ವರದಿ : ಮಂಜುಸ್ವಾಮಿ ಎಂ.ಎನ್.
ತುಮಕೂರು: ಸಿಎಂ ಸಿದ್ದರಾಮಯ್ಯ ಕರ್ನಾಟಕ ಸರಕಾರದ 17ನೇ ಬಜೆಟ್ ಮಂಡನೆ ಮಾಡ್ತಾರೇ. ಬಜೆಟ್ನಲ್ಲಿ ಗ್ರಾಮೀಣ ಭಾಗದ ಅಭಿವೃದ್ದಿಗೆ ಹೆಚ್ಚಿನ ಅನುದಾನ ನೀಡುವಂತೆ ಸಿಎಂಗೆ ನಾನು ಮನವಿ ಮಾಡಿದ್ದೇನೆ. ಗ್ಯಾರಂಟಿ ಯೋಜನೆಯ ಜೊತೆ ಗ್ರಾಮೀಣ ಭಾಗದ ಅಭಿವೃದ್ದಿಯು ಆಗಲಿದೆ. ಟೀಕೆ ಮಾಡೋರಿಗೆ ನಾನು ಅಭಿವೃದ್ದಿಯ ಉತ್ತರವನ್ನೇ ನೀಡೋಣ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ ತಿಳಿಸಿದರು.
ಕೊರಟಗೆರೆ ತಾಲೂಕು ಚನ್ನರಾಯನದುರ್ಗ ಹೋಬಳಿ ಜೆಟ್ಟಿಅಗ್ರಹಾರ ಗ್ರಾ.ಪಂ. ವ್ಯಾಪ್ತಿಯ ಜಂಪೇನಹಳ್ಳಿ ಕ್ರಾಸಿನ ಬಳಿ ಪಿಡ್ಲ್ಯೂಡಿ ಇಲಾಖೆಯಿಂದ ಬುಧವಾರ ಏರ್ಪಡಿಸಲಾಗಿದ್ದ 26 ಕೋಟಿ ವೆಚ್ಚದ ವಿವಿಧ ರಸ್ತೆ ಅಭಿವೃದ್ದಿ ಕಾಮಗಾರಿಗಳಿಗೆ ಗುದ್ದಲಿಪೂಜೆ ನೇರವೇರಿಸಿ ಮಾತನಾಡಿದರು.
ಬಜೆಟ್ನಲ್ಲಿ ತುಮಕೂರು ಜಿಲ್ಲೆ ಮತ್ತು ಕೊರಟಗೆರೆ ಕ್ಷೇತ್ರದ ನೀರಾವರಿ ಯೋಜನೆಗೆ ಹೆಚ್ಚಿನ ಅನುದಾನ ಸಿಗಲಿದೆ. ಕೊರಟಗೆರೆ ಪ.ಪಂ.ಯನ್ನು ಪುರಸಭೆಯನ್ನಾಗಿ ಮಾಡಲು ಈಗಾಗಲೇ ಸರಕಾರ ಚಿಂತನೆ ನಡೆಸುತ್ತಿದೆ. ಜಂಪೇನಹಳ್ಳಿ ಕ್ರಾಸ್ ನಲ್ಲಿ ಕುಡಿಯುವ ನೀರು, ಹೈಮಾಸ್ಕ್ ಲೈಟ್ ವ್ಯವಸ್ಥೆ ಮಾಡಿಸುತ್ತೇನೆ. ಸರಕಾರದಲ್ಲಿ ದುಡ್ಡಿಲ್ಲ ಅಭಿವೃದ್ದಿ ಕೆಲಸಗಳು ಆಗ್ತಿಲ್ಲ ಎಂಬ ತಪ್ಪು ಸಂದೇಶ ನೀಡ್ತಿದ್ದಾರೆ. 5 ಗ್ಯಾರಂಟಿಯ ಬಗ್ಗೆ ಟೀಕೆ ಮಾಡಿದೋರು ಈಗ ಅದರ ಲಾಭ ಪಡೆಯುತ್ತಿಲ್ಲವೇ ಎಂದರು.
