nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಅನುಕೂಲವಾಗುವಂತೆ ಬಾಲಭವನ ಅಭಿವೃದ್ಧಿಗೆ ಪೂರಕ ಕಾಮಗಾರಿ ಕೈಗೊಳ್ಳಲು ಸಿಇಒ ಅಶ್ವಿಜಾ ಸಲಹೆ

    June 20, 2026

    ಪಾವಗಡ: ವಸತಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಶಾಸಕರಿಗೆ ಪ್ರಾಂಶುಪಾಲರ ಮನವಿ

    June 20, 2026

    ಎಸ್ ಐಆರ್ ಪ್ರಕ್ರಿಯೆಯಿಂದ ತಿಪಟೂರು ಕ್ಷೇತ್ರದ ಯಾವೊಬ್ಬ ಮತದಾರನೂ ಹೊರಗುಳಿಯಬಾರದು: ಸಿ.ಬಿ. ಶಶಿಧರ್

    June 20, 2026
    Facebook Twitter Instagram
    ಟ್ರೆಂಡಿಂಗ್
    • ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಅನುಕೂಲವಾಗುವಂತೆ ಬಾಲಭವನ ಅಭಿವೃದ್ಧಿಗೆ ಪೂರಕ ಕಾಮಗಾರಿ ಕೈಗೊಳ್ಳಲು ಸಿಇಒ ಅಶ್ವಿಜಾ ಸಲಹೆ
    • ಪಾವಗಡ: ವಸತಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಶಾಸಕರಿಗೆ ಪ್ರಾಂಶುಪಾಲರ ಮನವಿ
    • ಎಸ್ ಐಆರ್ ಪ್ರಕ್ರಿಯೆಯಿಂದ ತಿಪಟೂರು ಕ್ಷೇತ್ರದ ಯಾವೊಬ್ಬ ಮತದಾರನೂ ಹೊರಗುಳಿಯಬಾರದು: ಸಿ.ಬಿ. ಶಶಿಧರ್
    • ‘ಪಿಎಂ–ವಿಬಿಆರ್‌ ವೈ’: ತುಮಕೂರಿನಲ್ಲಿ ಪ್ರಾದೇಶಿಕ ಕಾರ್ಯಕ್ರಮ ಯಶಸ್ವಿ | 37 ಯುವಕರಿಗೆ ಉದ್ಯೋಗ ಪತ್ರ ವಿತರಣೆ
    • ಶಿವಮೊಗ್ಗ: ಜೂನ್ 21 ರಂದು ನೀಟ್ ಪರೀಕ್ಷೆ: ಜಿಲ್ಲಾಡಳಿತದಿಂದ ಸಕಲ ಸಿದ್ದತೆ ಹಾಗೂ ಬಿಗಿ ಕ್ರಮ: ಪ್ರಭುಲಿಂಗ ಕವಳಿಕಟ್ಟಿ
    • ಬಳ್ಳಾರಿಯಲ್ಲಿ ಯೋಗ ಜಾಗೃತಿಗಾಗಿ ‘ನಡಿಗೆ ಜಾಥಾ’ | ಯೋಗದಿಂದ ಉತ್ತಮ ಆರೋಗ್ಯ ಮತ್ತು ಮಾನಸಿಕ ನೆಮ್ಮದಿ ಸಾಧ್ಯ: ಡಾ.ಟಿ. ಫಣೇಂದರ್
    • ಬಳ್ಳಾರಿ: ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ಸರ್ಕಾರಿ ಶಾಲೆಗಳ ದತ್ತು: ಶ್ಲಾಘನೆ
    • ಮಹಿಳೆಯರು ಸೌಲಭ್ಯಗಳನ್ನು ಬಳಸಿಕೊಂಡು ಅಭಿವೃದ್ಧಿ ಹೊಂದಲು ಡಾ.ಅಕ್ಕೈ ಪದ್ಮಶಾಲಿ ಕರೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಇಲ್ಲಿ ಪ್ರತಿವರ್ಷ ಸಾವಿರಾರು ಹೊಸ ವಾಚ್‌ ಗಳನ್ನು ನದಿಯಲ್ಲಿ ಎಸೆಯಲಾಗುತ್ತದೆ!
    ಸ್ಪೆಷಲ್ ನ್ಯೂಸ್ March 9, 2022

    ಇಲ್ಲಿ ಪ್ರತಿವರ್ಷ ಸಾವಿರಾರು ಹೊಸ ವಾಚ್‌ ಗಳನ್ನು ನದಿಯಲ್ಲಿ ಎಸೆಯಲಾಗುತ್ತದೆ!

