nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹಿಂದೂ ಕೇವಲ ಧರ್ಮವಲ್ಲ, ಜೀವನ ದರ್ಶನ: ಸಿದ್ಧರಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ

    February 10, 2026

    ರೈತರು ತಮ್ಮ ಜಮೀನು ಮಾರಾಟ ಮಾಡಬೇಡಿ: ಶಾಸಕ ಬಿ.ಸುರೇಶ್ ಗೌಡ ಕಿವಿಮಾತು

    February 10, 2026

    ಜಾತಿ ಮುಖ್ಯವಲ್ಲ ಸಮಾಜ ಸೇವೆ ಮುಖ್ಯ: ಶಾಸಕ ಎಂ.ಟಿ.ಕೃಷ್ಣಪ್ಪ

    February 10, 2026
    Facebook Twitter Instagram
    ಟ್ರೆಂಡಿಂಗ್
    • ಹಿಂದೂ ಕೇವಲ ಧರ್ಮವಲ್ಲ, ಜೀವನ ದರ್ಶನ: ಸಿದ್ಧರಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ
    • ರೈತರು ತಮ್ಮ ಜಮೀನು ಮಾರಾಟ ಮಾಡಬೇಡಿ: ಶಾಸಕ ಬಿ.ಸುರೇಶ್ ಗೌಡ ಕಿವಿಮಾತು
    • ಜಾತಿ ಮುಖ್ಯವಲ್ಲ ಸಮಾಜ ಸೇವೆ ಮುಖ್ಯ: ಶಾಸಕ ಎಂ.ಟಿ.ಕೃಷ್ಣಪ್ಪ
    • ನವಜಾತ ಶಿಶುಗಳ ಆರೈಕೆ ಬಲಪಡಿಸಲು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸ್ಸು
    • ಪಕ್ಷ ನಿಷ್ಠೆ ಇಲ್ಲದವರನ್ನು  ಜೊತೆಯಲ್ಲಿಟ್ಟುಕೊಳ್ಳಬಾರದು ಎಚ್.ಡಿ.ಕುಮಾರಸ್ವಾಮಿ ಖಡಕ್ ಮಾತು
    • ವೇಶ್ಯಾವಾಟಿಕೆಗೆ ಅತ್ತೆ–ಮಾವನ ಒತ್ತಾಯ: ಮನನೊಂದ ವಿವಾಹಿತೆ ಆತ್ಮಹತ್ಯೆ
    • ಕೆನಡಾದಲ್ಲಿ ಬೆಂಗಳೂರು ಮೂಲದ ಯುವಕ ಗುಂಡೇಟಿಗೆ ಬಲಿ
    • ತುಮಕೂರು: ಬಾಣಾವರ ಗೇಟ್ ಬಳಿ ಭೀಕರ ಸರಣಿ ಅಪಘಾತ; ಮಾಜಿ ತಾಪಂ ಸದಸ್ಯ ಸೇರಿ ಇಬ್ಬರು ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹಿಂದೂ ಕೇವಲ ಧರ್ಮವಲ್ಲ, ಜೀವನ ದರ್ಶನ: ಸಿದ್ಧರಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ
    ಕೊರಟಗೆರೆ February 10, 2026

    ಹಿಂದೂ ಕೇವಲ ಧರ್ಮವಲ್ಲ, ಜೀವನ ದರ್ಶನ: ಸಿದ್ಧರಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ

    By adminFebruary 10, 2026No Comments2 Mins Read
    koratagere

    ಕೊರಟಗೆರೆ: ಹಿಂದೂ ಎನ್ನುವುದು ಕೇವಲ ಒಂದು ಧರ್ಮವಲ್ಲ; ಅದು ಜೀವನ ದರ್ಶನ, ಬದುಕುವ ಸಂಸ್ಕೃತಿ ಎಂದು ಸಿದ್ಧರಬೆಟ್ಟದ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

    ಪಟ್ಟಣದಲ್ಲಿ ಭಾನುವಾರ ಆಯೋಜಿಸಲಾಗಿದ್ದ ಹಿಂದೂ ಸಮಾಜೋತ್ಸವದ ಭವ್ಯ ಮೆರವಣಿಗೆಯನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.


