nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್ | 12 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

    November 6, 2025

    ಕುಣಿಗಲ್ | ಬೈಕ್‌ ಗೆ ಕಾರು ಡಿಕ್ಕಿ: ದಂಪತಿಯ ದಾರುಣ ಸಾವು

    November 6, 2025

    ಸರಗೂರು: ಕೊನೆಗೂ ಜಯಲಕ್ಷ್ಮೀಪುರ ಗ್ರಾಮಕ್ಕೆ ಬಂತು ಸರ್ಕಾರಿ ಬಸ್: ಗ್ರಾಮಸ್ಥರಿಂದ ಹರ್ಷ

    November 5, 2025
    Facebook Twitter Instagram
    ಟ್ರೆಂಡಿಂಗ್
    • ಬೀದರ್ | 12 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ
    • ಕುಣಿಗಲ್ | ಬೈಕ್‌ ಗೆ ಕಾರು ಡಿಕ್ಕಿ: ದಂಪತಿಯ ದಾರುಣ ಸಾವು
    • ಸರಗೂರು: ಕೊನೆಗೂ ಜಯಲಕ್ಷ್ಮೀಪುರ ಗ್ರಾಮಕ್ಕೆ ಬಂತು ಸರ್ಕಾರಿ ಬಸ್: ಗ್ರಾಮಸ್ಥರಿಂದ ಹರ್ಷ
    • ಪ.ಜಾತಿ ವಿದ್ಯಾರ್ಥಿ ವೇತನಕ್ಕೆ ವಿದ್ಯಾರ್ಥಿಗಳ ಆಧಾರ್ ಇ–ದೃಢೀಕರಣ ಕಡ್ಡಾಯ: ವಿ.ಕೆ.ಬಡಿಗೇರ
    • ಕನ್ನಡ ಮತ್ತು ಸಂಸ್ಕೃತಿ ಇಲಾಖೆ: ಸ್ಪರ್ಧಾ ಕಾರ್ಯಕ್ರಮ ಮುಂದೂಡಿಕೆ
    • ನ.10: ಶ್ರೀ ಗುರುಸಂಗಮೇಶ್ವರಸ್ವಾಮಿ ಅವರ ಲಕ್ಷದೀಪೋತ್ಸವ ಆಚರಣೆ
    • ವಿದ್ಯಾರ್ಥಿ ವೇತನ: ಬಯೋಮೆಟ್ರಿಕ್ ಇ–ದೃಢೀಕರಣ ಕಡ್ಡಾಯ
    • ನವೆಂಬರ್ 7: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ತುಮಕೂರು ಜಿಲ್ಲಾ ಪ್ರವಾಸ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹೊಸ ರಾಜಕಾರಣದ ಸಮೀಕರಣಕ್ಕೆ ನಾಂದಿ ಹಾಡಿದ ಹೆಚ್.ಡಿ.ದೇವೇಗೌಡರು
    ತುಮಕೂರು December 5, 2021

    ಹೊಸ ರಾಜಕಾರಣದ ಸಮೀಕರಣಕ್ಕೆ ನಾಂದಿ ಹಾಡಿದ ಹೆಚ್.ಡಿ.ದೇವೇಗೌಡರು

    By adminDecember 5, 2021No Comments2 Mins Read
    • ರಾಜೇಶ್ ರಂಗನಾಥ್

    ತುಮಕೂರು: ಮುಂದಿನ ವಿಧಾನಸಭಾ ಮತ್ತು ಲೋಕಸಭಾ ಚುನಾವಣೆಯಲ್ಲಿ ತಾವು ತುಮಕೂರಿನಲ್ಲೇ ಇದ್ದು ಪಕ್ಷದ ಗೆಲುವಿಗೆ ಶ್ರಮಿಸುವುದಾಗಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ತಿಳಿಸಿ ಹೊಸ ರಾಜಕಾರಣದ ಸಮೀಕರಣಕ್ಕೆ ನಾಂದಿ ಹಾಡಿದರು.

    ಅವರು ತಾಲ್ಲೂಕಿನ ಬಳ್ಳಗೆರೆಯ ಶಾಸಕ ಡಿ.ಸಿ.ಗೌರಿಶಂಕರ್ ರವರ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ,  ಕಳೆದ ಲೋಕಸಭಾ ಚುನಾವಣೆಯಲ್ಲಿ ಪರಾಭವಗೊಂಡ ಬಗ್ಗೆ ಅನ್ಯ ಪಕ್ಷದ ರಾಜ್ಯ ಹಾಗೂ ಜಿಲ್ಲಾ ನಾಯಕರುಗಳು ತಮಗಿಚ್ಛೆ ಬಂದಂತೆ ಹೇಳಿಕೆ ನೀಡುತ್ತಿದ್ದು, ಆ ಹೇಳಿಕೆಗಳಿಗೆ ಮತ್ತು ಅವರ ಆರೋಪಗಳಿಗೆ ಯಾವುದೇ ಮನ್ನಣೆ ನೀಡುವುದಿಲ್ಲ. ತಮಗೆ ಪಕ್ಷ ಸಂಘಟನೆ ಮಾಡುವ ಗುರಿ ಮುಂದಿದ್ದು, ಅದಕ್ಕಾಗಿ ರಾಜ್ಯವ್ಯಾಪಿ ಪ್ರವಾಸ ಮಾಡಿ ಮಾಡಿಯೇ ತೀರುತ್ತೇನೆ. ನಾನು ಕಳೆದ ಬಾರಿ ಲೋಕಸಭೆಯಲ್ಲಿಯೇ ಇನ್ನು ಮುಂದೆ ಚುನಾವಣೆಗೆ ಸ್ಫರ್ಧಿಸುವುದಿಲ್ಲ ಎಂದು ಭಾಷಣ ಮಾಡಿ ಹೊರಬಂದಿದ್ದೆ. ಆದರೆ ಅಂದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರೇ ನನ್ನನ್ನು ತುಮಕೂರು ಲೋಕಸಭಾ ಚುನಾವಣೆಗೆ ಸ್ಪರ್ಧಿಸುವಂತೆ ಆಹ್ವಾನ ನೀಡಿ ಕರೆತಂದರು. ಇಲ್ಲಿಯ ಸಂಸದರಾಗಿದ್ದ ಮುದ್ದಹನುಮೇಗೌಡರಿಗೆ ಟಿಕೆಟ್ ತಪ್ಪಿಸುವ ಉದ್ದೇಶ ನನ್ನದಾಗಿರಲಿಲ್ಲ ಎಂದು ತಿಳಿಸಿದರು.


    Provided by
    Provided by

    ವಿಧಾನ ಪರಿಷತ್ ಚುನಾವಣೆಯಲ್ಲಿ ತಮ್ಮ ಪಕ್ಷದ ವತಿಯಿಂದ ಏಳು ಕ್ಷೇತ್ರಗಳಲ್ಲಿ ಅಭ್ಯರ್ಥಿಯನ್ನು ಮಾತ್ರ ಹಾಕಿದ್ದು, ಉಳಿದ ಕ್ಷೇತ್ರಗಳಲ್ಲಿ ಯಾರಿಗೆ ಬೆಂಬಲ ನೀಡಬೇಕೆಂಬುದರ ಬಗ್ಗೆ ಭಾನುವಾರ ಕುಮಾರಸ್ವಾಮಿಯವರು ತಿಳಿಸಲಿದ್ದಾರೆ ಎಂದರು.

