nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಾಲಕನಿಂದ ಅತ್ಯಾಚಾರ: 18 ವರ್ಷದ ಯುವತಿ ಗರ್ಭಿಣಿ

    August 9, 2025

    ಬೆಂಗಳೂರಿನಲ್ಲಿ ಮತ್ತೊಂದು ಸ್ಟೇಡಿಯಂ: 80,000 ಆಸನ ಸಾಮರ್ಥ್ಯದ ಕ್ರೀಡಾಂಗಣಕ್ಕೆ ಸಿಎಂ ಅನುಮೋದನೆ

    August 9, 2025

    ಬುದ್ಧಿಮಾಂಧ್ಯ  ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ

    August 9, 2025
    Facebook Twitter Instagram
    ಟ್ರೆಂಡಿಂಗ್
    • ಬಾಲಕನಿಂದ ಅತ್ಯಾಚಾರ: 18 ವರ್ಷದ ಯುವತಿ ಗರ್ಭಿಣಿ
    • ಬೆಂಗಳೂರಿನಲ್ಲಿ ಮತ್ತೊಂದು ಸ್ಟೇಡಿಯಂ: 80,000 ಆಸನ ಸಾಮರ್ಥ್ಯದ ಕ್ರೀಡಾಂಗಣಕ್ಕೆ ಸಿಎಂ ಅನುಮೋದನೆ
    • ಬುದ್ಧಿಮಾಂಧ್ಯ  ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ
    • ಅರಿಶಿಣ ಕುಂಕುಮ ಪಡೆಯಲು ಹೋಗುತ್ತಿದ್ದ ಮಹಿಳೆ ಅಪಘಾತಕ್ಕೆ ಬಲಿ
    • 3.15 ಕೋಟಿ ರೂ. ವಂಚನೆ ಆರೋಪ: ನಟ ಧ್ರುವ ಸರ್ಜಾ ವಿರುದ್ಧ ದೂರು
    • ಕೊರಟಗೆರೆ ಜನತೆ ಕಂಡು ಕೇಳರಿಯದ ಕ್ರೈಮ್: ಪೊಲೀಸರಿಗೆ ಸವಾಲಾದ ಭೀಕರ ಕೊಲೆ
    • ಜೆಡಿಎಸ್ ವತಿಯಿಂದ ಸದಸ್ಯತ್ವ ನೋಂದಣಿ ಅಭಿಯಾನ
    • ಸರಗೂರು: ಬಸ್ ಸಂಪರ್ಕ ಕಲ್ಪಿಸಲು ಆಗ್ರಹಿಸಿ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾಜ್ಯ ಹೆದ್ದಾರಿಯನ್ನೇ ನುಂಗಿ ತೇಗಿದ ಹೊಟೇಲ್: ಕಣ್ಮುಚ್ಚಿ ಕುಳಿತ ಲೋಕೋಪಯೋಗಿ ಇಲಾಖೆ
    Uncategorized August 4, 2025

    ರಾಜ್ಯ ಹೆದ್ದಾರಿಯನ್ನೇ ನುಂಗಿ ತೇಗಿದ ಹೊಟೇಲ್: ಕಣ್ಮುಚ್ಚಿ ಕುಳಿತ ಲೋಕೋಪಯೋಗಿ ಇಲಾಖೆ

    By adminAugust 4, 2025No Comments2 Mins Read

    ವರದಿ: ಹಾದನೂರು ಚಂದ್ರ

    ಸರಗೂರು : ರಾಜ್ಯ ಹೆದ್ದಾರಿ ರಸ್ತೆಗೆ ಹೊಂದಿಕೊಂಡಂತೆ ಖಾಸಗಿ ವ್ಯಕ್ತಿಯೊಬ್ಬ ನಿಯಮ ಮೀರಿ ಕಟ್ಟಡ ಕಟ್ಟಿ ರಾಜರೋಷವಾಗಿ ಹೊಟೇಲ್ ತೆರೆದಿದ್ದರು ಸಹ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಕಂಡು ಕಾಣದಂತೆ ಕಣ್ಣು ಮುಚ್ಚಿ ಕುಳಿತಿರುವುದನ್ನು ಕಾಣಬಹುದಾಗಿದೆ.


    Provided by
    Provided by

    ತಾಲ್ಲೂಕಿನ ಮೈಸೂರು ಮಾನಂದವಾಡಿ ಮುಖ್ಯ ರಸ್ತೆಯ ಮೈಸೂರು ಮತ್ತು ಎಚ್.ಡಿ.ಕೋಟೆ ತಾಲ್ಲೂಕಿನ ಗಡಿಭಾಗದಲ್ಲಿ ಮೈಸೂರು ತಾಲ್ಲೂಕಿಗೆ ಸೇರಿಕೊಂಡಂತೆ ಇರುವ ಕಂಚಮಹಳ್ಳಿ– ಮಂಡನಹಳ್ಳಿ ಗ್ರಾಮದ ಮಧ್ಯದಲ್ಲಿರುವ ರಾಜ್ಯ ಹೆದ್ದಾರಿ ಪಕ್ಕದಲ್ಲಿ ಫಿಸ್ ಲ್ಯಾಂಡ್ ಗ್ರೂಪ್ ನವರು ನಿರಂತರ ಪೂಜಾರಿ ಎಂಬ ಹೆಸರಿನ ಹೋಟೆಲ್ ನ್ನು ಮೂರು ಎಕರೆ ಜಾಗದಲ್ಲಿ ನಿರ್ಮಾಣ ಮಾಡಿದ್ದಾರೆ, ಈ ಹಿಂದೆ ತನ್ನ ಹದ್ದುಬಸ್ತಿಗೆ ಕಾಂಪೌಂಡ್ ನಿರ್ಮಾಣ ಮಾಡಿಕೊಂಡು ವಹಿವಾಟು ನಡೆಸುತ್ತಿದ್ದು, ಒಂದು ವರ್ಷದ ಈಚೆಗೆ ಕಾಂಪೌಂಡ್ ನಿಂದ ಹೊರಬಂದು ಸುಮಾರು 50 ಜಾಗದಲ್ಲಿ ಅಕ್ರಮವಾಗಿ ಕಟ್ಟಡ ನಿರ್ಮಾಣ ಮಾಡಿ ಇಲ್ಲಿ ಕ್ಯಾಂಟೀನ್ ತೆರೆದಿದ್ದಾರೆ.

    ರಾಜ್ಯ ಹೆದ್ದಾರಿ ರಸ್ತೆ ಆಗಿರುವುದರಿಂದ ಪ್ರತಿನಿತ್ಯ ಮೈಸೂರಿನಿಂದ ಕೇರಳ ರಾಜ್ಯಕ್ಕೆ ಸಾವಿರಾರು ವಾಹನಗಳು ಸಂಚರಿಸುತ್ತಿದ್ದು, ಈಗಾಗಲೇ ರಸ್ತೆ ತುಂಬಾ ಕಿರಿದಾಗಿದೆ. ಹಲವಾರು ಸಂದರ್ಭದಲ್ಲಿ ಈ ಸ್ಥಳದ ಹಿಂದೆ ಮುಂದೆ ಅಪಘಾತಗಳು ಸಂಭವಿಸಿ ಸಾವುನೋವುಗಳು ಸಂಭವಿಸಿವೆ.

    ಇಷ್ಟಿದ್ದರು ಸಹ ನಿರಂತರ ಪೂಜಾರಿ ಹೋಟೆಲ್ ಮಾಲೀಕರು ರಸ್ತೆಯಲ್ಲಿ ಕಟ್ಟಡ ಕಟ್ಟಿರುವುದರಿಂದ ಮೈಸೂರು ಕಡೆಯಿಂದ ಬರುವಾಗ ಎದುರಿಗೆ ಬರುವ ವಾಹನಗಳು ಕಾಣುತ್ತಿಲ್ಲ ಈಗಾಗಿ ಅಪಘಾತ ಸಂಭವಿಸಿದರೆ ಇವರು ನೇರ ಕಾರಣರಾಗಿರುತ್ತಾರೆ ಎನ್ನುವ ಆಕ್ರೋಶ ಕೇಳಿ ಬಂದಿದೆ.

    ಗಡಿಭಾಗದಲ್ಲಿ ಹೋಟೆಲ್ ಇರುವುದರಿಂದ ಇದನ್ನೇ ಬಂಡವಾಳ ಮಾಡಿಕೊಂಡಿರುವ ಹೋಟೆಲ್ ಮಾಲೀಕ ಅಧಿಕಾರಿಗಳಿಗೆ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂಬ ಮಾಹಿತಿ ಇದೆ. ಹೋಟೆಲ್ ಕಟ್ಟಿರುವ ಜಾಗವು ಬಹುತೇಕ ಮೈಸೂರು ತಾಲ್ಲೂಕಿಗೆ ಬರುವುದರಿಂದ ಅಲ್ಲಿನ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎನ್ನುವ ಒತ್ತಾಯ ಕೇಳಿ ಬಂದಿದೆ.

    ಈ ಮಾರ್ಗವಾಗಿ ಮುಖ್ಯಮಂತ್ರಿಗಳು, ಸಚಿವರು, ಶಾಸಕರು ಬಂದು ಹೋಗುತ್ತಿದ್ದಾರೆ, ಆದರೂ ಕೂಡ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ರಸ್ತೆ ಜಾಗವನ್ನು ಒತ್ತುವರಿ ಮಾಡಿಕೊಂಡು ಹೋಟೆಲ್ ನಿರ್ಮಾಣ ಮಾಡಿರುವುದನ್ನು ತೆರವು ಗೊಳಿಸಲು ಮುಂದಾಗಿಲ್ಲದೆ ಇರುವುದು ಹಲವು ಅನುಮಾನಕ್ಕೆ ಕಾರಣವಾಗಿದೆ.

    ಸಾಮಾನ್ಯ ಬೀದಿ ಬದಿ ವ್ಯಾಪಾರಿಗಳು ಸಣ್ಣ ಪೆಟ್ಟಿಗೆ ಹಾಕಿಕೊಂಡು ಜೀವನ ನಿರ್ವಹಣೆ ಮಾಡುವ ಸಂದರ್ಭದಲ್ಲಿ ಅಧಿಕಾರಿಗಳು ಬಡಜನರ ಬದುಕು ಕಸಿದುಕೊಳ್ಳುವುದು ಸಾಮಾನ್ಯವಾಗಿದೆ. ಆದರೆ ಅರ್ಧ ಎಕರೆ ಸರ್ಕಾರಿ ಜಾಗವನ್ನು ಯಾವುದೇ ಭಯ ಇಲ್ಲದೆ ಒತ್ತುವರಿ ಮಾಡಿಕೊಂಡು ಹೋಟೆಲ್ ನಿರ್ಮಾಣ ಮಾಡಿ ಸರ್ಕಾರಕ್ಕೆ ಸವಾಲು ಹಾಕುವ ವ್ಯಕ್ತಿಗಳ ಮೇಲೆ ಅಧಿಕಾರಿಗಳು ಯಾವುದೇ ಕ್ರಮಕ್ಕೆ ಮುಂದಾಗದೆ ಇರುವುದು ಬಡವರಿಗೆ ಒಂದು ನ್ಯಾಯ ಬಲಿತ ರಿಗೆ ಒಂದು ನ್ಯಾಯ ಎನ್ನುವಂತೆ ಆಗಿದೆ.

    ತಕ್ಷಣ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ರಸ್ತೆಯಲ್ಲಿ ಅಕ್ರಮವಾಗಿ ಹೋಟೆಲ್ ನಿರ್ಮಾಣ ಮಾಡಿರುವ ಜಾಗವನ್ನು ತೆರವು ಗೊಳಿಸದೆ ಇದ್ದರೆ ಹೆದ್ದಾರಿ ರಸ್ತೆಯಲ್ಲಿ ಕುಳಿತು ಹೋರಾಟ ಮಾಡಬೇಕಾಗುತ್ತದೆ ಎಂದು ಸಾರ್ವಜನಿಕರು ಎಚ್ಚರಿಕೆ ನೀಡಿದ್ದಾರೆ.

    ಎಚ್.ಡಿ.ಕೋಟೆಯ ಪರಿಸರ ಪ್ರೇಮಿ ಭೀಮ ರಾಜ್ ಈ ಬಗ್ಗೆ ಪ್ರತಿಕ್ರಿಯಿಸಿ, ಸಾರ್ವಜನಿಕರಿಗೆ ಅಡ್ಡಿ ಆಗುವಂತೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ಕುಮ್ಮಕ್ಕಿನಿಂದ ಖಾಸಗಿ ವ್ಯಕ್ತಿ ರಸ್ತೆಯಲ್ಲಿ ಹೋಟೆಲ್ ನಿರ್ಮಾಣ ಆಗಲು ಅಧಿಕಾರಿಗಳೇ ನೇರ ಕಾರಣ. ಸಾರ್ವಜನಿಕರ ಹಿತದೃಷ್ಟಿಯಿಂದ ಸುಗಮ ಸಂಚಾರಕ್ಕೆ ಅವಕಾಶ ಆಗುವಂತೆ ಅಕ್ರಮವಾಗಿ ಕಟ್ಟಿರುವ ಕಟ್ಟಡವನ್ನು ತೆರವು ಗೊಳಿಸಬೇಕು ಎಂದು ಒತ್ತಾಯಿಸಿದರು.

