಿ September 21, 2024

    ತುಮಕೂರಿನಲ್ಲಿ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣಿಗೆಗೆ ಚಾಲನೆ:  ಇಲ್ಲಿದೆ ಸಂಪೂರ್ಣ ವರದಿ

    By adminSeptember 21, 2024No Comments2 Mins Read
    tumakuru

    ತುಮಕೂರು: ನಗರದಲ್ಲಿ ನಡೆಯುತ್ತಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮಹೋತ್ಸವವನ್ನು ಕೇಂದ್ರ ಜಲ ಶಕ್ತಿ ಖಾತೆ ರಾಜ್ಯ ಸಚಿವ ವಿ ಸೋಮಣ್ಣ ಇಂದು ಉದ್ಘಾಟಿಸಿದರು.

    ನಗರದ ಟೌನ್ ಹಾಲ್ ವೃತ್ತದಲ್ಲಿ ಆರಂಭವಾದ ಅಂತಹ ಮಹೋತ್ಸವವನ್ನು ಸಚಿವ ವಿ.ಸೋಮಣ್ಣ ಡಮರುಗ ಬಾರಿಸುವ ಮೂಲಕ ಉದ್ಘಾಟಿಸಿದರು.

    ತುಮಕೂರಿನಲ್ಲಿ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣಿಗೆಗೆ ಚಾಲನೆ ನೀಡಲಾಗಿದ್ದು  ಬಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್ ವತಿಯಿಂದ ಪ್ರತಿಷ್ಟಾಪಿಸಲ್ಪಟ್ಟಿರುವ ಗಣಪತಿಯಾಗಿದೆ.

    ತುಮಕೂರಿನ ಬಿಜಿಎಸ್ ವೃತ್ತದ ನಾಗರಕಟ್ಟೆ ಗಣಪತಿ ದೇವಸ್ಥಾನದಲ್ಲಿ ಪ್ರತಿಷ್ಟಾಪನೆ ಮಾಡಿರುವ ಹಿಂದೂ ಮಹಾಗಣಪತಿಯಾಗಿದೆ. ಬಾಂಬೆ ಡೋಲ್, ಡಿಜೆ ಸೇರಿದಂತೆ ವಿವಿಧ ಕಲಾತಂಡಗಳಿಂದ ಮೆರವಣಿಗೆಗೆ ಮೆರಗು ನೀಡಿವೆ.

    ಮೆರವಣಿಗೆಯಲ್ಲಿ ಶ್ರೀರಾಮ, ಆಂಜನೇಯ, ಭಾರತ ಮಾತೆ, ನಂದಿ ಸೇರಿದಂತೆ ಹಲವು ಕಟೌಟ್ ಗಳನ್ನು ಹಾಕಲಾಗಿದೆ. ಸಾವಿರಾರು ಸಂಖ್ಯೆಯಲ್ಲಿ ಜನರು ಮೆರವಣಿಗೆಯಲ್ಲಿ ಭಾಗಿಯಾಗಿದ್ದಾರೆ.

    ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಿ ರಾತ್ರಿ ‌10 ಗಂಟೆವರೆಗೂ ನಡೆಯಲಿರುವ ಮೆರವಣಿಗೆಯುದ್ಧಕ್ಕೂ ತುಮಕೂರು ಎಸ್.ಪಿ.ಅಶೋಕ್ ವೆಂಕಟ್ ನೇತೃತ್ವದಲ್ಲಿ ಭಾರೀ ಪೊಲೀಸ್ ಭದ್ರತೆ ಒದಗಿಸಲಾಗಿದೆ.

