nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪಾವಗಡ: SCSP/TSP ನಿಧಿ ಸದ್ಬಳಕೆ ಕುರಿತು ಪಾವಗಡದಲ್ಲಿ ಜಾಗೃತಿ ಸಭೆ

    September 7, 2026

    ಪಾವಗಡ: ದೇವರಹಟ್ಟಿಯಲ್ಲಿ ಸಂಭ್ರಮದಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

    September 7, 2026

    ಹಿರೇಹಳ್ಳಿ ಕೆರೆ ಒತ್ತುವರಿ ತೆರವಿಗೆ ಸಚಿವ ಈಶ್ವರ್ ಖಂಡ್ರೆ ಖಡಕ್ ಆದೇಶ!

    September 7, 2026
    Facebook Twitter Instagram
    ಟ್ರೆಂಡಿಂಗ್
    • ಪಾವಗಡ: SCSP/TSP ನಿಧಿ ಸದ್ಬಳಕೆ ಕುರಿತು ಪಾವಗಡದಲ್ಲಿ ಜಾಗೃತಿ ಸಭೆ
    • ಪಾವಗಡ: ದೇವರಹಟ್ಟಿಯಲ್ಲಿ ಸಂಭ್ರಮದಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ
    • ಹಿರೇಹಳ್ಳಿ ಕೆರೆ ಒತ್ತುವರಿ ತೆರವಿಗೆ ಸಚಿವ ಈಶ್ವರ್ ಖಂಡ್ರೆ ಖಡಕ್ ಆದೇಶ!
    • ಕೊರಟಗೆರೆ: ಮಳೆಗಾಲದಲ್ಲೇ ಕುಡಿಯುವ ನೀರಿಗೆ ತೀವ್ರ ಹಾಹಾಕಾರ; ಪುರಸಭೆಗೆ ಮುತ್ತಿಗೆ ಹಾಕಿ ಗ್ರಾಮಸ್ಥರ ಆಕ್ರೋಶ
    • ಅರ್ಜಿ ಕೊಟ್ಟು ಆಚೆ ಹೋಗ್! ಪ್ರಜೆಗಳಿಗೆ ಭರ್ಜರಿ ‘ಸೇವೆ..!’ ಮಾಡಿದ ಪಾವಗಡ ಶಾಸಕ ವೆಂಕಟೇಶ್!
    • ಬುದ್ಧ, ಬಸವ, ಅಂಬೇಡ್ಕರ್ ವಿರುದ್ಧ ಅವಹೇಳನ: ಕಿಡಿಗೇಡಿಯ ಗಡಿಪಾರಿಗೆ ದಲಿತ ಪರ ಸಂಘಟನೆಗಳಿಂದ ಒತ್ತಾಯ
    • ಸಿರಾ: ಬುದ್ಧ ಕರುಣೆಯ ಹೊತ್ತು ಕವನ ಸಂಕಲನ ಬಿಡುಗಡೆ
    • ಔರಾದ್: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪಾವಗಡ ತಾಲ್ಲೂಕು ನೀರಾವರಿ ಹೋರಾಟಗಾರರಿಗೆ ಸನ್ಮಾನ ಕಾರ್ಯಕ್ರಮ: ಎಸ್.ಶಿವಪ್ರಸಾದ್
    ಪಾವಗಡ February 7, 2025