ನಾನು ಕೊರಟಗೆರೆ ಕ್ಷೇತ್ರಕ್ಕೆ ಬಂದ ನಂತರ 5ನೇ ಸಲ ಮುಖ್ಯರಸ್ತೆ ಅಭಿವೃದ್ದಿ ಮಾಡ್ತಿದ್ದೀನಿ. ಗುಣಮಟ್ಟದ ಕಾಮಗಾರಿ ನಡೆಯದೇ ಪಿಡ್ಲ್ಯೂಡಿ ರಸ್ತೆಯು ದುಸ್ಥಿತಿಗೆ ತಲುಪಿದೆ. 5 ವರ್ಷ ಗುತ್ತಿಗೆದಾರನೇ ರಸ್ತೆಯ ನಿರ್ವಹಣೆ ಮಾಡ್ಬೇಕು. ಇಲ್ಲವಾದ್ರೇ ನಾನು ಸುಮ್ಮನೇ ಇರೋದಿಲ್ಲ ಎಚ್ಚರಿಕೆ ಇರಲಿ ನಿಮಗೆ ಜಂಪೇನಹಳ್ಳಿಯಿಂದ ಶ್ರೀನಿವಾಸಪುರದವರೆಗೆ ಈಗ 6 ಕೋಟಿ ಅನುದಾನ ನೀಡಿದ್ದೇನೆ ಎಂದು ಹೇಳಿದರು.
ಈ ಕಾರ್ಯಕ್ರಮದಲ್ಲಿ ತುಮಕೂರು ಜಿಲ್ಲಾಧಿಕಾರಿ ಶುಭಕಲ್ಯಾಣ್, ಎಸ್ಪಿ ಅಶೋಕ್, ಕೊರಟಗೆರೆ ತಹಶೀಲ್ದಾರ್ ಮಂಜುನಾಥ ಕೆ., ಪಿಡ್ಲ್ಯೂಡಿ ಎಇಇ ಸ್ವಾಮಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರಕೆರೆಶಂಕರ್, ಗ್ರಾ.ಪಂ. ಅಧ್ಯಕ್ಷ ಪುಪ್ಪರವಿಕುಮಾರ್, ಮಾಜಿ ಗ್ರಾ.ಪಂ. ಅಧ್ಯಕ್ಷೆ ಲಕ್ಷ್ಮೀ, ಮುಖಂಡರಾದ ಮಹಾಲಿಂಗಪ್ಪ, ಟೈಗರ್ ನಾಗ್, ಪ್ರಸನ್ನಕುಮಾರ್, ಮಂಜುನಾಥ, ಕಿರಣ್, ರಂಗರಾಜು ಸೇರಿದಂತೆ ಇತರರು ಇದ್ದರು.
26 ಕೋಟಿ ವೆಚ್ಚದ ಕಾಮಗಾರಿಗೆ ಚಾಲನೆ:
ಕೋಳಾಲದಿಂದ ತಿಮ್ಮಸಂದ್ರಕ್ಕೆ 11ಕೋಟಿ, ಜಂಪೇನಹಳ್ಳಿಯಿಂದ ಶ್ರೀನಿವಾಸಪುರಕ್ಕೆ 6 ಕೋಟಿ ಮತ್ತು ಮಧುಗಿರಿಯಿಂದ ಹಿಂದುಪುರಕ್ಕೆ 8ಕೋಟಿ ವೆಚ್ಚದ ರಸ್ತೆ ಸೇರಿ ಪಿಡ್ಲ್ಯೂಡಿ ಇಲಾಖೆಯಿಂದ ಒಟ್ಟು 26 ಕೋಟಿ ವೆಚ್ಚದ ವಿವಿಧ ಕಾಮಗಾರಿಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ ಗುದ್ದಲಿ ಪೂಜೆ ನೇರವೇರಿಸಿ ರಸ್ತೆ ಕಾಮಗಾರಿಯ ಗುಣಮಟ್ಟ ಇರಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.
ನನ್ನ ಪಕ್ಷದ ಗ್ಯಾರಂಟಿ ಯೋಜನೆಯ ಪ್ರಣಾಳಿಕೆ ಬರೆದೋನು ನಾನೇ. ಪ್ರತಿವರ್ಷ ಗ್ಯಾರಂಟಿ ಯೋಜನೆಗೆ 58 ಸಾವಿರ ಕೋಟಿ ಖರ್ಚಾಗುತ್ತಿದೆ. ಕಳೆದ 2 ವರ್ಷದಿಂದ ಗ್ಯಾರಂಟಿ ಯೋಜನೆಯ ಹಣ ಬಡವರಿಗೆ ತಲುಪುತ್ತಿದೆ. ಗ್ಯಾರಂಟಿಯ ಹಣ ಕೂಡಿಟ್ಟು ಮಗಳಿಗೆ ಲ್ಯಾಪ್ ಟಾಪ್ ಕೊಡಿಸಿದ್ದಾರೆ. ವಿರೋಧ ಪಕ್ಷದವರಿಗೆ ಟೀಕೆ ಮಾಡಲು ಬೇರೆ ಕಾರಣ ಇಲ್ಲದೇ ಅಭಿವೃದ್ದಿಯ ವಿಚಾರ ಮಾತನಾಡ್ತಾರೇ ಅಷ್ಟೆ…
— ಡಾ.ಜಿ.ಪರಮೇಶ್ವರ, ಗೃಹ ಸಚಿವರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4