nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರಗೂರು: ಕೆಎಸ್ ಆರ್ ಟಿಸಿ ಬಸ್ ಹರಿದು ಮಹಿಳೆಗೆ ಗಂಭೀರ ಗಾಯ; ಆಕ್ರೋಶ

    June 23, 2026

    ಸರಗೂರು: ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ತರಬೇತಿ ಕಾರ್ಯಕ್ರಮ ಚಾಲನೆ

    June 23, 2026

    ಭಯ ಬೇಡ, ಪೊಲೀಸರನ್ನು ಸಮುದಾಯದ ಭಾಗವಾಗಿ ಕಾಣಿ: ಸಿಪಿಐ ಶ್ರೀನಿವಾಸ್ ಡಿಜೆ

    June 23, 2026
    Facebook Twitter Instagram
    ಟ್ರೆಂಡಿಂಗ್
    • ಸರಗೂರು: ಕೆಎಸ್ ಆರ್ ಟಿಸಿ ಬಸ್ ಹರಿದು ಮಹಿಳೆಗೆ ಗಂಭೀರ ಗಾಯ; ಆಕ್ರೋಶ
    • ಸರಗೂರು: ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ತರಬೇತಿ ಕಾರ್ಯಕ್ರಮ ಚಾಲನೆ
    • ಭಯ ಬೇಡ, ಪೊಲೀಸರನ್ನು ಸಮುದಾಯದ ಭಾಗವಾಗಿ ಕಾಣಿ: ಸಿಪಿಐ ಶ್ರೀನಿವಾಸ್ ಡಿಜೆ
    • ತುಮಕೂರು: ಜಿಲ್ಲಾಧಿಕಾರಿ ನೇತೃತ್ವದಲ್ಲಿ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ
    • ಸಾಗುವಳಿದಾರ ರೈತರ ಮೇಲೆ ಅರಣ್ಯ ಇಲಾಖೆ ದೌರ್ಜನ್ಯ ಆರೋಪ; ಕೆಪಿಟಿಸಿಎಲ್ ಖಾಸಗೀಕರಣಕ್ಕೆ ತೀವ್ರ ಆಕ್ರೋಶ
    • ಕದ್ದ ಹಣದಲ್ಲಿ ದಂಪತಿ ಮೋಜು–ಮಸ್ತಿ: ಕೊನೆಗೂ ಕುಣಿಗಲ್ ಪೊಲೀಸರ ಬಲೆಗೆ ಬಿದ್ದ ಖತರ್ನಾಕ್ ಜೋಡಿ!
    • ಏಕಂಬಾ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮಲೇರಿಯಾ ಜಾಗೃತಿ ಹಾಗೂ ಆರೋಗ್ಯ ಶಿಕ್ಷಣ
    • ಸರಗೂರು: ಲಯನ್ಸ್ ಅಕಾಡೆಮಿ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪಾವಗಡ ತಾಲ್ಲೂಕು ನೀರಾವರಿ ಹೋರಾಟಗಾರರಿಗೆ ಸನ್ಮಾನ ಕಾರ್ಯಕ್ರಮ: ಎಸ್.ಶಿವಪ್ರಸಾದ್
    ಪಾವಗಡ February 7, 2025

    ಪಾವಗಡ ತಾಲ್ಲೂಕು ನೀರಾವರಿ ಹೋರಾಟಗಾರರಿಗೆ ಸನ್ಮಾನ ಕಾರ್ಯಕ್ರಮ: ಎಸ್.ಶಿವಪ್ರಸಾದ್

    By adminFebruary 7, 2025No Comments2 Mins Read
    niravari

    Provided by
    Provided by

    ಪಾವಗಡ: ದಶಕಗಳ ಹೋರಾಟಕ್ಕೆ ಜಯ ಸಿಕ್ಕ ಹಿನ್ನೆಲೆಯಲ್ಲಿ ಹೋರಾಟದಲ್ಲಿ ಉಪವಾಸ ಸತ್ಯಾಗ್ರಹ ಅಹರ್ನಿಶಿ ಧರಣಿ ಪಾದಯಾತ್ರೆ ಸೇರಿದಂತೆ ನಿತ್ಯ ನಿರಂತರವಾಗಿ ಅನೇಕ ಹೋರಾಟಗಳಲ್ಲಿ ಭಾಗವಹಿಸಿ ಯಶಸ್ವಿಯಾಗಿ ಹೋರಾಟ ಪೂರೈಕೆ ಮಾಡಿದ್ದರ ಹಿನ್ನೆಲೆ,  ಇಂದು ಪಾವಗಡ ತಾಲ್ಲೂಕಿಗೆ ತುಂಗಭದ್ರಾ ಹಿನ್ನೀರು ಪೈಪ್ ಲೈನ್ ಮೂಲಕ ಪಾವಗಡ ತಾಲ್ಲೂಕಿಗೆ ಹರಿಯುತ್ತಿರುವ ಹಿನ್ನೆಲೆಯಲ್ಲಿ ಹೋರಾಟಗಾರರನ್ನು ಸ್ಮರಣೆ ಮಾಡಿಕೊಳ್ಳುವಂತ ಕೆಲಸ ಮಾಡಬೇಕಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಹೋರಾಟಗಾರರಿಗೆ ಸನ್ಮಾನ ಮತ್ತು ಕೃತಜ್ಞತಾ ಪೂರ್ವಕವಾಗಿ ಅಭಿನಂದನ ಕಾರ್ಯಕ್ರಮವನ್ನು ನೆರವೇರಿಸಲು ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ ಎಂದು ನೀರಾವರಿ ಹೋರಾಟ ಸಮಿತಿಯ ಅಧ್ಯಕ್ಷ  ಎಸ್.ಶಿವಪ್ರಸಾದ್ ತಿಳಿಸಿದರು.

    ಪಾವಗಡದ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

    ಕಳೆದ ಹತ್ತಾರು ದಶಕಗಳ ಹೋರಾಟದ ಫಲವಾಗಿ ಇಂದು ತುಂಗಭದ್ರಾ ಹಿನ್ನೀರು ಪೈಪ್ ಲೈನ್ ಮೂಲಕ ಪಾವಗಡ ತಾಲ್ಲೂಕಿಗೆ ಕುಡಿಯುವ ನೀರು ಹರಿಯುತ್ತಿರುವುದು ಅತ್ಯಂತ ಹೆಮ್ಮೆಯ ಸಂಗತಿ ಇದು ತಾಲೂಕಿನ ನಾಗರಿಕರ ಹೆಮ್ಮೆಯ ವಿಷಯವೂ ಕೂಡ ಆಗಿದೆ. ಅದರಿಂದ ಎಲ್ಲಾ ಹೋರಾಟಗಾರರನ್ನು ಸ್ಮರಣೆ ಮಾಡಿಕೊಳ್ಳುವಂತಹ ಕೆಲಸವನ್ನು ಸಮಿತಿ ಮಾಡಲಿದೆ ಎಂದರು.

    ಈ ಹೋರಾಟದಲ್ಲಿ ಪಕ್ಷಾತೀತವಾಗಿ ಜಾತ್ಯತೀತವಾಗಿ ತಾಲೂಕಿನ ಹಿತಬಯಸಿ ಭಾಗಿಯಾಗಿರುವ 1000 ಕ್ಕೂ ಹೆಚ್ಚು ಹೋರಾಟಗಾರರನ್ನು ಗುರುತಿಸಲಾಗಿದೆ ಎಂದರು.


    Provided by
    Provided by

    ತಾಲ್ಲೂಕಿನ ಕೆರೆಗಳಿಗೆ ನೀರು ತುಂಬಿಸುವ ಎತ್ತಿನಹೊಳೆ ಯೋಜನೆ ಹಾಗೂ ಭದ್ರಾ ಮೇಲ್ದಂಡೆ ಯೋಜನೆಯ ಅನುಷ್ಠಾನಕ್ಕಾಗಿ ಮುಂದಿನ ಹೋರಾಟಗಳ ರೂಪುರೇಷೆಗಳ ಯೋಜನೆ ತಯಾರಿಸುವ ಕಾರ್ಯವನ್ನು ಕೂಡ ಮಾಡುತ್ತೇವೆ ಎಂದು ಶಿವಪ್ರಸಾದ್ ತಿಳಿಸಿದರು. ಸನ್ಮಾನ ಕಾರ್ಯಕ್ರಮಕ್ಕೆ ತನು ಮನ ಧನದೊಂದಿಗೆ ಸಹಕಾರ ನೀಡುವುದಾಗಿ ಸ್ವಯಂ ಪ್ರೇರಿತರಾಗಿ ತಾಲೂಕಿನ  ಅನೇಕರು ಮುಂದೆ ಬರುತ್ತಿದ್ದಾರೆ ಎಂದರು.

    ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಬಿಜೆಪಿ ಮುಖಂಡ  ಗೌಡೇಟಿ ಪ್ರಭಾಕರ್ ಅವರು,  25,000. ರೂಪಾಯಿಗಳ ದೇಣಿಗೆ ನೀಡುವ ಮುಖೇನ ಕಾರ್ಯಕ್ರಮ ಚನ್ನಾಗಿ ಆಗಲು ಸಹಕಾರ ನೀಡುವುದಾಗಿ ಹೇಳಿದರು. ಹೋರಾಟಗಾರರನ್ನು ಸ್ಮರಣೆ ಮಾಡಿಕೊಳ್ಳುವ ಮುಖೇನ ಮುಂದಿನ ಪೀಳಿಗೆಗೆ ಇದರ ಆಳ ಅಗಲ ಮತ್ತು ನೀರನ್ನು ತರಲು ಹೋರಟಗಾರರು ಪಟ್ಟ  ಪರಿಶ್ರಮಗಳೇನು ಎನ್ನುವುದನ್ನು ತಾಲೂಕಿನ ಯುವ ಜನತೆಗೆ ತಿಳಿಸುವಂತಹದಾಗಬೇಕು ಎಂದು ಅವರು ಸಲಹೆ ನೀಡಿದರು.

    ತಾಲೂಕಿನ ಎಲ್ಲರು ಇದರಲ್ಲಿ ಭಾಗಿಯಾಗುವುದರ ಮುಖೇನ ಎಲ್ಲ ಹೋರಾಟಗಾರರನ್ನು ಸ್ಮರಣೆ ಮಾಡಿಕೊಳ್ಳುವಂತ ಕೆಲಸ ಆಗಬೇಕು ಎಂದರು.

    ನೀರಾವರಿ ಹೋರಾಟ ಸಮಿತಿಯ ಪ್ರಧಾನ ಕಾರ್ಯದರ್ಶಿ ಸೊಗಡು ವೆಂಕಟೇಶ್ ಮಾತನಾಡಿ, ಇದು ಅವಿಸ್ಮರಣೀಯ ಕಾರ್ಯಕ್ರಮವಾಗಬೇಕು ಮತ್ತು ಇದು ಆತ್ಮಾಭಿಮಾನದ ಕಾರ್ಯ ಎಂದು ಹೇಳಿದರು.

    ತಾಲೂಕು ರೈತ ಸಂಘದ ಅಧ್ಯಕ್ಷ ನರಸಿಂಹರೆಡ್ಡಿ ಮಾತನಾಡಿ, ರೈತ ಸಂಘಟನೆಗಳಿಂದ ಬಂದಂತ ಎಲ್ಲ ಹೋರಾಟಗಾರರನ್ನು ಕರೆ ತರುವಂತ ಕೆಲಸವನ್ನ ನಾನು ಮಾಡುತ್ತೇನೆ ಇದು ಯಶಸ್ವಿಯಾಗಬೇಕೆಂದು ಅವರು ಕೂಡ ಹೇಳಿದರು.

    ಖಜಾಂಚಿ ಪುರುಷೋತ್ತಮ್ ರೆಡ್ಡಿ ಅವರು ಮಾತನಾಡಿ, ಎಲ್ಲರಿಗೂ ನೆನಪಿನ ಕಾಣಿಕೆ ನೀಡುವ ಮೂಖೇನ ಅರ್ಥಪೂರ್ಣವಾಗಿ ಸನ್ಮಾನ ಮಾಡುವಂತಹದಾಗಬೇಕು ಎಂದರು.

