ಹುಮನಾಬಾದ್: ತಾಲೂಕಿನ ಚಿತ್ತಕೋಟಾ ಗ್ರಾಮಕ್ಕೆ ಸಮರ್ಪಕ ಬಸ್ ಸೇವೆ ಕಲ್ಪಿಸುವಂತೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ) ನೇತ್ರತ್ವದಲ್ಲಿ ಗ್ರಾಮಸ್ಥರು ಕೆಕೆಆರ್ ಟಿಸಿ ಬಸ್ ಘಟಕದ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿದರು.
ಗ್ರಾಮದಿಂದ ದಿನ ನಿತ್ಯ ಕೆಲಸ ಕಾರ್ಯಗಳಿಗಾಗಿ ಜಿಲ್ಲಾ, ತಾಲೂಕು ಕೇಂದ್ರಕ್ಕೆ ತೆರಳುವ ಸಾರ್ವಜನಿಕರು, ಅದರಲ್ಲೂ ವಿಶೇಷವಾಗಿ ಶಾಲಾ–ಕಾಲೇಜಿನ ವಿದ್ಯಾರ್ಥಿಗಳು ನಿಗದಿತ ಬಸ್ ಸೌಕರ್ಯ ಇಲ್ಲದಿರುವುದರಿಂದ ಪ್ರತಿದಿನ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಬಸ್ಸಿಗಾಗಿ ದೀರ್ಘ ಸಮಯ ಕಾಯಬೇಕಾದ ಪರಿಸ್ಥಿತಿ ಇದೆ ಎಂದು ದೂರಿದ್ದಾರೆ.
ಕೂಡಲೇ ಚಿತ್ತಕೋಟಾ ಗ್ರಾಮಕ್ಕೆ ನಿಯಮಿತ ಸಮಯಕ್ಕೆ ಹೆಚ್ಚುವರಿ ಬಸ್ ಓಡಿಸಿ ಸಾರ್ವಜನಿಕರಿಗೆ ಹಾಗೂ ಶಾಲಾ–ಕಾಲೇಜಿನ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕೆಂದು ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ಕದಸಂಸ ತಾಲೂಕಾಧ್ಯಕ್ಷ ರಾಹುಲ ಉದ್ದಾ, ಸಿದ್ದಾರ್ಥ ಕಾಂಬಳೆ, ಗೀತಾಬಾಯಿ, ರಮಾಬಾಯಿ, ವಿದ್ಯಾಸಾಗರ ಸಾದನೂರ, ರೇವಪ್ಪಾ ಡಾಂಗೆ, ಮಲ್ಲಮ್ಮ, ಸುವರ್ಣ ಮತ್ತಿತರರಿದ್ದರು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


