nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊನೆಗೂ ನನಸಾಯಿತು ಮಾಜಿ ಸಿಎಂ ಸಿದ್ದರಾಮಯ್ಯ ಕನಸು: ಮೈಸೂರಿನಲ್ಲಿ ಅತ್ಯಂತ ಸರಳವಾಗಿ ನೆರವೇರಿತು ಗೃಹಪ್ರವೇಶ!

    September 14, 2026

    ಗಣೇಶ ಚತುರ್ಥಿ ಪೆಂಡಲ್ ಹಾಕುವಾಗ ಚಪ್ಪರದಿಂದ ಬಿದ್ದು ವ್ಯಕ್ತಿ ಸಾವು

    September 14, 2026

    ಸಾಂವಿಧಾನಿಕ ಜವಾಬ್ದಾರಿಯಿಂದ ಶಾಸಕರ ಪಲಾಯನ: ತುರುವೇಕೆರೆಯಲ್ಲಿ ಕಾಂಗ್ರೆಸ್ ಮುಖಂಡರ ಆರೋಪ

    September 14, 2026
    Facebook Twitter Instagram
    ಟ್ರೆಂಡಿಂಗ್
    • ಕೊನೆಗೂ ನನಸಾಯಿತು ಮಾಜಿ ಸಿಎಂ ಸಿದ್ದರಾಮಯ್ಯ ಕನಸು: ಮೈಸೂರಿನಲ್ಲಿ ಅತ್ಯಂತ ಸರಳವಾಗಿ ನೆರವೇರಿತು ಗೃಹಪ್ರವೇಶ!
    • ಗಣೇಶ ಚತುರ್ಥಿ ಪೆಂಡಲ್ ಹಾಕುವಾಗ ಚಪ್ಪರದಿಂದ ಬಿದ್ದು ವ್ಯಕ್ತಿ ಸಾವು
    • ಸಾಂವಿಧಾನಿಕ ಜವಾಬ್ದಾರಿಯಿಂದ ಶಾಸಕರ ಪಲಾಯನ: ತುರುವೇಕೆರೆಯಲ್ಲಿ ಕಾಂಗ್ರೆಸ್ ಮುಖಂಡರ ಆರೋಪ
    • ದೊಡ್ಡಗೊಲ್ಲರಹಟ್ಟಿಯಲ್ಲಿ ಶುದ್ಧ ನೀರಿನ ಘಟಕ ಸ್ಥಗಿತ:  ಜನರ ಪರದಾಟ
    • ಗಣೇಶ ಚತುರ್ಥಿ ಹಬ್ಬದ ಮಹತ್ವ ಮತ್ತು ಪೂಜಾ ವಿಧಾನ
    • ಗೌರಿ — ಗಣೇಶ ಹಬ್ಬ: ಸಂಭ್ರಮ, ಸಡಗರ ಹಾಗೂ ಪರಿಸರ ಕಾಳಜಿಯ ಹಬ್ಬ
    • ಕೋಳಾಲ ಗ್ರಾಮದಲ್ಲಿ ಪ್ರಜಾಸೇವಾ ಅಭಿಯಾನ: ಜನಸಭೆಯಲ್ಲಿ 150 ಅರ್ಜಿ ಸ್ವೀಕಾರ
    • ಬೆಂಗಳೂರಿನಲ್ಲಿ ರಾಷ್ಟ್ರೀಯ ಅಹಿಂದ ಸಂಘಟನೆಯ ಪದಗ್ರಹಣ ಮತ್ತು ಸನ್ಮಾನ ಕಾರ್ಯಕ್ರಮ ಯಶಸ್ವಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊನೆಗೂ ನನಸಾಯಿತು ಮಾಜಿ ಸಿಎಂ ಸಿದ್ದರಾಮಯ್ಯ ಕನಸು: ಮೈಸೂರಿನಲ್ಲಿ ಅತ್ಯಂತ ಸರಳವಾಗಿ ನೆರವೇರಿತು ಗೃಹಪ್ರವೇಶ!
    ರಾಜ್ಯ ಸುದ್ದಿ September 14, 2026

    ಕೊನೆಗೂ ನನಸಾಯಿತು ಮಾಜಿ ಸಿಎಂ ಸಿದ್ದರಾಮಯ್ಯ ಕನಸು: ಮೈಸೂರಿನಲ್ಲಿ ಅತ್ಯಂತ ಸರಳವಾಗಿ ನೆರವೇರಿತು ಗೃಹಪ್ರವೇಶ!

    By Ganesh TumkuruSeptember 14, 2026No Comments1 Min Read
    siddaramaiah house

    ಮೈಸೂರು: ರಾಜ್ಯದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದಶಕಗಳ ಕನಸು ಕೊನೆಗೂ ನನಸಾಗಿದ್ದು, ಮೈಸೂರಿನ ಕುವೆಂಪುನಗರದಲ್ಲಿ ನಿರ್ಮಿಸಲಾಗಿರುವ ನೂತನ ಮನೆಯ ಗೃಹಪ್ರವೇಶವು ಅತ್ಯಂತ ಸರಳ ಹಾಗೂ ಖಾಸಗಿಯಾಗಿ ಶಾಸ್ತ್ರೋಕ್ತವಾಗಿ ನೆರವೇರಿದೆ.

    ಯಾವುದೇ ರಾಜಕೀಯ ಅದ್ದೂರಿತನವಿಲ್ಲದೆ, ರಾಜಕೀಯ ನಾಯಕರು ಹಾಗೂ ಸಾರ್ವಜನಿಕರಿಗೆ ಯಾವುದೇ ಆಹ್ವಾನ ನೀಡದೆ, ಅತ್ಯಂತ ಗೌಪ್ಯವಾಗಿ ಈ ಧಾರ್ಮಿಕ ಕಾರ್ಯಕ್ರಮ ಜರುಗಿದೆ.

    ಭಾನುವಾರ ರಾತ್ರಿಯಿಂದಲೇ ನೂತನ ಮನೆಯಲ್ಲಿ ಗಣಪತಿ ಹೋಮ, ವಾಸ್ತು ಹೋಮ ಸೇರಿದಂತೆ ವಿವಿಧ ಸಾಂಪ್ರದಾಯಿಕ ಧಾರ್ಮಿಕ ವಿಧಿ-ವಿಧಾನಗಳು ಆರಂಭವಾಗಿದ್ದವು. ಸೋಮವಾರ ಮುಂಜಾನೆ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಪಾರ್ವತಿ ಅವರ ನೇತೃತ್ವದಲ್ಲಿ ಪೂರ್ಣಾಹುತಿ ಹಾಗೂ ಗೃಹಪ್ರವೇಶದ ವಿಧಿಗಳು ಜರುಗಿದವು. ಕುಟುಂಬದ ಕೆಲವೇ ಕೆಲವು ಸದಸ್ಯರು ಮತ್ತು ಆಪ್ತರಷ್ಟೇ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಸಿದ್ದರಾಮಯ್ಯ ಅವರ ಮೈಸೂರು ಭೇಟಿಯ ಮಾಹಿತಿಯನ್ನೂ ಕೂಡ ಮುಂಚಿತವಾಗಿ ಗುಟ್ಟಾಗಿಡಲಾಗಿತ್ತು.

    ಎರಡು ಬಾರಿ ಮುಖ್ಯಮಂತ್ರಿಯಾಗಿ, ಉಪಮುಖ್ಯಮಂತ್ರಿಯಾಗಿ ಮತ್ತು ದೀರ್ಘಕಾಲ ವಿರೋಧ ಪಕ್ಷದ ನಾಯಕರಾಗಿ ಸೇವೆ ಸಲ್ಲಿಸಿದ್ದರೂ ಸಿದ್ದರಾಮಯ್ಯ ಅವರಿಗೆ ಮೈಸೂರಿನಲ್ಲಿ ಸ್ವಂತ ಮನೆಯಿರಲಿಲ್ಲ. ಮೈಸೂರಿನಲ್ಲಿ ಸುಸಜ್ಜಿತ ಸ್ವಂತ ಮನೆಯನ್ನು ನಿರ್ಮಿಸಬೇಕೆಂಬುದು ಅವರ ಧರ್ಮಪತ್ನಿ ಪಾರ್ವತಿಯವರ ದಶಕಗಳ ಕನಸಾಗಿತ್ತು. ಇಷ್ಟು ವರ್ಷಗಳ ಕಾಲ ಸಿದ್ದರಾಮಯ್ಯ ಅವರು ಟಿ.ಕೆ. ಬಡಾವಣೆಯಲ್ಲಿರುವ ತಮ್ಮ ಆಪ್ತ ಸ್ನೇಹಿತ ಮರಿಸ್ವಾಮಿ ಅವರ ಮನೆಯಲ್ಲೇ ವಾಸ್ತವ್ಯ ಹೂಡಿದ್ದರು. ಇದೀಗ ಪತ್ನಿಯ ಆಸೆಯಂತೆ ಸ್ವಂತ ಮನೆ ನಿರ್ಮಿಸಿಕೊಂಡು, ಬಾಡಿಗೆ ಮನೆಯಿಂದ ಹೊಸ ಮನೆಗೆ ಸ್ಥಳಾಂತರಗೊಂಡಿದ್ದಾರೆ.

    ಮೈಸೂರಿನ ಕುವೆಂಪುನಗರದ ವಿಶ್ವಮಾನವ ಜೋಡಿ ರಸ್ತೆ ಬಳಿ 120×80 ಅಡಿ ವಿಸ್ತೀರ್ಣದಲ್ಲಿ ಈ ಮೂರು ಅಂತಸ್ತಿನ ಬೃಹತ್ ಬಂಗಲೆಯನ್ನು ನಿರ್ಮಿಸಲಾಗಿದೆ. ದಕ್ಷಿಣಾಭಿಮುಖವಾಗಿರುವ ಈ ಮನೆಯ ಮುಂಭಾಗದಲ್ಲಿ ಸಾಂಪ್ರದಾಯಿಕ ಶೈಲಿಯಲ್ಲಿ ಬೃಹತ್ ತೆಂಗಿನಗರಿಯ ಚಪ್ಪರ ಹಾಕಲಾಗಿದೆ. ಭದ್ರತಾ ದೃಷ್ಟಿಯಿಂದ ಹಾಗೂ ಖಾಸಗಿತನ ಕಾಯ್ದುಕೊಳ್ಳಲು ಮನೆಯ ಸುತ್ತಲೂ ಹಸಿರು ಪರದೆ (ಪೆಂಡಾಲ್) ನಿರ್ಮಿಸಲಾಗಿದ್ದು, ಯಾವುದೇ ಹೂಗುಚ್ಛ ಅಥವಾ ಸ್ವಾಗತ ಕಮಾನುಗಳಿಲ್ಲದೆ ಸಂಪೂರ್ಣವಾಗಿ ಧಾರ್ಮಿಕ ಆಚರಣೆಗೆ ಮಾತ್ರ ಆದ್ಯತೆ ನೀಡಲಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ಪತ್ನಿ ಜತೆಗಿನ ಕಲಹ: ಬಳ್ಳಾರಿಯಲ್ಲಿ ಪೊಲೀಸ್ ಠಾಣೆ ಎದುರು ವಿದ್ಯುತ್ ಟ್ರಾನ್ಸ್‌ ಫಾರ್ಮರ್ ಏರಿದ ವ್ಯಕ್ತಿ!

    September 13, 2026

    ತಂಗಿ ಜೊತೆ ಅನೈತಿಕ ಸಂಬಂಧ ಶಂಕೆ; ಊಟ ಮಾಡುತ್ತಿದ್ದಾಗಲೇ ಮಚ್ಚಿನಿಂದ ಕೊಚ್ಚಿ ಯುವಕನ ಭೀಕರ ಹತ್ಯೆ

    September 13, 2026

    ಸಚಿವ ಸತೀಶ್ ಜಾರಕಿಹೊಳಿ ಸಂಪುಟದಿಂದ ವಜಾಗೊಳಿಸುವಂತೆ ಬಿಜೆಪಿ ಆಗ್ರಹ: ಆರ್. ಅಶೋಕ್ ತೀವ್ರ ವಾಗ್ದಾಳಿ

    September 13, 2026

    Leave A Reply Cancel Reply

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕೊನೆಗೂ ನನಸಾಯಿತು ಮಾಜಿ ಸಿಎಂ ಸಿದ್ದರಾಮಯ್ಯ ಕನಸು: ಮೈಸೂರಿನಲ್ಲಿ ಅತ್ಯಂತ ಸರಳವಾಗಿ ನೆರವೇರಿತು ಗೃಹಪ್ರವೇಶ!

    September 14, 2026

    ಮೈಸೂರು: ರಾಜ್ಯದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದಶಕಗಳ ಕನಸು ಕೊನೆಗೂ ನನಸಾಗಿದ್ದು, ಮೈಸೂರಿನ ಕುವೆಂಪುನಗರದಲ್ಲಿ ನಿರ್ಮಿಸಲಾಗಿರುವ ನೂತನ ಮನೆಯ…

    ಗಣೇಶ ಚತುರ್ಥಿ ಪೆಂಡಲ್ ಹಾಕುವಾಗ ಚಪ್ಪರದಿಂದ ಬಿದ್ದು ವ್ಯಕ್ತಿ ಸಾವು

    September 14, 2026

    ಸಾಂವಿಧಾನಿಕ ಜವಾಬ್ದಾರಿಯಿಂದ ಶಾಸಕರ ಪಲಾಯನ: ತುರುವೇಕೆರೆಯಲ್ಲಿ ಕಾಂಗ್ರೆಸ್ ಮುಖಂಡರ ಆರೋಪ

    September 14, 2026

    ದೊಡ್ಡಗೊಲ್ಲರಹಟ್ಟಿಯಲ್ಲಿ ಶುದ್ಧ ನೀರಿನ ಘಟಕ ಸ್ಥಗಿತ:  ಜನರ ಪರದಾಟ

    September 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.