    By adminMarch 9, 2022No Comments2 Mins Read
    time

    Provided by
    Provided by

    ಭಾರತವು ಅನೇಕ ವಿಚಿತ್ರ ಮತ್ತು ನಿಗೂಢ ದೇವಾಲಯಗಳ ತವರೂರು. ಕೆಲ ದೇವಾಲಯಗಳಲ್ಲಿ ವಿಚಿತ್ರ ಸಂಪ್ರದಾಯಗಳನ್ನು ಆಚರಿಸಿಕೊಂಡು ಬರಲಾಗುತ್ತಿದೆ. ಹೆಚ್ಚಿನ ಜನರು ಈ ದೇವಾಲಯಗಳಿಗೆ ವಿವಿಧ ರೀತಿಯ ವಸ್ತುಗಳನ್ನು ಅರ್ಪಿಸುತ್ತಾರೆ. ಹೀಗೆ ಮಾಡುವುದರಿಂದ ಇಷ್ಟಾರ್ಥಗಳು ಈಡೇರುತ್ತವೆಂದು ಅವರು ನಂಬಿದ್ದಾರೆ. ಹೀಗಾಗಿ ಚಿತ್ರ-ವಿಚಿತ್ರ ಸಂಪ್ರದಾಯಗಳನ್ನು ಅನೇಕ ವರ್ಷಗಳಿಂದ ಪಾಲಿಸಿಕೊಂಡು ಬರುತ್ತಿದ್ದಾರೆ.

    ಇಂದು ನಾವು ನಿಮಗೆ ಮಧ್ಯಪ್ರದೇಶ(Madhya Pradesh)ದ ಮಂದಸೌರ್‌ನಲ್ಲಿರುವ ಅಂತಹ ವಿಚಿತ್ರ ದೇವಾಲಯದ ಬಗ್ಗೆ ತಿಳಿಸುತ್ತೇವೆ. ಇದು ತುಂಬಾ ವಿಚಿತ್ರ ಸಂಪ್ರದಾಯ ಹೊಂದಿರುವ ದೇವಸ್ಥಾನವಾಗಿದೆ. ಏಕೆಂದರೆ ಈ ದೇವಾಲಯದಲ್ಲಿ ಯಾವುದೇ ದೇವತೆ ಅಥವಾ ಯಾವುದೇ ಪಂಡಿತ-ಪುರೋಹಿತರು ಕುಳಿತುಕೊಳ್ಳುವುದಿಲ್ಲ. ಆದರೂ ಜನರು ಇಲ್ಲಿಗೆ ಬಂದು ತಲೆಬಾಗಿ ನಮಿಸುತ್ತಾ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ದೇವರಲ್ಲಿ ಪ್ರಾರ್ಥಿಸುತ್ತಾರೆ. ಈ ದೇವಾಲಯದ ಹೆಸರು ಸಾಗಸ್ ಬಾವ್ಜಿ ದೇವಾಲಯ(Sagas bavji Hindu Temple).ದಾರಿ ತಪ್ಪಿದ ಜನರಿಗೆ ದಾರಿ ತೋರುವ ದೇವರು

    ಸಾಗಸ್ ಬಾವ್ಜಿ(Sagas bavji) ಎಂದರೆ ಯಕ್ಷ. ಸಾಗಸ್ ಬಾವ್ಜಿಯನ್ನು ಧರ್ಮಗ್ರಂಥಗಳಲ್ಲಿ ಯಕ್ಷ ಎಂದು ಕರೆಯಲಾಗಿದೆ ಎಂದು ಸ್ಥಳೀಯ ಜನರು ನಂಬುತ್ತಾರೆ. ಯಕ್ಷನು ಹಣವನ್ನು ಕಾಪಾಡುತ್ತಾರೆಂಬ ನಂಬಿಕೆ ಇಲ್ಲಿದೆ. ಇಲ್ಲಿ ಯಕ್ಷರು ಶಾರೀರಿಕ ರೂಪದಲ್ಲಿ ಕಾಣಿಸಿಕೊಂಡು ದಾರಿ ತಪ್ಪಿದ ಜನರಿಗೆ ದಾರಿ ತೋರಿಸುತ್ತಾರೆ ಎನ್ನುತ್ತಾರೆ ಇಲ್ಲಿನ ಜನ. ಆದ್ದರಿಂದಲೇ ದೂರದೂರುಗಳಿಂದ ಇಲ್ಲಿಗೆ ಬರುವ ಜನರಿಗೆ ಸರಿಯಾದ ದಿಕ್ಕು ಸಿಗುತ್ತದೆ ಮತ್ತು ಜೀವನದ ದುಃಖಗಳು ದೂರವಾಗುತ್ತವೆ ಎಂಬ ನಂಬಿಕೆ ಇದೆ.

    ಉಡುಗೊರೆಯಾಗಿ ಕೈಗಡಿಯಾರ ನೀಡುವ ಜನರು

    ಈ ದೇವಾಲಯ(Sagas Bavji Temple)ಕ್ಕೆ ಸಂಬಂಧಿಸಿದ ಕುತೂಹಲಕಾರಿ ಸಂಗತಿಗಳು ಇಲ್ಲಿಗೇ ಮುಗಿಯುವುದಿಲ್ಲ. ಈ ದೇವಾಲಯಕ್ಕೆ ಬರುವ ಭಕ್ತರು ನೀಡುವ ಕಾಣಿಕೆಗಳು ತುಂಬಾ ವಿಚಿತ್ರವಾಗಿವೆ. ಜನರು ಇಲ್ಲಿಗೆ ಬಂದು ಸಾಗಸ್ ಬಾವ್ಜಿಗೆ ಗಡಿಯಾರ ಮತ್ತು ವಾಚ್ ಗಳನ್ನು ಕಾಣಿಕೆಯಾಗಿ ಸಮರ್ಪಿಸುತ್ತಾರೆ. ಹೀಗೆ ಮಾಡುವುದರಿಂದ ಅವರ ಕೆಟ್ಟ ದಿನಗಳು ದೂರವಾಗುತ್ತವೆ ಮತ್ತು ಜೀವನದಲ್ಲಿ ಸಂತೋಷ ಬರುತ್ತದೆ ಎಂಬ ನಂಬಿಕೆ ಇದೆ. ಈ ದೇವಾಲಯದಲ್ಲಿ ಗಡಿಯಾರಗಳ ರಾಶಿಯೇ ಇರುತ್ತದೆ. ಅಷ್ಟೇ ಅಲ್ಲ ಇಲ್ಲಿಂದ ವಾಚ್ ಕದ್ದೊಯ್ದರೆ ಆ ಸಮಯದಿಂದ ಆತನ ಕೆಟ್ಟ ಕಾಲ ಶುರುವಾಗುತ್ತದೆ ಎಂದೂ ಹೇಳಲಾಗುತ್ತದೆ. ಆದುದರಿಂದಲೇ ಯಾರೂ ಇಲ್ಲಿನ ವಾಚ್ ಗಳನ್ನು ಅಪ್ಪಿತಪ್ಪಿಯೂ ಮನೆಗೆ ತೆಗೆದುಕೊಂಡು ಹೋಗುವುದಿಲ್ಲ.ಗಡಿಯಾರಗಳನ್ನು ನದಿಯಲ್ಲಿ ಎಸೆಯಲಾಗುತ್ತದೆ

