ತುಮಕೂರು: “ನನಗೆ ಕೊಟ್ಟ ಖಾತೆಯನ್ನು ಪ್ರಾಮಾಣಿಕವಾಗಿ ನಿಭಾಯಿಸುತ್ತೇನೆ. ಪ್ರಧಾನಿ ಮೋದಿ ಅವರ ನಿರೀಕ್ಷೆಯಂತೆ ಕೆಲಸ ಮಾಡುತ್ತೇನೆ” ಎಂದು ಕೇಂದ್ರದ ರಾಜ್ಯ ರೈಲ್ವೆ ಖಾತೆ ಹಾಗೂ ಜಗಶಕ್ತಿ ಖಾತೆ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.
“ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶಶಿಕುಮಾರ್ ಸ್ವಾಮೀಜಿ ಅವರ ಗದ್ದಿಗೆ ದರ್ಶನ ಪಡೆದ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ನರೇಂದ್ರ ಮೋದಿ ಅವರು ಎನ್ ಡಿ ಎ ಒಕ್ಕೂಟದ ಮಂತ್ರಿ ಮಾಡಿದ್ದಾರೆ. ಪ್ರಧಾನಿ ಹಾಗೂ ಗೃಹ ಸಚಿವರಿಗೆ, ದೇವೇಗೌಡರಿಗೆ ಧನ್ಯವಾದ ಹೇಳುತ್ತೇನೆ” ಎಂದರು.
“ಇಂದು ತುಮಕೂರು ಜಿಲ್ಲೆಯ ಸ್ವಾಮೀಜಿಗಳ ಭೇಟಿ ಮಾಡಿ ಆಶೀರ್ವಾದ ಪಡೆಯುತ್ತೇವೆ” ಎಂದರು.
“ಮಧುಗಿರಿಯಲ್ಲಿ ಕಹಿ ಘಟನೆ ನಡೆದಿದೆ. ಕಲುಷಿತ ನೀರು ಕುಡಿದು ಸಾವನಪ್ಪಿದ್ದಾರೆ. ಇದು ನಡೆಯಬಾರದಿತ್ತು” ಎಂದರು.
“ಈ ಕುರಿತು ಉಸ್ತುವಾರಿ ಸಚಿವರ ಜೊತೆ ಮಾತನಾಡಿದ್ದೇನೆ. ನಾನೂ ಜಿಲ್ಲಾಸ್ಪತ್ರೆಗೆ ಭೇಟಿ ಕೊಟ್ಟು ಆರೋಗ್ಯ ವಿಚಾರಿಸುತ್ತೇನೆ” ಎಂದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296