nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು–ಬೆಂಗಳೂರು ಮೆಟ್ರೋ ಸಂಪರ್ಕ ಯೋಜನೆ: ಕೇಂದ್ರದ ಅನುಮತಿಗೆ ರಾಜ್ಯ ಸರ್ಕಾರ ಪತ್ರ!

    August 16, 2026

    ಅಂಗನವಾಡಿ ಮೇಲ್ಛಾವಣಿಯ ಸಿಮೆಂಟ್ ಪ್ಲಾಸ್ಟರ್ ಕುಸಿತ: ನಾಲ್ವರು ಮಕ್ಕಳು, ಕಾರ್ಯಕರ್ತೆಗೆ ಗಾಯ

    August 16, 2026

    RSS ಅಷ್ಟೊಂದು ಉತ್ತಮವಾಗಿದ್ದರೆ, ಬಿಜೆಪಿ ನಾಯಕರ ಮಕ್ಕಳು ಏಕೆ ಸ್ವಯಂ ಸೇವಕರಾಗುತ್ತಿಲ್ಲ?: ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ

    August 16, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು–ಬೆಂಗಳೂರು ಮೆಟ್ರೋ ಸಂಪರ್ಕ ಯೋಜನೆ: ಕೇಂದ್ರದ ಅನುಮತಿಗೆ ರಾಜ್ಯ ಸರ್ಕಾರ ಪತ್ರ!
    • ಅಂಗನವಾಡಿ ಮೇಲ್ಛಾವಣಿಯ ಸಿಮೆಂಟ್ ಪ್ಲಾಸ್ಟರ್ ಕುಸಿತ: ನಾಲ್ವರು ಮಕ್ಕಳು, ಕಾರ್ಯಕರ್ತೆಗೆ ಗಾಯ
    • RSS ಅಷ್ಟೊಂದು ಉತ್ತಮವಾಗಿದ್ದರೆ, ಬಿಜೆಪಿ ನಾಯಕರ ಮಕ್ಕಳು ಏಕೆ ಸ್ವಯಂ ಸೇವಕರಾಗುತ್ತಿಲ್ಲ?: ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ
    • ಸತ್ತವರು ಬೇಟೆಗಾರರಲ್ಲ, ರೈತರು: ಹನೂರು ಶೂಟೌಟ್ ಪ್ರಕರಣದಲ್ಲಿ ಅರಣ್ಯ ಸಿಬ್ಬಂದಿ ವಿರುದ್ಧ ಮೃತರ ಕುಟುಂಬಸ್ಥರ ಗಂಭೀರ ಆರೋಪ
    • ತುಮಕೂರಿಗೆ ಏರ್‌ ಪೋರ್ಟ್, ಮೆಡಿಕಲ್ ಕಾಲೇಜು: ಶೀಘ್ರ ಸಿಎಂ ಭೇಟಿ: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್
    • 80ನೇ ಸ್ವಾತಂತ್ರ್ಯ ದಿನಾಚರಣೆ: ಹುತಾತ್ಮರ ಕನಸಿನ ಭಾರತ ನಿರ್ಮಿಸಲು ವಿದ್ಯಾರ್ಥಿಗಳಿಂದ ಪ್ರತಿಜ್ಞೆ!
    • ಗಿರಿನಗರ ಸರ್ಕಾರಿ ಶಾಲೆ ಅಭಿವೃದ್ಧಿಗೆ ₹1 ಲಕ್ಷ ದೇಣಿಗೆ ಘೋಷಿಸಿದ ಸಮಾಜ ಸೇವಕ ಸದಾನಂದ
    • ಪ್ರಾಣತ್ಯಾಗ ಬಲಿದಾನದಿಂದ ಬಂದ ಸ್ವಾತಂತ್ರ್ಯವನ್ನ ಇವತ್ತೀನ ಯುವ ಪೀಳಿಗೆ ಅರಿಯಬೇಕು: ತಹಶೀಲ್ದಾರ್ ಮಂಜುನಾಥ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಇಲ್ಲಿ ಪ್ರತಿವರ್ಷ ಸಾವಿರಾರು ಹೊಸ ವಾಚ್‌ ಗಳನ್ನು ನದಿಯಲ್ಲಿ ಎಸೆಯಲಾಗುತ್ತದೆ!
    ಸ್ಪೆಷಲ್ ನ್ಯೂಸ್ March 9, 2022

    ಇಲ್ಲಿ ಪ್ರತಿವರ್ಷ ಸಾವಿರಾರು ಹೊಸ ವಾಚ್‌ ಗಳನ್ನು ನದಿಯಲ್ಲಿ ಎಸೆಯಲಾಗುತ್ತದೆ!

    By adminMarch 9, 2022No Comments2 Mins Read
    time

    ಭಾರತವು ಅನೇಕ ವಿಚಿತ್ರ ಮತ್ತು ನಿಗೂಢ ದೇವಾಲಯಗಳ ತವರೂರು. ಕೆಲ ದೇವಾಲಯಗಳಲ್ಲಿ ವಿಚಿತ್ರ ಸಂಪ್ರದಾಯಗಳನ್ನು ಆಚರಿಸಿಕೊಂಡು ಬರಲಾಗುತ್ತಿದೆ. ಹೆಚ್ಚಿನ ಜನರು ಈ ದೇವಾಲಯಗಳಿಗೆ ವಿವಿಧ ರೀತಿಯ ವಸ್ತುಗಳನ್ನು ಅರ್ಪಿಸುತ್ತಾರೆ. ಹೀಗೆ ಮಾಡುವುದರಿಂದ ಇಷ್ಟಾರ್ಥಗಳು ಈಡೇರುತ್ತವೆಂದು ಅವರು ನಂಬಿದ್ದಾರೆ. ಹೀಗಾಗಿ ಚಿತ್ರ-ವಿಚಿತ್ರ ಸಂಪ್ರದಾಯಗಳನ್ನು ಅನೇಕ ವರ್ಷಗಳಿಂದ ಪಾಲಿಸಿಕೊಂಡು ಬರುತ್ತಿದ್ದಾರೆ.

    ಇಂದು ನಾವು ನಿಮಗೆ ಮಧ್ಯಪ್ರದೇಶ(Madhya Pradesh)ದ ಮಂದಸೌರ್‌ನಲ್ಲಿರುವ ಅಂತಹ ವಿಚಿತ್ರ ದೇವಾಲಯದ ಬಗ್ಗೆ ತಿಳಿಸುತ್ತೇವೆ. ಇದು ತುಂಬಾ ವಿಚಿತ್ರ ಸಂಪ್ರದಾಯ ಹೊಂದಿರುವ ದೇವಸ್ಥಾನವಾಗಿದೆ. ಏಕೆಂದರೆ ಈ ದೇವಾಲಯದಲ್ಲಿ ಯಾವುದೇ ದೇವತೆ ಅಥವಾ ಯಾವುದೇ ಪಂಡಿತ-ಪುರೋಹಿತರು ಕುಳಿತುಕೊಳ್ಳುವುದಿಲ್ಲ. ಆದರೂ ಜನರು ಇಲ್ಲಿಗೆ ಬಂದು ತಲೆಬಾಗಿ ನಮಿಸುತ್ತಾ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ದೇವರಲ್ಲಿ ಪ್ರಾರ್ಥಿಸುತ್ತಾರೆ. ಈ ದೇವಾಲಯದ ಹೆಸರು ಸಾಗಸ್ ಬಾವ್ಜಿ ದೇವಾಲಯ(Sagas bavji Hindu Temple).ದಾರಿ ತಪ್ಪಿದ ಜನರಿಗೆ ದಾರಿ ತೋರುವ ದೇವರು

    ಸಾಗಸ್ ಬಾವ್ಜಿ(Sagas bavji) ಎಂದರೆ ಯಕ್ಷ. ಸಾಗಸ್ ಬಾವ್ಜಿಯನ್ನು ಧರ್ಮಗ್ರಂಥಗಳಲ್ಲಿ ಯಕ್ಷ ಎಂದು ಕರೆಯಲಾಗಿದೆ ಎಂದು ಸ್ಥಳೀಯ ಜನರು ನಂಬುತ್ತಾರೆ. ಯಕ್ಷನು ಹಣವನ್ನು ಕಾಪಾಡುತ್ತಾರೆಂಬ ನಂಬಿಕೆ ಇಲ್ಲಿದೆ. ಇಲ್ಲಿ ಯಕ್ಷರು ಶಾರೀರಿಕ ರೂಪದಲ್ಲಿ ಕಾಣಿಸಿಕೊಂಡು ದಾರಿ ತಪ್ಪಿದ ಜನರಿಗೆ ದಾರಿ ತೋರಿಸುತ್ತಾರೆ ಎನ್ನುತ್ತಾರೆ ಇಲ್ಲಿನ ಜನ. ಆದ್ದರಿಂದಲೇ ದೂರದೂರುಗಳಿಂದ ಇಲ್ಲಿಗೆ ಬರುವ ಜನರಿಗೆ ಸರಿಯಾದ ದಿಕ್ಕು ಸಿಗುತ್ತದೆ ಮತ್ತು ಜೀವನದ ದುಃಖಗಳು ದೂರವಾಗುತ್ತವೆ ಎಂಬ ನಂಬಿಕೆ ಇದೆ.

    ಉಡುಗೊರೆಯಾಗಿ ಕೈಗಡಿಯಾರ ನೀಡುವ ಜನರು

    ಈ ದೇವಾಲಯ(Sagas Bavji Temple)ಕ್ಕೆ ಸಂಬಂಧಿಸಿದ ಕುತೂಹಲಕಾರಿ ಸಂಗತಿಗಳು ಇಲ್ಲಿಗೇ ಮುಗಿಯುವುದಿಲ್ಲ. ಈ ದೇವಾಲಯಕ್ಕೆ ಬರುವ ಭಕ್ತರು ನೀಡುವ ಕಾಣಿಕೆಗಳು ತುಂಬಾ ವಿಚಿತ್ರವಾಗಿವೆ. ಜನರು ಇಲ್ಲಿಗೆ ಬಂದು ಸಾಗಸ್ ಬಾವ್ಜಿಗೆ ಗಡಿಯಾರ ಮತ್ತು ವಾಚ್ ಗಳನ್ನು ಕಾಣಿಕೆಯಾಗಿ ಸಮರ್ಪಿಸುತ್ತಾರೆ. ಹೀಗೆ ಮಾಡುವುದರಿಂದ ಅವರ ಕೆಟ್ಟ ದಿನಗಳು ದೂರವಾಗುತ್ತವೆ ಮತ್ತು ಜೀವನದಲ್ಲಿ ಸಂತೋಷ ಬರುತ್ತದೆ ಎಂಬ ನಂಬಿಕೆ ಇದೆ. ಈ ದೇವಾಲಯದಲ್ಲಿ ಗಡಿಯಾರಗಳ ರಾಶಿಯೇ ಇರುತ್ತದೆ. ಅಷ್ಟೇ ಅಲ್ಲ ಇಲ್ಲಿಂದ ವಾಚ್ ಕದ್ದೊಯ್ದರೆ ಆ ಸಮಯದಿಂದ ಆತನ ಕೆಟ್ಟ ಕಾಲ ಶುರುವಾಗುತ್ತದೆ ಎಂದೂ ಹೇಳಲಾಗುತ್ತದೆ. ಆದುದರಿಂದಲೇ ಯಾರೂ ಇಲ್ಲಿನ ವಾಚ್ ಗಳನ್ನು ಅಪ್ಪಿತಪ್ಪಿಯೂ ಮನೆಗೆ ತೆಗೆದುಕೊಂಡು ಹೋಗುವುದಿಲ್ಲ.ಗಡಿಯಾರಗಳನ್ನು ನದಿಯಲ್ಲಿ ಎಸೆಯಲಾಗುತ್ತದೆ

    ಗಡಿಯಾರಗಳ ರಾಶಿಯಿಂದ ದೇವಾಲಯ(Hindu Temple) ತುಂಬಿದ್ದಾಗ ಅವುಗಳನ್ನು ಹತ್ತಿರದ ನದಿಗೆ ಎಸೆಯಲಾಗುತ್ತದೆ. ಈ ದೇವಾಲಯದಲ್ಲಿ ಗಡಿಯಾರಗಳ ರಾಶಿ ಸಂಗ್ರಹವಾದರೂ ಇಲ್ಲಿ ಎಂದಿಗೂ ಬೀಗ ಹಾಕಲಾಗಿಲ್ಲ. ಒಮ್ಮೆ ಒಬ್ಬ ವ್ಯಕ್ತಿ ಇಲ್ಲಿಂದ 5 ವಾಚ್‌ಗಳನ್ನು ಕದ್ದಿದ್ದನಂತೆ. ನಂತರ ಆತ ತನ್ನ ಕಣ್ಣುಗಳನ್ನೇ ಕಳೆದುಕೊಂಡಿದ್ದನಂತೆ. ಬಳಿಕ ಆತ ದೇವಾಲಯಕ್ಕೆ 10 ವಾಚ್‌ಗಳನ್ನು ಸಮರ್ಪಿಸಿದಾಗ ವಾಪಸ್ ಆತನಿಗೆ ಕಣ್ಣುಗಳು ಬಂದವಂತೆ. ಸಂತಾನ ಭಾಗ್ಯದಿಂದ ಹಿಡಿದು ಕಳೆದುಹೋದ ವಸ್ತುಗಳನ್ನು ವಾಪಸ್ ಪಡೆಯುವವರೆಗೆ ಇಲ್ಲಿನ ದೇವರು ಬೇಡಿಕೊಂಡ ವರವನ್ನು ದಯಪಾಲಿಸುತ್ತಾನೆಂಬ ನಂಬಿಕೆ ಇಲ್ಲಿನ ಜನರಲ್ಲಿದೆ.

    ವರದಿ: ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಶಾಂತಿ—ಕ್ರಾಂತಿ ರೀ ರಿಲೀಸ್ ಗೆ ಕಾದು ಕುಳಿತ ಅಭಿಮಾನಿಗಳಿಗೆ ನಿರಾಸೆ: ಸದ್ಯಕ್ಕಿಲ್ಲ ರೀ ರಿಲೀಸ್! | ಕಾರಣ ಏನು?

    August 14, 2026

    ‘ಚಂದ್ರಗಿರಿ’ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದ ಮೊದಲ ಹಂತದ ಶೂಟಿಂಗ್ ಕಂಪ್ಲೀಟ್!

    June 22, 2026

    ಭಾರತದ ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು

    June 5, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು–ಬೆಂಗಳೂರು ಮೆಟ್ರೋ ಸಂಪರ್ಕ ಯೋಜನೆ: ಕೇಂದ್ರದ ಅನುಮತಿಗೆ ರಾಜ್ಯ ಸರ್ಕಾರ ಪತ್ರ!

    August 16, 2026

    ತುಮಕೂರು: ಜಿಲ್ಲೆಯ ನಿವಾಸಿಗಳ ದಶಕಗಳ ಕನಸಾದ ‘ತುಮಕೂರು–ಬೆಂಗಳೂರು ಮೆಟ್ರೋ ಸಂಪರ್ಕ ಯೋಜನೆ’ ನನಸಾಗುವ ಹೊಸ್ತಿಲಿಗೆ ಬಂದು ತಲುಪಿದೆ. ಯೋಜನೆಯ ಸುದೀರ್ಘ…

    ಅಂಗನವಾಡಿ ಮೇಲ್ಛಾವಣಿಯ ಸಿಮೆಂಟ್ ಪ್ಲಾಸ್ಟರ್ ಕುಸಿತ: ನಾಲ್ವರು ಮಕ್ಕಳು, ಕಾರ್ಯಕರ್ತೆಗೆ ಗಾಯ

    August 16, 2026

    RSS ಅಷ್ಟೊಂದು ಉತ್ತಮವಾಗಿದ್ದರೆ, ಬಿಜೆಪಿ ನಾಯಕರ ಮಕ್ಕಳು ಏಕೆ ಸ್ವಯಂ ಸೇವಕರಾಗುತ್ತಿಲ್ಲ?: ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ

    August 16, 2026

    ಸತ್ತವರು ಬೇಟೆಗಾರರಲ್ಲ, ರೈತರು: ಹನೂರು ಶೂಟೌಟ್ ಪ್ರಕರಣದಲ್ಲಿ ಅರಣ್ಯ ಸಿಬ್ಬಂದಿ ವಿರುದ್ಧ ಮೃತರ ಕುಟುಂಬಸ್ಥರ ಗಂಭೀರ ಆರೋಪ

    August 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.