    ಕೆ.ಎನ್.ರಾಜಣ್ಣನವರ ವಿರುದ್ಧ ವಗ್ದಾಳಿ ನಡೆಸಿದ ದೇವೇಗೌಡರು, ತಮ್ಮಿಂದ ರಾಜಣ್ಣನವರಿಗೆ ಯಾವುದೇ ಅನ್ಯಾಯವಾಗಿಲ್ಲ. ಹಿಂದೆ ಚುನಾವಣೆಯಲ್ಲಿ ಅವರ ಪರವಾಗಿ ಬಂದು ಪ್ರಚಾರ ಮಾಡಿ ಅವರನ್ನು ಗೆಲ್ಲಿಸಿದ್ದೆ. ಅವರು ಈಗ ತಮ್ಮ ವಿರುದ್ಧ ಮಾತನಾಡಿದ್ದು, ಕಾಲವೇ ಎಲ್ಲದಕ್ಕು ಉತ್ತರ ನೀಡಲಿದೆ. ತುಮಕೂರು ವಿ.ಪ. ಚುನಾವಣೆಗೆ ರಾಜಣ್ಣನವರ ಸಮುದಾಯದ ಅಭ್ಯರ್ಥಿಗೆ ಜೆಡಿಎಸ್ ನಿಂದ ಟಿಕೆಟ್ ನೀಡಿದ್ದು ತಾವು ಜಾತಿ ಸಮೀಕರಣದ ಮೇಲೆ ರಾಜಕಾರಣ ಮಾಡಿಲ್ಲ. ಪಕ್ಷದ ಅಭ್ಯರ್ಥಿ ಅನಿಲ್ ಕುಮಾರ್ ಸಮರ್ಥರಿದ್ದು, ಕೆ.ಎ.ಎಸ್. ಅಧಿಕಾರಿಯಾಗಿ ಕೆಲಸ ಮಾಡಿದ್ದು, ಸಾರ್ವಜನಿಕ ಸೇವೆಮಾಡಲು ಮುಂದೆ ಬಂದಿದ್ದಾರೆ. ಅವರಿಗೆ ಪಕ್ಷ ಅವಕಾಶ ನೀಡಿದ್ದು ಅವರ ಗೆಲುವು ನಿಶ್ಚಿತ ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಗ್ರಾಮಾಂತರ ಶಾಸಕ ಡಿ.ಸಿ. ಗೌರಿಶಂಕರ್, ಜೆಡಿಎಸ್ ಮುಖಂಡರಾದ ಫಾಲನೇತ್ರಯ್ಯ, ಟಿ.ಆರ್. ನಾಗರಾಜು, ಹಾಲನೂರು ಅನಂತ್, ಸಿರಾಕ್ ರವೀಶ್, ಮುಂತಾದವರು ಉಪಸ್ಥಿತರಿದ್ದರು.

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

     

    admin
    • Website

    Related Posts

    ಕನ್ನಡ ಮತ್ತು ಸಂಸ್ಕೃತಿ ಇಲಾಖೆ: ಸ್ಪರ್ಧಾ ಕಾರ್ಯಕ್ರಮ ಮುಂದೂಡಿಕೆ

    November 5, 2025

    ನ.10: ಶ್ರೀ ಗುರುಸಂಗಮೇಶ್ವರಸ್ವಾಮಿ ಅವರ ಲಕ್ಷದೀಪೋತ್ಸವ ಆಚರಣೆ

    November 5, 2025

    ವಿದ್ಯಾರ್ಥಿ ವೇತನ: ಬಯೋಮೆಟ್ರಿಕ್ ಇ–ದೃಢೀಕರಣ ಕಡ್ಡಾಯ

    November 5, 2025

    Leave A Reply Cancel Reply

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೀದರ್ | 12 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

    November 6, 2025

    ಬೀದರ್: ಜಿಲ್ಲೆಯ ನಿವೇಶನದ ಡಿಜಿಟಲ್ ಖಾತಾ ಮಾಡಿಕೊಡಲು 12 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಅಭಿವೃದ್ಧಿ…

    ಕುಣಿಗಲ್ | ಬೈಕ್‌ ಗೆ ಕಾರು ಡಿಕ್ಕಿ: ದಂಪತಿಯ ದಾರುಣ ಸಾವು

    November 6, 2025

    ಸರಗೂರು: ಕೊನೆಗೂ ಜಯಲಕ್ಷ್ಮೀಪುರ ಗ್ರಾಮಕ್ಕೆ ಬಂತು ಸರ್ಕಾರಿ ಬಸ್: ಗ್ರಾಮಸ್ಥರಿಂದ ಹರ್ಷ

    November 5, 2025

    ಪ.ಜಾತಿ ವಿದ್ಯಾರ್ಥಿ ವೇತನಕ್ಕೆ ವಿದ್ಯಾರ್ಥಿಗಳ ಆಧಾರ್ ಇ–ದೃಢೀಕರಣ ಕಡ್ಡಾಯ: ವಿ.ಕೆ.ಬಡಿಗೇರ

    November 5, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.