    ಅಹಿತಕರ ಘಟನೆ ನಡೆಯದಂತೆ ಪೊಲೀಸರಿಂದ ಕಟ್ಟೆಚ್ಚರ ವಹಿಸಿದ್ದು ಸಾವಿರಕ್ಕೂ ಹೆಚ್ಚು ಪೊಲೀಸರಿಂದ ಬಿಗಿ ಬಂದೋಬಸ್ತ್ ಹಾಕಲಾಗಿದೆ. ಆಯಕಟ್ಟಿನ ಜಾಗಗಳಲ್ಲಿ ಸಿಸಿಟಿವಿ ಅಳವಡಿಕೆ ಮಾಡಲಾಗಿದ್ದು ಸೂಕ್ಷ್ಮ ಹಾಗೂ ಅತಿಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಪೊಲೀಸರ ನಿಯೋಜನೆ ಮಾಡಲಾಗಿದೆ.

    ಭಾವೈಕ್ಯತೆ ಮೆರೆದ ಮುಸ್ಲಿಂ ಬಾಂಧವರು:  

    ದರ್ಗಾ ಎದುರಿನಿಂದ ಸಾಗುತ್ತಿದ್ದ ಗಣೇಶ ಮೆರವಣಿಗೆ ವೇಳೆ ಗಣೇಶನಿಗೆ ಹಾರ ಹಾಕಿ, ವಿಶೇಷ ಪೂಜೆಯನ್ನು ಮುಸ್ಲಿಂ ಬಾಂಧವರು ಸಲ್ಲಿಸಿದರು. ನಗರದ ಜೋಡಿ ಮಜಾರ್ ಎದುರು ಘಟನೆ ಹಜರತ್ ಹುಸೇನ್ ಭಾಷಾ ಖಾದ್ರಿ ದರ್ಗಾ ಎದುರು ವಿಶೇಷ ಪೂಜೆ ಮಾಡಲಾಯಿತು.

    ತುಮಕೂರು ವಿವಿ ವಿದ್ಯಾರ್ಥಿಗಳಿಗೆ ನಿರ್ಬಂಧ:

    ಇಂದು ತುಮಕೂರು ನಗರದಲ್ಲಿ ಹಿಂದೂ ಮಹಾಗಣಪತಿ ವಿಸರ್ಜನಾ ಮಹೋತ್ಸವ ಆಯೋಜಿಸಲಾಗಿದೆ.  ಈ ಕಾರ್ಯಕ್ರಮದಲ್ಲಿ ಕೋಮು ಪ್ರಚೋದನೆಯಿಂದ ಗಲಾಟೆ ನಡೆಯುವ ಸಾಧ್ಯತೆಯಿದೆ.  ಹೀಗಾಗಿ  ಶಾಲಾ ಕಾಲೇಜಿನ ಮಕ್ಕಳು ಯಾರ ಒತ್ತಡಕ್ಕೆ ಒಳಗಾಗಿ ಮೆರಣಿಗೆಯಲ್ಲಿ ಪಾಲ್ಗೊಳ್ಳುವಂತಿಲ್ಲ.‌  ಈ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ವಿವಿಯ ಎಚ್ ಒಡಿಗಳಿಗೆ ಆದೇಶ ಮಾಡಲಾಗಿದೆ.

    ಮುನ್ನೆಚ್ಚರಿಕೆ ಕ್ರಮವಾಗಿ ಆದೇಶ ಹೊರಡಿಸಿದ ತುಮಕೂರು ವಿವಿ ಕುಲಸಚಿವರು.‌ ತುಮಕೂರು ವಿವಿಗೆ ಪತ್ರ ಬರೆದಿರುವ ಪೊಲೀಸರು.ತುಮಕೂರು ನಗರ ಠಾಣೆ ಪೊಲೀಸರಿಂದ ಕುಲ ಸಚಿವರಿಗೆ ಪತ್ರ ಬರೆಯಲಾಗಿದೆ.