    ಗಡಿಯಾರಗಳ ರಾಶಿಯಿಂದ ದೇವಾಲಯ(Hindu Temple) ತುಂಬಿದ್ದಾಗ ಅವುಗಳನ್ನು ಹತ್ತಿರದ ನದಿಗೆ ಎಸೆಯಲಾಗುತ್ತದೆ. ಈ ದೇವಾಲಯದಲ್ಲಿ ಗಡಿಯಾರಗಳ ರಾಶಿ ಸಂಗ್ರಹವಾದರೂ ಇಲ್ಲಿ ಎಂದಿಗೂ ಬೀಗ ಹಾಕಲಾಗಿಲ್ಲ. ಒಮ್ಮೆ ಒಬ್ಬ ವ್ಯಕ್ತಿ ಇಲ್ಲಿಂದ 5 ವಾಚ್‌ಗಳನ್ನು ಕದ್ದಿದ್ದನಂತೆ. ನಂತರ ಆತ ತನ್ನ ಕಣ್ಣುಗಳನ್ನೇ ಕಳೆದುಕೊಂಡಿದ್ದನಂತೆ. ಬಳಿಕ ಆತ ದೇವಾಲಯಕ್ಕೆ 10 ವಾಚ್‌ಗಳನ್ನು ಸಮರ್ಪಿಸಿದಾಗ ವಾಪಸ್ ಆತನಿಗೆ ಕಣ್ಣುಗಳು ಬಂದವಂತೆ. ಸಂತಾನ ಭಾಗ್ಯದಿಂದ ಹಿಡಿದು ಕಳೆದುಹೋದ ವಸ್ತುಗಳನ್ನು ವಾಪಸ್ ಪಡೆಯುವವರೆಗೆ ಇಲ್ಲಿನ ದೇವರು ಬೇಡಿಕೊಂಡ ವರವನ್ನು ದಯಪಾಲಿಸುತ್ತಾನೆಂಬ ನಂಬಿಕೆ ಇಲ್ಲಿನ ಜನರಲ್ಲಿದೆ.

    ವರದಿ: ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಭಾರತದ ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು

    June 5, 2026

    ವಿಜಯ ರಾಘವೇಂದ್ರ ನಟನೆಯ ಕೌಟುಂಬಿಕ ಕಥಾನಕ “ಶ್ರೀಮತಿ ಸಿಂಧೂರ” ಆಡಿಯೋ ಟೀಸರ್ ರಿಲೀಸ್

    May 2, 2026

    ಬೆಟ್ಟಿಂಗ್ ಆಟದ ಹಿನ್ನೆಲೆಯ ಚಿತ್ರ ’ಲೂಪ್’ ಮೇ 8ಕ್ಕೆ ತೆರೆಗೆ

    April 27, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಅನುಕೂಲವಾಗುವಂತೆ ಬಾಲಭವನ ಅಭಿವೃದ್ಧಿಗೆ ಪೂರಕ ಕಾಮಗಾರಿ ಕೈಗೊಳ್ಳಲು ಸಿಇಒ ಅಶ್ವಿಜಾ ಸಲಹೆ

    June 20, 2026

    ತುಮಕೂರು: ಮಕ್ಕಳ ಸರ್ವಾಂಗೀಣ ಪ್ರಗತಿಗಾಗಿ ನಗರದಲ್ಲಿರುವ ಬಾಲ ಭವನವನ್ನು ಅತ್ಯಾಧುನಿಕವಾಗಿ ಅಭಿವೃದ್ಧಿ ಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪಂಚಾಯತ್,…

    ಪಾವಗಡ: ವಸತಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಶಾಸಕರಿಗೆ ಪ್ರಾಂಶುಪಾಲರ ಮನವಿ

    June 20, 2026

    ಎಸ್ ಐಆರ್ ಪ್ರಕ್ರಿಯೆಯಿಂದ ತಿಪಟೂರು ಕ್ಷೇತ್ರದ ಯಾವೊಬ್ಬ ಮತದಾರನೂ ಹೊರಗುಳಿಯಬಾರದು: ಸಿ.ಬಿ. ಶಶಿಧರ್

    June 20, 2026

    ‘ಪಿಎಂ–ವಿಬಿಆರ್‌ ವೈ’: ತುಮಕೂರಿನಲ್ಲಿ ಪ್ರಾದೇಶಿಕ ಕಾರ್ಯಕ್ರಮ ಯಶಸ್ವಿ | 37 ಯುವಕರಿಗೆ ಉದ್ಯೋಗ ಪತ್ರ ವಿತರಣೆ

    June 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.