    ಮೈಸೂರು ತಾಲ್ಲೂಕು ಲೋಕೋಪಯೋಗಿ ಇಲಾಖೆ ಎಇ ಚನ್ನಪ್ಪ ಪ್ರತಿಕ್ರಿಯಿಸಿ,  ಮೈಸೂರು ಮಾನಂದವಾಡಿ ರಸ್ತೆಯ ಮೈಸೂರು ತಾಲ್ಲೂಕಿಗೆ ಸೇರಿದ ರಸ್ತೆ ಜಾಗವನ್ನು ಒತ್ತುವರಿ ಮಾಡಿಕೊಂಡು ಖಾಸಗಿ ವ್ಯಕ್ತಿ ಹೋಟೆಲ್ ನಿರ್ಮಾಣ ಮಾಡಿರುವುದು ನಾನು ಪರಿಶೀಲನೆ ಮಾಡಿದಾಗ ಕಂಡುಬಂದಿದೆ. ದಸರ ಹಬ್ಬದ ಒಳಗೆ ರಸ್ತೆ ಒತ್ತುವರಿ ಮಾಡಿಕೊಂಡು ಕಟ್ಟಿರುವ ಕಟ್ಟಡವನ್ನು ತೆರವು ಗೊಳಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಭರವಸೆ ನೀಡಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ಹೂ ಕೀಳಲು ಹೋಗಿದ್ದ ವ್ಯಕ್ತಿ ಸಾವು!

    August 8, 2025

    ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲ್ಲೂಕಿನ ಸಿರಿಗ್ರಾಮವಾಗಿ ಆಯ್ಕೆಯಾದ ಹರಚನಹಳ್ಳಿ ಗ್ರಾಮ

    July 26, 2025

    ಕೊರಟಗೆರೆ ಪಟ್ಟಣದ ಬೀದಿಗಳಲ್ಲಿ ಬೀದಿ ನಾಯಿಗಳ ಆರ್ಭಟ: ಸಾರ್ವಜನಿಕರಿಗೆ ಭೀತಿ

    July 25, 2025
    Our Picks

    ಟ್ರಂಪ್ ಗೆ ತಿರುಗೇಟು ನೀಡಿದ ಪ್ರಧಾನಿ ಮೋದಿ

    August 7, 2025

    ಅಪ್ರಾಪ್ತ ಬಾಲಕಿಯ ಮೇಲೆ ಪದೇ ಪದೇ ಅತ್ಯಾಚಾರ: ಓರ್ವ ಅಪ್ರಾಪ್ತನ ಸಹಿತ ಮೂವರ ಬಂಧನ

    August 7, 2025

    ಖ್ಯಾತ ಹಾಸ್ಯ ನಟ ಮದನ್ ಬಾಬ್ ನಿಧನ

    August 3, 2025

    ಆಗಸ್ಟ್​ 2ರಂದು  ಪಿಎಂ- ಕಿಸಾನ್ ಯೋಜನೆಯ 20ನೇ ಕಂತು ಬಿಡುಗಡೆ

    July 30, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬಾಲಕನಿಂದ ಅತ್ಯಾಚಾರ: 18 ವರ್ಷದ ಯುವತಿ ಗರ್ಭಿಣಿ

    August 9, 2025

    ಕೋಲಾರ: ಅಪ್ರಾಪ್ತ ವಯಸ್ಸಿನ ಬಾಲಕನ ಅತ್ಯಾಚಾರದಿಂದ 18 ವರ್ಷದ ಬಾಲಕಿ ಗರ್ಭಿಣಿಯಾಗಿರುವ ಘಟನೆ ಕೆಜಿಎಫ್​ ಉರಿಗಾಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ…

    ಬೆಂಗಳೂರಿನಲ್ಲಿ ಮತ್ತೊಂದು ಸ್ಟೇಡಿಯಂ: 80,000 ಆಸನ ಸಾಮರ್ಥ್ಯದ ಕ್ರೀಡಾಂಗಣಕ್ಕೆ ಸಿಎಂ ಅನುಮೋದನೆ

    August 9, 2025

    ಬುದ್ಧಿಮಾಂಧ್ಯ  ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ

    August 9, 2025

    ಅರಿಶಿಣ ಕುಂಕುಮ ಪಡೆಯಲು ಹೋಗುತ್ತಿದ್ದ ಮಹಿಳೆ ಅಪಘಾತಕ್ಕೆ ಬಲಿ

    August 9, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.