nammatumakuru

    Subscribe to Updates

    Get the latest creative news from FooBar about art, design and business.

    What's Hot

    ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರಾ ಗೌಡಗೆ ಬಿಗ್‌ ಶಾಕ್; ಪ್ರದೋಷ್‌ ಮಾಫಿ ಸಾಕ್ಷಿಯಾಗಲು ಕೋರ್ಟ್‌ ಅಸ್ತು!

    August 10, 2026

    ನೂತನ ಸಚಿವರಿಗೆ ಶೀಘ್ರವೇ ಖಾತೆ ಹಂಚಿಕೆ: ನಮ್ಮಲ್ಲಿ ಯಾವುದೇ ಗೊಂದಲವಿಲ್ಲ : ಡಿಸಿಎಂ ಜಿ. ಪರಮೇಶ್ವರ್

    August 10, 2026

    RSS–ಪಾಕ್ ಲಿಂಕ್ ಬಗ್ಗೆ ತನಿಖೆಯಾಗಲಿ: ಆರ್‌ ಎಸ್‌ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಆಕ್ರೋಶ

    August 10, 2026
    Facebook Twitter Instagram
    ಟ್ರೆಂಡಿಂಗ್
    • ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರಾ ಗೌಡಗೆ ಬಿಗ್‌ ಶಾಕ್; ಪ್ರದೋಷ್‌ ಮಾಫಿ ಸಾಕ್ಷಿಯಾಗಲು ಕೋರ್ಟ್‌ ಅಸ್ತು!
    • ನೂತನ ಸಚಿವರಿಗೆ ಶೀಘ್ರವೇ ಖಾತೆ ಹಂಚಿಕೆ: ನಮ್ಮಲ್ಲಿ ಯಾವುದೇ ಗೊಂದಲವಿಲ್ಲ : ಡಿಸಿಎಂ ಜಿ. ಪರಮೇಶ್ವರ್
    • RSS–ಪಾಕ್ ಲಿಂಕ್ ಬಗ್ಗೆ ತನಿಖೆಯಾಗಲಿ: ಆರ್‌ ಎಸ್‌ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಆಕ್ರೋಶ
    • ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟದ ಜಿಲ್ಲಾ ಸಮಾಲೋಚನಾ ಸಭೆ: ರೈತರ ಹಿತರಕ್ಷಣೆಗೆ ಮಹತ್ವದ ನಿರ್ಣಯ
    • ಸರಗೂರು: ಮಕ್ಕಳ ಉತ್ತಮ ಆರೋಗ್ಯಕ್ಕೆ ಜಂತುಹುಳು ನಿವಾರಣಾ ಮಾತ್ರೆ ಸೇವನೆ ಅತ್ಯಗತ್ಯ: ಡಾ. ಚಂದ್ರಶೇಖರ
    • ಸಾರ್ಥವಳ್ಳಿಯ ಗಂಗಾಧರ್ ಕುಟುಂಬಕ್ಕೆ ಆಸರೆಯಾದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ
    • ಐಷಾರಾಮಿ ರೆಸ್ಟೋರೆಂಟ್‌ ಮೇಲೆ ದಾಳಿ:  ಕೊಳೆತ ಮಾಂಸ ಕಂಡು ಬೆಚ್ಚಿಬಿದ್ದ ಆಹಾರ ಸುರಕ್ಷತಾ ಅಧಿಕಾರಿಗಳು
    • ಚಿತ್ರದುರ್ಗ: ವಿದ್ಯುತ್ ಆಘಾತಕ್ಕೆ ನವಿಲು ಹಾಗೂ ಚಿರತೆ ದಾರುಣ ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಎಲ್ಲ ನಿಜವಾಗುವಂತಿದ್ದರೆ….
    Uncategorized January 20, 2025

    ಎಲ್ಲ ನಿಜವಾಗುವಂತಿದ್ದರೆ….

    By adminJanuary 20, 2025No Comments2 Mins Read
    princess who married a beggar

    ಒಮ್ಮೆ ರಾಜನೊಬ್ಬ ಒಂದು ಕುಸ್ತಿ ಪಂದ್ಯ ಏರ್ಪಡಿಸಿ ಯಾರು ನನ್ನನ್ನು ಕುಸ್ತಿಯಲ್ಲಿ ಸೋಲಿಸುತ್ತಾರೋ ಅವರಿಗೆ ತನ್ನ ಮಗಳನ್ನು ಕೊಟ್ಟು ವಿವಾಹ ಮಾಡುವುದಾಗಿ ಡಂಗೂರ ಸಾರಿಸಿದನು. ರಾಜನನ್ನು ಸೋಲಿಸಲು ಬಹಳ ಜನ ಬಂದರು. ಕುಸ್ತಿ ಪಂದ್ಯ ಆರಂಭವಾಯಿತು ಎಲ್ಲರೂ ರಾಜನಿಂದ ಪರಾಭವಗೊಂಡು ಹೋಗುತ್ತಿದ್ದರೇ ಹೊರತು ಯಾರಿಂದಲೂ ರಾಜನನ್ನು ಸೋಲಿಸಲು ಆಗಲಿಲ್ಲ. ಜನರ ಗುಂಪಿನಲ್ಲಿ ಇದನ್ನೆಲ್ಲಾ ನೋಡುತ್ತಿದ್ದ ಒಬ್ಬ ಭಿಕ್ಷುಕನೊಬ್ಬನಿದ್ದ ತಾನೊಂದು ಕೈ ನೋಡಿಬಿಡುವ ಎಂದುಕೊಂಡು ಕಣಕ್ಕೆ ಬಂದ ಅವನ ಅದೃಷ್ಟವೋ ಏನೋ ಎಂಬಂತೆ ಕುಸ್ತಿಯಲ್ಲಿ ರಾಜನನ್ನು ಸೋಲಿಸಿಯೇ ಬಿಟ್ಟ, ಸಂತೋಷಗೊಂಡ ರಾಜ ನೀವೇನು ಕೆಲಸ ಮಾಡುತ್ತಿರುವಿರಿ ಎಂದಾಗ ಭಿಕ್ಷುಕ ತಾನು ಭಿಕ್ಷಾಟನೆ ಮಾಡುತ್ತಿರುವುದಾಗಿ ಹೇಳಿದ ಆದರೂ ರಾಜ ಅಳುಕದೆ ಕೊಟ್ಟ ಮಾತನ್ನು ಉಳಿಸಿಕೊಳ್ಳಲು ವಿವಾಹ ಕಾರ್ಯ ಆರಂಭಿಸಿಯೇ ಬಿಟ್ಟ.

    ಭಿಕ್ಷುಕನಿಗೆ ಇದು ಸತ್ಯವೇ, ನನಗೆ ರಾಜನ ಮಗಳೊಂದಿಗೆ ವಿವಾಹವಾಗುವುದೇ? ಇದು ನನಸೇ, ಎಂದು ತನ್ನನ್ನು ತಾನೇ ನಂಬದಾದ. ಮತ್ತು ರಾಜನ ಮಗಳನ್ನು ಕೇಳಿದ ನಿಮಗೆ ನನನ್ನೊಡನೆ ವಿವಾಹ ಬೇಸರವಿಲ್ಲವೇ ಎಂದಾಗ ರಾಜನ ಮಗಳು ಖಂಡಿತ ಬೇಸರವಿಲ್ಲ ನನಗೆ ಸಂತೋಷವಿದೆ ಎಂದಾಗ ಮತ್ತಷ್ಟು ಮೂಕವಿಸ್ಮಿತನಾದ. ವಿವಾಗ ಕಾರ್ಯ ಅತ್ಯಂತ ಅದ್ದೂರಿಯಾಗಿ ನಡದೇ ಬಿಟ್ಟಿತು.

    ಕೊನೆಗೆ ರಾಜ ಅಳಿಯಂದಿರೆ ನೋಡಿ ನಿಮ್ಮೊಂದಿಗೆ ವಿವಾಹ ಮಾಡಿ ನಿಮ್ಮನ್ನು ಅರಮನೆಯಲ್ಲಿ ಇಟ್ಟುಕೊಂಡರೆ ಜನ ತಪ್ಪು ತಿಳಿಯುತ್ತಾರೆ ನೀವು ನಿಮ್ಮ ಪತ್ನಿಯನ್ನು ನಿಮ್ಮ ಮನೆಗೆ ಕರೆದುಕೊಂಡು ಹೋಗಬಹುದು ಎಂದಾಗ ರಾಜನ ಉದಾರತೆಯಿಂದ ಭಿಕ್ಷುಕ ಮತ್ತಷ್ಟು ಮೂಕವಿಸ್ಮಿತನಾದ. ಸರಿ ಎಂದು ತಲೆ ಆಡಿಸಿ ರಾಜನ ಮಗಳನ್ನು ಕರೆದುಕೊಂಡು ತನ್ನ ಗುಡಿಸಲಿಗೆ ಬಂದ ನಂತರ ರಾಜನ ಮಗಳನ್ನು ಕುರಿತು ನೋಡು ಇದೇ ನಮ್ಮ ಗುಡಿಸಲು ನಿನಗೆ ಇಲ್ಲಿ ಇರಲು ಸಾಧ್ಯವೇ ಎಂದಾಗ ರಾಜನ ಮಗಳು ಇದೇಕೆ ಹೀಗೆ ಅಂದಿರಿ ಇದು ನನ್ನ ಗಂಡನ ಮನೆ ಎಂದಾಗ ಭಿಕ್ಷುಕನಿಗೆ ಮಾತೇ ಹೊರಡಲಿಲ್ಲ.

    ನಂತರ ಸರಿ ನಾನು ಭಿಕ್ಷಾಟನೆಗೆ ಹೋಗಿಬರುತ್ತೇನೆ ನೀನು ಮನೆಯೊಳಗೇ ಇದ್ದು ಆಯಾಸ ಪರಿಹಾರ ಮಾಡಿಕೋ, ಹಸಿವಾದರೆ ಆ ಮಡಕೆಯೊಳಗೆ ನೀರು ಇದೆ ಕುಡಿ ಎಂದಾಗ ಎಲ್ಲದಕ್ಕೂ ತಲೆ ಆಡಿಸಿದಳು. ತನಗೆ ಎಂತಹ ಪತ್ನಿ ಸಿಕ್ಕಳು ಎಂದು ಸಂತೋಷದಿಂದ ತನ್ನ ಜೋಳಿಗೆಯನ್ನು ತಗಲು ಹಾಕಿಕೊಂಡು ಭಿಕ್ಷಾಟನೆಗೆ ಹೊರಟ. ಎಷ್ಟು ಅಲೆದರೂ ಯಾರೊಬ್ಬರೂ ಅವನಿಗೆ ಭಿಕ್ಷೆಯನ್ನೇ ನೀಡಲಿಲ್ಲ ಏಕೆಂದರೆ ಅವನು ರಾಜನ ಅಳಿಯ ಅವಮಾನ ಮಾಡಿದಂತೆ ಎಂದು. ಕೊನೆಗೆ ನಡೆದೂ ನಡೆದೂ ಆಯಾಸವಾಗಿ ಒಂದು ಬೆಣಚು ಕಲ್ಲಿನ ಮೇಲೆ ಮರದ ನೆರಳಿನಲ್ಲಿ ಜೋಳಿಗೆಯನ್ನು ತಲೆ ದಿಂಬಿನಂತೆ ಇಟ್ಟುಕೊಂಡು ಹಾಗೆಯೇ ನಿದ್ರೆಗೆ ಜಾರಿದ. ಸ್ವಲ್ಪ ಸಮಯದ ನಂತರ ಕುದುರೆ ಸಪ್ಪಳ ತನ್ನ ಹತ್ತಿರ ಬಂದತೆ ಭಾಸವಾಗಿ ಕಣ್ಣು ತೆರೆದು ನೋಡಿದರೆ ಪಕ್ಕದ ರಾಜ್ಯದ ರಾಜನ ಮಗ ಖತ್ತಿ ಹಿಡಿದು ಅವನತ್ತ ಬಂದು ಎಲವೋ ಮೂರ್ಖ, ನಾನು ರಾಜನ ಮಗಳನ್ನು ಪ್ರೀತಿಸುತ್ತಿದ್ದೆ, ರಾಜನನ್ನು ಒಪ್ಪಿಸಿ ಅವಳನ್ನು ಮದುವೆಯಾಗುವವನಿದ್ದೆ, ಈಗ ನೀನು ಬಂದು ಎಲ್ಲವನ್ನು ಹಾಳು ಮಾಡಿದೆ, ಈಗ ನೋಡು ನಿನ್ನ ಕಥೆಯನ್ನು ನಾನು ಮುಗಿಸುತ್ತೇನೆ, ಎಂದು ಒಮ್ಮೆ ಕತ್ತಿಯನ್ನು ಅವನತ್ತ ಬೀಸಿದ ಅಯ್ಯೋ ಅಮ್ಮಾ ಎನ್ನುತ್ತಾ ಭಿಕ್ಷುಕ ಖತ್ತಿಯಿಂದ ತಪ್ಪಿಸಿಕೊಳ್ಳಲು ಒಮ್ಮೆ ಹಾಗೆಯೇ ಹೊರಳಿದ, ಹೊರಳಿದವನೇ ಮಂಚದಿಂದ ಕೆಳಗೆ ಬಿದ್ದ, ಈಗ ಅವನಿಗೆ ಸಂಪೂರ್ಣ ನಿದ್ರೆಯಿಂದ ಎಚ್ಚರವಾಗಿತ್ತು, ಸುತ್ತಲೂ ತನ್ನ ಗುಡಿಸಲಿನ ಗೋಡೆ,  ಅಯ್ಯೋ ಇಲ್ಲಿಯವರೆಗೆ ನಾನು ನೋಡಿದ್ದು ಹಗಲು ಕನಸು, ನಮ್ಮಂತವರ ಬದುಕಲ್ಲಿ ಹೀಗೆಲ್ಲಾ ಒಳ್ಳೆಯದು ನಡೆಯುವುದೇ, ನಾವು ಬರೀ ಕನಸು ಕಾಣುತ್ತಲೇ ಜೀವನ ಸಾಗಿಸಬೇಕು ಎಂದುಕೊಳ್ಳುತ್ತಾ ಬೇಸರದಿಂದ ತನ್ನ ಜೋಳಿಗೆ ಹಿಡಿದು ಭಿಕ್ಷಾಟನೆಗೆ ಹೊರಟ.

