nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಿರಾ: ಟಿ.ಬಿ. ಜಯಚಂದ್ರ ಅವರಿಗೆ ಸಚಿವ ಸ್ಥಾನಕ್ಕೆ ಯುವ ಕಾಂಗ್ರೆಸ್ ಒತ್ತಾಯ

    June 7, 2026

    ಬಿತ್ತನೆ ಬೀಜ:  ರೈತರು ಸದುಪಯೋಗ ಮಾಡಿಕೊಳ್ಳಿ: ಶಾಸಕ ಕೆ.ಎನ್.ರಾಜಣ್ಣ ಕರೆ

    June 7, 2026

    ಇತಿಹಾಸ ಪ್ರಸಿದ್ಧ ಬೋಡಬಂಡೇನಹಳ್ಳಿ ಶ್ರೀ ಚೌಡೇಶ್ವರಿ ಸನ್ನಿಧಾನಕ್ಕೆ ಬಿಜೆಪಿ ಮುಖಂಡ ಅನಿಲ್ ಕುಮಾರ್ ಭೇಟಿ

    June 7, 2026
    Facebook Twitter Instagram
    ಟ್ರೆಂಡಿಂಗ್
    • ಸಿರಾ: ಟಿ.ಬಿ. ಜಯಚಂದ್ರ ಅವರಿಗೆ ಸಚಿವ ಸ್ಥಾನಕ್ಕೆ ಯುವ ಕಾಂಗ್ರೆಸ್ ಒತ್ತಾಯ
    • ಬಿತ್ತನೆ ಬೀಜ:  ರೈತರು ಸದುಪಯೋಗ ಮಾಡಿಕೊಳ್ಳಿ: ಶಾಸಕ ಕೆ.ಎನ್.ರಾಜಣ್ಣ ಕರೆ
    • ಇತಿಹಾಸ ಪ್ರಸಿದ್ಧ ಬೋಡಬಂಡೇನಹಳ್ಳಿ ಶ್ರೀ ಚೌಡೇಶ್ವರಿ ಸನ್ನಿಧಾನಕ್ಕೆ ಬಿಜೆಪಿ ಮುಖಂಡ ಅನಿಲ್ ಕುಮಾರ್ ಭೇಟಿ
    • ಉಚಿತ ಕಂಪ್ಯೂಟರ್ ತರಬೇತಿ ಪಡೆಯ ಬೇಕೆ?: ಅರ್ಜಿ ಸಲ್ಲಿಸಿ
    • ತುರುವೇಕೆರೆಯ ಮಲ್ಲಾಘಟ್ಟ ಕೆರೆ: 35 ಕೋಟಿ ರೂ.ವೆಚ್ಚದ ಕಾಮಗಾರಿ: ಸಿಎಂ ಡಿ.ಕೆ.ಶಿವಕುಮಾರ್
    • ನೊಣವಿನಕೆರೆ ಅಜ್ಜಯ್ಯನ ದರ್ಶನ ಪಡೆದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್:  ಕುಣಿಗಲ್ ನಲ್ಲಿ ಅಭಿಮಾನಿಗಳಿಂದ ಸ್ವಾಗತ
    • 6 ವರ್ಷದ ಮಗುವಿನ ನಿಗೂಢ ಸಾವು: ತಾಯಿ, ಲಿವ್–ಇನ್ ಪಾರ್ಟ್ನರ್ ವಿರುದ್ಧ ಕೊಲೆ ಪ್ರಕರಣ ದಾಖಲು!
    • ಮಾಯಸಂದ್ರ: ಲಿಲೋ ಮಾರ್ಗ ನಿರ್ಮಾಣ: ಆಕ್ಷೇಪಣೆಗೆ ಅವಕಾಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವೀರಶೈವ ಧರ್ಮದ ಮೂಲ ಸಿದ್ದಾಂತ ಅರಿತರೆ ಧರ್ಮದಲ್ಲಿ ಸವಾಲುಗಳನ್ನು ಎದುರಿಸಬಹುದು: ಡಾ.ವೀರಸೋಮೇಶ್ವರ ಸ್ವಾಮೀಜಿ
    ತುಮಕೂರು December 30, 2024

    ವೀರಶೈವ ಧರ್ಮದ ಮೂಲ ಸಿದ್ದಾಂತ ಅರಿತರೆ ಧರ್ಮದಲ್ಲಿ ಸವಾಲುಗಳನ್ನು ಎದುರಿಸಬಹುದು: ಡಾ.ವೀರಸೋಮೇಶ್ವರ ಸ್ವಾಮೀಜಿ

    By adminDecember 30, 2024No Comments2 Mins Read
    tumakuru

    ತುಮಕೂರು:  ಜಗದ್ಗುರು ಶ್ರೀ ರೇಣುಕಾಚಾರ್ಯರು ನಡೆಸಿಕೊಂಡು ಬಂದ ವೀರಶೈವ ಪರಂಪರೆಯಲ್ಲಿ ವೀರಶೈವ ಧಮದ ಮೂಲ ಸಿದ್ದಾಂತವನ್ನು ಬಹಳಷ್ಟು ಜನ ತಿಳಿದುಕೊಂಡಿಲ್ಲ. ಅಲ್ಲದೆ ತಿಳಿದುಕೊಳ್ಳುವ ಪ್ರಾಮಾಣಿಕ ಪ್ರಯತ್ನ ಮಾಡುತ್ತಿಲ್ಲ. ಹೀಗಾಗಿ ಧರ್ಮದಲ್ಲಿ ಅನೇಕ ಸಮಸ್ಯೆ ಮತ್ತು ಸವಾಲುಗಳನ್ನು ಕಾಣುವಂತಾಗಿದೆ ಎಂದು ಚಿಕ್ಕಮಗಳೂರು ಜಿಲ್ಲೆ ಬಾಳೆಹೊನ್ನೂರಿನ ರಂಭಾಪುರಿ ಪೀಠದ ಶ್ರೀ ಪ್ರಸನ್ನ ರೇಣುಕ ಡಾ. ವೀರಸೋಮೇಶ್ವರ ರಾಜದೇಶಿಕೇಂದ್ರ ಸ್ವಾಮೀಜಿ ತಿಳಿಸಿದರು.

    ತುಮಕೂರು ನಗರದಲ್ಲಿ ನಾಲ್ಕು ದಿನಗಳ ಕಾಲ ನಡೆದ ಧನುರ್ಮಾಸದ ಇಷ್ಟಲಿಂಗ ಮಹಾಪೂಜೆ ಹಾಗೂ ಜನಜಾಗೃತಿ ಧರ್ಮ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿ, ಇರುವಂತಹ ಸತ್ಯವನ್ನು ಗ್ರಂಥಗಳಿಂದ ತಿಳಿದುಕೊಳ್ಳಲು ಸಾಧ್ಯವಿದೆ. ಆದ್ರೆ ಬಹಳಷ್ಟು ಜನ ಅವುಗಳನ್ನು ತಿಳಿದುಕೊಂಡು ದಾರಿಯಲ್ಲಿ ನಡೆದುಕೊಂಡರೆ ಸನ್ಮಾರ್ಗ ಲಭಿಸಲಿದೆ, ಆದ್ರೆ ಕೆಲವರು ಅದನ್ನು ತಿಳಿದುಕೊಳ್ಳದೆ ಇರುವುದರಿಂದ ಕೆಲವೊಂದು ಅವಾಂತರಗಳು ಮತ್ತು ಆತಂಕಗಳಿಗೆ ಕಾರಣವಾಗಿದೆ ಎಂದ್ರೆ ತಪ್ಪಾಗಲಾರದು ಎಂದು ತಿಳಿಸಿದರು.


    Provided by
    Provided by

    ವೀರಶೈವ ಧರ್ಮದ ಇತಿಹಾಸ ಮತ್ತು ಬೆಳೆದುಬಂದ ಪರಂಪರೆ ಅತ್ಯಂತ ಪ್ರಾಚೀನ ಎನ್ನುವುದರಲ್ಲಿ ಎರಡು ಮಾತು ಇಲ್ಲವೇ ಇಲ್ಲ. ಪರಮಾಚಾರ್ಯರು ಹಾಕಿದ ಧರ್ಮ ಸಿದ್ದಾಂತದ ತಳಹದಿಯ ಮೇಲೆ 12ನೇ ಶತಮಾನದ ಬಸವಾದಿ ಶರಣರು ಅದರಂತೆ ನಡೆದು ನುಡಿದು ಸಮಾಜದ ಶಕ್ತಿಯನ್ನು ಮತ್ತಷ್ಟು ಸಂವಧನೆಗೊಳಿಸಿರುವಂತಹುದನ್ನು ಜನ ತಿಳಿದುಕೊಳ್ಳಬೇಕು ಎಂದರು.

    ಬಸವಾದಿ ಶಿವಶರಣರಿಗಿಂತ ಪೂರ್ವದಲ್ಲಿಯೇ ವೀರಶೈವ ಧರ್ಮ ಅಸ್ತಿತ್ವದಲ್ಲಿ ಇತ್ತು, ಜಗದ್ಗುರು ಪಂಚಾಚಾರ್ಯರ ಪರಂಪರೆ ಪವಿತ್ರವಾದ ಗುರು ಪರಂಪರೆ ಈ ವೀರಶೈವ ಧರ್ಮ  ಪರಂಪರೆ ಮತ್ತು ತತ್ವ ಸಿದ್ದಾಂತಗಳನ್ನು ಪ್ರತಿಷ್ಟಾಪಿಸಿ ಜನರನ್ನು ಸನ್ಮಾಗದ ಕಡೆಗೆ ಕರೆತಂದರು ಎಂಬುದಕ್ಕೆ ಇತಿಹಾಸದಲ್ಲಿನ ಅನೇಕ ಸಂಗತಿಗಳು ಇವೆ ಎಂದರು.

    ಸಿದ್ದಾಂತ ಶಿಕಾಮಣಿಯಲ್ಲಿ ಉಲ್ಲೇಖಿಸಿರುವಂತೆ ಭಗವಂತನು ಜಗದ್ಗುರು ರೇಣುಕಾಚಾರ್ಯರಿಗೆ ʼ ನನ್ನ ಪರವಾದ ಶಿವಾಧ್ವತ ಸಿದ್ದಾಂತವನ್ನು ಯಾವುದೋ ಒಂದು ವರ್ಗದ ಹಿತಕ್ಕಾಗಿ ಅಲ್ಲ, ಬದಲಾಗಿ ಎಲ್ಲಾ ವರ್ಗದ ಜನರಿಗೆ ಅನ್ವಯವಾಗುವಂತಹ ವೀರಶೈವ ಮತ ಸಿದ್ದಾಂತವನ್ನು ಬೋಧಿಸಿ ಸ್ಥಾಪಿಸುʼ ಎಂದು ಆದೇಶ ಮಾಡಿದ್ದನು ಎಂದು ಹೇಳಿದರು.

    ಸಮಾಜ ಮತ್ತು ಸಂಘಟನೆ ಬಗ್ಗೆ  ಶಂಕರಬಿದರಿಯವರು ಅಚ್ಚುಕಟ್ಟಾಗಿ ಹೇಳಿದರು. ಅವರು ಹೇಳಿದ ಬಹಳಷ್ಟು ವಿಚಾರಗಳು ತಿಳಿದಿರುವಂತಹುದು ಎಂದರು.

    ಸಾನಿಧ್ಯ ವಹಿಸಿದ್ದ ಸಿದ್ದರಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ತಾನು ಅಭಿವೃದ್ಧಿ ಹೊಂದಬೇಕು ಎಂದು ಅತಿಯಾದ ಆಸೆಯೊಂದಿಗೆ ಮನುಷ್ಯ ಕೆಲ ವಾಮ ಮಾರ್ಗವನ್ನು ಹಿಡಿಯುತ್ತಾನೆ. ಈ ವೇಳೆ ಆತನ ಮನಸ್ಸಿನಲ್ಲಿ ಕಲ್ಮಷ ಸೃಷ್ಟಿಯಾಗುತ್ತದೆ. ಇಂತಹ ಸಂದರ್ಭದಲ್ಲಿ ಧರ್ಮ ಮಾರ್ಗದಲ್ಲಿ ಸಾಗಿದರೆ ಅಂತಹ ಕಲ್ಮಷಗಳನ್ನು ತೊಳೆದುಹಾಕಬಹುದಾಗಿದೆ. ಆಗ ಮನಸ್ಸು ಶುದ್ದವಾಗಿರುತ್ತದೆ. ಹೀಗಾಗಿ ಇಂತಹ ಧನುರ್ಮಾಸ ಇಷ್ಟಲಿಂಗ ಮಹಾಪೂಜೆಯ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಕ್ತರು ಪಾಲ್ಗೊಳ್ಳಬೇಕು ಎಂದರು.

    ಅತಿಥಿಗಳಾಗಿ ಭಾವಹಿಸಿದ್ದ ವೀರಶೈವ ಮಹಾಸಭಾ ಅಧ್ಯಕ್ಷ ಶಂಕರ್ ಬಿದರಿ ಮಾತನಾಡಿ, ಮಠಗಳು ಕಾರ್ಯ ಕೇವಲ ಅಸ್ತಿ ಮಾಡುವ ಮೂಲಕವಲ್ಲ ಬದಲಾಗಿ ಧಾರ್ಮಿಕ ಮೌಲ್ಯವನ್ನು ಪ್ರಚಾರ ಮಾಡಬೇಕಿದೆ. ಅದನ್ನು ರಂಭಾಪುರಿ ಪೀಠದ ಸ್ವಾಮೀಜಿ ನಡೆಸಿಕೊಂಡು ಬರುತ್ತಿದ್ದಾರೆ. ವೀರಶೈವ ಮತ್ತು ಲಿಂಗಾಯತ ಒಂದೇ ಎಂಬುದು ಸಮುದಾಯದವರು ತಿಳಿಯಬೇಕಿದೆ. ಸಮಾಜಕ್ಕೆ ಬಲ ತುಂಬ ಬೇಕಾದ ಕೆಲಸ ಮಾಡಬೇಕಿದೆ ಎಂದರು.

    ಕಾರ್ಯಕ್ರಮದಲ್ಲಿ ಶ್ರೀ ಜಗದ್ಗುರು ಪಂಚಾಚಾರ್ಯ ಸೇವಾ ಟ್ರಸ್ಟ್ ಅಧ್ಯಕ್ಷ ಟಿ.ಆರ್.ಸದಾಶಿವಯ್ಯ, ಭಸ್ಮಾಂಗಿ ರುದ್ರಯ್ಯ, ಯುವ ಸಾಹಿತಿ ಪ್ರಶಾಂತ್ ರಿಪ್ಪನ್ ಪೇಟೆ ಸೇರಿದಂತೆ ವಿವಿಧ ಮಠಗಳ ಸ್ವಾಮೀಜಿಗಳು ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಉಚಿತ ಕಂಪ್ಯೂಟರ್ ತರಬೇತಿ ಪಡೆಯ ಬೇಕೆ?: ಅರ್ಜಿ ಸಲ್ಲಿಸಿ

    June 7, 2026

    ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ

    June 6, 2026

    ಹೊಸ ಬಾಟಲಿಯಲ್ಲಿ ಹಳೆಯ ಮದ್ಯ, ಡಿಕೆಶಿ ಪ್ರಾಮಾಣಿಕ ಆಡಳಿತ ನೀಡಲು ಹೇಗೆ ಸಾಧ್ಯ?: ಸುರೇಶ್ ಗೌಡ ಟೀಕೆ

    June 6, 2026

    Comments are closed.

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸಿರಾ

    ಸಿರಾ: ಟಿ.ಬಿ. ಜಯಚಂದ್ರ ಅವರಿಗೆ ಸಚಿವ ಸ್ಥಾನಕ್ಕೆ ಯುವ ಕಾಂಗ್ರೆಸ್ ಒತ್ತಾಯ

    June 7, 2026

    ಸಿರಾ: ಸಿರಾ ಕ್ಷೇತ್ರದ ಶಾಸಕರಾದ ಟಿ.ಬಿ. ಜಯಚಂದ್ರ ಅವರು ನುರಿತ ರಾಜಕೀಯ ಮುತ್ಸದ್ದಿಯಷ್ಟೇ ಅಲ್ಲದೆ ಕಳೆದ 50 ವರ್ಷಗಳ ರಾಜಕೀಯ…

    ಬಿತ್ತನೆ ಬೀಜ:  ರೈತರು ಸದುಪಯೋಗ ಮಾಡಿಕೊಳ್ಳಿ: ಶಾಸಕ ಕೆ.ಎನ್.ರಾಜಣ್ಣ ಕರೆ

    June 7, 2026

    ಇತಿಹಾಸ ಪ್ರಸಿದ್ಧ ಬೋಡಬಂಡೇನಹಳ್ಳಿ ಶ್ರೀ ಚೌಡೇಶ್ವರಿ ಸನ್ನಿಧಾನಕ್ಕೆ ಬಿಜೆಪಿ ಮುಖಂಡ ಅನಿಲ್ ಕುಮಾರ್ ಭೇಟಿ

    June 7, 2026

    ಉಚಿತ ಕಂಪ್ಯೂಟರ್ ತರಬೇತಿ ಪಡೆಯ ಬೇಕೆ?: ಅರ್ಜಿ ಸಲ್ಲಿಸಿ

    June 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.