ತುಮಕೂರು: ತೋಟಗಾರಿಕೆ ಇಲಾಖೆಯು ರಾಜ್ಯದ ವಿವಿಧ ಭಾಗಗಳಲ್ಲಿನ 10 ತೋಟಗಾರಿಕೆ ತರಬೇತಿ ಕೇಂದ್ರಗಳಲ್ಲಿ 2025ರ ಮೇ 2 ರಿಂದ 2026ರ ಫೆಬ್ರವರಿ 28ರವರೆಗೆ 10 ತಿಂಗಳ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಜಿಲ್ಲೆಯ ಅರ್ಹ ರೈತ ಮಕ್ಕಳು ತರಬೇತಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ. ಉತ್ತೀರ್ಣರಾಗಿರಬೇಕು. ಅಭ್ಯರ್ಥಿಯ ತಂದೆ/ತಾಯಿ/ಪೋಷಕರು ಕಡ್ಡಾಯವಾಗಿ ಜಮೀನು ಹೊಂದಿದ್ದು, ಸ್ವಂತ ಸಾಗುವಳಿ ಮಾಡುತ್ತಿರಬೇಕು. ಪ.ಜಾತಿ/ಪಂಗಡದ ಅಭ್ಯರ್ಥಿಗಳು 18 ರಿಂದ 33 ವರ್ಷ ಹಾಗೂ ಇತರರು 18 ರಿಂದ 30 ವರ್ಷ ವಯೋಮಾನದೊಳಗಿನವರಾಗಿರಬೇಕು.
ಅರ್ಜಿಯೊಂದಿಗೆ ಸಾಮಾನ್ಯ ಅಭ್ಯರ್ಥಿಗಳು 30 ರೂ. ಹಾಗೂ ಪ.ಜಾತಿ/ಪಂಗಡದ ಅಭ್ಯರ್ಥಿಗಳು 15 ರೂ.ಗಳ ಅರ್ಜಿ ಶುಲ್ಕವನ್ನು ಇಂಡಿಯನ್ ಪೋಸ್ಟಲ್ ಆರ್ಡರ್/ಡಿಮ್ಯಾಂಡ್ ಡ್ರಾಫ್ಟನ್ನು ತೋಟಗಾರಿಕೆ ಉಪನಿರ್ದೇಶಕರು(ಜಿ.ಪಂ.) ತುಮಕೂರು ಅವರ ಹೆಸರಿನಲ್ಲಿ ಪಡೆದು ಸಲ್ಲಿಸಬೇಕು.
ಅರ್ಜಿಯನ್ನು ಇಲಾಖಾ ವೆಬ್ಸೈಟ್ https://horticulturedir.karnataka.gov.in ಅಥವಾ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು(ರಾಜ್ಯವಲಯ), ತುಮಕೂರು ಇವರಿಂದ ಪಡೆದುಕೊಳ್ಳಬಹುದು.
ಭರ್ತಿ ಮಾಡಿದ ಅರ್ಜಿಯನ್ನು ಏಪ್ರಿಲ್ 1ರೊಳಗಾಗಿ ಸಲ್ಲಿಸಬೇಕು. ತರಬೇತಿಗೆ ಆಯ್ಕೆ ಮಾಡಲು ಏಪ್ರಿಲ್ 8ರಂದು ಬೆಳಿಗ್ಗೆ 11 ಗಂಟೆಗೆ ಸಂದರ್ಶನವನ್ನು ಏರ್ಪಡಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂ.ವಾ.ಸಂ.0816–2278647ನ್ನು ಸಂಪರ್ಕಿಸಬೇಕೆಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4