ಕೊಟ್ಟಿಗೆಹಾರ: ಬಣಕಲ್ನ ಮತ್ತಿಕಟ್ಟೆಯಲ್ಲಿ ಹುಲಿ ದಾಳಿಗೆ ಹಸುವೊಂದು ಶುಕ್ರವಾರ ಸಂಜೆ ಬಲಿಯಾಗಿದೆ.
ಮತ್ತಿಕಟ್ಟೆಯ ಬ್ಲೂ ಮೌಂಟ್ ಎಸ್ಟೇಟ್ ಆನಂದ್ ಮಿಸ್ಕಿತ್ ಅವರ ಕಾಫಿ ತೋಟದಲ್ಲಿ ಮಧುಸೂದನ್ ಚಂದ್ರಾವತಿ ಪೂಜಾರಿಯವರ ಸಿಂಧಿ ಹಸುವನ್ನು ಹುಲಿ ಕೊಂದು ಹಾಕಿದೆ.ಸ್ಥಳಕ್ಕೆ ಉಪವಲಯ ಅರಣ್ಯ ಅಧಿಕಾರಿ ಉಮೇಶ್,ಅರಣ್ಯ ಗಸ್ತು ಅಧಿಕಾರಿ ಜಯಪ್ಪ,ಮೋಸಿನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಿರಂತರ ಸಾಗುತ್ತಿರುವ ಹುಲಿ ದಾಳಿ:ಬಣಕಲ್ ನ ಹೆಗ್ಗುಡ್ಲು ಮತ್ತಿಕಟ್ಟೆ, ಬಿ.ಹೊಸಳ್ಳಿ, ಹೊಕ್ಕಳ್ಳಿ,ಭಾರತಿಬೈಲ್ ಭಾಗದಲ್ಲಿ ಹುಲಿ ದಾಳಿ ಸಾಗುತ್ತಿದ್ದು ಈವರೆಗೂ ಸುಮಾರು 50 ಕ್ಕೂ ಹೆಚ್ಚು ದನಗಳು ಹುಲಿ ಪಾಲಾಗಿವೆ.ಆದರೂ ಅರಣ್ಯ ಇಲಾಖೆ ಯಾವುದೇ ಕ್ರಮ ಕೈಗೊಂಡಿಲ್ಲ.
ಹಲವು ಬಾರಿ ಹುಲಿ ಸ್ಥಳಾಂತರಿಸುವಂತೆ ಅರಣ್ಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ.ಹುಲಿ ಸೆರೆಗೆ ಸಿಸಿ ಕ್ಯಾಮೆರಾ ಕಣ್ಘಾವಲು ಹಾಕಿದರೂ ಹುಲಿಯನ್ನು ಸ್ಥಳಾಂತರ ಮಾಡಿಲ್ಲ ಎಂದು ಗ್ರಾಮಸ್ಥರು ಹೇಳುತ್ತಾರೆ.ಹುಲಿ ದಾಳಿಯನ್ನು ನಿಯಂತ್ರಿಸಲು ಹುಲಿ ಸ್ಥಳಾಂತರ ಮಾಡಬೇಕೆಂದು ಗ್ರಾಮಸ್ಥ ಎಚ್.ಟಿ.ಪ್ರಸನ್ನ ಒತ್ತಾಯಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1


