ತುಮಕೂರು: ಸರ್ಕಾರಿ ಫ್ರೌಢಶಾಲೆಯಲ್ಲಿ ಮಕ್ಕಳಿಗೆ ಬಿಸಿಯೂಟ ತಯಾರಿಸುವಾಗ ಕುಕ್ಕರ್ ಸ್ಪೋಟಗೊಂಡು ಇಬ್ಬರು ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಪುರವರ ಪ್ರೌಢಶಾಲೆಯಲ್ಲಿ ನಡೆದಿದೆ.
ಇನ್ನೂ ಅಡುಗೆ ಸಹಾಯಕಿ ಉಮಾದೇವಿ (52) ಗೆ ಗಂಭೀರ ಗಾಯವಾಗಿದ್ದು ಜಯಮ್ಮ (55) ಎಂಬುವವರಿಗೆ ಸಣ್ಣಪುಟ್ಟ ಗಾಯವಾಗಿದೆ.
ಹೊಸವರ್ಷದ ಹಿನ್ನೆಲೆ ಮಕ್ಕಳಿಗೆ ಪಲಾವ್ ಮತ್ತು ಪಾಯಸ ಮಾಡಲು ಹೋಗಿ ನಿನ್ನೆ ಮಧ್ಯಾಹ್ನದ ಬಿಸಿಯೂಟ ತಯಾರಿಸುವಾಗ ಘಟನೆ ನಡೆದಿದ್ದು, ಗಂಭೀರವಾಗಿ ಗಾಯಗೊಂಡ ಅಡುಗೆ ಸಹಾಯಕಿ ಉಮಾದೇವಿಗೆ ಮಧುಗಿರಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಸುಮಾರು 30% ದೇಹಕ್ಕೆ ಗಾಯವಾಗಿದ್ದು, ಗುಣಮಟ್ಟದ ಕುಕ್ಕರ್ ಕೊಡದೆ ಇರುವುದೇ ಘಟನೆಗೆ ಕಾರಣ ಎಂಬ ಆರೋಪ ಕೇಳಿ ಬಂದಿದೆ. ಕೊಡಿಗೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx