ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಸ್ಥಳೀಯ ಕುದುರೆ ರೈಡರ್ ಬಲಿಯಾಗಿದ್ದು, ಸೈಯದ್ ಆದಿಲ್ ಹುಸೇನ್ ಶಾ ಮೃತಪಟ್ಟ ವ್ಯಕ್ತಿಯಾಗಿದ್ದಾರೆ.
ಪ್ರವಾಸಿಗರ ಮೇಲೆ ದಾಳಿ ನಡೆಸುತ್ತಿದ್ದ ಉಗ್ರರ ಕೈಯಿಂದ ರೈಫಲ್ ಕಸಿದುಕೊಳ್ಳಲು ಈ ವ್ಯಕ್ತಿ ಯತ್ನಿಸಿದ್ದು, ಈ ವೇಳೆ ಸೈಯದ್ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ.
ಸೈಯದ್ ಆದಿಲ್ ಪಹಲ್ಗಾಮ್ ಕಾರು ಪಾರ್ಕಿಂಗ್ ಸ್ಥಳದಿಂದ ಕುದುರೆಯ ಮೇಲೆ ಪ್ರವಾಸಿಗರನ್ನು ಬೈಸರನ್ಗೆ ಕರೆದುಕೊಂಡು ಬರುವ ಕೆಲಸ ಮಾಡುತ್ತಿದ್ದರು.
ತಮ್ಮ ಕುಟುಂಬದ ಏಕೈಕ ಜೀವನಾಧಾರ ಸೈಯದ್ ಆಗಿದ್ದರು. ಇವರು ವೃದ್ಧ ಪೋಷಕರು, ಹೆಂಡತಿ ಮತ್ತು ಮಕ್ಕಳನ್ನು ಅಗಲಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW