ಡಿ. ಜೆ ಹಳ್ಳಿ, ಕೆ. ಜೆ. ಹಳ್ಳಿ ಪ್ರಕರಣದಲ್ಲಿ ಆರೋಪಿಗಳ ಕೇಸ್ ವಾಪಸ್ ವಿಚಾರವಾಗಿ ಬಿಜೆಪಿ ನಾಯಕರ ಆರೋಪಕ್ಕೆ ಪ್ರತಿಕ್ರಿಯಿಸಿದ ಗೃಹ ಸಚಿವ ಜಿ. ಪರಮೇಶ್ವರ್, ಬಹಳ ಜನ ಶಾಸಕರು ಬೇರೆ ಬೇರೆ ಸಂಸ್ಥೆಗಳ ಕೇಸ್ ಗಳನ್ನು ವಾಪಸ್ ತೆಗೆದುಕೊಳ್ಳಿ ಎಂದು ಪತ್ರ ಕೊಡ್ತಿದ್ದಾರೆ.
ಕೇಸ್ ವಾಪಸ್ ತಗೊಳ್ಳಿ ಅಂದಾಕ್ಷಣ ವಾಪಸ್ ತೆಗೆದುಕೊಳ್ಳಲು ಆಗುವುದಿಲ್ಲ. ಅದಕ್ಕೊಂದು ಪದ್ಧತಿ ಇದೆ. ಕ್ಯಾಬಿನೆಟ್ ಸಬ್ ಕಮಿಟಿ ಮುಂದೆ ವಿಷಯ ಮಂಡಿಸಬೇಕಾಗುತ್ತದೆ. ಸಬ್ ಕಮಿಟಿ ಸಾಧಕ-ಬಾಧಕದ ಬಗ್ಗೆ ಚರ್ಚಿಸಿ ತೀರ್ಮಾನ ಮಾಡುತ್ತದೆ. ಅದೊಂದು ಪ್ರಕ್ರಿಯೆ ಮಾತ್ರ ಮಾಡಿದ್ದೇವೆ. ಈ ವಿಷಯ ಕ್ಯಾಬಿನೆಟ್ ಸಬ್ ಕಮಿಟಿಯಿಂದ ಕ್ಯಾಬಿನೆಟ್ ಗೆ ಬರುತ್ತದೆ. ಕ್ಯಾಬಿನೆಟ್ ನಲ್ಲಿ ಅಂತಿಮ ತೀರ್ಮಾನ ಆಗುತ್ತದೆ. ಸತ್ಯಾಂಶವನ್ನು ನೋಡಿ ಕಾನೂನಾತ್ಮಕ ಅವಕಾಶ ಇದ್ದರೆ ಕೇಸ್ ವಾಪಸ್ ತೆಗೆದುಕೊಳ್ಳುವೆವು ಎಂದರು.
ಉಡುಪಿ ವಿಡಿಯೋ ಬಗ್ಗೆ ಮಾತನಾಡಿ, ಘಟನೆ ಬಹಳ ಸಣ್ಣದು. ಸಣ್ಣ ಘಟನೆಗೆ ರಾಜಕೀಯ ಬಣ್ಣ ಕೊಡುವುದು ಯಾಕೆ? ಪ್ರಿನ್ಸಿಪಾಲ್ ಇದ್ದಾರೆ, ಕಾಲೇಜು ಸಮಿತಿ ಇದೆ. ಈ ಬಗ್ಗೆ ದೂರು ಸಲ್ಲಿಕೆಯಾಗಿಲ್ಲ. ರಾಜಕೀಯ ಮಾಡುವುದನ್ನು ಬಿಜೆಪಿಯವರು ಮೊದಲು ನಿಲ್ಲಿಸಬೇಕು. ಹಿಂದೆಲ್ಲ ಕಾಲೇಜುಗಳಲ್ಲಿ ಇದೆಲ್ಲ ನಡೆಯುತ್ತಿರಲಿಲ್ವಾ? ಎಂದು ಹೇಳಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