    ಹೋರಾಟಕ್ಕೆ ಪ್ರತ್ಯಕ್ಷವಾಗಿ ಪರೋಕ್ಷವಾಗಿ ಸಹಕಾರ ನೀಡಿದ ಎಲ್ಲರನ್ನೂ ಸ್ಮರಣೆ ಮಾಡಿಕೊಳ್ಳುವಂತದಾಗಬೇಕು ಎಂದು ಮೈಲಾರರೆಡ್ಡಿ ಹೇಳಿದರು.

    ಕಾರ್ಯಕ್ರಮದಲ್ಲಿ ಜೆಡಿಎಸ್ ನ  ಮಹಿಳಾ ಮುಖಂಡರಾಗಿರುವಂತ  ಸಾಯಿಸುಮನ ಅವರು ಎಲ್ಲ ಹೋರಾಟಗಾರರಿಗೆ ನೆನಪಿನ ಕಾಣಿಕೆ ನೀಡುವುದಾಗಿ ಹೇಳಿದರು. ಸಭೆಯಲ್ಲಿ ಕೊತ್ತೂರು ಪ್ರಭಾಕರ್ ಪಳವಳ್ಳಿ ನರಸಿಂಹರೆಡ್ಡಿ, ಶಿವಕುಮಾರ್ ಸಾಖೇಲ್ ಶೇಖರ್ ಬಾಬು, ಮಾನಂ ಶಶಿಕಿರಣ್, ಕಡಪಲಕೆರೆ. DSS ಹನುಮಂತರಾಯ, ಚಂದ್ರನಾಯಕ್, ಬ್ಯಾಡನೂರು ಶಿವು, ಬಾಲಮ್ಮನಹಳ್ಳಿ ಸೂರಿ, ತಿಪ್ಪೇಸ್ವಾಮಿ, ನಾಗರಾಜ್, ದೇವಲಕೆರೆ ಲೋಕೇಶ್, ಶ್ರೀರಾಮಸೇನೆ, ಕನ್ನಡ ಪರ ಸಂಘಟನೆಗಳು ಭಜರಂಗದಳ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

    ವರದಿ: ನಂದೀಶ್ ನಾಯ್ಕ,  ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಪಾವಗಡದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

    June 22, 2026

    ಪಾವಗಡ: ವಸತಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಶಾಸಕರಿಗೆ ಪ್ರಾಂಶುಪಾಲರ ಮನವಿ

    June 20, 2026

    ಸಮಾಜ ಕಲ್ಯಾಣ ಇಲಾಖೆ: ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಆರಂಭ

    June 17, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸರಗೂರು: ಕೆಎಸ್ ಆರ್ ಟಿಸಿ ಬಸ್ ಹರಿದು ಮಹಿಳೆಗೆ ಗಂಭೀರ ಗಾಯ; ಆಕ್ರೋಶ

    June 23, 2026

    ಸರಗೂರು: ಇಲ್ಲಿನ ಪಟ್ಟಣದ ಬಸ್ ನಿಲ್ದಾಣದ ಮುಖ್ಯದ್ವಾರದಲ್ಲಿ ಸೋಮವಾರ ಸಂಜೆ ಕೆಎಸ್ಆರ್ಟಿಸಿ ಬಸ್ ಹರಿದು ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿರುವ ದಾರುಣ…

    ಸರಗೂರು: ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ತರಬೇತಿ ಕಾರ್ಯಕ್ರಮ ಚಾಲನೆ

    June 23, 2026

    ಭಯ ಬೇಡ, ಪೊಲೀಸರನ್ನು ಸಮುದಾಯದ ಭಾಗವಾಗಿ ಕಾಣಿ: ಸಿಪಿಐ ಶ್ರೀನಿವಾಸ್ ಡಿಜೆ

    June 23, 2026

    ತುಮಕೂರು: ಜಿಲ್ಲಾಧಿಕಾರಿ ನೇತೃತ್ವದಲ್ಲಿ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ

    June 23, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.