ಬೆಂಗಳೂರಿನ ಟಿನ್ ಫ್ಯಾಕ್ಟ್ರಿ ಜಂಕ್ಷನ್ನಿಂದ ಹೊಸಕೋಟೆಯ ಕಾಟನ್ನಲ್ಲೂರುವರೆಗೆ ಎತ್ತರಿಸಿದ ಮೇಲ್ಸೇತುವೆ ಸಂಬಂಧ ಎರಡುಮೂರು ದಿನಗಳಲ್ಲಿ ಸಚಿವರು, ಶಾಸಕರು, ಅಕಾರಿಗಳನ್ನೊಳಗೊಂಡ ಸಭೆ ನಡೆಸಿ ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ವಿಧಾನಸಭೆಗೆ ತಿಳಿಸಿದರು.
2022-23ನೇ ಸಾಲಿನ ಲೋಕೋಪಯೋಗಿ ಇಲಾಖೆ ಅನುದಾನ ಬೇಡಿಕೆಗಳ ಮೇಲಿನ ನಡೆದ ಚರ್ಚೆಗೆ ಉತ್ತರಿಸಿದ ಅವರು, ನಗರಾಭಿವೃದ್ದಿ ಸಚಿವ ಭೈರತಿ ಬಸವರಾಜು, ಕೃಷ್ಣಭೈರೇಗೌಡ ಅವರನ್ನು ಒಳಗೊಂಡಂತೆ ಸಭೆ ನಡೆಸಲಾಗುವುದು. ಅಗತ್ಯಬಿದ್ದರೆ ಮುಖ್ಯಮಂತ್ರಿಯೊಂದಿಗೆ ಕೇಂದ್ರ ಸಚಿವರ ಭೇಟಿ ಮಾಡಲಾಗುವುದು ಎಂದರು.
ಇದಕ್ಕೂ ಮುನ್ನ ಮಾತನಾಡಿದ ಶಾಸಕ ಕೃಷ್ಣಭೈರೇಗೌಡ ಮಾತನಾಡಿ, ಹಳೆ ಮದ್ರಾಸ್ ರಸ್ತೆಯಲ್ಲಿ ಮೇಲ್ಸೇತುವೆ ಇಲ್ಲ. ಟಿನ್ಫ್ಯಾಕ್ಟ್ರಿ ಬಳಿಯಿಂದ ಎಲಿವೆಟೆಡ್ ಫ್ಲೈಓವರ್ ನಿರ್ಮಾಣ ಮಾಡಬೇಕು ಎಂದು ಒತ್ತಾಯಿಸಿದರು.
ಇದಕ್ಕೆ ದನಿಗೂಡಿಸಿದ ಭೈರತಿ ಬಸವರಾಜ್, ಇಂದಿರಾ ನಗರದ ಬಿಡಿಎ ಕಾಂಪ್ಲೆಕ್ಸ್ ಬಳಿಯಿಂದಲೇ ನಿರ್ಮಾಣ ಮಾಡಬೇಕಾಗುತ್ತದೆ. ಮಧ್ಯಪ್ರವೇಶಿಸಿದ ಜೆಡಿಎಸ್ ಬಂಡೆಪ್ಪ ಕಾಶಂಪರ್, ಇಂದು ಕೆಂಪೇಗೌಡ ಏರ್ಪೆಪೋಟ್ನಿಂದ ವಿಧಾನಸೌಧಕ್ಕೆ ಬರಲು 1 ಗಂಟೆ 45 ನಿಮಿಷ ಆಯ್ತು. ಟ್ರಾಫಿಕ್ ಸಮಸ್ಯೆ ಬಗೆಹರಿಸಿ ಎಂದರು.
ವರದಿ: ಆಂಟೋನಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5