ಮಧುಗಿರಿ: ಐತಿಹಾಸಿಕ ಶ್ರೀ ಕೋಡಿ ಲಿಂಗೇಶ್ವರ ಸ್ವಾಮಿ ಜಾತ್ರಾ ಮಹೋತ್ಸವಕ್ಕೆ ಬಹುಭಾಷಾ ನಟ ಅರ್ಜುನ್ ಸರ್ಜಾ ಮತ್ತು ಖ್ಯಾತ ನಟ ಧ್ರುವ ಸರ್ಜಾ ಆಗಮಿಸಿದ್ದು, ದೊಡ್ಡೇರಿ ಜಕ್ಕೇನಹಳ್ಳಿ ಗ್ರಾಮದಲ್ಲಿ ನಡೆಯುವ ಜಾತ್ರಾ ಮಹೋತ್ಸವಕ್ಕೆ ವಿಶೇಷ ಮೆರುಗು ತಂದರು.
ಪ್ರತಿ ವರ್ಷದಂತೆ ಈ ವರ್ಷವೂ ಗಂಗಾ ಪೂಜೆ ಧ್ವಜಾರೋಹಣ ಆದಲೂರಿನ ಶ್ರೀರಾಮ ದೇವರ ಆಗಮನ ಕಾರ್ಯಕ್ರಮಗಳು ವಿಜೃಂಭಣೆಯಿಂದ ನಡೆದವು. ಬಳಿಕ ಶ್ರೀ ಕೋಡಿಲಿಂಗೇಶ್ವರ ಸ್ವಾಮಿ ಹಾಗೂ ಶಿವ ಪಾರ್ವತಿ ಅಮ್ಮನ ರವರ ಶ್ರೀ ಸ್ವಾಮಿಯ ಬ್ರಹ್ಮರಥೋತ್ಸವ ನೆರವೇರಿತು.
ಕಾರ್ಯಕ್ರಮದಲ್ಲಿ ಅನ್ನ ಸಂತರ್ಪಣೆ ಹಾಗೂ ಬಸ್ಮಾಸುರನ ವಧೆ ಯಕ್ಷಗಾನ, ನಾಟಕ, ರಸಮಂಜರಿ ಕಾರ್ಯಕ್ರಮ ಆಯೋಜಿಸಲಾಗಿತ್ತು.ಈ ಜಾತ್ರಾ ಮಹೋತ್ಸವಕ್ಕೆ ಸುಮಾರು 6,000 ಭಕ್ತಾದಿಗಳು ಭಾಗಿಯಾಗಿದ್ದರು.
ಈ ಜಾತ್ರೆಯಲ್ಲಿ ಗಣ್ಯರು ಭಾಗವಹಿಸಿದರು ಶಾಸಕರಾದ ಎಂ.ವಿ.ವೀರಭದ್ರಯ್ಯ, ಮಾಜಿ ಕೆ.ಎನ್.ರಾಜಣ್ಣ, ಮತ್ತು ಹನುಮಂತೇಗೌಡರವರು ಸೇರಿದಂತೆ ಹಲವು ಮುಖಂಡರುಗಳು ಭಾಗವಹಿಸಿದ್ದರು. ಪ್ರತಿ ವರ್ಷದಂತೆ ಮಂಗಳಮ್ಮ ನರಸಯ್ಯ ಕುಟುಂಬದಿಂದ ಅನ್ನ ಸಂತರ್ಪಣೆ ನೆರವೇರಿಸಲಾಯಿತು.
ವರದಿ: ದೊಡ್ಡೇರಿ ಮಹಲಿಂಗಯ್ಯ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA