nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಕ್ಕಳು ದುಶ್ಚಟಗಳಿಂದ ದೂರವಿರಿ: ಅಬಕಾರಿ ಉಪ ಅಧೀಕ್ಷಕ ದೀಪಕ್ ಎಸ್. ಕರೆ

    July 28, 2026

    ಸರಗೂರು: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅರ್ಥಪೂರ್ಣ ವಿಶ್ವ ಜನಸಂಖ್ಯಾ ದಿನಾಚರಣೆ

    July 28, 2026

    ಸರಗೂರು: ದಲಿತ ಸಂಘರ್ಷ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ; ಸಂಘಟನೆ ಬಲವರ್ಧನೆಗೆ ಕರೆ

    July 28, 2026
    Facebook Twitter Instagram
    ಟ್ರೆಂಡಿಂಗ್
    • ಮಕ್ಕಳು ದುಶ್ಚಟಗಳಿಂದ ದೂರವಿರಿ: ಅಬಕಾರಿ ಉಪ ಅಧೀಕ್ಷಕ ದೀಪಕ್ ಎಸ್. ಕರೆ
    • ಸರಗೂರು: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅರ್ಥಪೂರ್ಣ ವಿಶ್ವ ಜನಸಂಖ್ಯಾ ದಿನಾಚರಣೆ
    • ಸರಗೂರು: ದಲಿತ ಸಂಘರ್ಷ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ; ಸಂಘಟನೆ ಬಲವರ್ಧನೆಗೆ ಕರೆ
    • ಹಾದನೂರು ಸರ್ಕಾರಿ ಶಾಲೆಗೆ ‘ಗಿಫ್ಟ್ ಎ ಡ್ರೀಮ್ಸ್ ಫೌಂಡೇಷನ್’ ಆಸರೆ: ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿ, ಸಮವಸ್ತ್ರ ವಿತರಣೆ
    • ಶಾಸಕ ಪ್ರಭು ಚೌವ್ಹಾಣ್ ಅವರಿಗೆ ಪತ್ರಿಕಾ ದಿನಾಚರಣೆಗೆ ಅಧಿಕೃತ ಆಹ್ವಾನ
    • ಸರಗೂರು: ರಸ್ತೆ ಅಭಿವೃದ್ಧಿಯಿಂದ ಗ್ರಾಮೀಣ ಭಾಗಕ್ಕೆ ಹೊಸ ಚೈತನ್ಯ — ಶಾಸಕರ ಕಾರ್ಯಕ್ಕೆ ಸಾರ್ವಜನಿಕ ಮೆಚ್ಚುಗೆ
    • ಬೀದರ್: ಮಳೆ ಅಭಾವ; ವಲಸೆ ತಡೆಗೆ ‘ವಿಬಿ-ಜಿ ರಾಮ್ ಜಿ’ ಅಡಿ ಕೆಲಸ ನೀಡಲು ಸಚಿವ ಈಶ್ವರ ಖಂಡ್ರೆ ಸೂಚನೆ
    • ಸರಗೂರು: ಧಾರ್ಮಿಕ ಕ್ಷೇತ್ರದ ಸಮೀಪ ಬಾರ್ ತೆರವಿಗೆ ಆಗ್ರಹಿಸಿ ತಾಲೂಕು ಆಡಳಿತದ ವಿರುದ್ಧ ಬೃಹತ್ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸ್ಥಳೀಯವಾಗಿ ಸಮಸ್ಯೆಗಳನ್ನು ಪರಿಹರಿಸಿದಲ್ಲಿ ಜನರು ಸರ್ಕಾರವನ್ನು ದೂರುವುದು ತಪ್ಪುತ್ತದೆ: ಜಿಲ್ಲಾಧಿಕಾರಿ ಶುಭ ಕಲ್ಯಾಣ್
    ತುಮಕೂರು June 27, 2024

    ಸ್ಥಳೀಯವಾಗಿ ಸಮಸ್ಯೆಗಳನ್ನು ಪರಿಹರಿಸಿದಲ್ಲಿ ಜನರು ಸರ್ಕಾರವನ್ನು ದೂರುವುದು ತಪ್ಪುತ್ತದೆ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

    By adminJune 27, 2024No Comments3 Mins Read
    shuba kalyan

    ತುಮಕೂರು: ಗ್ರಾಮ ಮಟ್ಟದಲ್ಲಿ ಗ್ರಾಮ ಲೆಕ್ಕಾಧಿಕಾರಿ ಹಾಗೂ ಕಂದಾಯ ನಿರೀಕ್ಷಕರುಗಳು ತಮ್ಮ ವ್ಯಾಪ್ತಿಯ ಸಮಸ್ಯೆಗಳನ್ನು ಸ್ಥಳೀಯವಾಗಿ ಪರಿಹರಿಸಿದಲ್ಲಿ ಜನರು ಸರ್ಕಾರವನ್ನು ದೂರುವುದು ತಪ್ಪುತ್ತದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಹೇಳಿದರು.

    15 ದಿನದೊಳಗೆ ಅರ್ಜಿ ವಿಲೇವಾರಿಗೆ ಸೂಚನೆ:

    ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ವತಿಯಿಂದ ತುರುವೇಕೆರೆ ಪಟ್ಟಣದ ಶ್ರೀ ಸತ್ಯಗಣಪತಿ ಆಸ್ಥಾನ ಮಂಟಪದಲ್ಲಿಂದು ಆಯೋಜಿಸಿದ್ದ ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಗರ ಸ್ಥಳೀಯ ಸಂಸ್ಥೆ ಸೇರಿದಂತೆ ಪಂಚಾಯಿತಿ ಮಟ್ಟದ ಅಧಿಕಾರಿ, ಸಿಬ್ಬಂದಿಗಳು ಜನರಿಂದ ವಿವಿಧ ಸೌಲಭ್ಯ ಕೋರಿ ಸ್ವೀಕೃತವಾದ ಅರ್ಜಿಗಳು ಅರ್ಹವೇ? ಅನರ್ಹವೇ? ಎಂದು ಪರಿಶೀಲಿಸಿ ೧೫ ದಿನಗಳೊಳಗಾಗಿ ವಿಲೇವಾರಿ ಮಾಡಬೇಕು. ಸ್ಥಳೀಯ ಅಧಿಕಾರಿಗಳು ನಿಗಧಿತ ಸಮಯದೊಳಗೆ ವಿಲೇವಾರಿ ಮಾಡದೇ ಹೋದರೆ ಜನರು ಜಿಲ್ಲಾ ಕೇಂದ್ರಕ್ಕೆ ಬರುತ್ತಾರೆ. ತಮ್ಮ ದೈನಂದಿನ ಕೆಲಸ ಕಾರ್ಯಗಳನ್ನು ಬಿಟ್ಟು ದೂರದ ಜಿಲ್ಲಾ ಕೇಂದ್ರಕ್ಕೆ ಬರುವುದನ್ನು ತಪ್ಪಿಸಬೇಕು ಎಂದು ತಿಳಿಸಿದರು.

    ಪಿಂಚಣಿ ಸೌಲಭ್ಯ ಮನೆ ಬಾಗಿಲಿಗೆ ತಲುಪಿಸಿ:

    ಸಾಮಾಜಿಕ ಭದ್ರತಾ ಯೋಜನೆಯಡಿ ನೀಡಲಾಗುವ ವಿಧವಾ ವೇತನ, ವೃದ್ಧಾಪ್ಯ ವೇತನ ಸೇರಿದಂತೆ ಪಿಂಚಣಿ ಮಂಜೂರಾತಿ ಆದೇಶವನ್ನು ಫಲಾನುಭವಿಗಳ ಮನೆ ಬಾಗಿಲಿಗೆ ತಲುಪಿಸಬೇಕು. ಅರ್ಹ ಫಲಾನುಭವಿಗಳಿಗೆ ಸರ್ಕಾರಿ ಸೌಲಭ್ಯಗಳನ್ನು ಒದಗಿಸಲು ಅಸಡ್ಡೆ ತೋರುವ ಅಧಿಕಾರಿಗಳ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದೆಂದರಲ್ಲದೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ವಾರದಲ್ಲಿ ೩ ದಿನ ಬೆಳಿಗ್ಗೆ ೭ ರಿಂದ ೧೦ ಗಂಟೆಯವರೆಗೂ ತಮ್ಮ ವ್ಯಾಪ್ತಿಯ ರೈತರ ಮನೆಗೆ ಹೋಗಿ ಆಂದೋಲನ ರೀತಿಯಲ್ಲಿ ಬಾಕಿಯಿರುವ ಪೌತಿ ಖಾತೆ, ಆರ್‌ಟಿಸಿ ಇಂಧೀಕರಣ, ಪಹಣಿ, ನಿವೇಶನ ಸೌಲಭ್ಯ ಸೇರಿದಂತೆ ಕಂದಾಯ ವಿಷಯಗಳಿಗೆ ಸಂಬಂಧಿಸಿದ ಅರ್ಜಿಗಳನ್ನು ನಿಗದಿತ ಅವಧಿಯೊಳಗೆ ವಿಲೇವಾರಿ ಮಾಡಬೇಕು ಎಂದು ನಿರ್ದೇಶನ ನೀಡಿದರು.

    ಶುದ್ಧ ಕುಡಿಯುವ ನೀರು ಪೂರೈಸಿ:

    ನಗರ ಪ್ರದೇಶ ಸೇರಿ ಗ್ರಾಮೀಣ ಪ್ರದೇಶದ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಬೇಕು. ಓವರ್ ಹೆಡ್ ಟ್ಯಾಂಕುಗಳನ್ನು ವಾರಕ್ಕೊಮ್ಮೆ ಸ್ವಚ್ಛಗೊಳಿಸುವುದರೊಂದಿಗೆ ಕುಡಿಯಲು ಯೋಗ್ಯವೇ ಎಂದು ಪರೀಕ್ಷೆಗೊಳಪಡಿಸಬೇಕು. ಜನರಿಗೆ ಕುಡಿಯಲು ಯೋಗ್ಯವಾದ ನೀರನ್ನೇ ಸರಬರಾಜು ಮಾಡಬೇಕು. ಈ ನಿಟ್ಟಿನಲ್ಲಿ ಪಂಚಾಯತಿ ಪ್ರತಿನಿಧಿಗಳು ಹಾಗೂ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಕ್ರಮವಹಿಸಬೇಕು. ಪಂಚಾಯತಿ ಅಧಿಕಾರಿಗಳಿಗೆ ನೀರಿನ ಪರೀಕ್ಷೆ ಕಾರ್ಯವಿಧಾನದ ಬಗ್ಗೆ ಈಗಾಗಲೇ ತರಬೇತಿ ನೀಡಲಾಗಿದೆ ಎಂದು ತಿಳಿಸಿದರು.

    ಸಾರ್ವಜನಿಕರ ಸಮಸ್ಯೆಗಳಿಗೆ ಪರಿಹಾರ ಸಿಕ್ಕಾಗ ಮಾತ್ರ ಜನ ಸ್ಪಂದನ ಯಶಸ್ವಿ : ಎಂ.ಟಿ.ಕೃಷ್ಣಪ್ಪ

    ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ, ಸರ್ಕಾರ ನೇರವಾಗಿ ಜನರ ಬಳಿಗೆ ಬಂದು ಅವರ ಸಮಸ್ಯೆಗಳಿಗೆ ಪರಿಹಾರ ದೊರಕಿಸಿಕೊಡುವುದೇ ಈ ಕಾರ್ಯಕ್ರಮದ ಉದ್ದೇಶವಾಗಿರುವುದರಿಂದ ಸಾರ್ವಜನಿಕರ ಸಮಸ್ಯೆಗಳಿಗೆ ಪರಿಹಾರ ಸಿಕ್ಕಾಗ ಮಾತ್ರ ಜನ ಸ್ಪಂದನ ಕಾರ್ಯಕ್ರಮ ಯಶಸ್ವಿಯಾಗುತ್ತದೆ ಎಂದು ಅಭಿಪ್ರಾಯಪಟ್ಟರು.

    ಸಮಸ್ಯೆಗಳನ್ನು ತಳಮಟ್ಟದಲ್ಲಿಯೇ ಬಗೆಹರಿಸಿ:

    ಸಾರ್ವಜನಿಕರ ಸಮಸ್ಯೆಗಳನ್ನು ತಳಮಟ್ಟದಲ್ಲೇ ಬಗೆಹರಿಸುವ ನಿಟ್ಟಿನಲ್ಲಿ ಸರ್ಕಾರ ಕೈಗೊಂಡಿರುವ ಮಹತ್ವದ ಕಾರ್ಯಕ್ರಮ ಇದಾಗಿದ್ದು, ಸಾರ್ವಜನಿಕರು ತಮ್ಮ ಕುಂದು ಕೊರತೆಗಳನ್ನು ತಿಳಿಸುವ ಮೂಲಕ ಅವುಗಳಿಗೆ ಪರಿಹಾರ ಕಂಡುಕೊಳ್ಳಬೇಕು ಎಂದು ಮನವಿ ಮಾಡಿದರು.

    ತಾಲ್ಲೂಕಿನಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದ ಪವತಿ ಖಾತೆ, ಪಹಣಿ, ನಕಾಶೆ ರಸ್ತೆ, ವಾಡಿಕೆ ರಸ್ತೆ, ಜಮೀನು ಒತ್ತುವರಿಯಂತಹ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿದ್ದು, ಅವುಗಳನ್ನು ಶೀಘ್ರವಾಗಿ ಪರಿಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಅವರು, ತಾಲ್ಲೂಕಿನಲ್ಲಿ ಜೂಜು ಆಡುತ್ತಿರುವ ಬಗ್ಗೆ ದೂರುಗಳು ಕೇಳಿ ಬರುತ್ತಿದ್ದು, ಪೊಲೀಸ್ ಇಲಾಖೆ ಈ ಬಗ್ಗೆ ಸೂಕ್ತ ಕ್ರಮವಹಿಸಬೇಕು ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್.ಅಬ್ದುಲ್ ಖಾದರ್ ಅವರಿಗೆ ನಿರ್ದೇಶಿಸಿದರು.

    ಜನರು ಆರೋಗ್ಯದ ಕಡೆಗೆ ಹೆಚ್ಚು ಗಮನ ವಹಿಸಬೇಕು. ಮಳೆಯಿಂದಾಗಿ ಸೊಳ್ಳೆಗಳು ಉತ್ಪತ್ತಿಯಾಗಿ ಡೆಂಗ್ಯೂ ಜ್ವರ ಹೆಚ್ಚುವ ಭೀತಿಯಿರುವುದರಿಂದ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ತಾಲ್ಲೂಕಿನ ಸಾರ್ವಜನಿಕ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆಯಿಂದ ಜನರು ಚಿಕಿತ್ಸೆಗಾಗಿ ಪರದಾಡುತ್ತಿದ್ದು, ವೈದ್ಯರ ನೇಮಕಕ್ಕೆ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು.

    ಸ್ಥಳದಲ್ಲಿಯೇ ಗ್ರಾಮ ನಕ್ಷೆ ವಿತರಣೆ:

    ಸುಮಾರು ೫೬ ಮನೆಗಳುಳ್ಳ ಹೊಸದಾಗಿ ಸೃಜನೆಯಾಗಿರುವ ಕಂದಾಯ ಗ್ರಾಮವಾದ ಲಕ್ಕಿ ರಾಮನಪಾಳ್ಯದ ನಿವಾಸಿಗಳು ಇ–ಖಾತೆ ಮಾಡಿಸಿಕೊಳ್ಳಲು ಗ್ರಾಮನಕ್ಷೆ ಒದಗಿಸುವಂತೆ ಮಾಡಿದ್ದ ಮನವಿಗೆ ತಕ್ಷಣ ಸ್ಪಂದಿಸಿದ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕಂದಾಯ ಅಧಿಕಾರಿಗಳಿಗೆ ಸೂಚನೆ ನೀಡಿ ಸ್ಥಳದಲ್ಲಿಯೇ ಶಾಸಕರು ಮತ್ತು ಅಧಿಕಾರಿಗಳ ಸಮ್ಮುಖದಲ್ಲಿ ಗ್ರಾಮಸ್ಥರಿಗೆ ಗ್ರಾಮ ನಕ್ಷೆಯನ್ನು ವಿತರಣೆ ಮಾಡಿದರು.

    ಜನಸ್ಪಂದನದಲ್ಲಿ ವಸತಿ ಸೌಲಭ್ಯ ಕೋರಿ ಬುಗುಡನಹಳ್ಳಿಯ ಲಲಿತಮ್ಮ ಹಾಗೂ ಕೆಂಪ ದೇವಮ್ಮ; ನರೇಗಾ ಯೋಜನೆಯಡಿ ಸಾಮಗ್ರಿ ವೆಚ್ಚ ಬಿಡುಗಡೆ ಮಾಡುವಂತೆ ಕೋರಿ ರಾಮಸಾಗರದ ಶಿವಲಿಂಗಯ್ಯ, ನಿವೇಶನ ನೀಡುವಂತೆ ಕೋರಿ ತುರುವೇಕೆರೆ ಪಟ್ಟಣದ ವನಜಾ, ಒತ್ತುವರಿ ರಸ್ತೆ ಬಿಡಿಸಿಕೊಡುವಂತೆ ಸೀಗೆಹಳ್ಳಿ ಗ್ರಾಮದ ರೈತ ರಂಗಣ್ಣ, ನಳ ಸಂಪರ್ಕ ಕೋರಿ ಕಲ್ಕೆರೆ ಆಸಿಯಾ ಭಾನು ಸೇರಿದಂತೆ ಮತ್ತಿತರರು ಜಿಲ್ಲಾಧಿಕಾರಿಗಳಿಗೆ ತಮ್ಮ ಅಹವಾಲುಗಳನ್ನು ಸಲ್ಲಿಸಿದರು.

    ೨೫೬ ಅರ್ಜಿ ಸ್ವೀಕಾರ:

    ಈ ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದ ೧೭೨, ತಾಲ್ಲೂಕು ಪಂಚಾಯತಿ-೪೮, ಪಟ್ಟಣ ಪಂಚಾಯತಿ-೧೭, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ-೧, ಸಮಾಜ ಕಲ್ಯಾಣ ಇಲಾಖೆ-೧, ಆರೋಗ್ಯ-೧, ಸಾರಿಗೆ ಇಲಾಖೆ-೧, ಲೋಕೋಪಯೋಗಿ ಇಲಾಖೆ-೩, ಭೂ ಮಾಪನ ಇಲಾಖೆ-೪, ಬೆಸ್ಕಾಂ-೫, ಹೇಮಾವತಿ-೧, ಅರಣ್ಯ ಇಲಾಖೆ-೧, ಭೂಸ್ವಾಧೀನ ಇಲಾಖೆ-೧ ಸೇರಿದಂತೆ ಒಟ್ಟು ೨೫೬ ಅರ್ಜಿಗಳನ್ನು ಸ್ವೀಕರಿಸಲಾಗಿದೆ.

    ಈ ಸಂದರ್ಭದಲ್ಲಿ ತಹಶೀಲ್ದಾರ್ ವೈ.ಎಂ.ರೇಣುಕುಮಾರ್, ಭೂದಾಖಲೆಗಳ ಇಲಾಖೆ ಉಪನಿರ್ದೇಶಕ ನಿರಂಜನ್, ರೇಷ್ಮೆ ಉಪ ನಿರ್ದೇಶಕ ಬಾಲಕೃಷ್ಣಪ್ಪ, ಕೃಷಿ ಉಪನಿರ್ದೇಶಕ ಅಶೋಕ್, ತಾಲೂಕು ಪಂಚಾಯತಿ ಕಾರ್ಯನಿರ್ವಾಹಕಾಧಿಕಾರಿ ಶಿವರಾಜಯ್ಯ, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕ ಮಂಟೇಸ್ವಾಮಿ, ಪಟ್ಟಣ ಪಂಚಾಯ್ತಿ ಸದಸ್ಯರಾದ ಚಿದಾನಂದ್, ಮಧು ಕುಮಾರ್, ಸುರೇಶ್, ಮಹೇಶ್, ಅಂಜನ್ ಕುಮಾರ್, ಮತ್ತಿತರ ಅಧಿಕಾರಿ-ಸಿಬ್ಬಂದಿಗಳು ಹಾಜರಿದ್ದರು.

    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಕೇಂದ್ರ ಶಿಕ್ಷಣ ಸಚಿವರ ರಾಜಿನಾಮೆ ಬೆನ್ನಲ್ಲೇ ವಿದ್ಯಾರ್ಥಿಗಳಿಗೆ ದ್ರೋಹ ಬಗೆದ ಸರ್ಕಾರ!

    July 27, 2026

    ತುಮಕೂರು: ನಡುರಸ್ತೆಯಲ್ಲೇ ರೌಡಿಶೀಟರ್‌ ಮಲ್ಲ ಬರ್ಬರ ಹತ್ಯೆ!

    July 27, 2026

    ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್‌

    July 26, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ಮಕ್ಕಳು ದುಶ್ಚಟಗಳಿಂದ ದೂರವಿರಿ: ಅಬಕಾರಿ ಉಪ ಅಧೀಕ್ಷಕ ದೀಪಕ್ ಎಸ್. ಕರೆ

    July 28, 2026

    ಲಿಂಗದಹಳ್ಳಿಯಲ್ಲಿ ಮಾದಕ ದ್ರವ್ಯ ದುಷ್ಪರಿಣಾಮಗಳ ಜಾಗೃತಿ ಕಾರ್ಯಕ್ರಮ ಪಾವಗಡ: ಪಿಯುಸಿ ಹಂತವು ವಿದ್ಯಾರ್ಥಿಗಳ ಬದುಕಿನ ಅತ್ಯಂತ ಮಹತ್ವದ ಘಟ್ಟವಾಗಿದೆ. ಈ…

    ಸರಗೂರು: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅರ್ಥಪೂರ್ಣ ವಿಶ್ವ ಜನಸಂಖ್ಯಾ ದಿನಾಚರಣೆ

    July 28, 2026

    ಸರಗೂರು: ದಲಿತ ಸಂಘರ್ಷ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ; ಸಂಘಟನೆ ಬಲವರ್ಧನೆಗೆ ಕರೆ

    July 28, 2026

    ಹಾದನೂರು ಸರ್ಕಾರಿ ಶಾಲೆಗೆ ‘ಗಿಫ್ಟ್ ಎ ಡ್ರೀಮ್ಸ್ ಫೌಂಡೇಷನ್’ ಆಸರೆ: ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿ, ಸಮವಸ್ತ್ರ ವಿತರಣೆ

    July 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.