ಕೊರಟಗೆರೆ : ಗಾಂಧಿ ಜಯಂತಿ ಅಂಗವಾಗಿ ತಾಲೂಕಿನ ಹೂಲೀಕುಂಟೆ ಗ್ರಾಮದಲ್ಲಿ ಪ್ರಯಾಣಿಕರ ತಂಗುದಾಣವನ್ನು ಗ್ರಾಮ ಪಂಚಾಯಿತಿ ವತಿಯಿಂದ ಸ್ವಚ್ಛಗೊಳಿಸಲಾಯಿತು.
ಈ ಸಂದರ್ಭದಲ್ಲಿ ಹೂಲೀಕುಂಟೆ ಗ್ರಾಪಂ ಅಧ್ಯಕ್ಷ ಮಲ್ಲಣ್ಣ ಮಾತನಾಡಿ, ತಂಗುದಾಣ ಸ್ವಚ್ಚತೆ ಇಲ್ಲದ ಕಾರಣ ಮಳೆ ಬಂದಾಗ ಪ್ರಯಾಣಿಕರು ರಸ್ತೆಯಲ್ಲಿಯೇ ನಿಂತು ಹೋಗುವಂತಹ ಅನಿವಾರ್ಯತೆ ಎದುರಾಗಿತ್ತು , ಆದ್ದರಿಂದ ಗಾಂಧಿ ಜಯಂತಿ ಅಂಗವಾಗಿ ಗ್ರಾ.ಪಂ.ನ ಸದಸ್ಯರು ಹಾಗೂ ಅಧಿಕಾರಿ ವರ್ಗದೊಂದಿಗೆ ತಂಗುದಾಣವನ್ನು ಸ್ವಚ್ಚತೆ ಮಾಡಿದ್ದೇವೆ ಎಂದರು.
ಪ್ರಯಾಣಿಕರು ಪ್ರಯಾಣಿಸುವಾಗ ಉಗುಳುವುದು, ಗಲೀಜು ಮಾಡುವಂತಹ ಕೆಲಸ ಯಾರು ಮಾಡಬಾರದು, ಇದನ್ನು ನಿರ್ಮಿಸಿರುವುದೇ ನಿಮಗಾಗಿ ಆಗಾಗಿ ಗಲೀಜು ಮಾಡದಂತೆ ಗ್ರಾ.ಪಂ.ಯವರ ಜೊತೆ ಕೈಜೋಡಿಸಿ ಎಂದು ಹೇಳಿದರು.
ಈ ಸಂದರ್ಭದಲ್ಲಿ ಪಿಡಿಓ ಪೃಥ್ವಿಭಾ, ಸದಸ್ಯರಾದ ಪ್ರೇಮಲತಾ, ಜಯಮ್ಮ ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.
ವರದಿ: ಮಂಜುಸ್ವಾಮಿ.ಎಂ.ಎನ್ ., ಕೊರಟಗೆರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy