nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಿಡದಿ ಟೌನ್‌ಶಿಪ್ ವಿಚಾರ: ಮುಖ್ಯಮಂತ್ರಿಗಳು ನಾಟಕದ ಸಂಭಾಷಣೆಗಳಂತೆ ಮಾತನಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

    July 16, 2026

    ಬೀದಿ ನಾಯಿಗಳ ದಾಳಿ: ಒಂದೂವರೆ ವರ್ಷದ ಕಂದಮ್ಮ ಬಲಿ!

    July 16, 2026

    ‘ಬರವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ’: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ, ಕೇಂದ್ರದಿಂದ ವಿಶೇಷ ನೆರವಿಗೆ ಮನವಿ

    July 16, 2026
    Facebook Twitter Instagram
    ಟ್ರೆಂಡಿಂಗ್
    • ಬಿಡದಿ ಟೌನ್‌ಶಿಪ್ ವಿಚಾರ: ಮುಖ್ಯಮಂತ್ರಿಗಳು ನಾಟಕದ ಸಂಭಾಷಣೆಗಳಂತೆ ಮಾತನಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ
    • ಬೀದಿ ನಾಯಿಗಳ ದಾಳಿ: ಒಂದೂವರೆ ವರ್ಷದ ಕಂದಮ್ಮ ಬಲಿ!
    • ‘ಬರವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ’: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ, ಕೇಂದ್ರದಿಂದ ವಿಶೇಷ ನೆರವಿಗೆ ಮನವಿ
    • ಬೀದರ್: ಅಕ್ರಮ ಶಸ್ತ್ರಾಸ್ತ್ರ ಜಾಲ ಭೇದಿಸಿದ ಪೊಲೀಸರು; 5 ನಾಡ ಪಿಸ್ತೂಲ್, 26 ಜೀವಂತ ಗುಂಡು ಜಪ್ತಿ, ಇಬ್ಬರ ಬಂಧನ
    • ತಿಪಟೂರು: ರೋಟರಿ ಸಂಸ್ಥೆಯ 67ನೇ ಅಧ್ಯಕ್ಷರಾಗಿ ಪ್ರಕಾಶ್ ಕೆ. ಪದಗ್ರಹಣ
    • ತುಮಕೂರು: ಜುಲೈ 17 ರಂದು ಕಾನೂನು ಅರಿವು–ನೆರವು ಕಾರ್ಯಕ್ರಮ
    • ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ಜುಲೈ 17ರಂದು ತುಮಕೂರಿನಲ್ಲಿ ನೇರ ಸಂದರ್ಶನ
    • ತುಮಕೂರು: ಜುಲೈ 17ರಂದು ರಾಜ್ಯ ಕಿರಿಯರ ಅಥ್ಲೆಟಿಕ್ ಕೂಟಕ್ಕೆ ಆಯ್ಕೆ ಪ್ರಕ್ರಿಯೆ: ಕ್ರೀಡಾಪಟುಗಳು ಭಾಗವಹಿಸಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಾಬು ಜಗಜೀವನ್ ರಾಮ್ ಪ್ರತಿಮೆ ಕೊಡುಗೆಯಾಗಿ ನೀಡುತ್ತೇನೆ: ಸಚಿವ ಪರಮೇಶ್ವರ
    ಜಿಲ್ಲಾ ಸುದ್ದಿ July 6, 2025

    ಬಾಬು ಜಗಜೀವನ್ ರಾಮ್ ಪ್ರತಿಮೆ ಕೊಡುಗೆಯಾಗಿ ನೀಡುತ್ತೇನೆ: ಸಚಿವ ಪರಮೇಶ್ವರ

    By adminJuly 6, 2025No Comments2 Mins Read
    dr g prameshwar

    ತುಮಕೂರು: ದೇಶದ ಸ್ವಾತಂತ್ರ್ಯ ಹೋರಾಟಕದಲ್ಲಿ ಶೋಷಿತ ಸಮುದಾಯಗಳು ಮುಂಚೂಣಿಯಲ್ಲಿದ್ದವು. ಬಾಬು ಜಗಜೀವನ್ ರಾಮ್ ಅವರು ನಾಯಕತ್ವ ವಹಿಸಿಕೊಂಡಿದ್ದರು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಜಿ.ಪರಮೇಶ್ವರ ಅವರು ಹೇಳಿದರು‌.

    ತುಮಕೂರು ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ನಡೆದ ಹಸಿರುಕ್ರಾಂತಿಯ ಹರಿಕಾರ,‌ ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನ್ ರಾಮ್ ರವರ 39ನೇ ಪುಣ್ಯಸ್ಮರಣೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಪುಷ್ಪನಮನದ‌ ಮೂಲಕ ಗೌರವ ಸಮರ್ಪಣೆ ಸಲ್ಲಿಸಿ ಅವರು ಮಾತನಾಡಿದರು.

    ಸ್ವಾತಂತ್ರ್ಯ ಹೋರಾಟದಲ್ಲಿ ಉಳ್ಳವರು ಮುಂಚೂಣಿಯಲ್ಲಿ ಇರಲಿಲ್ಲ. ಶೋಷಿತ ಸಮುದಾಯದ ಜನರು ಹೆಚ್ಚಾಗಿ ಮುಂಚೂಣಿಯಲ್ಲಿದ್ದರು. ಬಾಬು ಜಗಜೀವನ್ ರಾಮ್ ಅವರು ನಾಯಕತ್ವ ವಹಿಸಿದ್ದರು. ಸ್ವಾತಂತ್ರ್ಯ ನೀಡುವುದಾದರೆ ಜನರ ಆಶೋತ್ತರಗಳನ್ನು ಈಡೇರಿಸಬೇಕು ಎಂದು ಬಾಬು ಜಗಜೀವನ್ ರಾಮ್ ಅವರು ಧೈರ್ಯವಾಗಿ ಹೇಳಿದ್ದನ್ನು ನಾವೆಲ್ಲ ಸ್ಮರಿಸಬೇಕು ಎಂದರು.

    ದೇಶದ ಮಹಾನ್ ನಾಯಕರ ಹುಟ್ಟುಹಬ್ಬ, ಪುಣ್ಯಸ್ಮರಣೆಯ ಆಚರಣೆಗಳು, ಅವರ ಆದರ್ಶಗಳನ್ನು ಸ್ಮರಿಸಿಕೊಳ್ಳಲು ಉಪಯೋಗವಾಗುತ್ತವೆ. ಅವರ ಜೀವನ ಚರಿತ್ರೆಯನ್ನು ನಾವು ಸ್ಮರಿಸಿದರೆ ಮುಂದಿನ ಪೀಳಿಗೆಗೂ ಗೊತ್ತಾಗುತ್ತದೆ. ನಾವೆಲ್ಲ ಹೋರಾಟದ ದಾರಿಯಲ್ಲಿ ಹೋಗುತ್ತಿದ್ದೇವೆ. ಇದಕ್ಕೆ ಬಾಬು ಜಗಜೀವನ್ ರಾಮ್ ಅವರ ಸ್ಮರಣೆ ನಮಗೆ ದಾರಿದೀಪವಾಗಬೇಕು ಎಂದು ಹೇಳಿದರು.

    ನಗರದಲ್ಲಿ ಡಾ. ಬಾಬು ಜಗಜೀವನ್ ರಾಮ್ ಅವರ ಪ್ರತಿಮೆಯನ್ನು ಸ್ಥಾಪಿಸಲು, ಪ್ರತಿಮೆಯನ್ನು ನಾನೇ ಕೊಡುಗೆಯಾಗಿ ನೀಡುತ್ತೇನೆ. ಸಮುದಾಯ ಭವನ ಮತ್ತು ಪ್ರತಿಮೆಯನ್ನು ಸ್ಥಾಪಿಸುವ ಕೆಲಸವನ್ನು ಬಹಳ ವೇಗವಾಗಿ ಮಾಡಬೇಕಿದೆ. ಐದು ಎಕರೆ ಜಾಗವನ್ನು ನೀಡಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸೂಚಿಸುತ್ತೇನೆ. ಮುಖ್ಯಮಂತ್ರಿಯವರಿಗೆ 10 ಕೋಟಿ ರೂ. ಅನುದಾನವನ್ನು ಕೇಳಲಾಗಿದೆ ಎಂದರು.

    ಶಿಕ್ಷಣಕ್ಕೆ ಹೆಚ್ಚು ಮಹತ್ವ ನೀಡಬೇಕು. ಒಂದೊತ್ತಿನ ಊಟ ಕಡಿಮೆಯಾದರು ಪರವಾಗಿಲ್ಲ. ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕಿದೆ. ಇದರಿಂದ ಮುಂದಿನ ಪೀಳಿಗೆಯ ಜೀವನ ಬದಲಾಗುತ್ತದೆ. ಸ್ಪರ್ಧಾತ್ಮಕ ಜಗತ್ತಿಗೆ ನಮ್ಮ‌ ಮಕ್ಕಳನ್ನು ತಯಾರು ಮಾಡಬೇಕು ಎಂದು ಹೇಳಿದರು.

    ದೇಶದಲ್ಲಿರುವ ಜಾತಿ ಸಂಘಗಳು ಹೊರ ದೇಶಗಳಲ್ಲಿ ಹುಟ್ಟಿಕೊಂಡಿವೆ. ಅಲ್ಲಿಯೂ ಜಾತಿ ಸಮ್ಮೇಳನ ನಡೆಯುತ್ತಿವೆ ಎಂದು ಬೇಸರಿಸಿದರು.

    ಒಳ ಮೀಸಲಾತಿ ಹೋರಾಟ ಹಲವು ವರ್ಷಗಳಿಂದ ನಡೆಯುತ್ತಿದೆ. ಒಳ ಮೀಸಲಾತಿ ಜಾರಿ ವಿಚಾರದಲ್ಲಿ ಹಿಂದಿನ ಸರ್ಕಾರ ಯಾವ ರೀತಿ ದಾರಿ ತಪ್ಪಿಸಿದರು ಎಂಬುದು ನಮಗೆ ಗೊತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ನಮ್ಮ ಸರ್ಕಾರ ಒಳ‌ಮೀಸಲಾತಿ ಜಾರಿ ಮಾಡಿಯೇ ತೀರುತ್ತದೆ ಎಂದು ಸ್ಪಷ್ಟಪಡಿಸಿದರು.

    ಒಳ ಮೀಸಲಾತಿ ಜಾರಿ ಮಾಡಲು ಸರ್ಕಾರ ಬದ್ಧವಾಗಿದೆ. ಮಾಡಿಯೇ ತೀರುತ್ತೇವೆ. ರಾಜ್ಯದಲ್ಲಿ 2.50 ಲಕ್ಷ ಹುದ್ದೆಗಳು ನೇಮಕವಾಗಬೇಕಿದೆ. ಪೊಲೀಸ್ ಇಲಾಖೆಯಲ್ಲಿ 18 ಸಾವಿರ ಹುದ್ದೆಗಳು ಖಾಲಿ ಇವೆ. ಕಾರಾಗೃಹದಲ್ಲಿ ಶೇ. 38ರಷ್ಟು ಹುದ್ದೆಗಳು ಖಾಲಿ ಇವೆ. ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆಯಲ್ಲಿ ನೇಮಕಾತಿ ನಡೆಯಬೇಕಿದೆ. ಒಳ ಮೀಸಲಾತಿ ತೀರ್ಮಾನ ಆಗುವವರೆಗು ನೇಮಕಾತಿ ಹಾಗೂ ಮುಂಬಡ್ತಿ ನೀಡುವುದಿಲ್ಲ ಎಂಬ ಕಠಿಣ ನಿರ್ಧಾರವನ್ನು ರಾಜ್ಯ ಸರ್ಕಾರ ತೆಗೆದುಕೊಂಡಿದೆ ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ ಶಾಸಕರಾದ ಜಿ.ಬಿ.ಜ್ಯೋತಿಗಣೇಶ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಅಶೋಕ್ ಹಾಗೂ ದಲಿತಪರ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


    Provided by
    Provided by
    admin
    • Website

    Related Posts

    ಬಿಡದಿ ಟೌನ್‌ಶಿಪ್ ವಿಚಾರ: ಮುಖ್ಯಮಂತ್ರಿಗಳು ನಾಟಕದ ಸಂಭಾಷಣೆಗಳಂತೆ ಮಾತನಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

    July 16, 2026

    ಬೀದಿ ನಾಯಿಗಳ ದಾಳಿ: ಒಂದೂವರೆ ವರ್ಷದ ಕಂದಮ್ಮ ಬಲಿ!

    July 16, 2026

    ಬೀದರ್: ಅಕ್ರಮ ಶಸ್ತ್ರಾಸ್ತ್ರ ಜಾಲ ಭೇದಿಸಿದ ಪೊಲೀಸರು; 5 ನಾಡ ಪಿಸ್ತೂಲ್, 26 ಜೀವಂತ ಗುಂಡು ಜಪ್ತಿ, ಇಬ್ಬರ ಬಂಧನ

    July 16, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬಿಡದಿ ಟೌನ್‌ಶಿಪ್ ವಿಚಾರ: ಮುಖ್ಯಮಂತ್ರಿಗಳು ನಾಟಕದ ಸಂಭಾಷಣೆಗಳಂತೆ ಮಾತನಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

    July 16, 2026

    ಬಾಗಲಕೋಟೆ: ಬಿಡದಿ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೇಳಿಕೆಗಳನ್ನು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್…

    ಬೀದಿ ನಾಯಿಗಳ ದಾಳಿ: ಒಂದೂವರೆ ವರ್ಷದ ಕಂದಮ್ಮ ಬಲಿ!

    July 16, 2026

    ‘ಬರವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ’: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ, ಕೇಂದ್ರದಿಂದ ವಿಶೇಷ ನೆರವಿಗೆ ಮನವಿ

    July 16, 2026

    ಬೀದರ್: ಅಕ್ರಮ ಶಸ್ತ್ರಾಸ್ತ್ರ ಜಾಲ ಭೇದಿಸಿದ ಪೊಲೀಸರು; 5 ನಾಡ ಪಿಸ್ತೂಲ್, 26 ಜೀವಂತ ಗುಂಡು ಜಪ್ತಿ, ಇಬ್ಬರ ಬಂಧನ

    July 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.