    ನೀತಿ: ದುರಾದೃಷ್ಟವಶಾತ್ ಸುಂದರ ಸ್ವಪ್ನಗಳು ಎಚ್ಚರವಾದ ನಂತರ ಮನಸ್ಸಿಗೆ ಬೇಸರ ತರುತ್ತವೆ.

    ವೇಣುಗೋಪಾಲ್

     


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಕಾವೇರಿ ಕಿಚ್ಚು: ‘ಭೂಮಿ, ನೀರು, ಭಾಷೆ ವಿಚಾರ ಬಂದಾಗ ಕರ್ನಾಟಕ ಒಂದಾಗಬೇಕು’ : ಸರ್ವಪಕ್ಷ ಸಭೆಯಲ್ಲಿ ಸಿದ್ದರಾಮಯ್ಯ ಕರೆ

    August 3, 2026

    ಹಾದನೂರು ಸರ್ಕಾರಿ ಶಾಲೆಗೆ ‘ಗಿಫ್ಟ್ ಎ ಡ್ರೀಮ್ಸ್ ಫೌಂಡೇಷನ್’ ಆಸರೆ: ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿ, ಸಮವಸ್ತ್ರ ವಿತರಣೆ

    July 28, 2026

    ಕೂಡ್ಲಿಗಿ: “ದೈವ ಒಂದೇ, ಅದು ದೇಶ – ದೇಶ ಸೇವೆಯೇ ದೈವ ಸೇವೆ”: ಮಾಜಿ ಸೈನಿಕ ಕಾಟೇರ ರಮೇಶ್

    July 27, 2026

    Comments are closed.

    Our Picks

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರಾ ಗೌಡಗೆ ಬಿಗ್‌ ಶಾಕ್; ಪ್ರದೋಷ್‌ ಮಾಫಿ ಸಾಕ್ಷಿಯಾಗಲು ಕೋರ್ಟ್‌ ಅಸ್ತು!

    August 10, 2026

    ಬೆಂಗಳೂರು:  ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಹಾಗೂ ಅವರ ಗೆಳತಿ ಪವಿತ್ರಾ ಗೌಡ ಅವರಿಗೆ ಭಾರೀ ಕಾನೂನು…

    ನೂತನ ಸಚಿವರಿಗೆ ಶೀಘ್ರವೇ ಖಾತೆ ಹಂಚಿಕೆ: ನಮ್ಮಲ್ಲಿ ಯಾವುದೇ ಗೊಂದಲವಿಲ್ಲ : ಡಿಸಿಎಂ ಜಿ. ಪರಮೇಶ್ವರ್

    August 10, 2026

    RSS–ಪಾಕ್ ಲಿಂಕ್ ಬಗ್ಗೆ ತನಿಖೆಯಾಗಲಿ: ಆರ್‌ ಎಸ್‌ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಆಕ್ರೋಶ

    August 10, 2026

    ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟದ ಜಿಲ್ಲಾ ಸಮಾಲೋಚನಾ ಸಭೆ: ರೈತರ ಹಿತರಕ್ಷಣೆಗೆ ಮಹತ್ವದ ನಿರ್ಣಯ

    August 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.