ಒಂದು ವೇಳೆ ದರ್ಶನ್ ವಿರುದ್ಧದ ಆರೋಪ ಸಾಬೀತಾದರೆ ಶಿಕ್ಷೆ ಆಗಲಿ ಎಂದು ಆರ್. ಅಶೋಕ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಕಾನೂನಿಗಿಂತ ಯಾರೂ ದೊಡ್ಡವರಲ್ಲ. ಈ ಘಟನೆಯನ್ನು ನಾನು ಖಂಡಿಸುತ್ತೇನೆ. ಹಾಗೆಯೇ ಪೊಲೀಸರು ಸೂಕ್ತವಾಗಿ ತನಿಖೆ ಮಾಡಬೇಕೆಂದು ಆಗ್ರಹಿಸುತ್ತೇನೆ ಎಂದರು. ರಾಜ್ಯದಲ್ಲಿ ಅಪರಾಧ ಚಟುವಟಿಕೆ ಹೆಚ್ಚಿದೆ.
ಚನ್ನಗಿರಿಯಲ್ಲಿ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಲಾಗಿದೆ. ಪೊಲೀಸರಿಗೆ ಕಪಾಳ ಮೋಕ್ಷವಾಗಿದೆ. ಕಾನೂನು ಪೊಲೀಸರ ಹಿಡಿತದಲ್ಲೇ ಇಲ್ಲ. ಆದ್ದರಿಂದ ಪೊಲೀಸ್ ಠಾಣೆಗೆ ಶಾಮಿಯಾನ ಹಾಕಿ ಮುಚ್ಚುಮರೆ ಮಾಡುತ್ತಿದ್ದಾರೆ. ನಾವು ಕರ್ನಾಟಕದಲ್ಲಿದ್ದೇವೆಯೇ ಹೊರತು ಜಮ್ಮು ಮತ್ತು ಕಾಶ್ಮೀರದಲ್ಲಿಲ್ಲ. ಇದನ್ನು ಟಿವಿ ಮಾಧ್ಯಮಗಳು ಚಿತ್ರೀಕರಣ ಮಾಡದಂತೆ ಕ್ರಮ ವಹಿಸುವುದು ಸರಿಯಲ್ಲ ಎಂದು ಹೇಳಿದ್ದಾರೆ. ಚಲನಚಿತ್ರ ವಾಣಿಜ್ಯ ಮಂಡಳಿಯವರು ಕೂಡ ಈ ಕುರಿತು ನಿರ್ಧಾರ ತೆಗೆದುಕೊಳ್ಳಬೇಕು. ತನಿಖೆ ಸರಿಯಾಗಿ ನಡೆದು ಸತ್ಯಾಂಶ ಹೊರಬರಲಿ.
ಈ ಪ್ರಕರಣದಲ್ಲಿ ಮೃತನಾದ ವ್ಯಕ್ತಿ ಯಾವುದೇ ಅಪರಾಧಿ ಹಿನ್ನೆಲೆ ಹೊಂದಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಎಷ್ಟೋ ಸಂದೇಶಗಳು ಬರುತ್ತವೆ. ಅದಕ್ಕಾಗಿ ಕೊಲೆ ಮಾಡಲು ಹೋಗಬಾರದು. ಇಂತಹ ಕ್ಷುಲ್ಲಕ ವಿಚಾರಕ್ಕೆ ಕೊಲೆ ಮಾಡಿರುವುದು ಇಡೀ ಚಿತ್ರೋದ್ಯಮಕ್ಕೆ ಕಳಂಕವಾಗಿದೆ. ಸರ್ಕಾರ ಮಾನವೀಯತೆ ದೃಷ್ಟಿಯಿಂದ ಮೃತ ವ್ಯಕ್ತಿಯ ಕುಟುಂಬಕ್ಕೆ ಆರ್ಥಿಕ ನೆರವು ನೀಡಬೇಕು ಎಂದು ಆಗ್ರಹಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296