    Provided by
    Provided by

    ಮಾನವೀಯತೆ, ಸಹಜತೆ, ಸಹಬಾಳ್ವೆ, ಧರ್ಮಪಾಲನೆ ಈ ಎಲ್ಲವೂ ಹಿಂದೂ ಜೀವನ ಪದ್ಧತಿಯ ಮೂಲಭೂತ ಮೌಲ್ಯಗಳು. ಧರ್ಮವನ್ನು ನಾವು ರಕ್ಷಿಸಿದರೆ, ಧರ್ಮವು ನಮ್ಮನ್ನು ರಕ್ಷಿಸುತ್ತದೆ ಎಂಬ ಸನಾತನ ಸತ್ಯವನ್ನು ಹಿಂದೂ ಧರ್ಮ ಸಾರುತ್ತದೆ. ಇಂದಿನ ಕಾಲಘಟ್ಟದಲ್ಲಿ ಹಿಂದೂ ಸಮಾಜವು ಒಗ್ಗಟ್ಟಾಗಿ ನಿಲ್ಲುವ ಅಗತ್ಯ ಬಹಳವಾಗಿದೆ. ಜಾತಿ ಪಂಥಗಳ ಭೇದ ಮರೆತು, ಹಿಂದೂಗಳೆಲ್ಲೂ ಒಂದೇ ಕುಟುಂಬ ಎಂಬ ಭಾವನೆಯೊಂದಿಗೆ ಧರ್ಮರಕ್ಷಣೆಗಾಗಿ ಪಣತೊಟ್ಟು ನಿಲ್ಲಬೇಕು. ಧರ್ಮರಕ್ಷಣೆ ನಮ್ಮ ಉಸಿರಾಗಬೇಕು, ನಮ್ಮ ದೇಹದ ಭಾಗವಾಗಬೇಕು ಎಂದು ಅವರು ಹೇಳಿದರು.

    ಹಿರಿಯ ಪ್ರಾಧ್ಯಾಪಕ ಕೊಟ್ಟೇಶ್ ಮಾತನಾಡಿ, ಹಿಂದೂ ಧರ್ಮವು ಸಾವಿರಾರು ವರ್ಷಗಳಿಂದ ಮಾನವ ಬದುಕಿಗೆ ದಿಕ್ಕು ದೆಶೆ ತೋರಿದೆ. ಸಂಸ್ಕೃತಿ, ಸಹಿಷ್ಣುತೆ, ಸಮನ್ವಯ, ಸರ್ವಧರ್ಮ ಸಮಭಾವನೆ ಹಿಂದೂ ಧರ್ಮದ ಆತ್ಮ. ಇಂದಿನ ಯುವ ಪೀಳಿಗೆ ನಮ್ಮ ಸಂಸ್ಕೃತಿ, ಪರಂಪರೆ, ಧರ್ಮದ ತತ್ವಗಳನ್ನು ಅರಿತು ಅವನ್ನು ಬದುಕಿನಲ್ಲಿ ಅಳವಡಿಸಿಕೊಂಡಾಗ ಮಾತ್ರ ಸಮಾಜ ಸದೃಢವಾಗುತ್ತದೆ. ಮುಕ್ಕೋಟಿ ದೇವರುಗಳನ್ನು ಪೂಜಿಸಿದರೂ ಇಲ್ಲಿ ಯಾವುದೇ ನಿರ್ಬಂಧ ಇಲ್ಲ, ಇದು ಹಿಂದೂ ಧರ್ಮಕ್ಕೆ ಇರುವ ಶಕ್ತಿ. ಸತ್ಯ ಹೇಳುವವನು ಹಿಂದೂ ಎಂದರು.

    ಧ್ವಜಗಳು, ಘೋಷಣೆಗಳು, ಭಕ್ತಿಗೀತೆಗಳೊಂದಿಗೆ ನಡೆದ ಮೆರವಣಿಗೆ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಾಗಿದ ದೃಶ್ಯ ಹಿಂದೂ ಸಮಾಜದ ಒಗ್ಗಟ್ಟು, ಸಂಸ್ಕೃತಿ ಹಾಗೂ ಆತ್ಮ ಗೌರವವನ್ನು ಪ್ರತಿಬಿಂಬಿಸುತ್ತಿತ್ತು. ಕಾರ್ಯಕ್ರಮವು ಸಮಾಜದಲ್ಲಿ ಧರ್ಮಬುದ್ಧಿ ಸಾಂಸ್ಕೃತಿಕ ಅರಿವು ಹಾಗೂ ಏಕತೆಯ ಸಂದೇಶವನ್ನು ಸಾರುವ ಮಹತ್ವದ ವೇದಿಕೆಯಾಗಿ ಮೂಡಿಬಂದಿತು.

    ಹಿಂದೂ ಸಮಾಜೋತ್ಸ ವದ ಅಧ್ಯಕ್ಷ ಡಾ.ಆರ್.ಮಲ್ಲಿಕಾರ್ಜುನ್, ಆರ್ಎಸ್ಎಸ್ ಸಂಘ ತಾಲೂಕು ಸಂಚಾಲಕ ಉಮೇಶ್, ಬಿಜೆಪಿ ತಾಲೂಕು ಅಧ್ಯಕ್ಷ ರುದ್ರೇಶ್, ಮಾಜಿ ಅಧ್ಯಕ್ಷರಾದ ಎಸ್. ಪವನ್ ಕುಮಾರ್, ದರ್ಶನ್, ಕನ್ನಿಕಾ ವಿದ್ಯಾಪೀಠದ ಅಧ್ಯಕ್ಷ ಎಸ್.ಸುಧೀರ್, ವಾಸವಿ ಮಾತೃ ಮಂಡಳಿಯ ಅಧ್ಯಕ್ಷೆ ಸುಧಾಮಣಿ, ಜಗಜ್ಯೋತಿ ಬಸವೇಶ್ವರ ದೇವಾಲಯ ಸಮಿತಿ ಕಾರ್ಯದರ್ಶಿ ಜಗದೀಶ್, ಅಖಿಲ ಭಾರತ ವೀರಶೈವ ಮಹಾಸಭಾ ಮಹಿಳಾ ಜಿಲ್ಲಾ ಅಧ್ಯಕ್ಷೆ ಮಮತಾ ದಿವಾಕರ್, ಪಟ್ಟಣ ಪಂಚಾಯತ್ ಸದಸ್ಯ ಪ್ರದೀಪ್ ಕುಮಾರ್, ಮುಖಂಡರಾದ ಎಂ.ಜಿ.ಭದ್ರಿ, ಪ್ರಸಾದ್, ಕೃಷ್ಣಮೂರ್ತಿ, ನಂಜುಂಡ ಶೆಟ್ಟಿ, ಸಿ.ಎಸ್. ಹನುಮಂತರಾಯ, ವಿಜಯಕುಮಾರ್, ರವಿಕುಮಾರ್, ಚೆನ್ನನಂಜಯ್ಯ, ವಿ. ಮಲ್ಲೇಶಯ್ಯ ಸೇರಿದಂತೆ ಅನೇಕ ಗಣ್ಯರು ಹಿಂದೂ ಸಮಾಜೋತ್ಸವದಲ್ಲಿ ಭಾಗವಹಿಸಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಸಂಸ್ಕೃತಿಯನ್ನು ಗೌರವಿಸುವ ಧಾರ್ಮಿಕ ಹಬ್ಬಗಳು ಹೆಚ್ಚು ನಡೆಯಬೇಕು: ಪಿ.ಎನ್‌.ಕೃಷ್ಣಮೂರ್ತಿ

    February 6, 2026

    ಕೊರಟಗೆರೆ ಜಿ.ಪಂ. 4, ತಾ.ಪಂ. 15 ಕ್ಷೇತ್ರ: ಕ್ಷೇತ್ರಗಳ ಪುನರ್ ವಿಂಗಡಣೆ; ಹೊಸ ಪಟ್ಟಿ ಪ್ರಕಟ

    February 6, 2026

    ಪ್ರತಿಯೊಂದು ಗ್ರಾಮದಲ್ಲೂ ನಾಗರಕಟ್ಟೆ; ಈ ಪರಂಪರೆಯ ಹಿಂದೆ ಅಡಗಿದೆ ವಿಜ್ಞಾನ: ಡಾ.ಹನುಮಂತನಾಥ ಸ್ವಾಮೀಜಿ

    February 5, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಹಿಂದೂ ಕೇವಲ ಧರ್ಮವಲ್ಲ, ಜೀವನ ದರ್ಶನ: ಸಿದ್ಧರಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ

    February 10, 2026

    ಕೊರಟಗೆರೆ: ಹಿಂದೂ ಎನ್ನುವುದು ಕೇವಲ ಒಂದು ಧರ್ಮವಲ್ಲ; ಅದು ಜೀವನ ದರ್ಶನ, ಬದುಕುವ ಸಂಸ್ಕೃತಿ ಎಂದು ಸಿದ್ಧರಬೆಟ್ಟದ ವೀರಭದ್ರ ಶಿವಾಚಾರ್ಯ…

    ರೈತರು ತಮ್ಮ ಜಮೀನು ಮಾರಾಟ ಮಾಡಬೇಡಿ: ಶಾಸಕ ಬಿ.ಸುರೇಶ್ ಗೌಡ ಕಿವಿಮಾತು

    February 10, 2026

    ಜಾತಿ ಮುಖ್ಯವಲ್ಲ ಸಮಾಜ ಸೇವೆ ಮುಖ್ಯ: ಶಾಸಕ ಎಂ.ಟಿ.ಕೃಷ್ಣಪ್ಪ

    February 10, 2026

    ನವಜಾತ ಶಿಶುಗಳ ಆರೈಕೆ ಬಲಪಡಿಸಲು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸ್ಸು

    February 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.