    ಇಂದು ನಡೆಯುವ ಗಣೇಶೋತ್ಸವ ಮೆರವಣಿಗೆಯಲ್ಲಿ ಗಲಾಟೆ ನಡೆಯುವ  ಮಾಹಿತಿಯಿದೆ. ಕೋಮು ಪ್ರಚೋದನಕಾರಿ ಘಟನೆಗಳು ನಡೆಯುವ ಸಂಭವಿದೆ.  ಮೆರವಣಿಗೆಯಲ್ಲಿ ನಾಗರೀಕರು ಶಾಲಾ ಕಾಲೇಜು ಮಕ್ಕಳು ಭಾಗವಹಿಸುವ ಸಾಧ್ಯತೆಯಿದೆ. ಕೋಮು ಭಾವನೆ ಕೆರಳಿಸುವ ಕಿಡಿಗೇಡಿಗಳು ಮೆರವಣಿಗೆಯಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ. ಜೊತೆಗೆ ಶಾಲಾ ಕಾಲೇಜು ಮಕ್ಕಳನ್ನು ಒತ್ತಾಯ ಪೂರ್ವಕವಾಗಿ ಮೆರವಣಿಗೆಗೆ ಕರೆತರುವ ಸಾಧ್ಯತೆಯಿದೆ. ಇದಕ್ಕೆ ಆಸ್ಪದ ಕೊಡದಂತೆ ಎಚ್ಚರಿಕೆವಹಿಸುವಂತೆ ವಿವಿ ಕುಲಸಚಿವರಿಗೆ ಪತ್ರ ಬರೆಯಲಾಗಿದೆ .  ಪೊಲೀಸರ ಪತ್ರದ ಆಧಾರದ ಮೇಲೆ ಕುಲಸಚಿವರು ಆದೇಶ ಹೊರಡಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ವಸತಿ ರಹಿತರಿಗೆ ಗುಡ್‌ ನ್ಯೂಸ್‌: ಪ್ರತಿ ಜಿಲ್ಲೆಯಲ್ಲೂ 50,000 ನಿವೇಶನ; ಡಿಸೆಂಬರ್ ಒಳಗೆ 5 ಲಕ್ಷ ಪ್ಲಾಟ್‌ ಗಳ ವಿತರಣೆಗೆ ಸರ್ಕಾರದ ಸಿದ್ಧತೆ

    August 28, 2026

    175 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿ: ಆರ್. ಅಶೋಕ್ ಆಗ್ರಹ

    August 28, 2026

    ನೇಪಾಳ ಪ್ರವಾಹ: ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಮುಂದು, ಮಾಹಿತಿ ಸಂಗ್ರಹ ಆರಂಭ

    August 27, 2026

    Comments are closed.

    Our Picks

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ನೇಪಾಳಕ್ಕೆ ಪ್ರವಾಸ ಹೋಗಿದ್ದ ಶಿವಮೊಗ್ಗದ 6  ಮಂದಿ ಸುರಕ್ಷಿತ; ಪ್ರವಾಸ ಮೊಟಕುಗೊಳಿಸಿ ಭಾರತಕ್ಕೆ ವಾಪಸ್

    August 28, 2026

    ಶಿವಮೊಗ್ಗ: ನೇಪಾಳದಲ್ಲಿ ಉಂಟಾಗಿರುವ ಪ್ರವಾಹ ಹಾಗೂ ಸಂಕಷ್ಟದ ಪರಿಸ್ಥಿತಿಯ ನಡುವೆಯೂ, ಪ್ರವಾಸಕ್ಕೆ ತೆರಳಿದ್ದ ಶಿವಮೊಗ್ಗ ಜಿಲ್ಲೆಯ 6 ಜನ ಕನ್ನಡಿಗರು…

    ವಸತಿ ರಹಿತರಿಗೆ ಗುಡ್‌ ನ್ಯೂಸ್‌: ಪ್ರತಿ ಜಿಲ್ಲೆಯಲ್ಲೂ 50,000 ನಿವೇಶನ; ಡಿಸೆಂಬರ್ ಒಳಗೆ 5 ಲಕ್ಷ ಪ್ಲಾಟ್‌ ಗಳ ವಿತರಣೆಗೆ ಸರ್ಕಾರದ ಸಿದ್ಧತೆ

    August 28, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    175 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿ: ಆರ್. ಅಶೋಕ್ ಆಗ್ರಹ

    August 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.