ಪಾವಗಡ: ಆರೋಗ್ಯ ಭಾಗ್ಯ ಉತ್ತಮವಾಗಿದ್ದರೆ ಮನುಷ್ಯನಿಗೆ ಎಲ್ಲಾ ಭಾಗ್ಯಗಳು ಒದಗಿ ಬಂದಂತೆ ಎಂದು ಆದಾನಿ ಸೊಲಾರ್ ಕಂಪನಿಯ ಮಾನವ ಸಂಪನ್ಮೂಲ ಅಧಿಕಾರಿ ರಾಜು ಗೌಡ ತಿಳಿಸಿದರು.
ತಾಲ್ಲೂಕಿನ ತಿರುಮಣಿ ಗ್ರಾಮದಲ್ಲಿ ಆದಾನಿ ಗ್ರೀನ್ ಎನರ್ಜಿ ಲಿಮಿಟೆಡ್ ಸೋಲಾರ್ ಕಂಪನಿ ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನುಷ್ಯನಿಗೆ ಆರೋಗ್ಯ ಚೆನ್ನಾಗಿದ್ದರೆ ಏನು ಬೇಕಾದರೂ ಸಾಧನೆ ಮಾಡಬಹುದು. ಎಷ್ಟು ಹಣವನ್ನು ಬೇಕಾದರೂ ಸಂಪಾದಿಸಬಹುದು ಆದ್ದರಿಂದ ಸಾರ್ವಜನಿಕರು ಆರೋಗ್ಯ ದ ಕಡೆ ಹೆಚ್ಚು ನಿಗಾ ವಹಿಸಬೇಕು ಎಂದು ತಿಳಿಸಿದರು.
ಶಿಬಿರದಲ್ಲಿ ವಿವಿದ ತಜ್ಞ ವೈದ್ಯರು ಪಾಲ್ಗೊಂಡು ಜನತೆಗೆ ಉತ್ತಮ ಸಲಹೆ ಸೂಚನೆಗಳನ್ನು ನೀಡಿದರು. ತಿರುಮಣಿ ಗ್ರಾಮದ ಸುತ್ತಮುತ್ತಲ ಹಳ್ಳಿಯ ನೂರಾರು ಮಂದಿ ಶಿಬಿರದಲ್ಲಿ ಭಾಗವಹಿಸಿ ಶಿಬಿರದ ಪ್ರಯೋಜನ ಪಡೆದರು
ಇದೇ ಸಂದರ್ಭದಲ್ಲಿ ಪೋಲೀಸ್ ಮಹಾಂತೇಶ್, ಸೌತ್ ಕರ್ನಾಟಕ ವನ್ ಕ್ಲಸ್ಟರ್ನ ಮ್ಯಾನೇಜರ್ ಬಿ. ಆರ್ ಚೌದರಿ, ಗ್ರಾಮ ಪಂಚಾಯತಿ ಅಧ್ಯಕ್ಷರಾದ ಲೋಕೇಶ್, ಊರಿನ ಮುಖಂಡರಾದ ರಾಮಮೂರ್ತಿ , ಮುಖ್ಯ ಶಿಕ್ಷಕರಾದ ಚಂದ್ರಶೇಖರ್, ಕೆಎಸ್ಪಿಟಿಸಿಎಲ್ ಮುಖ್ಯಸ್ಥರಾದ ಮಹೇಶ್, ಸಿದ್ದಗಂಗಾ ಹಾಸ್ಪಿಟಲ್ ನ ವೈದ್ಯರಾದ ವಿನಯ್ ಹಾಗೂ ಮುಂತಾದವರು ಹಾಜರಿದ್ದರು.
ವರದಿ: ನಂದೀಶ್ ನಾಯ್ಕ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296