    ಪಾವಗಡ ತಾಲ್ಲೂಕು ನೀರಾವರಿ ಹೋರಾಟಗಾರರಿಗೆ ಸನ್ಮಾನ ಕಾರ್ಯಕ್ರಮ: ಎಸ್.ಶಿವಪ್ರಸಾದ್

    By adminFebruary 7, 2025No Comments2 Mins Read
    niravari

    ಪಾವಗಡ: ದಶಕಗಳ ಹೋರಾಟಕ್ಕೆ ಜಯ ಸಿಕ್ಕ ಹಿನ್ನೆಲೆಯಲ್ಲಿ ಹೋರಾಟದಲ್ಲಿ ಉಪವಾಸ ಸತ್ಯಾಗ್ರಹ ಅಹರ್ನಿಶಿ ಧರಣಿ ಪಾದಯಾತ್ರೆ ಸೇರಿದಂತೆ ನಿತ್ಯ ನಿರಂತರವಾಗಿ ಅನೇಕ ಹೋರಾಟಗಳಲ್ಲಿ ಭಾಗವಹಿಸಿ ಯಶಸ್ವಿಯಾಗಿ ಹೋರಾಟ ಪೂರೈಕೆ ಮಾಡಿದ್ದರ ಹಿನ್ನೆಲೆ,  ಇಂದು ಪಾವಗಡ ತಾಲ್ಲೂಕಿಗೆ ತುಂಗಭದ್ರಾ ಹಿನ್ನೀರು ಪೈಪ್ ಲೈನ್ ಮೂಲಕ ಪಾವಗಡ ತಾಲ್ಲೂಕಿಗೆ ಹರಿಯುತ್ತಿರುವ ಹಿನ್ನೆಲೆಯಲ್ಲಿ ಹೋರಾಟಗಾರರನ್ನು ಸ್ಮರಣೆ ಮಾಡಿಕೊಳ್ಳುವಂತ ಕೆಲಸ ಮಾಡಬೇಕಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಹೋರಾಟಗಾರರಿಗೆ ಸನ್ಮಾನ ಮತ್ತು ಕೃತಜ್ಞತಾ ಪೂರ್ವಕವಾಗಿ ಅಭಿನಂದನ ಕಾರ್ಯಕ್ರಮವನ್ನು ನೆರವೇರಿಸಲು ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ ಎಂದು ನೀರಾವರಿ ಹೋರಾಟ ಸಮಿತಿಯ ಅಧ್ಯಕ್ಷ  ಎಸ್.ಶಿವಪ್ರಸಾದ್ ತಿಳಿಸಿದರು.

    ಪಾವಗಡದ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

    ಕಳೆದ ಹತ್ತಾರು ದಶಕಗಳ ಹೋರಾಟದ ಫಲವಾಗಿ ಇಂದು ತುಂಗಭದ್ರಾ ಹಿನ್ನೀರು ಪೈಪ್ ಲೈನ್ ಮೂಲಕ ಪಾವಗಡ ತಾಲ್ಲೂಕಿಗೆ ಕುಡಿಯುವ ನೀರು ಹರಿಯುತ್ತಿರುವುದು ಅತ್ಯಂತ ಹೆಮ್ಮೆಯ ಸಂಗತಿ ಇದು ತಾಲೂಕಿನ ನಾಗರಿಕರ ಹೆಮ್ಮೆಯ ವಿಷಯವೂ ಕೂಡ ಆಗಿದೆ. ಅದರಿಂದ ಎಲ್ಲಾ ಹೋರಾಟಗಾರರನ್ನು ಸ್ಮರಣೆ ಮಾಡಿಕೊಳ್ಳುವಂತಹ ಕೆಲಸವನ್ನು ಸಮಿತಿ ಮಾಡಲಿದೆ ಎಂದರು.

    ಈ ಹೋರಾಟದಲ್ಲಿ ಪಕ್ಷಾತೀತವಾಗಿ ಜಾತ್ಯತೀತವಾಗಿ ತಾಲೂಕಿನ ಹಿತಬಯಸಿ ಭಾಗಿಯಾಗಿರುವ 1000 ಕ್ಕೂ ಹೆಚ್ಚು ಹೋರಾಟಗಾರರನ್ನು ಗುರುತಿಸಲಾಗಿದೆ ಎಂದರು.

    ತಾಲ್ಲೂಕಿನ ಕೆರೆಗಳಿಗೆ ನೀರು ತುಂಬಿಸುವ ಎತ್ತಿನಹೊಳೆ ಯೋಜನೆ ಹಾಗೂ ಭದ್ರಾ ಮೇಲ್ದಂಡೆ ಯೋಜನೆಯ ಅನುಷ್ಠಾನಕ್ಕಾಗಿ ಮುಂದಿನ ಹೋರಾಟಗಳ ರೂಪುರೇಷೆಗಳ ಯೋಜನೆ ತಯಾರಿಸುವ ಕಾರ್ಯವನ್ನು ಕೂಡ ಮಾಡುತ್ತೇವೆ ಎಂದು ಶಿವಪ್ರಸಾದ್ ತಿಳಿಸಿದರು. ಸನ್ಮಾನ ಕಾರ್ಯಕ್ರಮಕ್ಕೆ ತನು ಮನ ಧನದೊಂದಿಗೆ ಸಹಕಾರ ನೀಡುವುದಾಗಿ ಸ್ವಯಂ ಪ್ರೇರಿತರಾಗಿ ತಾಲೂಕಿನ  ಅನೇಕರು ಮುಂದೆ ಬರುತ್ತಿದ್ದಾರೆ ಎಂದರು.

    ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಬಿಜೆಪಿ ಮುಖಂಡ  ಗೌಡೇಟಿ ಪ್ರಭಾಕರ್ ಅವರು,  25,000. ರೂಪಾಯಿಗಳ ದೇಣಿಗೆ ನೀಡುವ ಮುಖೇನ ಕಾರ್ಯಕ್ರಮ ಚನ್ನಾಗಿ ಆಗಲು ಸಹಕಾರ ನೀಡುವುದಾಗಿ ಹೇಳಿದರು. ಹೋರಾಟಗಾರರನ್ನು ಸ್ಮರಣೆ ಮಾಡಿಕೊಳ್ಳುವ ಮುಖೇನ ಮುಂದಿನ ಪೀಳಿಗೆಗೆ ಇದರ ಆಳ ಅಗಲ ಮತ್ತು ನೀರನ್ನು ತರಲು ಹೋರಟಗಾರರು ಪಟ್ಟ  ಪರಿಶ್ರಮಗಳೇನು ಎನ್ನುವುದನ್ನು ತಾಲೂಕಿನ ಯುವ ಜನತೆಗೆ ತಿಳಿಸುವಂತಹದಾಗಬೇಕು ಎಂದು ಅವರು ಸಲಹೆ ನೀಡಿದರು.

    ತಾಲೂಕಿನ ಎಲ್ಲರು ಇದರಲ್ಲಿ ಭಾಗಿಯಾಗುವುದರ ಮುಖೇನ ಎಲ್ಲ ಹೋರಾಟಗಾರರನ್ನು ಸ್ಮರಣೆ ಮಾಡಿಕೊಳ್ಳುವಂತ ಕೆಲಸ ಆಗಬೇಕು ಎಂದರು.

    ನೀರಾವರಿ ಹೋರಾಟ ಸಮಿತಿಯ ಪ್ರಧಾನ ಕಾರ್ಯದರ್ಶಿ ಸೊಗಡು ವೆಂಕಟೇಶ್ ಮಾತನಾಡಿ, ಇದು ಅವಿಸ್ಮರಣೀಯ ಕಾರ್ಯಕ್ರಮವಾಗಬೇಕು ಮತ್ತು ಇದು ಆತ್ಮಾಭಿಮಾನದ ಕಾರ್ಯ ಎಂದು ಹೇಳಿದರು.

    ತಾಲೂಕು ರೈತ ಸಂಘದ ಅಧ್ಯಕ್ಷ ನರಸಿಂಹರೆಡ್ಡಿ ಮಾತನಾಡಿ, ರೈತ ಸಂಘಟನೆಗಳಿಂದ ಬಂದಂತ ಎಲ್ಲ ಹೋರಾಟಗಾರರನ್ನು ಕರೆ ತರುವಂತ ಕೆಲಸವನ್ನ ನಾನು ಮಾಡುತ್ತೇನೆ ಇದು ಯಶಸ್ವಿಯಾಗಬೇಕೆಂದು ಅವರು ಕೂಡ ಹೇಳಿದರು.

    ಖಜಾಂಚಿ ಪುರುಷೋತ್ತಮ್ ರೆಡ್ಡಿ ಅವರು ಮಾತನಾಡಿ, ಎಲ್ಲರಿಗೂ ನೆನಪಿನ ಕಾಣಿಕೆ ನೀಡುವ ಮೂಖೇನ ಅರ್ಥಪೂರ್ಣವಾಗಿ ಸನ್ಮಾನ ಮಾಡುವಂತಹದಾಗಬೇಕು ಎಂದರು.

    ಹೋರಾಟಕ್ಕೆ ಪ್ರತ್ಯಕ್ಷವಾಗಿ ಪರೋಕ್ಷವಾಗಿ ಸಹಕಾರ ನೀಡಿದ ಎಲ್ಲರನ್ನೂ ಸ್ಮರಣೆ ಮಾಡಿಕೊಳ್ಳುವಂತದಾಗಬೇಕು ಎಂದು ಮೈಲಾರರೆಡ್ಡಿ ಹೇಳಿದರು.

    ಕಾರ್ಯಕ್ರಮದಲ್ಲಿ ಜೆಡಿಎಸ್ ನ  ಮಹಿಳಾ ಮುಖಂಡರಾಗಿರುವಂತ  ಸಾಯಿಸುಮನ ಅವರು ಎಲ್ಲ ಹೋರಾಟಗಾರರಿಗೆ ನೆನಪಿನ ಕಾಣಿಕೆ ನೀಡುವುದಾಗಿ ಹೇಳಿದರು. ಸಭೆಯಲ್ಲಿ ಕೊತ್ತೂರು ಪ್ರಭಾಕರ್ ಪಳವಳ್ಳಿ ನರಸಿಂಹರೆಡ್ಡಿ, ಶಿವಕುಮಾರ್ ಸಾಖೇಲ್ ಶೇಖರ್ ಬಾಬು, ಮಾನಂ ಶಶಿಕಿರಣ್, ಕಡಪಲಕೆರೆ. DSS ಹನುಮಂತರಾಯ, ಚಂದ್ರನಾಯಕ್, ಬ್ಯಾಡನೂರು ಶಿವು, ಬಾಲಮ್ಮನಹಳ್ಳಿ ಸೂರಿ, ತಿಪ್ಪೇಸ್ವಾಮಿ, ನಾಗರಾಜ್, ದೇವಲಕೆರೆ ಲೋಕೇಶ್, ಶ್ರೀರಾಮಸೇನೆ, ಕನ್ನಡ ಪರ ಸಂಘಟನೆಗಳು ಭಜರಂಗದಳ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

    ವರದಿ: ನಂದೀಶ್ ನಾಯ್ಕ,  ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಪಾವಗಡ: SCSP/TSP ನಿಧಿ ಸದ್ಬಳಕೆ ಕುರಿತು ಪಾವಗಡದಲ್ಲಿ ಜಾಗೃತಿ ಸಭೆ

    September 7, 2026

    ಪಾವಗಡ: ದೇವರಹಟ್ಟಿಯಲ್ಲಿ ಸಂಭ್ರಮದಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

    September 7, 2026

    ಅರ್ಜಿ ಕೊಟ್ಟು ಆಚೆ ಹೋಗ್! ಪ್ರಜೆಗಳಿಗೆ ಭರ್ಜರಿ ‘ಸೇವೆ..!’ ಮಾಡಿದ ಪಾವಗಡ ಶಾಸಕ ವೆಂಕಟೇಶ್!

    September 7, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ಪಾವಗಡ: SCSP/TSP ನಿಧಿ ಸದ್ಬಳಕೆ ಕುರಿತು ಪಾವಗಡದಲ್ಲಿ ಜಾಗೃತಿ ಸಭೆ

    September 7, 2026

    ಪಾವಗಡ : SCSP/TSP ನಿಧಿಯನ್ನು ಸಮರ್ಪಕವಾಗಿ ಸದ್ಬಳಕೆ ಮಾಡಿಕೊಳ್ಳುವ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ SCSP/TSP ನಿಧಿ ಸದ್ಬಳಕೆ…

    ಪಾವಗಡ: ದೇವರಹಟ್ಟಿಯಲ್ಲಿ ಸಂಭ್ರಮದಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

    September 7, 2026

    ಹಿರೇಹಳ್ಳಿ ಕೆರೆ ಒತ್ತುವರಿ ತೆರವಿಗೆ ಸಚಿವ ಈಶ್ವರ್ ಖಂಡ್ರೆ ಖಡಕ್ ಆದೇಶ!

    September 7, 2026

    ಕೊರಟಗೆರೆ: ಮಳೆಗಾಲದಲ್ಲೇ ಕುಡಿಯುವ ನೀರಿಗೆ ತೀವ್ರ ಹಾಹಾಕಾರ; ಪುರಸಭೆಗೆ ಮುತ್ತಿಗೆ ಹಾಕಿ ಗ್ರಾಮಸ್ಥರ ಆಕ್ರೋಶ

    September 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.