ಹಿಂದೂ ಧರ್ಮ ಇಸ್ಲಾಂಗಿಂತ ಹಳೆಯದು, ಮೊದಲು ಮುಸ್ಲಿಮರು ಹಿಂದೂಗಳಾಗಿದ್ದರು ಎಂಬ ಹೇಳಿಕೆಯನ್ನು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಗುಲಾಂ ನಬಿ ಆಜಾದ್ ಹೇಳಿದ್ದಾರೆ. ಇಸ್ಲಾಂ ಹುಟ್ಟಿದ್ದು 1500 ವರ್ಷಗಳ ಹಿಂದೆ, ಭಾರತದ ಯಾರೂ ಹೊರಗಿನವರಲ್ಲ, ನಾವೆಲ್ಲರೂ ಈ ದೇಶಕ್ಕೆ ಸೇರಿದವರು, ಭಾರತದ ಮುಸ್ಲಿಮರು ಮೂಲತಃ ಹಿಂದೂಗಳು, ನಂತರ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡರು ಎಂದಿದ್ದಾರೆ.
600 ವರ್ಷಗಳ ಹಿಂದೆ ಕಾಶ್ಮೀರದಲ್ಲಿ ಕಾಶ್ಮೀರಿ ಪಂಡಿತರು ಮಾತ್ರ ಇದ್ದರು ಎಂದು ಹೇಳುತ್ತಾರೆ, ನಂತರ ಜನರು ಮತಾಂತರಗೊಂಡು ಮುಸ್ಲಿಮರಾದರು. ಜನರು ಸಹೋದರತೆ, ಶಾಂತಿ, ಐಕ್ಯತೆಯನ್ನು ಕಾಪಾಡುವಂತೆ ಮನವಿ ಮಾಡಿದ ಆಜಾದ್, ರಾಜಕೀಯದೊಂದಿಗೆ ಧರ್ಮವನ್ನು ಬೆರೆಸಬಾರದು, ಜನರು ಧರ್ಮದ ಹೆಸರಿನಲ್ಲಿ ಮತ ಹಾಕಬಾರದು ಎಂದು ಹೇಳಿದರು.
ಭಾರತೀಯ ಮುಸ್ಲಿಮರ ಬಗ್ಗೆ ಮಾತನಾಡಿದ ಆಜಾದ್, ಹಿಂದೂಗಳಂತೆಯೇ ಮುಸ್ಲಿಮರು ಕೂಡ ಈ ನೆಲದೊಳಗೆ ಹೋಗುತ್ತಾರೆ, ಅವರ ದೇಹ ಹಾಗೂ ಎಲುಬುಗಳು ಕೂಡ ಭಾರತ ಮಾತೆಯ ಭಾಗವಾಗುತ್ತದೆ, ಹಾಗಿದ್ದಾಗ ಹಿಂದೂ-ಮುಸ್ಲಿಂ ಎನ್ನುವ ಭಾವನೆ ಏಕೆ ಎಂದು ಪ್ರಶ್ನಿಸಿದರು.
ಗುಲಾಂ ನಬಿ ಆಜಾದ್ ಕಳೆದ ವರ್ಷ ಕಾಂಗ್ರೆಸ್ ತೊರೆದು ತಮ್ಮದೇ ಆದ ಹೊಸ ಪಕ್ಷವನ್ನು ಕಟ್ಟಿದ್ದರು. ಇದು ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಹೊಡೆತ ಎಂದೇ ಹೇಳಬಹುದು. ಗುಜರಾತ್ ಮತ್ತು ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಗೂ ಮುನ್ನ ರಾಜೀನಾಮೆ ನೀಡಿದ್ದರು. ಸೆ.7 ರಿಂದ ಕಾಂಗ್ರೆಸ್ನ ಭಾರತ್ ಜೋಡೋ ಯಾತ್ರೆ ಶುರುವಾಗಲಿದೆ. ಅವರು ಪಕ್ಷವನ್ನು ಟೀಕಿಸುವ ಭರದಲ್ಲಿ ಕಟುವಾದ ಭಾಷೆ ಬಳಕೆ ಮಾಡಿದ್ದಾರೆ.


